
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಸರ್ಕಾರಿ ಕೆಲಸ ದೇವರ ಕೆಲಸ ಎಂಬ ಭಾವನೆಯೊಂದಿಗೆ ನಾನು ಕಳೆದ 31 ವರ್ಷಗಳ ಕಾಲ ನಿರ್ವಹಿಸಿದ್ದೇನೆ. ನನಗೆ ಕೆಲಸ ಸಮಯದಲ್ಲಿ ಸಹಕರಿಸಿದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಹಾಗು ಸಹುದ್ಯೋಗಿ ಮಿತ್ರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕೃಷ್ಣಮೂರ್ತಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ರಾಯಲ್ಪಾಡಿನ ಪೋಸ್ಟ್ ಆಫೀಸ್ನ ಕೃಷ್ಣಮೂರ್ತಿಯವರು ಎಬಿಪಿಎಂ ಆಗಿ 31ವರ್ಷ ಕಾರ್ಯನಿರ್ವಹಿಸಿರುವ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಲಾಖೆವತಿಯಿಂದ ಹಾಗು ಗ್ರಾಮದ ಮುಖಂಡರು ಸನ್ಮಾನಿಸಿದರು.ಅಧೀಕ್ಷಕರಾದ ಅವದೇಶ್ಸಿಂಗ್,ಮೆಲ್ವರಿಸಿಗಳಾದ ರಘುನಾಥ್,ಕೃಷ್ಣಪ್ಪ ಹಾಗು ಪೋಸ್ಟ್ಮಾಸ್ಟರ್ ಎಂ.ಕರುಣಾಕರ ಹಾಗು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಕೊರೋನಾ ಮಾಹಮಾರಿ ವೈರಸ್ ಹರಡದಂತೆ ನಿತ್ಯ ಜನಸಾಮಾನ್ಯರಿಗೆ ಅರಿವು ಮೂಡಿಸಿ , ಜನರ ಆರೋಗ್ಯ ರಕ್ಷಣೆಗೆ ಪಣ ತೊಟ್ಟಿರುವ ಕೊರೋನಾ ವಾರಿಯರ್ಸ್ಗಳು ನಿಸ್ವಾರ್ಥ ಸೇವೆಯನ್ನು ಮಾಡುತ್ತಿದ್ದಾರೆಂದು ಎಂದು ಮುಖಂಡ ವೈ.ಆರ್. ರಾಮಾಜನೇಯ ತಿಳಿಸಿದರು.ಅಡ್ಡಗಲ್ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಆಶಾ ಕಾರ್ಯಕರ್ತೆಯರಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ನೀಡಲಾದ ದಿನಸಿಕಿಟ್ ಹಾಗು ಸೀರೆಗಳನ್ನು ವಿತರಿಸಿ ಮಾತನಾಡಿದರು.ಡಿಸಿಸಿ ಬ್ಯಾಂಕ್ವತಿಯಿಂದ ನೀಡಲಾದ ದಿನಸಿಕಿಟ್ ಹಾಗು ಸೀರೆಗಳನ್ನು ಶಾಸಕ ಕೆ.ಆರ್.ರಮೇಶ್ಕುಮಾರ್ರವರ ಮಾರ್ಗದರ್ಶನದಲ್ಲಿ ಹೋಬಳಿಯ ಎಲ್ಲಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಕಠಾರಿಪಾಳ್ಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕೊವಿಡ್-19 ಲಸಿಕಾ ಅಭಿಯಾನಕ್ಕೆ ಕೋಲಾರ ನಗರಸಭೆ ಅಧ್ಯಕ್ಷೆ ಶ್ವೇತ ಶಬರೀಶ್ ರವರು ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ವಿಶ್ವೇಶ್ವರಯ್ಯ ಇಂಟರ್ ನಾಷನಲ್ ಶಾಲೆಯ ಕಾರ್ಯದರ್ಶಿ ಶಬರೀಶ್ ಯಾದವ್, ಮುಖಂಡರಾದ ಟಿಲ್ಲಿ ಮಂಜುನಾಥ್, ಮು.ರಾಘವೇಂದ್ರ, ಮಹೇಂದ್ರ ಗಾಣಿಗ, ಹರೀಶ್, ಅಂಚೆ ವಿಜಿ, ಆರೋಗ್ಯ ಇಲಾಖೆಯ ಶುಶ್ರೂಷಕಿ ಮಂಜುಳ, ಪುಷ್ಪ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಜೂ.25 : ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಯ ಅನಿವಾರ್ಯತೆ ಇದ್ದು, ಬಡ ಕುಟುಂಬದ ಪ್ರತಿಯೊಬ್ಬ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಜಿಲ್ಲೆಯಲ್ಲಿನ 44 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲಾಗಿದ್ದು, ಈ ಮೂಲಕ ಒಂದನೇ ತರಗತಿಗೆ ದಾಖಲಾತಿ ಆರಂಭವಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್. ಅಶೋಕ್ ತಿಳಿಸಿದರು.ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಏರ್ಪಡಿಸಿದ್ದ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಆರಂಭ ಕಾರ್ಯಕ್ರಮಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿನ ಆತಂಕದಲ್ಲೂ ನ್ಯಾಯ ವಿಲೇವಾರಿ ವಿಳಂಬವಾಗದಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಕಾರಗೃಹದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರಾಗೃಹ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಖೈದಿಗಳಿಗಾಗಿ ಹಮ್ಮಿಕೊಂಡಿದ್ದ ಕೋವಿಡ್ ಮಾರ್ಗಸೂಚಿಗಳಡಿ ಪಾಲಿಸಬೇಕಾದ ನಿಯಮಗಳ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲರೂ ಕೋವಿಡ್ ವಿರುದ್ಧ ಸಲಿಕೆ ಹಾಕಿಸಿಕೊಳ್ಳಬೇಕು. ವಿಶೇಷವಾಗಿ ಶಿಕ್ಷಕ ಸಮುದಾಯ ಕೋವಿಡ್ ಸೋಂಕು ಹರಡದಂತೆ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಹೊರವಲಯದ ವಿಐಪಿ ಶಾಲೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ತಾಲ್ಲೂಕಿನ ಅನುದಾನ ರಹಿತ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಸಕಾಲಿಕ ಕ್ರಮಗಳಿಂದಾಗಿ ಕೊರೊನಾ ನಿಯಂತ್ರಣದಲ್ಲಿದೆ. ಕೊರೊನಾ ಕಾಲದಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:- ಕೊರೋನಾ ರೋಗಿಗಳನ್ನು ಆರೈಕೆ ಮಾಡುವಲ್ಲಿ ದಾದಿಯರ ಪಾತ್ರ ಬಹಳ ದೊಡ್ಡದು ಅವರ ಕಾರ್ಯವನ್ನು ಸಮಾಜ ಗುರುತಿಸಬೇಕಾದ ಅವಶ್ಯಕತೆ ಇದೆ, ಕೋವಿಡ್ ರೋಗಿಗಳು ಬಳಸುವಂತ ವಸ್ತುಗಳನ್ನು ಹೊರ ಹಾಕಿ ಕೋಠಡಿಗಳನ್ನು ಸ್ವಚ್ಚಮಾಡುವಂತ ದಾದಿಯರು ಮಾತೃ ಸ್ವರೂಪಿಗಳು ನಿಷ್ಕಳಂಕರಾಗಿ ರೋಗಿಗಳ ಆರೈಕೆಯಲ್ಲಿ ತೊಡಗುವ ಅವರ ಸೇವೆ ಅನನ್ಯ ಎಂದು ಎಸ್.ಎಸ್.ವಿ.ಎಸ್ ಟ್ರಸ್ಟ್ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಹೇಳಿದರು ಅವರು ಮ್ಯಾಂಗೋಸ್ ಹೇವೆನ್ ವ್ಯಾಟ್ಸಾಪ್ ಗ್ರೂಪ್ ಸದಸ್ಯರು ಎಸ್.ಎಸ್.ವಿ.ಎಸ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಮಲೇರಿಯಾ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ನಮ್ಮ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡರೆ ನಮ್ಮ ಆರೋಗ್ಯ ತಂತಾನೆ ವೃದ್ದಿಸುತ್ತದೆ ಎಂದು ಡಾ|| ಶಂಕರ್ ಪ್ರಸಾದ್ ತಿಳಿಸಿದರು.ರಾಯಲ್ಪಾಡಿನ ಗ್ರಾಮಪಂಚಾಯಿತಿ ಕಚೇರಿಯಲ್ಲಿ ಬುಧವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾ.ಪಂ. ಸಂಯುಕ್ತಾಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಪಿಡಿಒ ಕೆ.ವಿ.ನರೇಂದ್ರಬಾಬು ಮಾತನಾಡಿ ಮಾನವನ ದಿನ ನಿತ್ಯ ಬಳಕೆಯ ಆಹಾರ ಪದ್ದತಿ ಹಾಗೂ ಆರೋಗ್ಯ ಕಾಳಜಿ ನಿರ್ಲಕ್ಷ್ಯತೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಅಭಿವೃಧ್ಧಿ ಹೊಂದಬೇಕು. ಗುಣ ಮಟ್ಟದ ಫಲಿತಾಂಶ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಮಗ್ರ ಕಲಿಕಾ ಯೋಜನೆಯಡಿ, ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾಥಿಗಳು, ಖಾಸಗಿ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ. ಸರ್ಕಾರಿ […]