ಕೋಲಾರ:- ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜನ ಜೆಡಿಎಸ್‍ಗೆ ಅಧಿಕಾರ ನೀಡಿದರೆ ಕೋವಿಡ್ ಸಂಕಷ್ಟದಲ್ಲಿ ಜನರ ಜೀವ ರಕ್ಷಣೆಗೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.ನಗರ ಹೊರವಲಯದ ನಾರಾಯಣಿ ಕಲ್ಯಾಣಮಂಟಪದಲ್ಲಿ ಶುಕ್ರವಾರ ಆಶಾಕಾರ್ಯಕರ್ತೆಯರು, 108 ಆಂಬ್ಯುಲೆನ್ಸ್ ಸಿಬ್ಬಂದಿ ಹಾಗೂ ವಿಕಲಚೇತನರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡುತ್ತಿದ್ದರು.ಆಶಾ ಕಾರ್ಯಕರ್ತೆಯರು ಬೇಡಿಕೆಗಳನ್ನು ಈಡೇರಿಸುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದಿರಿ, ನಿಮ್ಮ ಬೇಡಿಕೆ ಈಡೇರಿಕೆಗೆ ನಾನು 2018 ಚಿಂತನೆ ಮಾಡಿದ್ದೆ ಆದರೆ ಆಗ ನನ್ನ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಗುಂಡಮತ್ತ ಗ್ರಾಮದ ಮನೆಯೊಂದರ ಮೇಲೆ ಬುಧವಾರ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡು, ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ದೂರನ್ನು ಅನುಸರಿಸಿ, ದಾಳಿ ನಡೆಸಿದ ಅಧಿಕಾರಿಗಳು ಮದ್ಯ ಮಾರಾಟದಲ್ಲಿ ತೊಡಗಿದ್ದ ನಾರಾಯಣಸ್ವಾಮಿ ಎಂಬುವವರನ್ನು ಬಂಧಿಸಿ, ಮನೆಯಲ್ಲಿ ದಾಸ್ತಾನು ಮಾಡಿದ್ದ 42 ಲೀಟರ್ ಮದ್ಯ ಹಾಗೂ 34 ಲೀಟರ್ ಬಿಯರ್ ವಶಪಡಿಸಿಕೊಂಡಿದ್ದಾರೆ. ನಾರಾಯಣಸ್ವಾಮಿ ವಿರುದ್ಧ […]

Read More

ಕೋಲಾರ ; ಬೂದಿಕೋಟೆ ಮಾರ್ಕಂಡೇಯ ಡ್ಯಾಮ್‍ನಲ್ಲಿ ಮೀನುಗಾರಿಕೆ ಮತ್ತು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ಕಾರ್ಯಗತಗೊಳಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ತಿಳಿಸಿದರು. ಇಂದು ಬೂದಿಕೋಟೆಯ ಮಾರ್ಕಂಡೇಯ ಡ್ಯಾಮ್ ಮತ್ತು ಮಾಕರ್ಂಡೇಯ ಮೀನು ಮರಿ ಉತ್ಪಾದನಾ ಕೇಂದ್ರಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿ ಶ್ರೀಘ್ರದಲ್ಲೇ ವರುಣನ ಕೃಪೆಯಿಂದ ಹಾಗೂ ಕೆಸಿ ವ್ಯಾಲಿ ನೀರಿನಿಂದ ಮಾಕರ್ಂಡೇಯ ಡ್ಯಾಮನ್ನು ತುಂಬಿಸಲಾಗುವುದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.15: ವಿಸ್ಟ್ರಾನ್ ಮ್ಯಾನ್ಯೂಫ್ಯಾಕ್ಚರಿಂಗ್ ಇಂಡಿಯಾ ಸಂಸ್ಥೆಯ ವೀಕೇರ್ ಸಿಎಸ್‍ಆರ್ ಕಾರ್ಯಕ್ರಮದ ಅಂಗವಾಗಿ ಇಂದು ಸಂಸ್ಥೆಯ ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ 400 ಮಂದಿ ಅತ್ಯಂತ ಬಡ ಮತ್ತು ಮಧ್ಯಮ ವರ್ಗದ ಕುಟುಂಬಕ್ಕೆ ಆಹಾರ ಪಡಿತರ ಕಿಟ್‍ಗಳನ್ನು ವಿತರಿಸಿತು.ಕೋಲಾರದ ಶಾಸಕ ಕೆ. ಶ್ರೀನಿವಾಸಗೌಡ, ವಿಸ್ಟ್ರಾನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಎಂ ರವರು ಕಿಟ್‍ಗಳನ್ನು ಫಲಾನುಭವಿಗಳಿಗೆ ವಿತರಿಸಿದರು.ಮಾಲೂರು, ನರಸಾಪುರ ಮತ್ತು ಬೆಳ್ಳೂರು ತಾಲ್ಲೂಕುಗಳಿಂದ ಆಗಮಿಸಿದ್ದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಸದಸ್ಯರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜೂ.15: ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ತಿರುಮಲಹಟ್ಟಿ ಗ್ರಾಮದ ದಲಿತ ಯುವಕನಿಗೆ 75 ಸಾವಿರ ದುಡ್ಡು ಕೊಟ್ಟು, ಸುಮಾರು 5 ವರ್ಷದಿಂದ ದಿನ್ನೇರಿ ಹಾರೋಹಳ್ಳಿ ಗ್ರಾಮದ ವಕ್ಕಲಿಗ ಸಮುದಾಯಕ್ಕೆ ಸೇರಿದ ನವೀನ್ ಎಂಬುವ ವ್ಯಕ್ತಿ ಅವರು ಇಟ್ಟಿಗೆ ಕಾರ್ಖಾನೆಯಲ್ಲಿ, ಜಮೀನಿನಲ್ಲಿ ಕೆಲಸ ಮಾಡಿಸಿಕೊಂಡು, ದಬ್ಬಾಳಿಕೆ ನಡೆಸಿ, ಮನಬಂದಂತೆ ಹೊಡೆದು, ಮಾನಸಿಕ ಹಿಂಸೆ ನೀಡಿ, ಜೀತದ ಮೂಲಕ ಮನಬಂದಂತೆ ನಡೆಸಿಕೊಳ್ಳುತ್ತಿದ್ದರು.ಈ ವಿಚಾರ ಅಂಬೇಡ್ಕರ್ ಸೇವಾ ಸಮಿತಿಗೆ ತಿಳಿದ ತಕ್ಷಣ ಆ ಯುವಕನನ್ನು ಜೀತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರ ಹಿತದೃಷ್ಟಿಯಿಂದ ರೂ. 1 ಕೋಟಿ ವೆಚ್ಚದಲ್ಲಿ ಕೋವಿಡ್ ಟೆಸ್ಟ್ ಲ್ಯಾಬ್ ಸ್ಥಾಪಿಸಲಾಗಿದೆ. ಇದರಿಂದ ಕೊರೊನಾ ಸೋಂಕು ಪರೀಕ್ಷೆ ಫಲಿತಾಂಶ ಶೀಘ್ರವಾಗಿ ಸಿಗಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೋವಿಡ್ ಟೆಸ್ಟ್ ಲ್ಯಾಬನ್ನು ಸೋಮವಾರ ಉದ್ಘಾಟಿಸಿ ಮಾತನಾಡಿ, ಈ ಲ್ಯಾಬ್ ಸ್ಥಾಪನೆಗೆ ಐಸಿಎಂಸಿ ಅನುಮತಿ ದೊರೆತಿದೆ. ಇಲ್ಲಿ ದಿನವೊಂದಕ್ಕೆ 2 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಿ 24 ಗಂಟೆಯೊಳಗೆ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಜೂನ್ 14 : ಸರ್ಕಾರದ ನಿಯಮಗಳನ್ನು ಪಾಲಿಸೋಣ, ಕೊರೋನಾ ನಿಯಂತ್ರಣಕ್ಕೆ ಸಹಕರಿಸೋಣ. ಸೋಂಕಿನ ಪ್ರಕರಣಕ್ಕೆ ನಾವು ಹೊಣೆಗಾರರಾಗುವುದು ಬೇಡ, ಮುಂಜಾಗ್ರತೆ ಕ್ರಮಗಳನ್ನು ಪಾಲಿಸೋಣ. ಕೊರೋನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದರು.ಸೋಮವಾರ ತಮ್ಮ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನೀಡಿದ ಆಮ್ಲಜನಕ ಸಾಂದ್ರಕ, ಪಲ್ಸ್ ಆಕ್ಸಿಮೀಟರ್ ಸೇರಿದಂತೆ ಕೊವಿಡ್ ಪೂರಕ ಪರಿಕರಗಳನ್ನು ಪರಿಶೀಲಿಸಿ ಅವರು ಮಾತನಾಡುತ್ತಿದ್ದರು.ಕೊರೋನಾ ಎರಡನೇ ಅಲೆ ತಡೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :- ಪೂರ್ವ ಮುಂಗಾರು ಪ್ರಾರಂಭವಾಗಿರುವುದರಿಂದ , ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಅಭಾವವಿಲ್ಲ . ಈ ವರ್ಷ ವಾಡಿಕೆ ಮಳೆಗಿಂತ ಶೇ . 35 ರಷ್ಟು ಹೆಚ್ಚಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರು ತಿಳಿಸಿದರು . ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪ್ರತಿ ದಿನ ಪತ್ರಿಕೆಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿರುವ ಪತ್ರಿಕಾ ವಿತರಕರ ಸೇವೆ ಶ್ಲಾಘನೀಯ . ಕೋವಿಡ್ ವಾರಿಯರ್ ಗುಂಪಿಗೆ ಸೇರಿದ ಇವರು ಜೀವದ ಮೇಲಿನ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ರಾಜ್ಯ ಮಾವು ಅಭಿವೃದ್ಧಿ ಮಂಡಳಿಯ ` ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಹೇಳಿದರು . ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪತ್ರಿಕಾ ವಿತರಕರಿಗೆ ಶನಿವಾರ ಆಹಾರ ಪದಾರ್ಥದ ಕಿಟ್ ವಿತರಿಸಿ ಮಾತನಾಡಿ , ದರ್ಮಸ್ಥಳದ ಧರ್ಮಾಧಿಕಾರಿ ಡಾ […]

Read More