
ಶ್ರೀನಿವಾಸಪುರ : ಪ್ರಾಚೀನ ಬಾಷೆಯಾದ ಕನ್ನಡವನ್ನು ನಮ್ಮ ರಾಜ್ಯದ ಗಡಿಬಾಗಗಳಲ್ಲಿ ಉಳಿಸಿಕೊಳ್ಳಲು ನಾವೆಲ್ಲರೂ ಪಣ ತೊಡಬೇಕು. ಕನ್ನಡ ಬಾಷೆಯನ್ನು ಉಳಿಸಿ ಬೆಳೆಸುವ ಆದ್ಯ ಕರ್ತವ್ಯ ನಮ್ಮ ನಿಮ್ಮೆಲ್ಲರ ಮೇಲೆ ಇದೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಮಾತನಾಡಿದರು.ಗಡಿಬಾಗವಾದ ನಮ್ಮ ತಾಲ್ಲೂಕನ್ನು ಕನ್ನಡಬಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ನಮ್ಮ ನಾಡು-ನುಡಿ ಜಲವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪ್ರತಿಯೊಬ್ಬರೂ ಕನ್ನಡದ ಅಭಿಮಾನವನ್ನು […]

ಶ್ರೀನಿವಾಸಪುರ : ವಾಹನ ಚಾಲಕರು ಕಡುಬಡತನ ಕುಟುಂಬದವರು . ಸಾಮಾನ್ಯವಾಗಿ ವಾಹನ ಚಾಲಕರು ಕುಟುಂಬದ ನಿರ್ವಹಣೆಗಾಗಿ ತುಂಬಾ ಒತ್ತಡದಲ್ಲಿ ಜೀವನ ನಡೆಸುತ್ತಿದ್ದಾರೆ. ಮುಖ್ಯವಾಗಿ ಚಾಲಕರು ನಿಮ್ಮನ್ನೇ ನಂಬಿಕೊಂಡು ಕುಟುಂಬವಿದ್ದು, ವಾಹನ ಚಾಲನೆ ಮಾಡುವಾಗ ತುಂಬಾ ಎಚ್ಚರಿಕೆಯಿಂದ ಚಾಲನೆಮಾಡಬೇಕು . ಚಾಲಕರು ಎಚ್ಚರ ತಪ್ಪಿ ವಾಹನ ಚಾಲನೆ ಮಾಡಿದರೆ ನಿಮ್ಮ ಕುಟುಂಬವು ಬೀದಿಗೆ ಬೀಳುತ್ತದೆ ಆದ್ದರಿಂದ ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ಎಂ.ಬಿ. ಗೊರವನಕೊಳ್ಳ ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಕರ್ನಾಟಕ […]

ಶ್ರೀನಿವಾಸಪುರ : ನಾರಮಾಕಲಪಲ್ಲಿ ಗ್ರಾಮದ ಕಾಲುವೆ ಕಾಮಗಾರಿ ನಡೆಸಲು ಜನವರಿ 17 -2024 ನನಗೆ ಆದೇಶ ಸಂಬಂದಪಟ್ಟ ಅಧಿಕಾರಿಗಳು ಆದೇಶ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಸಂಬಂದಿಸಿದ ಇಂಜಿನೀಯರ್ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗೆ ಅನುಮೋದನೆ ನೀಡಿದ್ದಾರೆ. ಅದರಂತೆ ಕಾಮಗಾರಿ ಮಾಡಲಾಗಿದೆ ಎಂದು ಗುತ್ತಿಗೆದಾರ ವಳಗೇರನಹಳ್ಳಿ ಶಿವಾರೆಡ್ಡಿ ಮಾಹಿತಿ ನೀಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪ್ರತಿಕಾ ಗೋಷ್ಟಿಯಲ್ಲಿ ಮಾತನಾಡಿದರು.ತಾಲೂಕಿನ ರೋಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರಮಾಕಲಪಲ್ಲಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನರೇಗಾ […]

ಶ್ರೀನಿವಾಸಪುರ : ಒಂದು ವಾರದೊಳಗೆ ಕಂದಾಯ ಅರಣ್ಯಾಧಿಕಾರಿಗಳು ಜಂಟಿ ಸರ್ವೇ ನಡೆಸಿ ಪ್ರಭಾವಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರವರು ಜಿಗಲಕುಂಟೆ ಅರಣ್ಯ 61 ಎಕರೆ ಭೂ ಒತ್ತುವರಿ ತೆರೆವುಗೊಳಿಸದೆ ಇದ್ದರೆ ರೈತರೇ ಕಾನೂನನ್ನು ಕೈಗೆತ್ತಿಕೊಂಡು ಕಳೆದುಕೊಂಡಿರುವ ಭೂಮಿಯನ್ನು ವಶಕ್ಕೆ ಪಡೆಯುವ ಪೆÇ್ರೀ.ನಂಜುಂಡಸ್ವಾಮಿರವರ 80 ರ ದಶಕದ ಹೋರಾಟದ ರೈತ ಕ್ರಾಂತಿ ಶ್ರೀನಿವಾಸಪುರ ತಾಲ್ಲೂಕಿನಿಂದಲೇ ಪ್ರಾರಂಭವಾಗುತ್ತದೆ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಎಚ್ಚರಿಸಿದರು.ತಾಲೂಕಿನ ಹೊಸಹುಡ್ಯ ಜಿಗಲಕುಂಟೆ ಅರಣ್ಯ ಒತ್ತುವರಿ ಮಾಡಿರುವ ಮಾಜಿ ಸ್ಪೀಕರ್ ರಮೇಶ್ಕುಮಾರ್ […]

ಶ್ರೀನಿವಾಸಪುರ.: ಹೊಸಹುಡ್ಯ ಜಿಗಲಕುಂಟೆ ಅರಣ್ಯ ಒತ್ತುವರಿ ಮಾಡಿರುವ ಮಾಜಿ ಸ್ಪೀಕರ್ ರಮೇಶ್ಕುಮಾರ್ ರವರ ಜಮೀನು ಕಂದಾಯ ಮತ್ತು ಅರಣ್ಯ ಅಧಿಕಾರಿಗಳು ಜಂಟಿ ಸರ್ವೇ ಮಾಡಿ ಒತ್ತುವರಿ ತೆರೆವುಗೊಳಿಸಬೇಕು ಎಂದು ರೈತ ಸಂಘದಿಸಿದ ತಾಲ್ಲೂಕು ಕಚೇರಿಯ ಮುಂದೆ ಅರೆಬೆತ್ತಲೆ ಹೋರಾಟ ಮಾಡಿ ಕಂದಾಯ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಒಂದು ವಾರದೊಳಗೆ ಕಂದಾಯ ಅರಣ್ಯಾಧಿಕಾರಿಗಳು ಜಂಟಿ ಸರ್ವೇ ನಡೆಸಿ ಪ್ರಭಾವಿ ಮಾಜಿ ಸ್ಪೀಕರ್ ರಮೇಶ್ಕುಮಾರ್ರವರ ಜಿಗಲಕುಂಟೆ ಅರಣ್ಯ 61 ಎಕರೆ ಭೂ ಒತ್ತುವರಿ ತೆರೆವುಗೊಳಿಸದೆ ಇದ್ದರೆ ರೈತರೇ ಕಾನೂನನ್ನು […]

ಶ್ರೀನಿವಾಸಪುರ : ಭಾರತ ವಿದ್ಯಾರ್ಥಿ ಪಡರೇಷನ್ ಎಸ್ ಎಫ್ ಐ ಶ್ರೀನಿವಾಸಪುರ ತಾಲ್ಲೂಕು ಸಮಿತಿ ವತಿಯಿಂದ 2020 ಎನ್ಇಪಿ ಜಾರಿಯಾದ ನಂತರ ಇಲ್ಲಿಯವರೆಗೂ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕ ಪಟ್ಟಿಗಳನ್ನು ವಿತರಿಸುವಂತೆ ಒತ್ತಾಯಿಸಿ. ಗುರುವಾರ ತಾಲೂಕು ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮತ್ತು ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾ ಕಾರ್ಯದರ್ಶಿಯಾದ ಸುರೇಶ್ ಬಾಬು ಮಾತನಾಡಿ. ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್.ಎಫ್.ಐ) ಜಿಲ್ಲಾ ಸಮಿತಿ ಈ ಮೂಲಕ ತಮ್ಮಲ್ಲಿ ಒತ್ತಾಯಿಸುವುದೇದರೆ , ರಾಜ್ಯದಲ್ಲಿ […]

ಶ್ರೀನಿವಾಸಪುರ : ಕನ್ನಡಬಾಷೆಯ ಬಗ್ಗೆ ಬಾಷಾಭಿಮಾನವಿರಲಿ ಆದರೆ ದುರಾಭಿಮಾನಬೇಡ ದೀಪದಿಂದ ದೀಪ ಬೆಳಗುವಂತೆ ಕನ್ನಡ ಭಾಷೆ ಪ್ರಪಂಚದಾದ್ಯಂತ ಪಸರಿಸಲಿ ಕನ್ನಡ ಭಾಷೆ ಶ್ರೀಮಂತವಾಗಿದ್ದು ಇದನ್ನು ಉಳಿಸಿ ಬೆಳಸುವ ಹೊಣಗಾರಿಕೆ ನಮ್ಮಲ್ಲೆರ ಮೇಲಿದೆ ಎಂದು ಸಿಪಿಐ ಮಹಮದ್ಗೊರವನಕೊಳ್ಳ ತಿಳಿಸಿದರು. ಪಟ್ಟಣದ ಜೈ ಕರ್ನಾಟಕ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು ನಮ್ಮ ನಾಡಿನಲ್ಲಿ ಗಂಗರು, ಕದಂಬರು, ಚೋಳರು ಅನೇಕ ರಾಜಮನತನರು ಆಳ್ವಿಕೆ ಮಾಡಿ ಕರ್ನಾಟಕದ ಏಕೀಕರಣಕ್ಕೆ ಅನೇಕ ಮಹನೀಯರು ಶ್ರಮಿಸಿದ್ದಾರೆ […]

ಕೋಲಾರ:- ಮಕ್ಕಳಿಗೆ ಪ್ರಯೋಗಗಳ ಮೂಲಕ ವಿಜ್ಞಾನ ಕಲಿಕೆ ಅತಿ ಪರಿಣಾಮಕಾರಿಯಾಗಿದೆ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ತಾಹೇರಾ ನುಸ್ರತ್ ಅಭಿಪ್ರಾಯಪಟ್ಟರು.ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮತ್ತು ಕುಪ್ಪಂ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ ವರು ಮಾತನಾಡಿದರು.ಒಬ್ಬ ಮನುಷ್ಯ ಹುಟ್ಟಿದಾಗಿನಿಂದ ಸಾಯುವರೆಗೂ ವಿಜ್ಞಾನವನ್ನು ಅವಲಂಬಿಸಿರುತ್ತಾನೆ. ಈಗಿನ ಪೀಳಿಗೆಯ ಮಕ್ಕಳಿಗೆ ಸುಲಭ ಕಲಿಕೆಗೆ ವೈಜ್ಞಾನಿಕ ಅಂಶಗಳ ಬೆಳವಣಿಗೆಗೆ ವಿಜ್ಞಾನ ವಸ್ತು ಪ್ರದರ್ಶನ ಮತ್ತು […]

ಕೋಲಾರ; ನ.28: ತಾಲೂಕು ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ, ಪಿ ನಂಬರ್ ದುರಸ್ಥಿ ಹಾಗೂ ಸರ್ಕಾರಿ ಆಸ್ತಿಗಳ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತಸಂಘದಿಂದ ತಾಲೂಕು ಕಚೇರಿಯೆದುರು ಖಾಲಿ ಚಂಬುಗಳೂಂದಿಗೆ. ಹೋರಾಟ ಮಾಡಿ ತಹಸೀಲ್ದಾರ್ಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹಿರಿಯ ಅಧಿಕಾರಿಗಳ ವಾಸಸ್ಥಾನಕ್ಕೆ ಕೂಗಳತೆ ದೂರದಲ್ಲಿರುವ ತಾಲೂಕು ಕಚೇರಿಯಲ್ಲಿ ಹೆಜ್ಜೆಹೆಜ್ಜೆಗೂ ರೈತರನ್ನು ಶೋಷಣೆ ಮಾಡುವ ದಲ್ಲಾಳಿಗಳ ಹಾವಳಿಗೆ ಕಡಿವಾಣವಿಲ್ಲದಂತಾಗಿದೆ. ಭೂಪರಿವರ್ತನೆಗೆ 3 ಲಕ್ಷ, ಪಿ ನಂಬರ್ ದುರಸ್ಥಿ ಮಾಡಲು 4 […]