ಶ್ರೀನಿವಾಸಪುರ: ಅಲ್ಪಸಂಖ್ಯಾತ ಸಮುದಾಯದಲ್ಲಿ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಜಾಗೃತಿ ಅತ್ಯಂತ ಅಗತ್ಯವಾಗಿದೆ ಎಂದು ಮಾನ್ಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ನಾಮ ನಿರ್ದೇಶನ ಸದಸ್ಯರಾದ ಶಬ್ಬೀರ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣವೇ ವ್ಯಕ್ತಿ ಹಾಗೂ ಸಮಾಜದ ಪ್ರಗತಿಗೆ ಮೂಲಾಧಾರವಾಗಿದೆ. ಆದರೆ ಅಲ್ಪಸಂಖ್ಯಾತ ಸಮುದಾಯದ ಅನೇಕ ವಿದ್ಯಾರ್ಥಿಗಳು ಆರ್ಥಿಕ ಹಿಂದುಳಿಕೆ, ಸರಿಯಾದ ಮಾರ್ಗದರ್ಶನದ ಕೊರತೆ, ಶಿಕ್ಷಣ ಸೌಲಭ್ಯಗಳ ಕುರಿತು ಮಾಹಿತಿ ಅಭಾವ ಮತ್ತು ಸಾಮಾಜಿಕ […]
ಕೋಲಾರ ;ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಹಮ್ಮಿಕೊಂಡಿದ್ದ ೨೦೨೬ರ ಫಲಪುಷ್ಪ ಪ್ರದರ್ಶನದಲ್ಲಿ ಟಮಕದ ತೋಟಗಾರಿಕಾ ಮಹಾವಿದ್ಯಾಲಯದ ಅಕಾಲಿಕ ಹಲಸಿನ ಹಣ್ಣುಗಳು ವೀಕ್ಷಕರ ಗಮನ ಸೆಳೆದವು. ಕೋಲಾರದ ವಿಧಾನಸಭಾ ಸದಸ್ಯರಾದ ಶ್ರೀ ಕೊತ್ತೂರು ಜಿ. ಮಂಜುನಾಥರವರು ಅಕಾಲಿಕ ಹಲಸಿನ ಗಾತ್ರವನ್ನು ನೋಡಿ ಬೆರಗಾಗಿ ಅಕಾಲಿಕ ಹಲಸಿನ ಕಸಿಗಿಡಗಳನ್ನು ರೈತರಿಗೆ ಒದಗಿಸಲು ವಿಜ್ಞಾನಿಗಳು ಶ್ರಮಿಸಿದರೆ ಇದರಿಂದ ರೈತರ ಆದಾಯ ಹೆಚ್ಚುವುದರ ಜೊತೆಗೆ ಅಕಾಲದಲ್ಲಿ ಹಣ್ಣನ್ನು ಸಾರ್ವಜನಿಕರು ಸವಿಯಬಹುದು ಎಂದರು.ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎಮ್. ಆರ್. ರವಿಯವರು ಅಕಾಲಿಕ ಹಲಸಿನ ಹಣ್ಣುಗಳನ್ನು […]
ಶ್ರೀನಿವಾಸಪುರ : ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಮಿತಿಯ ನಿರ್ದೇಶಕರ ಆಯ್ಕೆಗಾಗಿ ಮಂಗಳವಾರ ಚುನಾವಣೆಯಲ್ಲಿ ಒಟ್ಟು ೧೧ ಸ್ಥಾನದಲ್ಲಿ ೬ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ ೫ ನಿರ್ದೇಶಕರಿಗೆ ಫೆ.೧ ರಂದು ಚುನಾವಣೆಯು ನಡೆಯಲಿದೆ ಎಂದು ಚುನಾವಣಾಧಿಕಾರಿ ಮುಸ್ತಾಕಅಹ್ಮದ್ರವರು ಮಾಹಿತಿ ನೀಡಿದರು.ಸಹಾಯಕ ಚುನಾವಣಾಧಿಕಾರಿ ವೀರಭದ್ರಯ್ಯ , ಕಾರ್ಯನಿವಾಹಣಾಧಿಕಾರಿ ನಾಗರಾಜ್ ಇದ್ದರು.
ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ, ಈಚೆಗೆ ಕೋಲಾರದಲ್ಲಿ ನಿಧನರಾದ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ, ಈಚೆಗೆ ಕೋಲಾರದಲ್ಲಿ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಂ.ಜಿ.ಪ್ರಭಾಕರ್ ಅವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ನಾಗರಾಜ್, ಹಿರಿಯ ಪತ್ರಕರ್ತರಾದ ಆರ್.ಚೌಡರೆಡ್ಡಿ, ಕೆ.ಎಂ.ಚೌಡಪ್ಪ, ಕೆ.ವಿ.ನಾಗರಾಜ್, ವೇಣುಗೋಪಾಲ್, ಮುರಳಿ ಮೋಹನ್, […]
ಶ್ರೀನಿವಾಸಪುರ : ಈಗಾಗಲೇ ದೇಶದಲ್ಲಿನ ೨ ಕೋಟಿ ಕುಟುಂಬಗಳು ಎಲ್ಐಸಿಯ ಪಾಲಿಸಿದಾರರಾಗಿದ್ದು, ಎಲ್ಐಸಿ ಸಂಸ್ಥೆಯು ವಿವಿಧ ಯೋಜನೆಗಳ ಮೂಲಕ ತನ್ನದೇ ಆದ ಪಾಲಿಸಿಗಳ ಮೂಲಕ ದೇಶದ ನಾಗರಿಕರಿಗೆ ಜೀವನ ಭದ್ರತೆ ಒದಗಿಸುತ್ತಿದೆ ಎಂದು ಎಲ್ಐಸಿ ಶಾಖಾ ವ್ಯವಸ್ಥಾಪಕಿ ವಿಜಯ ಕುಮಾರಿ ಹೇಳಿದರು. ಪಟ್ಟಣದ ಎಲ್ಐಸಿ ಕಚೇರಿಯಲ್ಲಿ ಸೋಮವಾರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಐಸಿ ಕಂಪನಿಯು ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಭವಿಷ್ಯ ಭದ್ರತೆಗೆ ಅಗತ್ಯವಿರುವ ಎಲ್ಲಾ ರೀತಿಯ ಪಾಲಿಸಿಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ. […]
ವಿಜಯಪುರ: ಹಿರಿಯ ಉರ್ದು ಪತ್ರಕರ್ತ ರಫೀ ಭಂಡಾರಿ ಅವರ ವ್ಯಕ್ತಿತ್ವ ಹಾಗೂ ಪತ್ರಿಕಾ ಕ್ಷೇತ್ರದ ಸಾಧನೆ ಕುರಿತ ಅಭಿನಂದನಾ ಕೃತಿ ಬಿಡುಗಡೆ, ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ದತ್ತಿನಿಧಿ ಉಪನ್ಯಾಸ ಸ್ಥಾಪನೆ ಘೋಷಣೆ ಕಾರ್ಯಕ್ರಮ ಜ.25ರಂದು ಬೆಳಿಗ್ಗೆ 10.30ಕ್ಕೆ ನಗರದ ಮಧುವನ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅಧ್ಯಕ್ಷತೆ ವಹಿಸಲಿದ್ದಾರೆ. […]
ಶ್ರೀನಿವಾಸಪುರ : ನಾನು ಎಲ್ಲರಂತೆ ಹೊಗಳಿಕೆ ಮಾತುಗಳನ್ನು ಆಡುವವನಲ್ಲ. ನುಡಿದಂತೆ ನಡೆಯುವುದೇ ನನ್ನ ಸ್ವಭಾವ. ಗ್ರಾಮವನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ನಿಮ್ಮೊಂದಿಗೆ ಸದಾ ನಿಲ್ಲುತ್ತೇನೆ ಎಂದು ಅಡ್ಡಗಲ್ ಕ್ಷೇತ್ರದ ನಾಯಕ ಕೆ.ಆರ್.ರಮೇಶ್ ಕುಮಾರ್ ಭರವಸೆ ನೀಡಿದರು. ತಾಲೂಕಿನ ಶಿವಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ ಕೆಲವರು ಹೊಗಳುತ್ತಾರೆ, ಇನ್ನೂ ಕೆಲವರು ತೆಗಳುತ್ತಾರೆ. ಆದರೆ ಯಾವ ಮಾತಿಗೂ ನಾನು ಹಿಗ್ಗುವುದಿಲ್ಲ, ಅಂಜುವುದಿಲ್ಲ. ನನಗೆ ಮುಖ್ಯವಾದವರು ಬಡಕುಟುಂಬಗಳು ಎಂದರು. ಹಿಂದೆ ಗ್ರಾಮದಲ್ಲಿ 35 ಸ್ತ್ರೀಶಕ್ತಿ […]
ಶ್ರೀನಿವಾಸಪುರ : ತಾಲೂಕಿನ ಕಸಬಾ ಹೋಬಳಿಯ ಕಲ್ಲೂರು ಗ್ರಾಮದಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಮಾನಿಗಳಾದವರು ಬುಧವಾರ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ರವರ ೭೮ ನೇ ವರ್ಷದ ಹುಟ್ಟುಹಬ್ಬವನ್ನು ೭೮ ಕೆಜಿಯ ಕೇಕ್ ಕತ್ತರಿಸುವ ಮುಖಾಂತರ ಅದ್ದೂರಿಯಾಗಿ ಆಚರಣೆ ಮಾಡಿದರು.ಈ ಕಾರ್ಯಕ್ರಮವನ್ನ ಆಯೋಜನೆ ಮಾಡಿರುವ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ನಾನು ಸದಾ ಚಿರುಋಣಿಯಾಗಿ ಇರುತ್ತೇನೆ ಎಂದರು. ಈ ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ , ತಾ.ಪಂ ಮಾಜಿ ಸದಸ್ಯ ಹಳೆಪೇಟೆ ಮಂಜುನಾಥರೆಡ್ಡಿ, ಮುಖಂಡರಾದ ಪೂಲ್ ಶಿವಾರೆಡ್ಡಿ, ಶಂಕರರೆಡ್ಡಿ, […]
ಕೋಲಾರ : ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕೋಲಾರ ಜಿಲ್ಲೆಯ ಎಸ್ ಎನ್ ಆರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ನೂತನ ಸೌಲಭ್ಯಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕೇವಲ ಒಂದೂವರೆ ವರ್ಷದಲ್ಲಿ ನರಸಾಪುರ ಹೈವೇ ಪಕ್ಕದಲ್ಲಿ 12.5 ಕೋಟಿ ರೂ ವೆಚ್ಚದಲ್ಲಿ ನರಸಾಪುರ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದವನ್ನು ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೊಠಡಿ (OT) […]

