ಶ್ರೀನಿವಾಸಪುರ : ಪೊಲೀಸ್ ಇಲಾಖೆಯು ಸಾರ್ವಜನಿಕ ಶಾಂತಿ ಕಾಪಾಡುವಲ್ಲಿ ಸದಾ ಮುಂದೆ ಇರುತ್ತದೆ. ಅವರ ನೆಮ್ಮದಿ ಜೀವನವು ಇಲಾಖೆ ಮುಖ್ಯ. ಈ ಹಿನ್ನೆಲೆಯಲ್ಲಿ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ದೇವಿ ಚಾಮುಂಡೇಶ್ವರಿ ಅನಗ್ರಹ ಎಲ್ಲರಿಗೂ ಸಿಗಲಿ ಎಂದು ಪ್ರಾರ್ಥನೆ ಮಾಡಲಾಯಿತು ಎಂದರು. ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಇಲಾಖೆ ಅದೇಶದ ಅನುಸಾರ ಕಾರ್ಯವನ್ನು ನಿರ್ವಹಿಸಲು ಜಿಲ್ಲಾ ರಕ್ಷಾಣಾಧಿಕಾರಿ ಬಿ.ನಿಖಿಲ್ ಸಲಹೆ ನೀಡಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯ್ದ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೇ ಸಮಯದಲ್ಲಿ ಅಧಿಕಾರಿಗಳು […]
ಕೋಲಾರ : ನಗರದ ಅನೇಕ ವಾರ್ಡ್ಗಳಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಹೂಳು ತುಂಬಿ ಪರಿಸರದ ಮೇಲೆ ದುಷ್ಪರಿಣಾಮ ಉಂಟುಮಾಡಿದೆ. ಮಳೆನೀರು ಹೊರಹರಿವು ಅಸಾಧ್ಯವಾಗಿರುವುದರಿಂದ ಹಲವೆಡೆ ಗಂಡಾಂತರದ ಪರಿಸ್ಥಿತಿ ಎದುರಾಗಿದ್ದು, ಸೊಳ್ಳೆಗಳ ವೃದ್ಧಿಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ.ನಗರದ ಸ್ವಚ್ಛತೆಗೆ ಸಂಬಂಧಿಸಿದ ತುರ್ತು ಕ್ರಮಕ್ಕೆ ಒತ್ತಾಯಿಸುತ್ತಾ ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಅಧ್ಯಕ್ಷರಾದ ಪಾ.ಶ್ರಿ. ಅನಂತರಾಮ್ ನಗರಸಭೆಯ ಆಡಳಿತ ವರ್ಗ ಮತ್ತು ಸದಸ್ಯರ ಗಮನಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಅಂತರಗಂಗೆ […]
ಕೋಲಾರ : ಕೋಲಾರ ಜಿಲ್ಲೆಯಲ್ಲಿ ಅನೇಕ ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದು, ಬಳಸದೆ ಇರುವುದರಿಂದ ರಾಜ್ಯದಲ್ಲಿಯೇ ಮಾದರಿಯಾಗುವಂತೆ ಈ ಎಲ್ಲಾ ಭವನಗಳನ್ನು ಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನಾಗಿ ಮಾರ್ಪಡಿಸಿ ಸ್ಥಳೀಯ ಯುವಜನತೆಗೆ ಉಪಯೋಗವಾಗುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ಆರ್.ರವಿ ಅವರು ತಿಳಿಸಿದರು.ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಪರಿಶಿಷ್ಟ […]
ಶ್ರೀನಿವಾಸಪುರ : ಇದೊಂದು ದೇಶಕ್ಕೆ ಅವಮಾನೀಯವಾದ ಘಟನೆ. ಈ ಘಟನೆಯು ಇಡಿ ದೇಶದಲ್ಲಿನ ಪ್ರಜೆಗೂ ನಡೆದಿರುವ ಅವಮಾನ. 17 ರಂದು ಕೋಲಾರ ಬಂದ್ಗೆ ಕರೆಕೊಟ್ಟಿದ್ದು, ಎಲ್ಲ ಸಮಾನಮನಸ್ಕರು ಕೈಜೋಡಿಸಿ ಬಂದ್ ಯಶ್ವಸಿಗೊಳಿಸಬೇಕಾಗಿ ರಾಜ್ಯ ದಲಿತ ಸಂಘಟನೆ ಹಿರಿಯ ಮುಖಂಡ ಎನ್.ಮುನಿಸ್ವಾಮಿ ಮನವಿ ಮಾಡಿದರು.ಪಟ್ಟಣದ ನೌಕರರ ಭವನದಲ್ಲಿ ಮಂಗಳವಾರ ವಿವಿಧ ಸಂಘಟನೆಗಳಿಂದ ಜಿಲ್ಲಾ ಬಂದ್ ವಿಚಾರವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಕೆಪಿಆರ್ಎಸ್ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಸೂರ್ಯನಾರಾಯಣ ಮಾತನಾಡಿ ಸರ್ವೋಚ್ಚ ನ್ಯಾಯಾಧೀಶರ ಮೇಲೆ ಶೂ ಎಸೆದಿರುವುದು ಖಂಡನೀಯ. ಇಂದು […]
ಶ್ರೀನಿವಾಸಪುರ : ಕಳೆದ ಗುರುವಾರ ಮತ್ತು ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಪಟ್ಟಣದ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡು, ಜನಜೀವನ ಅಸ್ತವ್ಯಸ್ತಗೊಂಡಿತು. ಮಳೆ ನೀರು ಮನೆಗಳೊಳಗೆ ನುಗ್ಗಿ ಸಾರ್ವಜನಿಕರು ಹಲವು ಸಂಕಷ್ಟಗಳನ್ನು ಎದುರಿಸಿದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಜಿ.ಎನ್. ಸುದೀಂದ್ರ ಅವರ ನೇತೃತ್ವದ ತಂಡವು ಶನಿವಾರ ಸಂತೆ ಮೈದಾನ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಸ್ಥಳೀಯವಾಗಿ ಅವಲೋಕಿಸಿತು. ಇದೇ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಕೂಡ ಸ್ಥಳಕ್ಕೆ ಬೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಮನೆಗಳಿಗೆ […]
ಕೋಲಾರ:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨2025-28ನೇ ಸಾಲಿನ ಹೊಸ ಪದಾಧಿಕಾರಿಗಳ ಆಯ್ಕೆ ಚುನಾವಣೆ ನ.9 ರಂದು ನಿಗಧಿಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಅ.27 ಕೊನೆ ದಿನವಾಗಿದೆ ಎಂದು ಚುನಾವಣಾಧಿಕಾರಿ ಪಾ.ಶ್ರೀ.ಅನಂತರಾಮ ತಿಳಿಸಿದರು. ಪತ್ರಕರ್ತರ ಭವನದಲ್ಲಿ ಚುನಾವಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕರಡು ಮತದಾರರಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅ.16 ಕೊನೆ ದಿನವಾಗಿದ್ದು, ಅ.,18 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಹಾಗೂ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅ.19 ರಂದು […]
ಶ್ರೀನಿವಾಸಪುರ : ರಾಜ್ಯ ಸರ್ಕಾರವು ತನ್ನ ಜನಪರ ಅನ್ನಭಾಗ್ಯ ಯೋಜನೆಗೆ ಹೊಸ ರೂಪ ನೀಡಿದ್ದು, ಬಡ ಹಾಗೂ ಅಲ್ಪ ಆದಾಯ ವರ್ಗದ ಫಲಾನುಭವಿಗಳಿಗೆ ಮತ್ತೊಂದು ಮಹತ್ವದ ಅನುಕೂಲವನ್ನು ಒದಗಿಸಿದೆ. ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಇಂದಿರಾ ಆಹಾರ ಕಿಟ್ ವಿತರಣೆ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಸದಸ್ಯ (ಡಿಎಲ್ ಸಿ ಕೋಲಾರ ) ಶಬ್ಬೀರ್ ಅಹ್ಮದ್ ಪಾಷಾ ಸರ್ಕಾರದ […]
ಶ್ರೀನಿವಾಸಪುರ : ಕಳೆದ ವಾರದಲ್ಲಿ ಸುರಿದ ಭಾರೀ ಮಳೆಯಿಂದ ಪಟ್ಟಣದ ತಗ್ಗು ಪ್ರದೇಶಗಳಲ್ಲಿ ಅನೇಕ ಅನಾಹುತಗಳು ಸಂಭವಿಸಿದ್ದು, ಇಂತಹ ಅನಾಹುತಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ ಎಂದು ಶ್ರೀನಿವಾಸಪುರ ಪುರಸಭೆ ಅಧ್ಯಕ್ಷ ಬಿ.ಆರ್. ಭಾಸ್ಕರ್ ಹೇಳಿದರು. ಪಟ್ಟಣದ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಿಂದ ಬಾಲಾಂಜನೇಯಸ್ವಾಮಿ ದೇವಾಲಯದವರೆಗಿನ ಪಾದಚಾರಿ ರಸ್ತೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಅವರು ಮುಂದುವರೆದು — “ಪಟ್ಟಣವನ್ನು ಸ್ವಚ್ಛವಾಗಿಯೂ ಸುಂದರವಾಗಿಯೂ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಪುರಸಭೆ ಕೈಗೊಂಡಿರುವ ಅಭಿವೃದ್ಧಿ […]
ಶ್ರೀನಿವಾಸಪುರ : ತಾಲ್ಲೂಕಿನ ರೋಣೂರು ಸರ್ಕಾರಿ ಹೈಸ್ಕೂಲ್ನಲ್ಲಿ 1999-2000ನೇ ಸಾಲಿನ ಎಸ್.ಎಸ್.ಎಲ್.ಸಿ. ಹಳೆಯ ವಿದ್ಯಾರ್ಥಿ ವೃಂದವು 25 ವರ್ಷಗಳ ಬಳಿಕ ಗುರು ವಂದನೆ ಮತ್ತು ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ಹಾಗೂ ವೈಭವದಿಂದ ಆಯೋಜಿಸಿತು. ಶಾಲೆಯ ಪರಂಪರೆ ಮತ್ತು ಶಿಕ್ಷಕರ ಅಮೂಲ್ಯ ಕೊಡುಗೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಆಯೋಜಿಸಿದ ಈ ಸ್ಮರಣೀಯ ಸಮಾರಂಭದಲ್ಲಿ ಹಳೆಯ ವಿದ್ಯಾರ್ಥಿಗಳು ಮತ್ತು ಗುರುಗಳು ಒಂದೇ ವೇದಿಕೆಯಲ್ಲಿ ಸೇರಿದರು. ಈ ಸಂದರ್ಭವು ಎಲ್ಲರ ಮನಸ್ಸಿನಲ್ಲಿ ಹಳೆಯ ದಿನಗಳ ನೆನಪುಗಳನ್ನು ಮೂಡಿಸಿತು. ಕಾರ್ಯಕ್ರಮದಲ್ಲಿ […]

