
ಕೋಲಾರ:- ಸಮಾಜದಲ್ಲಿ ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆಟೋ ಚಾಲಕರ ಪಾತ್ರವು ಅನನ್ಯವಾಗಿದ್ದು, ಅಪರಾಧಗಳು ಗಮನಕ್ಕೆ ಬಂದಾಗ ಪೊಲೀಸರಿಗೆ ಮಾಹಿತಿ ರವಾನಿಸಿ ಸಹಕಾರ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ದೇವರಾಜ್ ಕರೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಜಯಚಾಮರಾಜೇಂದ್ರ ಒಡೆಯರ್ ಕನ್ನಡಿಗರ ಸಂಘದ ವತಿಯಿಂದ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲಿ ಏನು ನಡೆಯುತ್ತಿದೆ ಎಂಬ ವಿದ್ಯಮಾನಗಳ ಬಗ್ಗೆ ಆಟೋ ಚಾಲಕರಿಗೆ ಅರಿವು ಇರುತ್ತದೆ ಎಂದ ಅವರು […]

ಶ್ರೀನಿವಾಸಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಿ ಕೀರ್ತಿ ರಾಜ್ಯ ಬಿಜೆಪಿಸರ್ಕಾರಕ್ಕೆ ಸೇರುತ್ತದೆ ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರ ತಾಲ್ಲೂಕು ಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದಶಕಗಳ ಕಾಲ ಆಳಿದ ಕಾಂಗ್ರೆಸ್ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕಾರ್ಯಕ್ಕೆ ಕೈ ಹಾಕಲಿಲ್ಲ. ಬಿಜೆಪಿ ಅದನ್ನು ಮಾಡಿ ತೋರಿಸಿದೆ ಎಂದು ಹೇಳಿದರು.ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 35 ಸಾವಿರ ಹಾಗೂ […]

ಕೋಲಾರ ; ಜಿಲ್ಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಸಂತಸದ ವಿಷಯ. ಕನ್ನಡ ರಾಜ್ಯೋತ್ಸವ ಮತ್ತು ಕನ್ನಡಾಭಿಮಾನ ಬರಿ ನವೆಂಬರ್ ಮಾಸಕ್ಕೆ ಸೀಮಿತವಾಗದೆ ಪ್ರತಿದಿನವೂ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತೋಟಗಾರಿಕೆ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸ್ಯಾಂಖಿಕ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ತಿಳಿಸಿದರು.ಇಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘ, ಕೋಲಾರ ಇವರ ಸಂಯುಕ್ತ […]

ಶ್ರೀನಿವಾಸಪುರ: ನಿತ್ಯ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿಯಿಂದ ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಗಡಿ ಭಾಗದಲ್ಲಿ ಕನ್ನಡ ಬಾಷೆ ಬಗ್ಗೆ ಗೌರವ ಭಾವನೆ ಇದ್ದರೆ ಸಾಲದು. ಹೃದಯದ ಭಾಷೆಯಾಗಿದ್ದರೆ ಸಾಲದು, ಅದು ಮಾತಾಗಿ ಬರಬೇಕು ಎಂದರು.ಗಡಿ ಭಾಗದ ಪೋಷಕರು ತಮ್ಮ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡಬೇಕು. ಕನ್ನಡದ ಹಿರಿಮೆ ಕುರಿತು ಪರಿಚಯ […]

ಶ್ರೀನಿವಾಸಪುರ: ಭಾರತೀಯ ಸಂಸ್ಕøತಿಯಲ್ಲಿ ಹಬ್ಬ ಹರಿದಿನಗಳಿಗೆ ಮಹತ್ವ ನೀಡಲಾಗಿದೆ ಎಂದು ಸುಧೀರ ಚೈತನ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ವೈಆರ್ಎಸ್ ಸಭಾಂಗಣದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣ ಸಮಿತಿ ವತಿಯಿಂದ ದೀಪಾವಳಿ ಹಾಗೂ ಕಾರ್ತೀಕ ಮಾಸದ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ದೀಪೋತ್ಸವ ಹಾಗೂ ಜ್ಯೋತಿರ್ಬಿಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೌರಾಣಿಕ ಹಾಗೂ ಸಾಂಸ್ಕøತಿಕ ಮಹತ್ವ ಹೊಂದಿರುವ ಹಬ್ಬಗಳು ಸಮಾಜದ ಎಲ್ಲ ಸಮುದಾಯಗಳನ್ನೂ ಒಗ್ಗೂಡಿಸುತ್ತವೆ ಎಂದು ಹೇಳಿದರು.ಯಾವುದೇ ಆಚಾರ ಹಾಗೂ ವಿಚಾರದ ನಡುವೆ ಸಮನ್ವಯ ಇರಬೇಕು. ದೀಪ ಜ್ಞಾನದ ಸಂಕೇತ. […]

ಶ್ರೀನಿವಾಸಪುರದ ಅಬ್ಬಾಸ್ ಬಾಬು, ನ್ಯೂ ಆಂಧ್ರ ಬಾಡಿ ಬಿಲ್ಡಿರ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ರಾಯಚೂಟಿಯಲ್ಲಿ ಏರ್ಪಡಿಸಿದ್ದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಶ್ರೀನಿವಾಸಪುರ : ಸರ್ಕಾರಿ ನೌಕರರು ಸಂಬಳಕ್ಕಾಗಿ ಮಾತ್ರವೇ ಸೇವೆ ಸಲ್ಲಿಸಿದರೆ ಸಾಲದು ಜೊತೆಗೆ ಪ್ರಾಮಾಣಿಕತೆಯೂ ಇದ್ದರೆ ಜೀವನಪೂರ್ತಿ ಸಾರ್ಥಕತೆ ಇರುತ್ತದೆ ಅಂತಹ ಪ್ರಮಾಣಿಕ ವ್ಯಕ್ತಿಗಳನ್ನು ಸಾರ್ವಜನಿಕರು ಗೌರವಿಸುತ್ತಾರೆ ಎಂದು ಕಾರ್ಯ ಪಾಲಕ ಇಂಜನೀಯರ್ ಕೋಲಾರ ವಿಬಾಗ ಇಇ ಆರ್.ಚಂದ್ರಶೇಖರ್ ಹೇಳಿದರು.ಪಟ್ಟಣದ ಪಿಡಬ್ಲೂಡಿ ಕಛೇರಿಯಲ್ಲಿ ನಿವೃತ್ತರಾದ ಸಹಾಯಕ ಕಾರ್ಯಪಾಲಕ ಇಂಜಿನೀಯರ್ ಎಂ.ಕೆ.ಹುಸೇನ್ಸಾಬ್ ರವರಿಗೆ ಬೀಳ್ಕೋಡಿಗೆ ಸನ್ಮಾನ ಸಮಾರಂಭದಲ್ಲಿ ಬಾಗವಹಿಸಿ ಮಾತನಾಡಿ ಉತ್ತಮ ಕೆಲಸ ಕಾರ್ಯಗಳಿಂದ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದ್ದು, ಎಂ.ಕೆ.ಹುಸೇನ್ಸಾಬ್ 37 ವರ್ಷಗಳ ಸರ್ಕಾರಿ ಕೆಲಸ […]

ಶ್ರೀನಿವಾಸಪುರದಲ್ಲಿ ಪುನೀತ್ ರಾಜ್ಕುಮಾರ್ ಪುಣ್ಯತಿಥಿ ಪ್ರಯುಕ್ತ ಅಪ್ಪು ಅಭಿಮಾನಿಗಳ ಸಂಘದಿಂದ ಶನಿವಾರ ಏರ್ಪಡಿಸಿದ್ದ ಅನ್ನದಾನ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಸಂಘದ ಅಧ್ಯಕ್ಷ ಎಸ್.ಎಚ್.ನಾರಾಯಣಮೂರ್ತಿ ಇದ್ದರು.

ಶ್ರೀನಿವಾಸಪುರ: ಕೆಂಪೇಗೌಡರ ಆಡಳಿತ ಮಾದರಿಯಾಗಿದೆ.ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಮೃತ್ತಿಕೆ ಸಂಗ್ರಹ ರಥಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಸಮೀಪ ಕೆಂಪೇಗೌಡರ ಪುತ್ಥಳಿ ಸ್ಥಾಪನೆ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.ಪುತ್ಥಳಿ ಅನಾವಣರಣ ಕಾರ್ಯಕ್ರಮ ನ.11 ರಂದು ನಡೆಯಲಿದ್ದು, ಪ್ರಧಾನಿ […]