
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ . ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಪತ್ತೆಯಾಗುತ್ತಿದೆ . ಇದರಲ್ಲಿ ಡೆಂಗ್ಯೂ ಜ್ವರವು ಸಹ ಒಂದಾಗಿದ್ದು , ಇದರ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಕೋಲಾರ ನಗರಸಭೆಯ ಅಧ್ಯಕ್ಷರಾದ ಶ್ವೇತಾ ಶಬರೀಶ್ ಅವರು ತಿಳಿಸಿದರು . ಇಂದು ಎಸ್.ಎನ್.ಆರ್ ಜಿಲ್ಲಾಸ್ಪತ್ರೆಯ ಬಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು , ತಾಲ್ಲೂಕು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆ ಸರ್ಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸೇರ್ಪಡೆ ಕುರಿತಂತೆ ಸೀಟಿಗೆ ಡಿಮ್ಯಾಂಡ್ ಪೋಷಕರು ಮುಖ್ಯ ಶಿಕ್ಷಕರೊಂದಿಗೆ ಮಕ್ಕಳನ್ನು ದಾಖಲು ಮಾಡಿ ಕೊಡಲು ಮನವಿ ಮಾಡುತ್ತಿರುವ ದೃಶ್ಯ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ತಾಲ್ಲೂಕು ಬ್ರಾಹ್ಮಣರ ಸಂಘದ ವತಿಯಿಂದ ಶನಿವಾರ ಲಕ್ಷ್ಮೀನರಸಿಂಹಸ್ವಾಮಿ ಉತ್ಸವ ಏರ್ಪಡಿಸಲಾಗಿತ್ತು. ಮುಖಂಡರಾದ ಕೆ.ದಿವಾಕರ್, ಗೋಪಿನಾಥರಾವ್ ನೇತೃತ್ವ ವಹಿಸಿದ್ದರು

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವುದು ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ತಾಲ್ಲೂಕಿನಲ್ಲಿ ಮಾವಿನ ಫಸಲು ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ಬಳಿಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಕಾ ಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಶೇ.30 ರಷ್ಟು ಮಾವಿನ ಫಸಲು ಬಂದಿತ್ತು. ಮಳೆಯೊಂದಿಗೆ ಸುರಿದ ಬಿರುಗಾಳಿ ಹಾಗೂ ಆಲಿಕಲ್ಲಿನ ಹೊಡೆತಕ್ಕೆ ಸಿಕ್ಕಿ ಫಸಲು ಪೂರ್ಣ ಪ್ರಮಾಣದಲ್ಲಿ ಹಾಳಾಗಿದೆ […]

ವರದಿ:ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಮಳೆಯಿಂದ ನಷ್ಟವಾಗಿರುವ ಬೆಳೆಗೆ ಪರಿಹಾರ ನೀಡಿ 4 ನೇ ಕೊರೋನ ಅಲೆ ಮಾವು ಮಾರುಕಟ್ಟೆಯ ಮೇಲೆ ಪರಿಣಾಮ ಬೀರದಂತೆ ಜಾಗೃತಿ ವಹಿಸಿ ಶ್ರೀನಿವಾಸಪುರ : ಅಕಾಲಿಕ ಮುಂಗಾರು ಮಳೆಯಿಂದ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕೆರೆಗೆ 5 ಲಕ್ಷ ಪರಿಹಾರ ನೀಡಿ 4 ನೇ ಕೊರೋನ ಅಲೆ ಮಾವು ಮಾರುಕಟ್ಟೆಯ ಮೇಲೆ ಪರಿಣಾಮ ಬೀರದಂತೆ ಜಾಗೃತಿ ವಹಿಸ ಬೇಕೆಂದು ರೈತ ಸಂಘದಿಂದ ತಾಲ್ಲೂಕು ದಂಡಾಧಿಕಾರಿಗಳಾದ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾಡಳಿತದ ಯಶಸ್ಸು ಹಾಗೂ ಜಿಲ್ಲೆಯ ಅಭಿವೃದ್ದಿಗೆ ನೌಕರರು ಕಾರ್ಯದಕ್ಷತೆ, ಶ್ರದ್ಧೆಯಿಂದ ತಂಡೋಪಾದಿಯಲ್ಲಿ ಕೆಲಸ ಮಾಡಿದರೆ ಯಶಸ್ಸು ಖಚಿತ, ಹುದ್ದೆ ಯಾವುದೇ ಇರಲಿ ಆ ಕೆಲಸದಲ್ಲಿ ನಿಮ್ಮ ತಲ್ಲೀನತೆ ಮುಖ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ರಾಜಾ ಕರೆ ನೀಡಿದರು.ಜಿಲ್ಲಾಡಳಿತ,ಜಿಪಂ, ಯುವಸಬಲೀಕರಣ,ಕ್ರೀಡಾ ಇಲಾಖೆ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ನೌಕರರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಬಹುಮಾನ ವಿತರಿಸಿ, ಕ್ರೀಡಾಕೂಟಕ್ಕೆ ಸಹಕರಿಸಿದವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.ನಾವು ಒಳ್ಳೆಯ ಕೆಲಸ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶಾಲೆಗಳು ಮೇ.16 ರಂದು ಆರಂಭಗೊಳ್ಳುತ್ತಿರುವುದರಿಂದ ಮೇ.15 ರ ಭಾನುವಾರ ಒಂದು ದಿನ ಎಲ್ಲಾ ಶಿಕ್ಷಕರು,ಸಿಬ್ಬಂದಿ ಶಾಲಾ ಪ್ರಾರಂಭದ ಪೂರ್ವದಲ್ಲಿ ಶಾಲೆಗಳನ್ನು ಸಿದ್ದಗೊಳಿಸಿ ಆಕರ್ಷಣೀಯತಗೊಳಿಸಲು ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಕರೆ ನೀಡಿದ್ದಾರೆ.ನಗರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕ್ಷೇತ್ರ ಸಿಬ್ಬಂದಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾಭಿವೃದ್ದಿ ಸಮಿತಿ, ಪೋಷಕರು,ಶಿಕ್ಷಕರು ಜತೆಗೂಡಿ ಶಾಶಲೆಗಳನ್ನು ಸ್ವಚ್ಚಗೊಳಿಸಿ, ತಳಿರುತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಆಹ್ವಾನಿಸಲು ಸಿದ್ದರಿರುವಂತೆ ಅವರು ಸೂಚಿಸಿ, ಪ್ರತಿ ಶಿಕ್ಷಕರು,ಸಿಬ್ಬಂದಿಯೂ ಶ್ರಮದಾನದಲ್ಲಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಾಲಿಬಾಲ್ ಫೈನಲ್ ಪಂದ್ಯಾವಳಿಯಲ್ಲಿ ಮುಳಬಾಗಿಲು ತಾಲ್ಲೂಕು ನೌಕರರ ತಂಡ ಅತಿಥೇಯ ಕೋಲಾರ ತಂಡವನ್ನು ಮಣಿಸಿ ಗೆಲುವಿನ ನಗೆ ಬೀರಿದ್ದು, ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು ಅಭಿನಂದಿಸಿದರು. ತಂಡದ ನಾಯಕ ಸುಬ್ರಮಣಿ ರೆಡ್ಡಿ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವು ತಮ್ಮದಾಗಿಸಿಕೊಂಡರು. ತಂಡವನ್ನು ತಂಡವನ್ನು ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಉಪಾಧ್ಯಕ್ಷರಾದ ಎಂ.ನಾಗರಾಜ್, ಪುರುಷೋತ್ತಮ್, […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಅಖಿಲಭಾರತ ಕಾಂಗ್ರೆಸ್ ಸಮಿತಿಯಿಂದ ರಾಜಾಸ್ತಾನ್ ರಾಜ್ಯದ ಉದಯಪುರದಲ್ಲಿ ಮೇ13 ರಿಂದ 15 ರವರೆಗೂ ನಡೆಯುತ್ತಿರುವ ಚಿಂತನ-ಮಂಥನಾ ಶಿಬಿರದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಭಾಗವಹಿಸಿದ್ದರು.ಅವರು ಇದಕ್ಕೂ ಮುನ್ನಾ ಶುಕ್ರವಾರ ಬೆಳಗ್ಗೆ ರಾಜಸ್ತಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರಲ್ಲದೇ ದೇಶದ ಇಂದಿನ ರಾಜಕೀಯ ಪರಿಸ್ಥಿತಿ ಕುರಿತು ಮಾತುಕತೆ ನಡೆಸಿದರು.ಮೂರು ದಿನಗಳ ಈ ಚಿಂತನಾ ಮಂಥನಾ ಸಭೆಯಲ್ಲಿ ಪಕ್ಷದ ಬೆಳವಣಿಗೆ, ಮುಂದಿನ ಚುನಾವಣೆಗಳನ್ನು ಎದುರಿಸಲು ಸಿದ್ದತೆ, ಪಕ್ಷದ ನಾಯಕತ್ವ […]