
ಶ್ರೀನಿವಾಸಪುರ: ಕಳೆದಆಗಸ್ಟ್ಮಾಹೆಯಲ್ಲಿರಾಜ್ಯಮಟ್ಟದಲ್ಲಿಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕನ್ನಡ ಮತ್ತುಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಪಟ್ಟಣದಕರ್ನಾಟಕ ವಾಣಿಜ್ಯ ಮತ್ತುಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕೆ.ಐ.ಐ.ಟಿ.) 4ಡಿಸ್ಟಿಂಗ್ಷನ್ ನೊಂದಿಗೆ (DISTINCTIONS ಶೇಕಡ75ರಷ್ಟು ಫಲಿತಾಂಶದೊರೆತಿದೆಎಂದು ಸಂಸ್ಥೆಯ ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ತೇರ್ಗಡೆ ಹೊಂದಿದಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವಉತ್ತಮ ಫಲಿತಾಂಶಕ್ಕೆಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದಎನ್. ಕೃಷ್ಣಮೂರ್ತಿ ಮತ್ತುಕೇಂದ್ರ ವ್ಯವಸ್ಥಾಪಕರಾದಆರ್. ರಾದಇವರು ಅಭಿನಂದಿಸಿದ್ದಾರೆ.

ಶ್ರೀನಿವಾಸಪುರ: ಸಮುದಾಯ ಪ್ರತಿಭಾ ಸಂಪನ್ನರನ್ನು ಗುರುತಿಸಿ, ಅವರಲ್ಲಿನ ಪ್ರತಿಭೆ ಅರಳಲು ನೆರವಾಗಬೇಕು. ಅರಳು ಪ್ರತಿಭೆಗಳು ಕಂಡ ಕನಸನ್ನು ನನಸಾಗಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಹೇಳಿದರು.ಪಟ್ಟಣದ ಉನಿಕಿಲಿ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಸಂಗೀತ ಕಲಾವಿದೆ ಲೇಖಾ ಅವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಎನ್.ಲೇಖಾ ಅಭಿಜಾತ ಕಲಾವಿದೆ. ಚಿಕ್ಕ ವಯಸ್ಸಿನಿಂದಲೇ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪೋಷಕರ ಪ್ರೋತ್ಸಾಹ, ಗುರುಗಳ ಆಶೀರ್ವಾದ ಹಾಗೂ ಸತತ ಪರಿಶ್ರಮದ […]

ಶ್ರೀನಿವಾಸಪುರ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು .ಗೂರವಿಮಾಕಲಪಲ್ಲಿಯ ಸಪ್ಲಮ್ಮ ದೇವಸ್ಥಾನದಲ್ಲಿ ಶ್ರೀನಿವಾಸಪುರದ ಸರ್ಕಾರಿ ಪದವಿಪೂರ್ವ ಕಾಲೇಜುವತಿಯಿಂದ ನಡೆದ ಎನ್ಎಸ್ಎಸ್ ಶಿಬಿರದಲ್ಲಿ ಮಂಗಳವಾರ ಭಾಗವಹಿಸಿ ಮಾತನಾಡಿದರು.ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶಗಳನ್ನು ಜೀವನದ ಉದ್ದಕ್ಕೂ ಪಾಲಿಸಬೇಕು. ಶಿಬಿರದಲ್ಲಿ ಕಲಿತುಕೊಂಡ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳು ಸಂಸ್ಕಾರ ಹೆಚ್ಚಿಸುವಂತ ಮಾನವಿಯ ಮೌಲ್ಯಗಳನ್ನು ಅಳವಡಿಸಿಕಂಡಲ್ಲಿ ಭವಿಷ್ಯದಲ್ಲಿ ಉಪಯೋಗಕ್ಕೆ ಬರುತ್ತದೆ […]

ಬಂಗಾರಪೇಟೆ, ಅ.06: ಕಸಬಾ ಹೊಬಳಿ ಕಾರಹಳ್ಳಿ ಕಂದಾಯ ವೃತ್ತದ ಸರ್ವೇ ನಂ.197 ರಲ್ಲಿ ಆಕ್ರಮವಾಗಿ ಕಾಂಪೌಂಡ್ ನಿರ್ಮಿಸಿರುವ ದಂದೆ ಕೋರರ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಒತ್ತುವರಿ ತೆರೆವುಗೊಳಿಸಬೇಕೆಂದು ರೈತ ಸಂಘದಿಂದ ತಹಶೀಲ್ದಾರ್ ದಯಾನಂದ್ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜನರ ತೆರಿಗೆ ಹಣದಲ್ಲಿ ಲಕ್ಷ ಲಕ್ಷ ಸಂಬಳ ಪಡೆದು ಸರ್ಕಾರಿ ಆಸ್ತಿಗಳನ್ನು ಉಳಿಸಬೇಕಾದ ಕಂದಾಯ ಅಧಿಕಾರಿಗಳು ಆಕ್ರಮ ದಾಖಲೆಗಳನ್ನು ಸೃಷ್ಟಿ ಮಾಡಿ ಭೂ ಮಾಪೀಯರವರಿಗೆ ಕೆರೆ, ರಾಜಕಾಲುವೆ, ಗುಂಡುತೋಪು ಗೋಮಾಳವನ್ನು ಮಾರಾಟ ಮಾಡುತ್ತಿರುವುದು ತನ್ನ ವೃತ್ತಿಗೆ ದ್ರೋಹ […]

ಕೋಲಾರ:- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2022ನೇ ಸಾಲಿನ 6 ರಿಂದ 8ನೇ ತರಗತಿಗಳಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ವೃಂದ ನೇರ ನೇಮಕಾತಿಯಡಿ ಜಿಲ್ಲಾಮಟ್ಟದ ಸಂಯುಕ್ತ ಸ್ವರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರೀಶೀಲನೆಗೆ ಬಿ ದರ್ಜೆಯ ಅಧಿಕಾರಿಗಳ 5 ತಂಡಗಳನ್ನು ರಚಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ ತಿಳಿಸಿದರು.ನಗರದ ಡಿಡಿಪಿಐ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 10 ಗಂಟೆಯಿಂದ ನಡೆಯುತ್ತಿರುವ ದಾಖಲೆಗಳ ಪರಿಶೀಲನೆ ವೀಕ್ಷಿಸಿ ಮಾತನಾಡಿದ ಅವರು, ಯಾವುದೇ ಗೊಂದಲ […]

ಶ್ರೀನಿವಾಸಪುರ: ವರದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ವಿಜಯದಶಮಿ ಪ್ರಯುಕ್ತ ಬನ್ನಿ ಮರದ ಪೂಜೆ ಏರ್ಪಡಿಸಲಾಗಿತ್ತು.ತಹಶೀಲ್ದಾರ್ ಶಿರಿನ್ ತಾಜ್ ಬನ್ನಿ ಮರಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಬಳಿಕ, ಬಿಲ್ಲು ಹಿಡಿದು ಬಾಣ ಬಿಟ್ಟರು. ಅರ್ಚಕ ಸುಬ್ರಮಣಿ ಪೂಜಾ ವಿಧಿಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಹಾಗೂ ನಾಗರಿಕರ ವತಿಯಿಂದ ತಹಶೀಲ್ದಾರ್ ಶಿರಿನ್ ತಾಜ್ ಅವರನ್ನು ಸನ್ಮಾನಿಸಲಾಯಿತು.ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಗ್ರಾಮ ಲೆಕ್ಕಾಧಿಕಾರಿಗಳಾದ ವಸುಂಧರಾದೇವಿ, ಮುರಳಿ, ನಾಗರಾಜ್, ಮುಖಂಡರಾದ ಗೋಪಿನಾಥರಾವ್, ಶ್ರೀನಿವಾಸ್. ಇರ್ಷಾದ್ಇದ್ದರು.

ಕೋಲಾರ:- ಎಐಸಿಸಿ ಮಾರ್ಗದರ್ಶನ ಹಾಗೂ ಕೆಪಿಸಿಸಿ ಆಶ್ರಯದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಿಂದ ಸೆ.10 ರಂದು ಬೆಳಗ್ಗೆ ಮುಂದುವರೆಯಲಿರುವ ರಾಹುಲ್ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕೋಲಾರ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರು,ಮಾಜಿ ಶಾಸಕರು, ಎಲ್ಲಾ ಘಟಕಗಳ ಪದಾಧಿಕಾರಿಗಳು, ಪಕ್ಷದ ಹಿತೈಷಿಗಳು,ವಿವಿಧ ನಾಗರೀಕ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮನವಿ ಮಾಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಕಾಂಗ್ರೆಸ್ ಶಾಸಕಾಂಗಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನಪರಿಷತ್ ವಿರೋಧಪಕ್ಷದ ನಾಯಕ […]

ಕೋಲಾರ: ಜಿಲ್ಲಾ ಕೇಂದ್ರದಲ್ಲಿ ವಿಜಯ ದಶಮಿ ಹಬ್ಬವನ್ನು ಕೋಲಾರಮ್ಮ ದೇವತೆಯ ಜಂಬೂಸವಾರಿ ಸಾರಥ್ಯದಲ್ಲಿ ಗ್ರಾಮ ದೇವತೆಗಳ ಮೆರವಣಿಗೆಯೊಂದಿಗೆ ಸೌಹಾರ್ದತೆಯುತವಾಗಿ ಶಾಂತಿಯಿಂದ ಆಚರಿಸಲು ದಸರಾ ಸಮಿತಿ ಗುರಿ ಹೊಂದಿದೆ ಎಂದು ಜಿಲ್ಲಾ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ತಿಳಿಸಿದರು.ನಗರದ ಶಾರದಾ ಚಿತ್ರಮಂದಿರದ ಹಿಂಭಾಗದ ಕೃಷ್ಣ ರೆಸಿಡೆನ್ಸಿ ಮುಂಭಾಗದ ವೇದಿಕೆಯಲ್ಲಿ ಗ್ರಾಮೀಣ ದಸರಾ ಖ್ಯಾತಿಯ ಕೊಂಡರಾಜನಹಳ್ಳಿ ಬನ್ನಿವೃಕ್ಷ್ಯ ಪೂಜೆಯಲ್ಲಿ ಪಾಲ್ಗೊಂಡ ನಗರದ ವಿವಿಧ ಬಡಾವಣೆಗಳ ದೇವರ ಉತ್ಸವ ಮೂರ್ತಿಗಳಿಗೆ ಸ್ವಾಗತ ಕೋರಿ, ದೇವಾಲಯದ ಮುಖ್ಯಸ್ಥರನ್ನು ಸನ್ಮಾನಿಸುವ ಕಾರ್ಯಕ್ರಮದ […]

ಶ್ರೀನಿವಾಸಪುರ : ಸೋಮವಾರ ತಹಶೀಲ್ದಾರ್ ನೇತೃತ್ವದಲ್ಲಿ ನೌಕರರ ಭವನದಲ್ಲಿ ನಡೆಯಬೇಕಾಗಿದ್ದು, ವಾಲ್ಮೀಕಿ ಜಯಂತಿ ಪೂರ್ವ ಬಾವಿ ಸಭೆಯನ್ನು, ಸಮುದಾಯದ ಮುಖಂಡರು ಬಹಿಷ್ಕರಿಸಿ, ತಾಲೂಕು ಕಚೇರಿಯ ಮುಂಬಾಗದಲ್ಲಿ ಸರ್ಕಾರಕ್ಕೆ ಬೇಡಿಕೆಗಳ ಮನವಿ ಪತ್ರವನ್ನು ಶಿರಸ್ತೆದಾರ್ ಮನೋಹರ್ ಮಾನೆರವರಿಗೆ ಸಲ್ಲಿಸಿದರು.ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಆಂಜನೇಯಪ್ಪ ಮಾತನಾಡಿ ನಮ್ಮ ಸಮುದಾಯದ ಸ್ವಾಮಿಗಳಾದ ಪ್ರಸನ್ನಾನಂದ ಸ್ವಾಮಿಜಿಗಳ ನೇತೃತ್ವದಲ್ಲಿ ಬೆಂಗಳೂರಿನ ಪ್ರೀಡಂಪಾರ್ಕ್ನಲ್ಲಿ ಮೀಸಲಾತಿಗಾಗಿ ಹಲವು ದಿನಗಳಿಂದ ಸತ್ಯಾಗ್ರಹ ಮಾಡುತ್ತಿದ್ದಾರೆ. ಸರ್ಕಾರ ಇದುವರೆಗೂ ಸ್ಪಂದನೆ ಮಾಡಿಲ್ಲ. 9 ನೇ ತಾರೀಖು ಒಳಗೆ, ಮೀಸಲಾತಿ ಜಾರಿಮಾಡಿದಿದ್ದಲ್ಲಿ […]