ಕೋಲಾರ:- ಮಾನಸಿಕ, ದೈಹಿಕ ಆರೋಗ್ಯ ಉತ್ತಮಗೊಳ್ಳುವ ಮೂಲಕ ಸದಾ ಕಲಿಕೆಯಲ್ಲಿ ಕ್ರಿಯಾಶೀಲತೆಗೆ ಯೋಗ ಸಹಕಾರಿ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ತಿಳಿಸಿದರು.ಶಾಲೆಯ ಆವರಣದಲ್ಲಿ ವಿಶ್ವಯೋಗದಿನದ ಅಂಗವಾಗಿ ಮಕ್ಕಳಿಂದ ನಡೆದ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡಿ, ಇತರರಿಗೂ ತಿಳಿಸಿಕೊಡಿ, ನಿಮ್ಮ ಕಲಿಕೆಯಲ್ಲಿ ಸದಾ ಕ್ರಿಯಾಶೀಲತೆ ತುಂಬಲು ಯೋಗ ಸಹಕಾರಿ ಎಂಬುದನ್ನು ಮರೆಯದಿರಿ ಎಂದು ಕಿವಿಮಾತು ಹೇಳಿದರು.ಯೋಗ ಜಾತ್ಯಾತೀತವಾದುದು, ಇದಕ್ಕೆ ಪಕ್ಷ,ಜಾತಿ,ವಯಸ್ಸು, ಲಿಂಗ […]

Read More

ಕೋಲಾರ:- ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಜಿಲ್ಲಾಡಳಿತಕ್ಕೆ ನೌಕರರು ಸಹಕಾರ ನೀಡುವ ಮೂಲಕ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ಕೆಲಸವನ್ನು ಜತೆಯಾಗಿ ನಿರ್ವಹಿಸೋಣ, ಜನತೆಗೆ ನ್ಯಾಯ ಒದಗಿಸೋಣ ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಕರೆ ನೀಡಿದರು.ನಗರದ ಜಿಲ್ಲಾಡಳಿತದ ಭವನದಲ್ಲಿ ಕೋಲಾರದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ ವಹಿಸಿಕೊಂಡ ಅಕ್ರಂ ಪಾಷಾ ಅವರನ್ನು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ಸರ್ಕಾರ ಹಾಗೂ ಜನತೆಯ ನಡುವೆ ಸೇತುವೆಯಾಗಿ ಸರ್ಕಾರಿ ನೌಕರರು […]

Read More

ಕೋಲಾರ,ಜೂ.21: ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂಪಾಶ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.ಇದೇ ಸಂದರ್ಭದಲ್ಲಿ ನಗರದಲ್ಲಿರುವ ರಸ್ತೆಗಳ ಸಮಸ್ಯೆ, ಯು.ಜಿ.ಡಿ, ಕಸ ವಿಲೇವಾರಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಿ ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.ನಿಯೋಗದಲ್ಲಿ ಇಂಡಿಯನ್ ಯೂನಿಯನ್ ಮುಸ್ಲೀಮ್ ಲೀಗ್ ಜಿಲ್ಲಾಧ್ಯಕ್ಷ ಶೇಖ್ ಆಶ್ರಫ್‍ಆಲಿ, ಜಿಲ್ಲಾ ಕಾರ್ಯದರ್ಶಿ ಸೈಯದ್ ಸಿಬ್ಗತ್‍ವುಲ್ಲಾ, ವಜೀರ್‍ಪಾಷ, ಇಮ್ರಾನ್‍ಪಾಷ, ಸೈಯದ್ ನೂರ್ ಇನ್ನಿತರರು ಉಪಸ್ಥಿತರಿದ್ದರು.

Read More

ಶ್ರೀನಿವಾಸಪುರ: ನಗರ ಪ್ರದೇಶದಲ್ಲಿ ಯೋಗ ಶಿಕ್ಷಣ ಆದ್ಯತೆ ವಿಷಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಯೋಗಾಭ್ಯಾಸದಿಂದ ದೊರೆಯುವ ಪ್ರಯೋಜನ ಕುರಿತು ಪ್ರಚಾರ ಮಾಡಬೇಕಾದ ಅಗತ್ಯವಿದೆ ಎಂದು ತಾಲ್ಲೂಕು ಎಲ್‍ಐಸಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದಲ್ಲಿ ಎಲ್‍ಐಸಿ ಸಿಬ್ಬಂದಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.ಇಂದು ವಿಶ್ವ ಅಡ್ಡ ಪರಿಣಾಮ ಇಲ್ಲದ ಆರೋಗ್ಯ ರಕ್ಷಣೆಗಾಗಿ ಭಾರತದ ಕಡೆ ನೋಡುತ್ತಿದೆ. ಯೋಗ […]

Read More

ಶ್ರೀನಿವಾಸಪುರ: ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಸಕ […]

Read More

ಕೋಲಾರ, ಜೂನ್22 : ಕೋಲಾರ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಿ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾರವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಮೊದಲ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರ ಬದಲಾಗಿದೆ. ಸರ್ಕಾರದ ಕಾರ್ಯವೈಖರಿಯೂ ಬದಲಾಗಿದೆ ಆದ್ದರಿಂದ ಹೊಸ ಸರ್ಕಾರದ ಆಶಯಗಳಿಗನುಗುಣವಾಗಿ ಅದರ ವೇಗಕ್ಕೆ ತಕ್ಕಂತೆ ಕೆಲಸ ಮಾಡುವುದು ಕಾರ್ಯಾಂಗದ ಮೇಲಿನ ಜವಾಬ್ದಾರಿಯಾಗಿದೆ ಎಂದರು. ಜಿಲ್ಲಾ ಮಟ್ಟದ […]

Read More

ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್‌ ಪಾಷಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು . ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು . ಈ ವೇಳೆ ಅಪರ ಜಿಲ್ಲಾಧಿಕಾರಿಯವರಿಗೆ ಹೂಗುಚ್ಚು ನೀಡಿ ಶುಭ ಕೋರಿದರು. ಈ ಸಂಧರ್ಭದಲ್ಲಿ ಉಪವಿಭಗಾಧಿಕಾರಿ ವೆಂಕಟಲಕ್ಷ್ಮಿ ಜಿಲ್ಲೆಯ ಎಲ್ಲ ತಹಸೀಲ್ದಾರ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರುಗಳು ಹಾಜರಿದ್ದರು.

Read More

ಪಟ್ಟಣದ ಎಂಜಿ ರಸ್ತೆಯಲ್ಲಿ ಕಾಳಿಕಾ ಕಮಠೇಶ್ವರ ದೇವಸ್ಥಾನದಲ್ಲಿ ಭಾನುವಾರ ಅಮಾವಾಸ್ಯೆ ಪ್ರಯುಕ್ತ 108 ಲೀಟರ್ ಕ್ಷೀರಾಭಿಷೇಕ ಕಾರ್ಯಕ್ರಮವು ತಾಲೂಕು ವಿಶ್ವಕರ್ಮ ಸಮುದಾಯದ ತಾಲೂಕು ಅಧ್ಯಕ್ಷ ಮೋಹನಾಚಾರಿ ನೇತೃತ್ವದಲ್ಲಿ ನಡೆಯಿತು. ಅರ್ಚಕ ಮಂಜುನಾಥಚಾರಿ ನಡೆಸಿಕೊಟ್ಟರು. ಮುಖಂಡರಾದ ರುದ್ರಪ್ಪ ಚಾರಿ, ಕೆ.ರತ್ನಚಾರಿ, ಕಾಳಾಚಾರಿ, ರವಿಚಂದ್ರಚಾರಿ, ರಾಮಚಂದ್ರಚಾರಿ, ಕೆ.ರಾದಮ್ಮ, ಕಾಳಮ್ಮ, ರಮೇಶ್ ಇದ್ದರು.

Read More

ಶ್ರೀನಿವಾಸಪುರ : ಸರ್ಕಾರಿ ಸೌಲಭ್ಯಗಳ ಜೊತೆಗೆ ದಾನಿಗಳು ನೀಡುವ ಶೈಕ್ಷಣಿಕ ಸಾಮಾಗ್ರಿಗಳನ್ನು ಬಳಿಸಿಕೊಂಡು ಶೈಕ್ಷಣಿಕ ಪ್ರಗತಿ ಕಾಣುವಂತೆ ವಿದ್ಯಾರ್ಥಿಗಳಿಗೆ ಬಿಇಒ ವಿ.ಉಮಾದೇವಿ ಕರೆ ನೀಡಿದರು. ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸಮೀಪ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ಮಣಿಪುರಂ ರಿತಿ ಜ್ಯೂಲರೀಸ್ ವತಿಯಿಂದ ೨೫೦ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾದ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರವು ಪ್ರತಿಯೊಬ್ಬ ಮಗುವು ಶಿಕ್ಷಣವನ್ನು ಪಡೆಯಲೇ ಬೇಕೆಂಬ ನಿಟ್ಟಿನಲ್ಲಿ ಅನೇಕ ಯೋಜನೆಗಳ ಮುಖಾಂತರ ಶಿಕ್ಷಣ ಪಡೆಯಲು ಪ್ರೋತ್ಸಾಹ ಮಾಡುತ್ತಿದೆ.  ವಸತಿ ಶಾಲೆಯಲ್ಲಿ ಅನೇಕ ಮೂಲಭೂತ […]

Read More