ಕೋಲಾರ,ಜು.10: ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲೂ ಸಬ್ಸಿಡಿ ದರದಲ್ಲಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಟೊಮೊಟೊ ವಿತರಣೆ ಮಾಡಬೇಕೆಂದು ರೈತ ಸಂಘದಿಂದ ಎ.ಪಿ.ಎಂ.ಸಿ ಕಾರ್ಯದರ್ಶಿ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ನಕಲಿ ಬಿತ್ತನೆ ಬೀಜ ಕೀಟ ನಾಶಕಗಳ ಹಾವಳಿಯಿಂದ ಲಕ್ಷಾಂತರ ರೂ ಬಂಡವಾಳ ಹಾಕಿ ಬೆಳೆದಿರುವ ಟೊಮೊಟೊ ಬೆಳೆ ರೋಗಕ್ಕೆ ತುತ್ತಾಗಿ ಉತ್ತಮ ಪಸಲಿಲ್ಲದೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು ಟೊಮೊಟೊ ಮೀರುಸುತ್ತಿದೆ. ಇದರಿಂದ ರೈತರಿಗೂ ಲಾಭದಾಯಕವಿಲ್ಲ, ಗ್ರಾಹಕರಿಗೂ ಹೊರೆಯನ್ನು ತಪ್ಪಿಸಲು ಸರ್ಕಾರವೇ ಟೊಮೋಟೊ ರೈತರಿಂದ ಖರೀದಿ ಮಾಡಿ ಜನಸಾಮಾನ್ಯರಿಗೆ […]

Read More

ಕೋಲಾರ:- ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ 108 ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಣವರು ತಮ್ಮ ಕಿರಿಯ ಪಟ್ಟ ಶ್ರೀ ಶ್ರೀ 108 ಶ್ರೀ ಸುಶ್ರೀಂದ್ರ ತೀರ್ಥ ಶ್ರೀ ಪಾದಂಗಳವರೊಂದಿಗೆ ಪರ್ಯಾಯ ಸಂಚಾರದ ಅಂಗವಾಗಿ ನಗರದ ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಜು.10 ರಂದು ಸೋಮವಾರ ಸಂಜೆ 6-00 ಗಂಟೆಗೆ ಆಗಮಿಸಲಿದ್ದಾರೆ.ಶ್ರೀಗಳವರಿಂದ ಅನುಗ್ರಹ ಭಾಷಣ ನಡೆಯಲಿದೆ. ಕೋಟಿ ಗೀತ ಲೇಖನ ಯಜ್ಞ ಅಭಿಯಾನ ಮತ್ತು ಪರ್ಯಾಯಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ […]

Read More

ಕೋಲಾರ:- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಸರ್ವ ಜನಾಂಗದ ಕಲ್ಯಾಣಕ್ಕೆ ಬಜೆಟ್ ಮಂಡಿಸಿದ್ದಾರೆ ಎಂದು ಐ.ಎನ್.ಟಿ.ಯು.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಜಾರಿಯ ಜೊತೆಯಲ್ಲಿಯೇ ಪ್ರತಿಯೊಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ವಿಶೇಷವಾಗಿ ಕಾರ್ಮಿಕರ ಉಳಿವಿಗಾಗಿ ಈ ಮಧ್ಯಂತರದ ಬಜೆಟ್ ನಲ್ಲಿ ಹೆಚ್ಚಿನ ಅಧ್ಯತೆ ನೀಡಿದ್ದಾರೆ ಮುಂದಿನ ದಿನಗಳಲ್ಲಿ […]

Read More

ಕೋಲಾರ:- ರಾಜ್ಯ ಸರಕಾರದ ಮೊದಲೇ ಸಚಿವ ಸ್ಥಾನ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದರು ಈ ಬಾರಿಯ ಬಹುನಿರೀಕ್ಷಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಬಜೆಟ್ ನಲ್ಲಿ ಕೂಡ ಕೋಲಾರ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಜಿಲ್ಲೆಗೆ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡದಿರುವುದು ಜಿಲ್ಲೆಯ ಜನರಿಗೆ ಬೇಸರ ಉಂಟುಮಾಡಿದೆ ಎಂದು ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಬೇಸರ ವ್ಯಕ್ತ ಪಡಿಸಿದ್ದಾರೆಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಸಿದ್ದರಾಮಯ್ಯನವರು ತಮ್ಮ ಬಜೆಟ್?ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು […]

Read More

ಕೋಲಾರ:- ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು,ಮರಳು ಗಣಿಗಾರಿಕೆ ವಿರುದ್ದ ವಿಧಿಸಿರುವ 43 ಕೋಟಿ ದಂಡ ವಸೂಲಿ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ವಿಚಾರ ಪ್ರತಿಧ್ವನಿಸಿದ್ದು, ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, 43 ಕೋಟಿ ದಂಡ ವಸೂಲಾತಿಗೆ ಏನು ಕ್ರಮ ವಹಿಸಿದ್ದೀರಿ? ಆ ಸಂಸ್ಥೆಗಳ ಆಸ್ತಿ ಮುಟ್ಟುಗೋಲು ಮಾಡಿಕೊಂಡಿದ್ದೀರಾ? ಮರಳು ಹಾಗೂ ಗ್ರಾನೈಟ್ ದಂಧೆಗೆ […]

Read More

ಕೋಲಾರ, ಜು-8, ನಕಲಿ ಕೀಟನಾಶಕ ಬಿತ್ತನೆ ಬೀಜ ಮಾರಾಟಗಾರರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುವ ಜೊತೆಗೆ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ ತೆರವುಗೊಳಿಸಲು ವಿಶೇಷ ಕಂದಾಯ ಅಧಿಕಾರಿಗಳ ತಂಡ ರಚನೆ ಮಾಡುವಂತೆ ರೈತ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಬಿಂಗಿ ರೋಗದಿಂದ ನಷ್ಟವಾಗಿರುವ ಟೆಮೇಟೋ ಸಮೇತ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿ ನಕಲಿ ಔಷಧಿ ಕಂಪನಿಗಳ ಸೇವಕರಾಗಿ ಕೃಷಿ ತೋಟಗಾರಿಕೆ ಅಧಿಕಾರಿಗಳು ಕೆಲಸ […]

Read More

ಕೋಲಾರದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ ನೀರುಪೂರೈಕೆ , ಅಭಿವೃದ್ಧಿಪರ ಆಡಳಿತ , ಶಿಕ್ಷಣ , ಆರೋಗ್ಯ ಸ್ವಚ್ಛ ಕ್ಷಣ , ಆರೋಗ್ಯ ಸಚತೆಗೆ ಒತ್ತು – ಭರವಸೆ ಕೋಲಾರ : ಕುಡಿಯುವ ನೀರಿನ ಪೂರೈಕೆ , ಅಭಿವೃದ್ಧಿ ಪರ ಆಡಳಿತಕ್ಕೆ ಆದ್ಯತೆ , ಶಿಕ್ಷಣ , ಆರೋಗ್ಯ ಕ್ಷೇತ್ರಗಳಿಗೆ ಒತ್ತು , ಸ್ವಚ್ಛತೆ ಮೂಲ ಸೌಕರ್ಯ ಕೊರತೆ ನೀಗಿಸುವ ಪ್ರಯತ್ನ , ಎಲ್ಲಾ ಇಲಾಖೆಗಳ ಖಾಲಿ ಹುದ್ದೆಗಳನ್ನು ತುಂಬಲು ಅಗತ್ಯ ಕ್ರಮವಹಿಸಲಾಗುವುದು ಎಂದು […]

Read More

ಶ್ರೀನಿವಾಸಪುರ 3 : ಮಕ್ಕಳಿಗೆ ಕೇವಲ ಪುಸ್ತಕದ ಅಕ್ಷರ ಕಲಿಸಿದರೆ ಸಾಲದು, ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳಸಿದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಂಡು ಸಮಾಜಮುಖೀಯಾಗಿ ಬದುಕಲು ಸಾಧ್ಯ ಎಂದು ಆದಿಚುಂಚುನಿಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮಿಜಿ ಹೇಳಿದರು.ಪಟ್ಟಣ ಹೊರವಲಯದ ಬೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಬುಧವಾರ ಮಕ್ಕಳ ಅಕ್ಷರ ಕಲಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ವಿದ್ಯೆ ಎಂದರೆ ಕೇವಲ ಪದವಿ ಸಂಪಾದನೆ ಮಾತ್ರವಲ್ಲ . ವಿದ್ಯೆಗೆ ವಿನಯವೇ ಭೂಷಣವಾಗಿದ್ದು ತಾನು ಮಾತ್ರವೇ ಬದುಕಬೇಕೆಂಬ ಸ್ವಾರ್ಥ ಬಿಟ್ಟು […]

Read More

ಕುಂದಾಪುರ ಜು:4 ಐ ಎಂ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆಯ “ಸಂವಾದ” ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಪ್ರಾಂಶುಪಾಲೆಯವರಾದ ಡಾ| ಪ್ರತಿಭಾ ಎಂ ಪಟೇಲ್ ರವರು ಸಭೆಯಲ್ಲಿ ಶೈಕ್ಷಣಿಕ ವರ್ಷದ ಎಲ್ಲಾ ತತ್ವವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು. ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರುವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ್ ಕುಮಾರ್ ರವರು, […]

Read More