ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.ಪಟ್ಟಣದ ಕನಕ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 47 ಸಾವಿರ ವಿದ್ಯಾರ್ಥಿಗಳಿಗೆ ರೂ.60 ಕೋಟಿ ಸುಜ್ಞಾನ ನಿಧಿ ಶಿಷ್ಯ ವೇತನ ನೀಡಲಾಗಿದೆ. ತಾಲ್ಲೂಕಿನಲ್ಲಿ ವೃತ್ತಿ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ 187 […]
ಶ್ರೀನಿವಾಸಪುರ : ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. , ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್ಗಳು ಮತ್ತು ಮೃತಪಟ್ಟ ಸದಸ್ಯರ ಕೋಮುಲ್ ವಿಮಾ ಚೆಕ್ಗಳ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಎನ್.ಹನುಮೇಶ್ ರವರು ಮಾತನಾಡಿ , ನಿವೃತ್ತಿ ಹೊಂದಿದ ಎಲ್ಲಾ ಸಿಬ್ಬಂದಿಗಳನ್ನು ಸನ್ಮಾನಿಸಿ , ಸಂಘಗಳಿಗೆ ನೀಡಿದ ನಿರಂತರ ಸೇವೆಯನ್ನು ಸ್ಮರಿಸುತ್ತಾ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್ಗಳು ಮೊತ್ತ 12,25,000 […]
ಕೋಲಾರ: ಮನುಷ್ಯನಾಗಿ ಹುಟ್ಟುವುದೆ ಹೆಮ್ಮೆ ಆದುದರಿಂದ ಸುಸಂಸ್ಕøತರಾಗಿ ಜೀವನದಲ್ಲಿ ಇಡುವ ಹೆಜ್ಜೆ ನೋಡುವ ನೋಟ ಉಡುವ ಬಟ್ಟೆ ಆಡುವ ಮಾತು ಸುಸಂಸ್ಕøತವಾಗಿದ್ದರೆ ಮಾನವನಾಗಿ ಹುಟ್ಟಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಎಸ್ಪಿವೈಎಸ್ಸೆಸ್ಸ್ ಜಿಲ್ಲಾ ಶಿಕ್ಷಣ ಪ್ರಮುಖ ಚೌಡಪ್ಪ ಹೇಳಿದರು.ಪಟ್ಟಣ ತ್ಯಾಗರಾಜ ಬಡಾವಣೆಯ ಯೋಗ ಮಂದಿರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಏರ್ಪಡಿಸಿದ್ದ 91 ನೇ ಯೋಗಾಭ್ಯಾಸ ಮತ್ತು ಪ್ರಾಣಾಯಾಮ ಶಿಬಿರದ ಭಾರತ ಮಾತಾ ಪೂಜಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಸಮಾಜದಿಂದ ಎಲ್ಲವನ್ನು ಪಡೆಯುವ ಮನುಷ್ಯರು ಸಮಾಜಕ್ಕೇನು ಕೊಡದೆ ನಶ್ವರವಾಗುತ್ತಿದ್ದೇವೆ. ಭಾರತ ಎಂದರೆ […]
ಶ್ರೀನಿವಾಸಪುರ: ಗ್ರಾಮೀಣ ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆದು ಬದುಕು ರೂಪಿಸಿಕೊಳ್ಳಬೇಕು ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ಹೃದ್ರೋಗ ತಜ್ಞ ಡಾ. ಬಾಬುರೆಡ್ಡಿ ಹೇಳಿದರು.ತಾಲ್ಲೂಕಿನ ಆರಿಕುಂಟೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಡಾ. ಅಬ್ದುಲ್ ಕಲಾಂ ಅವರಂಥ ಮಹಾನ್ ಚಿಂತಕರ ಆದರ್ಶದ ಬೆಳಕಲ್ಲಿ ಬೆಳೆಯಬೇಕು ಎಂದು ಹೇಳಿದರು.ಗ್ರಾಮದ ಮುಖಂಡರಾಗಿದ್ದ ದಿವಂಗತ ಎ.ನಾರಾಯಣಸ್ವಾಮಿ ಬದ್ಧತೆಯಿಂದ ಕಾರ್ಯನಿರ್ವಹಿಸಿ ಗ್ರಾಮದಲ್ಲಿ ಸರ್ಕಾರಿ […]
ಕೋಲಾರ:- ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂ.12ರ ಸೋಮವಾರದಿಂದ ಆರಂಭಗೊಳ್ಳುತ್ತಿದ್ದು, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಹಾಗೂ ಪರೀಕ್ಷಾ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಹಾಗೂ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ ಸೂಚಿಸಿದರು.ನಗರದ ಬಾಲಕಿಯರ ಪಿಯು ಕಾಲೇಜು ಕೇಂದ್ರದಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳ ಹಾಗೂ ಕೊಠಡಿ ಮೇಲ್ವಿಚಾರರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.ಇದು ಖಾಸಗಿ ಅಭ್ಯರ್ಥಿಗಳ ಕೇಂದ್ರವಾಗಿದೆ ಎಂದ ಅವರು, ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶೇ.75 ಶಾಲಾ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಅವಕಾಶ ಸಿಗದೇ […]
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಶಾಖೆ ಕೇನ್ಸರ್ ಕಾಯಿಲೆ ಯಿಂದ ಬಳಲುತ್ತಿರುವ ಜಗದೀಶ್ ಖಾರ್ವಿ ಇವರಿಗೆ ಹತ್ತು ಸಾವಿರ ರೂಪಾಯಿ ದೇಣಿಗೆ ಯನ್ನು ರೋಗಿಯ ಪುತ್ರ ನಿರಂಜನ್ ಇವರಿಗೆ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ಹಸ್ತಾಂತರಿಸಿದರು. ಈ ದೇಣಿಗೆಯನ್ನು ನಮ್ಮ ಸದಸ್ಯರಾದ ಶ್ರೀಮತಿ ಪ್ರತಿಮಾ ಮತ್ತು ಡಾ. ದಿನಕರ ಶೆಟ್ಟಿ ಇವರು ಕೊಡಮಾಡಿದರು. ಈ ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಗಣೇಶ ಆಚಾರ್ಯ ಉಪಸ್ಥಿತರಿದ್ದರು
ಶ್ರೀನಿವಾಸಪುರ: ಭವಿಷ್ಯದ ದೃಷ್ಟಿಯಿಂದ ಎಲ್ಐಸಿ ಪ್ರತಿನಿಧಿಗಳು ಜೀವ ವಿಮೆ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಪಾಲಸಿದಾರರ ಸಮಸ್ಯೆಗಳಿಗೆ ಸ್ಪಂದಿಸುವುದರ ಮೂಲಕ ಅವರ ವಿಶ್ವಾಸ ಗಳಿಸಬೇಕು ಎಂದು ಭಾರತೀಯ ಜೀವ ವಿಮಾ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕಿ ಎಂ.ಕೃಷ್ಣವೇಣಿ ಹೇಳಿದರು.ಪಟ್ಟಣದ ಎಲ್ಐಸಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಎಲ್ಐಸಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಲ್ಐಸಿ ದೇಶದ ದೊಡ್ಡ ಆರ್ಥಿಕ ಸಂಸ್ಥೆಯಾಗಿದ್ದು, ಸಮಾಜ ಸೇವೆ ಹಾಗೂ ಆರ್ಥಿಕ ಪ್ರಗತಿಯಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು.ಪ್ರತಿನಿಧಿಗಳು ಗ್ರಾಮಗಳಿಗೆ ಭೇಟಿ ನೀಡಿ ಎಲ್ಐಸಿ […]
ಶ್ರೀನಿವಾಸಪುರ: ಅಧಿಕಾರಿಗಳು ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾನಾಡಿದ ಅವರು, ಸರ್ಕಾರಿ ಕಚೇರಿ ಸಿಬ್ಬಂದಿ ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡುವಂತೆ ಮಾಡದೆ, ಅವರ ಕೆಲಸ ಮಾಡಿಕೊಡಬೇಕು ಎಂದು ಹೇಳಿದರು.ಸಾರ್ವಜನಿಕರು ನಿರ್ಭಯವಾಗಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ತನಿಖೆ […]

