ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕಿಗೆ ಸಂಬಂದಿಸಿದಂತೆ ಗ್ರಾಮಗಳಾದ ಆರ್.ತಿಮ್ಮಸಂದ್ರ, ನಾಗದೇನಹಳ್ಳಿ, ಯೆಚ್ಚನಹಳ್ಳಿ, ಮಟ್ಟಕನ್ನಸಂದ್ರ, ಯಲ್ದೂರು -2, ಶ್ಯಾಗತ್ತೂರು , ಯದರೂರು, ನೆಲವಂಕಿ, ಕಶೆಟ್ಟಿಹಳ್ಳಿ, ಕೂರಿಗೇಪಲ್ಲಿ , ಪಾತೂರುಗಡ್ಡ, ಅಡ್ಡಗಲ್-1, ಮರಸನಪಲ್ಲಿ , ಅಡ್ಡಗಲ್-2 ಒಟ್ಟು 14 ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಶರೀನ್ತಾಜ್ ಗುರುವಾರ ಪ್ರತಿಕಾ ಪ್ರಕಟಣೆಗೆ ತಿಳಿಸಿದರು.ಖಾಸಗಿ ವ್ಯಕ್ತಿಗಳು, ವಿಕಲಚೇತನರು, ತೃತೀಯ ಲಿಂಗಿಗಳು ದಿನಾಂಕ 4-9-23 ರ ಸಂಜೆ 5;30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಅಂದು ರಜಾ ದಿನವಾದಲ್ಲಿ ನಂತರದ […]
ಶ್ರೀನಿವಾಸಪುರ 1 : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ , ಸಾಂಸ್ಕøತಿ ಕಾರ್ಯಕ್ರಮಗಳಲ್ಲಿ ಪಾಲ್ಗುಳ್ಳುವಂತೆ ಸೂಚಿಸಿ, ವಿದ್ಯಾರ್ಥಿಗಳು ಆಟಗಳಲ್ಲಿ ಪಾಲ್ಗುಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ. ಹಾಗು ಕ್ರೀಡೆಗಳಿಂದ ಮಕ್ಕಳಲ್ಲಿ ಏಕಾಗ್ರತೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲಹೆ ನೀಡಿದರು.ಪಟ್ಟಣದ ಹೊರವಲಯದ ಮ್ಯಾಂಗೋವ್ಯಾಲಿ ಶಾಲಾವರಣದಲ್ಲಿ ಗುರುವಾರ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು […]
ಶ್ರೀನಿವಾಸಪುರ : ಪ್ರಕೃತಿಯು ಭಗವಂತನ ಮಹಿಮೆ , ಸೌಂದರ್ಯಗಳ ಪ್ರತೀಕವಾಗಿದೆ . ಪರಮಾತ್ಮನ ಶಕ್ತಿಯೇ ಪ್ರಕೃತಿಯ ಮೂಲಕ ಅಭಿವ್ಯಕ್ತವಾಗಿದೆ . ಇಂಥ ಪರಿಸರವನ್ನು ಆರಾಧಿಸುವುದು ಭಾರತೀಯ ಸಂಸ್ಕøತಿಯಾಗಿದ್ದು ನಾವೆಲ್ಲರೂ ಸೇರಿ ಪರಿಸರವನ್ನು ಆರಾಧಿಸಿ , ಉಳಿಸಿಬೆಳಸೊಣವೆಂದು ಎಂದು ಪರಿಸರ ಪ್ರೇಮಿ ಬೀಮಗುಂಟಪಲ್ಲಿ ಬಿ.ವಿ.ಶಿವಾರೆಡ್ಡಿ ತಿಳಿಸಿದರು.ತಾಲೂಕಿನ ರಾಯಲ್ಪಾಡು ಸರ್ಕಾರಿ ಪ್ರೌಡಶಾಲಾವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ತಿಂಗನ ಗಿಡಗಳನ್ನು ವಿತರಿಸಿ ಮಾತನಾಡಿದರು.ನಮಗಿರುವುದು ಒಂದೇ ಭೂಮಿ. ನಾವು ಪ್ರತಿನಿತ್ಯ ಬಳಸುವ ಸಮಸ್ತ ವಸ್ತುಗಳೂ ಈ ಭೂಮಿಯಿಂದಲೇ ಒದಗಿ ಬರಬೇಕು . ಶುದ್ದವಾದ […]
ಕೋಲಾರ ಆಗಸ್ಟ್ 2. ಭಾರತದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ನಮ್ಮ ರಾಷ್ಟ್ರಧ್ವಜವನ್ನು ಗೌರವಿಸಬೇಕು. ಈ ಮೂಲಕ ರಾಷ್ಟ್ರಭಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಹರಟಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ. ಲಕ್ಷ್ಮಿ ಅಭಿಪ್ರಾಯ ಪಟ್ಟರು.ತಾಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ರಾಷ್ಟ್ರಧ್ವಜ ವಿನ್ಯಾಸಕಾರ ತಿಂಗಳಿ ವೆಂಕಟಯ್ಯ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶಭಕ್ತಿ, ದೇಶಪ್ರೇಮ, ಪ್ರಾಥಮಿಕ ಶಾಲೆಯಿಂದಲೇ ವಿದ್ಯಾರ್ಥಿಗಳಲ್ಲಿ ಮೂಡಿಸುವಂತೆ ಆಗಬೇಕು, ವಿದ್ಯಾರ್ಥಿ ದೆಸೆಯಿಂದಲೇ, ರಾಷ್ಟ್ರೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.ರಾಷ್ಟ್ರ ಲಾಂಛನ, ರಾಷ್ಟ್ರ ಚಿನ್ಹೆ, ರಾಷ್ಟ್ರ ಪಕ್ಷಿ, ರಾಷ್ಟ್ರ […]
ಮುಳಬಾಗಿಲು; ಆ.2: ರಾಜ್ಯ ಹಾಗೂ ರಾಷ್ಟ್ರದಲ್ಲಿ ದಿನೇದಿನೇ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರಗಳು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದು, ಕೂಡಲೇ ಪ್ರಭಲ ಕಾನೂನು ಜಾರಿಗೆ ತರುವ ಮೂಲಕ ಮಹಿಳೆಯರ ರಕ್ಷಣೆಗೆ ಮುಂದಾಗಬೇಕು ಎಂದು ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಘಟನೆ, ಸೌಜನ್ಯ ಕೊಲೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದರೂ ರಾಜ್ಯ ಸರ್ಕಾರವುಸರಿಯಾದ ರೀತಿಯಲ್ಲಿ ಕ್ರಮಕ್ಕೆ ಮುಂದಾಗದೆ […]
ಶ್ರೀನಿವಾಸಪುರ: ಸಾರ್ವಜನಿಕರು ಯೋಗ ಮತ್ತು ಪ್ರಾಣಾಯಮದ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪಡೆದುಕೊಳ್ಳಬೇಕು ಎಂದು ಐಸಿರಿ ಹೀಲಿಂಗ್ ಸೆಂಟರ್ನ ಹೀಲರ್ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಸಿರಿ ಹೀಲಿಂಗ್ ಸೆಂಟರ್ ಸೆಂಟರ್ ವತಿಯಿಂದ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗುವುದು ಎಂದು ಹೇಳಿದರು.ಆ.2 ರಿಂದ ಮೂರು ದಿನಗಳ ಕಾಲ ಬೆಳಿಗ್ಗೆ 11 ರಿಂದ 2 ಗಂಟೆ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆ ವರೆಗೆ ಉಚಿತ […]
ಶ್ರೀನಿವಾಸಪುರ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಮಾಜ ಸೇವೆ ಹಾಗೂ ಮಾನವೀಯ ನಡೆಗೆ ಹೆಸರಾಗಿದೆ ಎಂದು ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಸ್ಕಾರ್ಫ್ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸಂಸ್ಥೆಗೆ ಸ್ವಯಂ ಪ್ರೇರಣೆಯಿಂದ ಸೇರಬೇಕು. ಶಿಸ್ತು ಹಾಗೂ ಸಂಸ್ಕಾರ ಮೈಗೂಡಿಸಿಕೊಂಡು ಬೆಳೆಯಬೇಕು ಎಂದು ಹೇಳಿದರು.ಸಂಸ್ಥೆಯ ಸ್ಕಾರ್ಫ್ ಧರಿಸುವುದು ಸಮಾಜ ಮುಖಿ ಧೋರಣೆ ಪ್ರತೀಕ. ಶಿಸ್ತಿನ ನಡೆ ಹಾಗೂ ಸಮಾಜ […]
ಶ್ರೀನಿವಾಸಪುರ ಜೆಡಿಎಸ್ನ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷಣಿ ಡಾ|| ಎಂ. ಗಾಯಿತ್ರಿ ಮುತ್ತಪ್ಪ ರವರ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಲಿ ಸಾರ್ವಜನಿಕ ಸೇವೆಗಾಗಿ ಭಗವಂತ ಇನ್ನಷ್ಟು ಶಕ್ತಿ ಮತ್ತು ಆರೋಗ್ಯ ನೀಡಲಿ ಎಂದು ಜೆಡಿಎಸ್ನ ಯುವ ಮುಖಂಡ ಅಂಬೇಡ್ಕರ್ ಪಾಳ್ಯ ಸಿ. ರವಿ ತಿಳಿಸಿದರು.ಪಟ್ಟಣದ ಪ್ರವಾಸ ಮಂದಿರದಲ್ಲಿ ಡಾ|| ಎಂ. ಗಾಯಿತ್ರಿ ಮುತ್ತಪ್ಪ ಅಭಿಮಾನ ಬಳಗದಿಂದ ಏರ್ಪಡಿಸಿದ್ದ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಶುಭಾಶಯಗಳನ್ನು ತಿಳಿಸಿ ಮಾತನಾಡಿದ ಸಿ.ರವಿ ಕಳೆದ ನಾಲ್ಕು ವರ್ಷಗಳಿಂದ ಈ ಕ್ಷೇತ್ರದಲ್ಲಿ ಅನೇಕ ಸಾಮಾಜಿಕ […]
ಕೋಲಾರ:- ಹುಟ್ಟು ಹಬ್ಬದ ನೆಪದಲ್ಲಿ ಮೋಜು ಮಸ್ತಿ ಮಾಡದೆ ಸಮಾಜ ಮುಖಿ ಕೆಲಸಗಳನ್ನು ಮಾಡುವ ಮೂಲಕ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡರೆ ಆತ್ಮತೃಪ್ತಿ ದೊರೆಯುತ್ತದೆಯೆಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಕೆ.ಎಸ್.ರಾಜೇಂದ್ರ ಅಭಿಪ್ರಾಯಪಟ್ಟರು.ನಗರ ಹೊರವಲಯದ ಅತಂರಗಂಗಾ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಅವರು ಬುದ್ದಿಮಾಂದ್ಯ ಮಕ್ಕಳಿಗೆ ಸಿಹಿ ಊಟ ನೀಡಿ, ಜತೆಗೆ ಪಿಸಿ ಬಡಾವಣೆಯ ಮುಸ್ಸಂಜೆ ಮನೆಯಲ್ಲಿ ವೃದ್ದರಿಂದ ಆಶೀರ್ವಾದ ಪಡೆದು ಅವರ 42 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.ಈ ಸಂದರ್ಭದಲ್ಲಿ ಮಾತನಾಡಿದ […]

