
ಕೋಲಾರ,ಸೆ.9: ಕೆ.ಜಿ.ಎಫ್ನಲ್ಲಿ ಬೆಮೆಲ್ ವಶದಿಂದ 967 ಎಕರೆ ಬಳಕೆಯಾಗದ ಭೂಮಿಯನ್ನು ಉಪಯೋಗಿಸಿಕೊಂಡು ಕೈಗಾರಿಕಾ ವಲಯ ಸ್ಥಾಪಿಸಿ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡಲೇಬೇಕಂಬ ಹಠ ತೊಟ್ಟಿರುವ ಶಾಸಕಿ ರೂಪಕಲಾ ಶಶಿಧರ್ ನಿರಂತರವಾಗಿ ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ.ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ರೂಪಕಲಾ ಕೆ.ಜಿ.ಎಫ್ನ ಕೈಗಾರಿಕಾ ಹಬ್ ಸ್ಥಾಪನೆ ವಿಚಾರವು ಇನ್ನು ಕಾರ್ಯಕತಗೊಳ್ಳದೆ ಇರುವ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು.ಈ ಸಂಬಂಧ ಲಿಖಿತ ಮನವಿಯನ್ನು ಸಹ ಸಲ್ಲಿಸಿದ ಅವರು ಕೆ.ಜಿ.ಎಫ್ನ ಶೋಷಿತ ಸಮುದಾಯಗಳ […]

ಶ್ರೀನಿವಾಸಪುರ: ರೈತ ಸ್ನೇಹಿಯಲ್ಲದ ವ್ಯವಸ್ಥೆ ಕೃಷಿಕ ಸಮುದಾಯದ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.ಪಟ್ಟಣದ ಹೊರವಲಯದ ಪನಸಮಾಕನಹಳ್ಳಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾಂಭದಲ್ಲಿ ಅನುಗ್ರಹ ರೈತ ಉತ್ಪಾದಕರ ಕಂಪನಿ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕಂಪನಿ ವತಿಯಿಂದ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಹಾಗೂ ಕೀಟನಾಶಕ ಸರಬರಾಜು ಮಾಡಬೇಕು. ಉತ್ತಮ ಗುಣಮಟ್ಟದ ಬೆಳೆ ಬೆಳೆಯಲು ಅಗತ್ಯವಾದ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಬಿ.ಬ್ಯಾಟಪ್ಪ ಮಾತನಾಡಿ, ಇಸ್ರೇಲ್ […]

ಬೈಂದೂರಿನ ಹೋಲಿಕ್ರಾಸ್ ಇಗರ್ಜಿಯಲ್ಲಿ ತೆನೆ ಹಬ್ಬವನ್ನು ಆಚರಿಸಲಾಯಿತು.ಧರ್ಮಗುರು ವಂದನಿಯ ವಿನ್ಸೆಂಟ್ ಕುವೆಲ್ಲೋ ಹಾಗೂ ವಂದನಿಯ ಜೋಕೀಂ ಡಿಸೋಜಾ ರವರ ನೇತ್ರತ್ವದಲ್ಲಿ ತೆನೆಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ಬಾಲೆ ಮರಿಯಮ್ಮಳಿಗೆ ಹೂವುಗಳನ್ನು ಅರ್ಪಿಸಿ, ತೆನೆಗಳ ಆಶೀರ್ವಚನ ನಡೆಸಲಾಯಿತು. ನಂತರ ವಿಶೇಷ ಬಲಿಪೂಜೆಯನ್ನು ನೆರೆವೆರಿಸಿ, ಸಮಸ್ತರಿಗೆ ತೆನೆ ಮತ್ತು ಕಬ್ಬುಗಳನ್ನು ವಿತರಿಸಲಾಯಿತು.

ಕೋಲಾರ:- ದೈಹಿಕ ಶಿಕ್ಷಣ ಶಿಕ್ಷಕರ ವೃಂದ & ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಜಾರಿ, ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ತರುವಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ, ಜಿಲ್ಲಾಧ್ಯಕ್ಷ ವಿ.ಮುರಳಿಮೋಹನ್ ಸಂಸದ ಎಸ್.ಮುಜನಿಸ್ವಾಮಿ ಅವರಿಗೆ ಮನವಿ ಮಾಡಿದರು.ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಕ್ರೀಡಾಕೂಟದ ಉದ್ಘಾಟನೆಗೆ ಆಗಮಿಸಿದ್ದ ಸಂಸದರಿಗೆ ಮನವಿ ನೀಡಿದ ಅವರು,ಈ ಕುರಿತು ಹೇಳಿಕೆ ರಾಜ್ಯದ ದೈಹಿಕ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು 2006ರಲ್ಲಿ […]

ಕೋಲಾರ,ಸೆ.7: ಕಾರಣಾಂತರಗಳಿಂದ ಎರಡು ಬಾರಿ ಮುಂದೂಡಲಾಗಿದ್ದ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮಾವೇಶವನ್ನು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 18ರಂದು ಆಯೋಜಿಸಲಾಗಿದ್ದು, ಸಮಾವೇಶದ ಯಶಸ್ವಿಗೆ ಪ್ರತಿಯೊಬ್ಬ ಜೆಡಿಎಸ್ ಕಾರ್ಯಕರ್ತರು ಮುಂದಾಗಬೇಕು ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು.ನಗರದ ಜೆಡಿಎಸ್ ಕಛೇರಿಯಲ್ಲಿ ಬುಧವಾರ ಸಮಾವೇಶದ ಯಶಸ್ಸಿಗೆ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಪಕ್ಷದ ರಾಜ್ಯ ಅಧ್ಯಕ್ಷ […]

ಕೋಲಾರ : – ಸುಮಾರು ೭೫ ವರ್ಷಗಳಿಂದ ಸ್ವಾಧೀನದಲ್ಲಿದ್ದರೂ ಸಾಗುವಳಿ ಚೀಟಿ ಸಿಗದೇ ಪರಿತಪಿಸುತ್ತಿದ್ದ ರೈತನ ಮನೆಗೆ ಖುದ್ದು ತಹಸೀಲ್ದಾರ್ ನಾಗರಾಜ್ ಭೇಟಿ ನೀಡಿ ಸ್ಥಳದಲ್ಲೇ ಅವರಿಗೆ ಭೂ ಮಂಜೂರಾತಿ ಪತ್ರ ವಿತರಿಸುವ ಮೂಲಕ ಹೃದಯವಂತಿಕೆ ಮೆರೆದಿದ್ದಾರೆ . ತಾಲ್ಲೂಕಿನ ಸುಗಟೂರು ಹೋಬಳಿ ತಲಗುಂದ ಪುರಹಳ್ಳಿ ಗ್ರಾಮದ ನಿವಾಸಿ ಕಡು ಬಡ ಕುಟುಂಬದ ವೆಂಕಟರಾಮಪ್ಪ ಅವರು ಗ್ರಾಮದ ಸರ್ವೇ ನಂ .೩೪ ರ ಜಮೀನಿನಲ್ಲಿ ಸುಮಾರು ೭೫ ವರ್ಷಗಳಿಂದ ಸ್ವಾಧೀನದಲ್ಲಿದ್ದು , ಕಳೆದ ೨೦೦೩ ರಲ್ಲೇ ಸಾಗುವಳಿ […]

ಕೋಲಾರ : – ತಾಲೂಕಿನ ದೊಡ್ಡಹಸಾಳ ಗ್ರಾಮದ ಸರ್ಕಾರಿ ಶಾಲೆ ಗೋಡೆ ಕುಸಿತದ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಹಸೀಲ್ದಾರ್ ನಾಗರಾಜ್ ಮಕ್ಕಳೊಂದಿಗೆ ಹೊರ ಆವರಣದಲ್ಲಿ ಕುಳಿತು ಬಿಸಿಯೂಟ ಸವಿದರು . ಇತ್ತೀಚೆಗೆ ಸುರಿದ ಮಳೆಗೆ ಕೋಲಾರ ತಾಲೂಕಿನ ದೊಡ್ಡಹಸಾಳ ಗ್ರಾಮದ ಸರ್ಕಾರಿ ಶಾಲೆ ಗೋಡೆ ಕುಸಿದಿದ್ದು , ಆ ಸಂದರ್ಭದಲ್ಲಿ ಶಾಲೆಯಲ್ಲಿ ಮಕ್ಕಳಿಲ್ಲದ ಕಾರಣ ಯಾವುದೇ ಎದುರಾಗಿರಲಿಲ್ಲ . ಆದರ ಗೋಡೆ ಸಂಪೂರ್ಣ ಕುಸಿದಿರುವ ಕುರಿತು ಗ್ರಾಮಸ್ಥರು ಮಾಹಿತಿ ನೀಡಿದ ತಕ್ಷಣ […]

ಶ್ರೀನಿವಾಸಪುರ: ಶಿಕ್ಷಣ ತಜ್ಞ ಡಾ|| ಸರ್ವೇಪಲ್ಲಿ ರಾಧಕೃಷ್ಣನ್ ರವರು ಅನ್ನಕ್ಕೆ ಕಷ್ಟವಿದ್ದ ಕಾಲಘಟ್ಟದಲ್ಲಿ ವ್ಯಾಸಂಗ ಪಡೆದು ಅಧ್ಯಾಪಕರಾಗಿ ಸೇವೆ ಸಲ್ಲಿಸಿ ರಾಷ್ಟ್ರಪತಿ ಹುದ್ದೆ ಅಲಂಕರಿಸಿದರು. ಅವರ ಬೆಳವಣಿಗೆಯ ಹಿಂದೆ ಗುರುಗಳ ಶ್ರಮ ಇರುತ್ತದೆ ಎಂದು ಅರಿತು ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಮಾಡಿರುವುದು ಸಂತಸ ತಂದಿದೆ ಎಂದು ಡಾ|| ರಾಧಕೃಷ್ಣನ್ ರವರ ಮೊಮ್ಮಗ ಡಾ|| ಸುಬ್ರಮಣ್ಯಂಶರ್ಮ ಹೇಳಿದರು.ತಾಲೂಕಿನ ಯಲ್ದೂರು ನ್ಯಾಷನಲ್ ಹೈಸ್ಕೂಲ್ನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಪೀಪಲ್ ಫಾರ್ ಇಂಡಿಯಾ ಸಂಸ್ಥೆಯವರು ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್ […]

ಕೋಲಾರ:- ಒಳ್ಳೆ ವ್ಯಕ್ತಿತ್ವ, ಗುಣ, ಸ್ವಂತ ಸಾಮಥ್ರ್ಯ ಹಾಗೂ ದುಡಿಮೆಯಿಂದ ಬೆಳವಣಿಗೆ ಕಂಡಿರುವ ಗಣೇಶ್ ಅವರಿಗೆ ದೇವರು ಉತ್ತಮ ಆರೋಗ್ಯ,ಐಶ್ವರ್ಯ,ಉನ್ನತಿ ನೀಡಲಿ ಎಂದು ಗೋಕುಲ ಮಿತ್ರಬಳಗದ ಸದಸ್ಯರು ಹಾರೈಸಿದರು.ನಗರದ ಕಮಲಾಮಹಡಿ ಶಾಲೆಯಲ್ಲಿ ಗೋಕುಲ ಮಿತ್ರ ಬಳಗ ಹಮ್ಮಿಕೊಂಡಿದ್ದ ಕೋಲಾರ ಕಾರ್ಯನಿರತ ಪತ್ರಕರ್ತರ ವಿವಿದ್ಧೋದ್ದೇಶ ಸಹಕಾರ ಸಂಘದ ಜಿಲ್ಲಾಧ್ಯಕ್ಷ ಹಾಗೂ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಅವರ ಹುಟ್ಟುಹಬ್ಬದ ಆಚರಣೆ ಹಿನ್ನಲೆಯಲ್ಲಿ ಕಮಲಾಮಹಡಿ ಶಾಲಾ ಮಕ್ಕಳಿಗೆ ಸೇವಾದಳ ಸಮವಸ್ತ್ರ ವಿತರಿಸಿ ಬಳಗದ ಹಲವಾರು ಮುಖಂಡರು ಶುಭ ಕೋರಿದರು.ಮುಖಂಡರಾದ ಕೆ.ಜಯದೇವ್,ಮುನಿವೆಂಕಟಯಾದವ್,ಶಾಲೆಯ ಮುಖ್ಯಶಿಕ್ಷಕ […]