ಕೋಲಾರ : ಪತ್ರಕರ್ತರಿಗೆ ಸ್ವಾಭಿಮಾನವೇ ಸರ್ವಶ್ರೇಷ್ಟವಾಗಿದೆ. ಅದನ್ನು ಪ್ರತಿಯೊಬ್ಬರೂ ತಮ್ಮ ವೃತ್ತಿಯಲ್ಲಿ ಮಾತ್ರವಲ್ಲ ಜೀವನದಲ್ಲೂ ಅಳವಡಿಸಿಕೊಂಡು ಬೆಳೆಸುವಂತಾಗಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕರೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಥಮವಾಗಿ ಆಯೋಜಿಸಿದ್ದ ಡಿ.ವಿ.ಗುಂಡಪ್ಪನವರು ಮುಂಚೂಣಿಯಲ್ಲಿ ಪ್ರಪ್ರಥಮವಾಗಿ ರಾಜ್ಯದಲ್ಲಿ ಪತ್ರಕರ್ತರ ಸಂಘವನ್ನು ಸಂಘಟಿಸಿ ಸ್ಥಾಪಿಸಿದ 91ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪತ್ರಕರ್ತರು ತಮ್ಮ ವೃತ್ತಿಯಲ್ಲಿ ಭೌತಿಕ ಗುಣಮಟ್ಟವನ್ನು ಕಾಯ್ದಕೊಂಡಾಗ ಮಾತ್ರ ಪತ್ರಿಕೆಗಳಿಗೊಂದಿಗೆ […]

Read More

ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ದಲಿತ ಮುಖಂಡರ ಸಭೆಯಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಶಕ್ತಿ ಹಾಗೂ ಜ್ಞಾನ ಸರ್ವಕಾಲಿಕ ಮಾದರಿಯಾಗಿದೆ ಎಂದು ಹೇಳಿದರು.ದಲಿತ ಸಮುದಾಯ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕು. ಅದಕ್ಕೆ ಬಾಬಾಸಾಹೇಬರಿಂದ ಪ್ರೇರಣೆ ಪಡೆದುಕೊಳ್ಳಬೇಕು. ಅದಕ್ಕೆ ಅವರ ಬದುಕು ತಿಳಿಯಬೇಕು. ಭಾವ ಅರಿಯಬೇಕು. ಆಶಯ ನಿಜಗೊಳಿಸಬೇಕು ಎಂದು ಹೇಳಿದರು.ಫೆ.19 ರಂದು ಮಾಲೂರಿನಲ್ಲಿ […]

Read More

ಕೋಲಾರ:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷದವರೆಗೂ, ರೈತರಿಗೆ 5 ಲಕ್ಷದವರೆಗೂ ಶೂನ್ಯ ಬಡ್ಡಿ ಸಾಲ ಸೌಲಭ್ಯ, ಸಾಲದ ಕಂದು ಸಮರ್ಪಕವಾಗಿ ಪಾವತಿಸುವ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.ತಾಲ್ಲೂಕಿನ ವೇಮಗಲ್ ಕ್ರೀಡಾಂಗಣದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರ ಶಕ್ತಿಪ್ರದರ್ಶನವೆಂಬಂತೆ ಆಯೋಜಿಸಿದ್ದ ರೈತ ಮಹಿಳೆಯರ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿ. ‘ಹಿಂದೆ ಮುಚ್ಚಿಹೋಗಿದ್ದ ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕಾಗಿ ಮಹಿಳೆಯರಿಗೆ ಬಡ್ಡಿರಹಿತ 50 ಸಾವಿರ ಸಾಲ ನೀಡಿದ್ದೇನೆ, ಮುಂದಿನ […]

Read More

ಕೋಲಾರ:- ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಗುರುತಿಸಿರುವ ಪಿಎಸ್‍ಟಿ ಇಂಗ್ಲೀಷ್ ಶಿಕ್ಷಕರನ್ನು ಆಯಾ ತಾಲ್ಲೂಕಿನಲ್ಲೇ ಉಳಿಸಲು ರಾಜ್ಯ ನೌಕರರ ಸಂಘದ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲು ಕ್ರಮವಹಿಸುವುದಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಶಿಕ್ಷಕರಿಗೆ ಭರವಸೆ ನೀಡಿದರು.ಹೆಚ್ಚುವರಿಯಾಗಿರುವ ನಮ್ಮನ್ನು ಆಯಾ ತಾಲ್ಲೂಕಿನಲ್ಲೇ ಉಳಿಸಲು ಆಗ್ರಹಿಸಿ ಪಿಎಸ್‍ಟಿ ಇಂಗ್ಲೀಷ್ ಶಿಕ್ಷಕರು ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಕೋಲಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಪಿಎಸ್‍ಟಿ ಇಂಗ್ಲೀಷ್ ಶಿಕ್ಷಕರನ್ನು ಹೆಚ್ಚುವರಿ ಪಟ್ಟಿಯಲ್ಲಿ ಗುರುತಿಸಲಾಗಿದೆ, ಆದರೆ ಎಲ್ಲಾ ತಾಲ್ಲೂಕುಗಳಲ್ಲೂ […]

Read More

ಶ್ರೀನಿವಾಸಪುರ: ಸಾಲ ಪಡೆದವರು ಸಂಕಷ್ಟಕ್ಕೆ ಒಳಗಾದಾಗ, ಸಾಲ ನೀಡಿದವರು ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಲಕ್ಷ್ಮೀಪುರ ಕ್ರಾಸ್‍ನಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಅಡ್ಡಗಲ್ ಹಾಗೂ ಲಕ್ಷ್ಮೀಪುರ ವ್ಯವಸಾಯ ಸೇವಾ ಸಹಕಾರ ಸಂಘದ ವ್ಯಾಪ್ತಿಯ 140 ಸ್ತ್ರೀ ಶಕ್ತಿ ಸಂಘಗಳಿಗೆ ರೂ.10.04 ಕೋಟಿ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಸಾಲ ಪಡೆದ ಸ್ತ್ರೀ ಶಕ್ತಿ ಸಂಘದ ಸದಸ್ಯೆ ಯಾವುದಾದರೂ ಕಾರಣದಿಂದ ಮರಣಹೊಂದಿದರೆ, ಮನೆಯವರನ್ನು ಸಾಲ ಮರುವಪಾವತಿ […]

Read More

ಶ್ರೀನಿವಾಸಪುರ: ಕೋಲಾರ ಹಾಲು ಒಕ್ಕೂಟದ ಶಿಬಿರ ಕಚೇರಿ ಕಟ್ಟಡ ನಿರ್ಮಿಸಲು ನಿವೇಶನ ಖರೀದಿಗೆ ಸಂಬಂಧಿಸಿದಂತೆ ಒಕ್ಕೂಟದ ಮಾಜಿ ನಿರ್ದೇಶಕ ಬೈರೆಡ್ಡಿ ಮಾಡಿರುವ ಆರೋಪ ಸುಳ್ಳು ಎಂದು ಕೋಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೇಶನ ಖರೀದಿಯಲ್ಲಿ ರೂ.35 ಲಕ್ಷ ಲಾಭ ಮಾಡಿಕೊಳ್ಳಲಾಗಿದೆ ಎಂದು ಪಾಳ್ಯ ಬೈರೆಡ್ಡಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ನಿಯಮಾನುಸಾರ ಆಡಳಿತ ಮಂಡಲಿ ಅನುಮೋದನೆ ಪಡೆದ ಬಳಿಕ 3040 ಚದರ ಅಡಿ ನಿವೇಶನ ಖರೀದಿಗೆ ಅರ್ಹ ಮಾಲೀಕರಿಂದ […]

Read More

ಇಂದಿನ ಮಕ್ಕಳೇ ಮುಂದಿನ ಭಾವೀ ಪ್ರಜೆಗಳಾಗಿರುವುದರಿಂದ ಚಿಕ್ಕ ವಯಸ್ಸಿನಲ್ಲಿಯೇ ಅವರಲ್ಲಿನ ಪ್ರತಿಭೆಗಳನ್ನು ಗುರ್ತಿಸಿ ಪ್ರೋತ್ಸಾಹ ನೀಡಿದಲ್ಲಿ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಡಿವೈಎಸ್‍ಪಿ ರಮೇಶ್ ಹೇಳಿದರು.ನಗರದ ಕಿಂಗ್ ಜಾರ್ಜ್ ಹಾಲ್‍ನಲ್ಲಿ ಗ್ರಾಂಡ್ ರ್ಯಾನ್ ರೈನಾಸ್ ಶಾಲೆಯ ಮೊದಲನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರ್ತಿಸಿ ಹೊರತೆಗೆಯುವ ಕಾರ್ಯವನ್ನು ಮನೆಗಳಲ್ಲಿ ಪೋಷಕರು ಮತ್ತು ಶಾಲೆಗಳಲ್ಲಿ ಶಿಕ್ಷಕರು ಮಾಡಬೇಕಾಗಿದೆ ಎಂದರು.ಮಕ್ಕಳೆಂದರೆ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದು, ಅಂತಹ ಪುಟಾಣಿಗಳನ್ನು ನಿಮ್ಮ ಮೇಲೆ ಭರವಸೆ ಇಟ್ಟು […]

Read More

ಕೋಲಾರ ಫೆಬ್ರವರಿ 6 : ರಾಜ್ಯದ ಅಕ್ಷರ ದಾಸೋಹ ನೌಕರರಿಗೆ ಅವರ ಸೇವೆಗೆ ತಕ್ಕಂತೆ ಮಾಹೆಯಾನ ಕನಿಷ್ಠ ವೇತನ ರೂ. 10,500 ನೀಡಲು ಮತ್ತು 60 ವರ್ಷ ಮೇಲ್ಪಟ್ಟ 6500 ಬಿಸಿಯೂಟ ನೌಕರರನ್ನು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ನೌಕಕರನ್ನು ಕೆಲಸದಿಂದ ತೆಗೆಯುತ್ತಿದ್ದು, ಅಂತವರಿಗೆ ಇಡುಗಂಟು ಕಾರ್ಯಕ್ರಮ ರೂಪಿಸಲು ಪ್ರತಿಯೊಬ್ಬರಿಗೆ 2 ಲಕ್ಷ ರೂ. ಗಳನ್ನು ನೀಡುವಂತೆ ಹಾಗೂ ಮಾಹೆಯಾನ ಸರಿಯಾದ ಸಮಯಕ್ಕೆ 10500 ವೇತನ ನೀಡುವಂತೆ ಒತ್ತಾಯಿಸಿ ಪ್ರಜಾಸೇವಾ ಸಮಿತಿ ಸಂಯೋಜಿತ ಅಕ್ಷರ ದಾಸೋಹ ಕ್ಷೇಮಾಭಿವೃದ್ಧಿ ಸಮಿತಿ […]

Read More

ಸುಮಾರು ೩೦ ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ೫೦ ಸಾವಿರ ಲೀಟರ್ ನೀರಿನ ಸಾಮರ್ಥ್ಯದ ಈ ಟ್ಯಾಂಕ್‌ನ ೫ ಆಧಾರಸ್ಥಂಬಗಳು ಬಹುತೇಕ ಶಿಥಿಲಾವಸ್ಥೆ ತಲುಪಿದ್ದವು. ಜೊತೆಗೆ ಪಕ್ಕದ ಪಾರ್ಕಿಂಗ್ ಜಾಗದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣದ ಕಾಮಗಾರಿಯು ನಡೆಯಲಿದ್ದು, ಈಗಾಗಲೇ ಇದ್ದ ಮರಗಳು ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಲಾಗಿದೆ.ಗುರುವಾರ ಬೆಳಗ್ಗೆ ಟ್ಯಾಂಕ್‌ನ ಸಮೀಪದ ಪಾರ್ಕಿಂಗ್‌ನಲ್ಲಿದ್ದ ವಾಹನಗಳನ್ನು ಹಾಗೂ ಸಾರ್ವಜನಿಕರನ್ನು ಮತ್ತು ಅಕ್ಕಪಕ್ಕದ ಕಟ್ಟಡಗಳಲ್ಲಿದ್ದ ಜನರನ್ನು ತೆರವುಗೊಳಿಸಿ, ಹಿಟಾಚಿ ಮೂಲಕ ಟ್ಯಾಂಕ್‌ನ ಎರಡು ಆಧಾರ ಕಂಬಗಳನ್ನು ಜಖಂಗೊಳಿಸಿ ನಂತರ ಲೋಹದ ಹಗ್ಗ […]

Read More