ಬೆಂಗಳೂರು: ಇಂದಿನ ಡಿಜಿಟಲ್ ಯುಗದಿಂದಾಗಿ ಪುಸ್ತಕ ಓದುವ ಹವ್ಯಾಸವು ದೂರವಾಗಿರುವುದು ವಿಷಾದಕರ. ಪತ್ರಕರ್ತರು ನಿರಂತರವಾಗಿ ಓದುವ ಹವ್ಯಾಸದಲ್ಲಿ ತೊಡಗಿಕೊಂಡರೆ ಮಾತ್ರ ಜ್ಞಾನ ಸಂಪಾದಿಸಿಕೊಂಡು, ವೃತ್ತಿ ಬದ್ಧತೆ ತೋರಿಸಲು ಸಾಧ್ಯ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿಪ್ರಾಯಪಟ್ಟರು. ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಕಚೇರಿಯಲ್ಲಿ ಸಂಘದ ಸದಸ್ಯರಿಗಾಗಿ ಸ್ಥಾಪಿಸಿರುವ ಗ್ರಂಥಾಲಯ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಬಹುತೇಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳೇ ರಾರಾಜಿಸುತ್ತವೆ. ಪತ್ರಕರ್ತರು ಸದಾ ವಸ್ತುನಿಷ್ಠ ವರದಿಗಳಿಗೆ ಗಮನ ನೀಡಿದರಷ್ಟೇ […]
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯ ಸಮೀಕ್ಷೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸಮಯವನ್ನು ತಾತ್ಕಾಲಿಕವಾಗಿ ಮರುನಿಗದಿಪಡಿಸುವ ಆದೇಶ ಹೊರಡಿಸಿದೆ.ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುರಲ್ಕರ್ ವಿಕಾಸ್ ಕಿಶೋರ್ (ಭಾ.ಆ.ಸೇ) ಅವರು ಹೊರಡಿಸಿದ ಜ್ಞಾಪನದ ಪ್ರಕಾರ, ಸಮೀಕ್ಷಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವುದರಿಂದ ವಿದ್ಯಾರ್ಥಿಗಳ ಪಾಠ ಕ್ರಮ ಕುಂಠಿತವಾಗದಂತೆ ಹೊಸ ವೇಳಾಪಟ್ಟಿ ಜಾರಿಗೊಳಿಸಲಾಗಿದೆ.ಸಮೀಕ್ಷೆ ಗ್ರೇಟರ್ ಬೆಂಗಳೂರು ಮಹಾನಗರ ಪ್ರದೇಶದಲ್ಲಿ ಅಕ್ಟೋಬರ್ […]
ಶ್ರೀನಿವಾಸಪುರ : ವಾಲ್ಮೀಕಿ ಮಹರ್ಷಿರವರ ಜ್ಞಾನವು ಸಂಪತ್ತು ಆನಂತವಾಗಿದ್ದು, ಅವರು ತಮ್ಮ ತಪಸ್ಸಿ ಫಲದಿಂದ ಭೂತ, ಭವಿಷತ್ ಕಾಲನ್ನು ಅರಿಯುತ್ತಿದ್ದರು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗ ಮಂಗಳವಾರ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಸಭೆಯನ್ನು ಉದ್ಗಾಟಿಸಿದರು.ಸ್ವತಃ ವಾಲ್ಮೀಕಿ ಮಹರ್ಷಿ ಪೂರ್ವಾಶ್ರಮದಲ್ಲಿ ಸ್ವಯಂ ಕಾಡಿನಲ್ಲಿ ಕಷ್ಟಗಳನ್ನ ಅನುಭವಿಸಿದ್ದರು. ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು .ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಅವರು ನೀಡಿರುವ […]
ಶ್ರೀನಿವಾಸಪುರ : ಮಹಾತ್ಮಾಗಾಂಧೀಜಿ ಅಹಿಂಸೆ ಮಾರ್ಗದಲ್ಲಿ ಶಾಂತಿಯಿಂದ ಬಿಳಿಯರನ್ನು ತೊಲಗಿಸಿ ದೇಶಕ್ಕೆ ಸಾಮರಸ್ಯ ಸ್ವಾತಂತ್ರ ತಂದುಕೊಟ್ಟವರ ಆದರ್ಶಗಳು ಸರ್ವ ಕಾಲಕ್ಕೂ ಜನಸಾಮಾನ್ಯರಿಗೆ ಅನನ್ಯವಾಗಿದೆ ಎಂದು ಪಿಡಿಒ ಮಂಗಳಾಂಭ ಹೇಳಿದರು. ತಾಲೂಕು ದಳಸನೂರು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಪಂಚಾಯಿತಿಯಿಂದ ಏರ್ಪಡಿಸಿದ್ದ ಗಾಂಧಿ ಜಯಂತಿ ಅಂಗವಾಗಿ ವಿಶೇಷ ಗ್ರಾಮ ಸಭೆಗೆ ಚಾಲನೆ ನೀಡಿ ಮಾತನಾಡಿ ಗಾಂಧಿಜಿ ಸತ್ಯ ಧರ್ಮ ಶಾಂತಿಯಿಂದ ದೇಶದಿಂದ ಬ್ರಿಟೀಷರನ್ನು ಹೊರ ಹಾಕಿ ಸ್ವಾತಂತ್ರ ತಂದು ಕೊಟ್ಟವರನ್ನು ಎಂದೆಂದಿಗೂ ಮೆರೆಯಬಾರದು ಎಂದರು. ಗಾಂಧೀಜಿ ಬದುಕು ಸರಳವಾಗಿ ರೂಪಿಸಿಕೊಂಡು […]
ಕೋಲಾರ : ಕೋಲಾರ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶೇಕಡ 35 ರಷ್ಟು ಪೂರ್ಣಗೊಂಡಿದ್ದು, ನಿನ್ನೆ ಒಂದೇ ದಿನ 36 ಸಾವಿರ ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ್ ಒಳಗೊಂಡ ಗಣತಿದಾರರ ತಂಡಕ್ಕೆ ಪ್ರತಿ ದಿನ 10 ಸಾವಿರ ಮನೆಗಳ ಸಮೀಕ್ಷೆ ನಡೆಸಲು […]
ಶ್ರೀನಿವಾಸಪುರ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕರ್ನಾಟಕ ರಾಜ್ಯದಾದ್ಯಂತ ಸೇರಿದಂತೆ ಕೋಲಾರ ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿದೆ.ಆದರೆ ಸಮೀಕ್ಷೆಯ ಉದ್ದೇಶವನ್ನು ಸರಿಯಾಗಿ ಅರಿಯದೆ, ಕೆಲವು ಪ್ರದೇಶಗಳಲ್ಲಿ ವದಂತಿಗಳು ಹರಡುತ್ತಿರುವುದು ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಗಣತಿದಾರರು ಮನೆಮನೆಗೆ ತೆರಳಿ ವಿವರ ಸಂಗ್ರಹಿಸುತ್ತಿರುವ ಸಂದರ್ಭದಲ್ಲಿ ಪಡಿತರ ಚೀಟಿ ರದ್ದು ಮಾಡುವ ಉದ್ದೇಶದಿಂದಲೇ ಅಧಿಕಾರಿಗಳು ಬರುತ್ತಿದ್ದಾರೆ ಎಂಬ ತಪ್ಪು ಕಲ್ಪನೆ ಕೆಲವರಲ್ಲಿ ಮೂಡಿದ್ದು, ಜನರು ಸರಿಯಾದ ಮಾಹಿತಿಯನ್ನು ನೀಡಲು ಹಿಂಜರಿಯುತ್ತಿರುವುದು ಅಧಿಕಾರಿಗಳಿಗೆ ಆತಂಕಕಾರಿ ಸಂಗತಿಯಾಗಿ ಪರಿಣಮಿಸಿದೆ. ಈ […]
ಶ್ರೀನಿವಾಸಪುರ : ರಾಜ್ಯದ ಅಭಿವೃದ್ಧಿಯ ಪಥದಲ್ಲಿ ಸರ್ಕಾರ ಇಡಬೇಕಾದ ಹೆಜ್ಜೆಗಳನ್ನು ಈ ಸಮೀಕ್ಷೆ ಗುರ್ತಿಸಲಿದೆ . ಒಟ್ಟಿನಲ್ಲಿ ರಾಜ್ಯದ ಮುಂದಿನ ಪೀಳಿಗೆಗೆ ಅನುಕೂಲಕರವಾದ ಈ ಸಮೀಕ್ಷೆಯನ್ನು ಎಲ್ಲಾ ಜನರು ಸ್ವಾಗತಿಸಿ ಸಮೀಕ್ಷೆಯ ಯಶಸ್ವಿಗೆ ಸಹಕಾರ ನೀಡಬೇಕೆಂದು ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್ ಮನವಿ ಮಾಡಿದರು.ಪುರಸಭೆ ವ್ಯಾಪ್ತಿಯ 18 ನೇ ವಾರ್ಡ್ನ ಬೈರಪಲ್ಲಿ ಗ್ರಾಮದಲ್ಲಿ ಭಾನುವಾರ ಸಮೀಕ್ಷೆ ಪರಿಶೀಲಿಸಿ ಮಾತನಾಡಿದರು.ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ನಿಖರವಾಗಿ ದಾಖಲಿಸುವ ಸಲುವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಕರ್ನಾಟಕ […]
ಶ್ರೀನಿವಾಸಪುರ : ಪಟ್ಟಣದ ಗಫಾರ್ ಖಾನ್ ಮೊಹಲ್ಲಾದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಚುರುಕಾಗಿ ನಡೆಯುತ್ತಿದೆ. ಸಮೀಕ್ಷಾ ಕಾರ್ಯಕ್ಕಾಗಿ ನೇಮಕಗೊಂಡಿರುವ ಸಿಬ್ಬಂದಿ ರೂಹೀ ನಾಸ್ ರವರು ಮನೆಮನೆಗೆ ತೆರಳಿ ನಾಗರಿಕರಿಂದ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ಪ್ರತಿ ಪ್ರಶ್ನೆಗೆ ಸರಿಯಾದ ಉತ್ತರ ಪಡೆದು ನೋಂದಣಿ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಸಮೀಕ್ಷೆಯ ಪ್ರಗತಿ ಕುರಿತು ಮಾಹಿತಿ ನೀಡಿದ ರೂಹೀ ನಾಸ್ ರವರು, ಸಮೀಕ್ಷೆ ನಿಖರವಾಗಿ ಹಾಗೂ ಸುಗಮವಾಗಿ ನಡೆಯುತ್ತಿದೆ. ಇಂದು ಯಾವುದೇ […]
ಕೋಲಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೋಲಾರ ಘಟಕವು ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಶ್ರಮ ಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಸಾಂತ್ವಾನ ಯೋಜನೆ ಹಾಗೂ ವ್ಯಾಪಾರ/ಉದ್ಯಮಗಳಿಗೆ ನೇರಸಾಲ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅರ್ಹರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಆನ್ಲೈನ್ ಮೂಲಕ www.kmdconline.karnataka.gov.in ವೆಬ್ಸೈಟ್ನಲ್ಲಿ ಅಕ್ಟೋಬರ್ 16ರೊಳಗೆ ಸಲ್ಲಿಸಬೇಕಾಗಿದೆ. ಅರ್ಜಿದಾರರು ರಾಜ್ಯದ ಖಾಯಂ […]

