ಶ್ರೀನಿವಾಸಪುರ: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಕೊನೆಗೊಳಿಸಬೇಕು. ದೇಶದ ಸ್ವಾತ್ರ್ಯಕ್ಕಾಗಿ ತನು ಮನ ಧನ ತ್ಯಾಗ ಮಾಡಿದ ವ್ಯಕ್ತಿಗಳ ಚರಿತ್ರೆ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಕರೆ ನೀಡಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಘಟಕದ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕೆ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಹೇಳಿದರು.ಬಿಜೆಪಿ […]

Read More

ಶ್ರೀನಿವಾಸಪುರ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಯ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜ ಹಾರಿಸುವುದರ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ತಹಶೀಲ್ದಾರ್ ಶರಿನ್ ತಾಜ್ ಮನವಿ ಮಾಡಿದರು.ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಭಾರತ ಸೇವಾದಳದ ತಾಲ್ಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಸಮಾರಂಭೆದಲ್ಲಿ ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ಈ ಸಂದರ್ಭದಲ್ಲಿ ದೇಶವಾಸಿಗಳು ಒಟ್ಟಾಗಿ ಸಂಭ್ರಮಾಚರಣೆ ಮಾಡಬೇಕು. ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸುತ್ತಾ ಸಂಭ್ರಮಿಸಬೇಕು ಎಂದು ಹೇಳಿದರು.ಆ.13 ರಿಂದ […]

Read More

ಕೋಲಾರ,ಆ.10: ಬರೆಯುವಾಗ ಯಾವುದೇ ಗೊಂದಲಗಳಿಗೆ ಒಳಗಾಗಬಾರದು. ಸುದ್ದಿಯ ಸ್ಪಷ್ಟತೆ ಇಲದಿದ್ದರೆ ಓದುಗರಿಗೆ ತಪ್ಪು ಮಾಹಿತಿ ನೀಡುವಂತಾಗುತ್ತದೆ. ನಮ್ಮ ಬರವಣೆಗೆಯ ಮೇಲೆ ನಮಗೆ ಹಿಡಿತ, ಪರಿಪಕ್ವತೆ ಇದ್ದಾಗ ಮಾತ್ರ ಓದುಗರಿಗೆ ಉತ್ತಮ ಸುದ್ಧಿಗಳನ್ನು ನೀಡಲು ಸಾಧ್ಯ ಎಂದು ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಹೇಳಿದರು.ನಗರದ ಭವನದಲ್ಲಿ ಗುರುವಾರ ಮನ್ವಂತರ ಪ್ರಕಾಶನ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ ಮಾಧ್ಯಮ ಕ್ಷೇತ್ರಕ್ಕೆ […]

Read More

ಕೋಲಾರ:- ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನಗಳ ಕುರಿತು ಅಧಿಕೃತ ಮಾಹಿತಿ ನೀಡುವ ಸಂಸ್ಥೆ ಭಾರತ ಸೇವಾದಳವಾಗಿದ್ದು, ವಿದ್ಯಾರ್ಥಿಗಳು ಸೇವಾದಳ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರಪ್ರೇಮ ಮೈಗೂಡಿಸಿಕೊಳ್ಳಬೇಕೆಂದು ಭಾರತ ಸೇವಾದಳ ಗೌರವಾಧ್ಯಕ್ಷ ಸಮಾಜ ಸೇವಕ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಸರಕಾರಿ ಜೂನಿಯರ್ ಕಾಲೇಜಿನ ಪದವಿ ಪೂರ್ವ ವಿದ್ಯಾರ್ಥಿನಿಯರಿಗೆ ಭಾರತ ಸೇವಾದಳದಿಂದ ಆಯೋಜಿಸಿದ್ದ ಕ್ವಿಟ್ ಇಂಡಿಯಾ ಚಳವಳಿ ನೆನಪು ಮತ್ತು ರಾಷ್ಟ್ರ ಧ್ವಜ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.ರಾಷ್ಟ್ರ ಧ್ವಜಾರೋಹಣೆಯನ್ನು ಕೇವಲ ರಾಷ್ಟ್ರೀಯ ಹಬ್ಬಗಳಲ್ಲಿ ಮಾತ್ರವೇ ನೆರವೇರಿಸಿ ಸುಮ್ಮನಾಗುವುದು ಸರಿಯಲ್ಲ, […]

Read More

ಕೋಲಾರ:- ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನದಡಿ ಪ್ರತಿ ಸರ್ಕಾರಿ ನೌಕರರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಗೌರವ ಅರ್ಪಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‍ಬಾಬು ಮನವಿ ಮಾಡಿದರು.ಗುರುವಾರ ಜಿಲ್ಲಾ ನೌಕರರ ಭವನದ ಮುಂಭಾಗ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಸಂಘದ ಎಲ್ಲಾ ಪದಾಧಿಕಾರಿಗಳಿಗೂ ಧ್ವಜಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.ನಮ್ಮ ದೇಶ ಗುಲಾಮಗಿರಿಯಿಂದ ಬಿಡುಗಡೆಯಾಗಿ ಸ್ವಾತಂತ್ರ್ಯಗೊಂಡ ಈ ದಿನವನ್ನು ಅತ್ಯಂತ ಸಡಗರಿಂದ ಆಚರಿಸಬೇಕಾಗಿದೆ, 75 […]

Read More

ಬೆಂಗಳೂರು: ವಾರ್ತಾ ಇಲಾಖೆಯಿಂದ ಪತ್ರಕರ್ತರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರನ್ನು ಗಮನ ಸೆಳೆಯಿತು. ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಭೇಟಿಯಾಗಿದ್ದ ನಿಯೋಗ, ಹೆಲ್ತ್ ಕಾರ್ಡ್ ವಿಳಂಬ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದ ಬಳಿಕ ಈ ಯೋಜನೆ ಜಾರಿಗೆ ಉಸ್ತುವಾರಿ ಅಧಿಕಾರಿಯೊಬ್ಬರನ್ನು ನೇಮಕ ಮಾಡಲು ಕ್ರಮ ಕೈಗೊಂಡರು.ಜಂಟಿ ನಿರ್ದೇಶಕ ಪುಟ್ಟಸ್ವಾಮಯ್ಯ ಅವರನ್ನು ಉಸ್ತುವಾರಿ ಅಧಿಕಾರಿಯನ್ನಾಗಿ ನೇಮಕ […]

Read More

ಶ್ರೀನಿವಾಸಪುರ : ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ವತಿಯಿಂದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ದೂರಿದರು . ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆ .೧೦ ರಂದು ಶ್ರೀನಿವಾಸಪುರದ ಮಾವಿನ ಕಾಯಿ ಮಂಡಿಯೊಂದರಲ್ಲಿ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ತಾಲ್ಲೂಕಿನ ಯಲ್ಲೂರು , ಮಣಿಗಾನಹಳ್ಳಿ , ದಳಸನೂರು ಹಾಗೂ ಅಡ್ಡಗಲ್ ಸಹಕಾರ […]

Read More

ಕೋಲಾರ; ಆ.11: ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸರಿಪಡಿಸಿ ಕೋವಿಡ್ ಅನುದಾನದಲ್ಲಿ ನಡೆದಿರುವ ಹಗರಣ ತನಿಖೆ ಮಾಡುವಂತೆ ರೈತಸಂಘದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳು ಕೋಮಾ ಸ್ಥಿತಿಯಲ್ಲಿದ್ದು, ಲಕ್ಷ ಲಕ್ಷ ಸಂಬಳ ಪಡೆದು ಗ್ರಾಮೀಣ ಆರೋಗ್ಯ ಸೇವೆ ಮಾಡಬೇಕಾದ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಜನಸಾಮಾನ್ಯರು ಆರೋಗ್ಯಕ್ಕಾಗಿ ಲಕ್ಷಲಕ್ಷ ಖರ್ಚು ಮಾಡಿ ಖಾಸಗಿ ಆಸ್ಪತ್ರೆ ಇಲ್ಲವೇ ನಕಲಿ ಕ್ಲಿನಿಕ್‍ಗಳನ್ನು ಅವಲಂಭಿಸಿ ಅಮೂಲ್ಯವಾದ ಪ್ರಾಣವನ್ನು […]

Read More

ಕೋಲಾರ,ಆ.10: ಪತ್ರಕರ್ತರನ್ನು ರೂಪಿಸುವಲ್ಲಿ ಕಾಲೇಜಿನ ತರಗತಿಗಳು ಮತ್ತು ಸುದ್ದಿ ಮನೆಗಳ ನಡುವಿನ ಅಂತರವನ್ನು ಕೌಶಲ್ಯ ಅಭಿವೃದ್ಧಿ ತರಬೇತಿಗಳು ತುಂಬುತ್ತವೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅಭಿಪ್ರಾಯಪಟ್ಟರು.ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಬುಧವಾರ ಮನ್ವಂತರ ಪ್ರಕಾಶನ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ ಮಾಧ್ಯಮ ಕ್ಷೇತ್ರಕ್ಕೆ ಸೇರಲು ಆಸಕ್ತಿಯುಳ್ಳ ಯುವಕ ಯುವತಿಯರಿಗೆ ನಾಲ್ಕು ದಿನಗಳ ಉಚಿತ ಕಲಿಕೆ ಮತ್ತು ಕೌಶಲ್ಯ ತರಬೇತಿ […]

Read More