ಕೋಲಾರ : ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಗುರಿ ಸಾಧನೆಯ ಹಿತದೃಷ್ಟಿಯಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಕೋಲಾರ ಜಿಲ್ಲಾ ಘಟಕದ ಸಾಮಾನ್ಯ ಸಭೆ ಭಾನುವಾರ ನಗರದ ಅಲ್ಲಮೀನ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಹಾಗೂ ನಿಗಮ/ನಿಯಮಿತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮುಸ್ಲಿಂ ಸಮುದಾಯದ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸಿದ್ದರು. ಸಮುದಾಯದ ಶಿಕ್ಷಣ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸಬಲಿಕರಣಕ್ಕಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಿ, ಈ […]
ರಾಯಚೂರು : ರಾಯಚೂರಿನ ಸಹಾರ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಣ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ, ರಾಯಚೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ಶಿಕ್ಷಣ ಸ್ಥಾಪಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದು ಅಭಿಪ್ರಾಯಪಟ್ಟರು. ಅವರು ಮುಂದುವರೆದು, ಮುಸ್ಲಿಮರು ತಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು. ದೇಶದ ಮೊದಲ […]
ಶ್ರೀನಿವಾಸಪುರ: ತಾಲೂಕಿನ ಕಶೆಟ್ಟಿಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕಿ ವರಲಕ್ಷ್ಮಿಮ್ಮ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಪೋಷಕರು ಶುಕ್ರವಾರ ಎರಡನೇ ದಿನವೂ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬೆಳಿಗ್ಗೆಯಿಂದಲೇ ಶಾಲೆಗೆ ಬೀಗ ಜಡಿದು ಶಿಕ್ಷಕಿ ವರಲಕ್ಷ್ಮಿಯನ್ನು ಹಿಂತಿರುಗಿಸಲು ಆಗ್ರಹಿಸಿದರು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಶ್ರಮಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದ ಶಿಕ್ಷಕಿ ವರಲಕ್ಷ್ಮಿಯವರನ್ನು ಇದೇ ಶಾಲೆಯಲ್ಲಿ ಮುಂದುವರೆಸಬೇಕು ಎಂಬ ಒಕ್ಕೊರಲಿನ ಬೇಡಿಕೆಯನ್ನು ಪೋಷಕರು ಮುಂದಿರಿಸಿದರು. ಸ್ಥಳಕ್ಕೆ ಆಗಮಿಸಿದ ಬಿಇಒ ಬಿ.ಸಿ. ಮುನಿಲಕ್ಷ್ಮಯ್ಯ ಪೋಷಕರ ಬೇಡಿಕೆಯನ್ನು ಆಲಿಸಿ, […]
ಬೆಂಗಳೂರು : ರಾಜ್ಯದಲ್ಲಿ ಉರ್ದು ಭಾಷೆಯ ಪ್ರಚಾರ ಹಾಗೂ ಉರ್ದು ಮಾಧ್ಯಮ ಶಾಲೆಗಳ ಉಳಿವಿನ ಹೋರಾಟಕ್ಕೆ ಬಲ ತುಂಬುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರದ ಉರ್ದು ಹೈ ಸ್ಕೂಲ್ ಟೀಚರ್ಸ್ ಫೋರಂ ರಾಜ್ಯಮಟ್ಟದಲ್ಲಿ ಅಧಿಕೃತವಾಗಿ ಸ್ಥಾಪನೆಯಾಗಿದೆ. ಈ ವೇದಿಕೆ ಕರ್ನಾಟಕ ಸ್ಟೇಟ್ ಗವರ್ಣ್ಮೆಂಟ್ ಮುಸ್ಲಿಂ ಎಂಪ್ಲಾಯೀಸ್ ವೆಲ್ಫೇರ್ ಅಸೋಸಿಯೇಷನ್ (MEWA) ಆಶ್ರಯದಲ್ಲಿ ಬೆಳಕಿಗೆ ಬಂದಿದ್ದು, ಗುರುವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮೆವಾ ಅಧ್ಯಕ್ಷ ಸಲೀಂ ಚಿಶ್ಮನಿ ಹಾಗೂ ಪ್ರಧಾನ ಕಾರ್ಯದರ್ಶಿ ಆಡಂ ಅಲಿ ಪೀರ್ಜಾದೆ ಅವರು ನೂತನ […]
ಕೆ.ಜಿ.ಎಫ್ : ಪತ್ರಕರ್ತರು ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಸಂಘಟಿತರಾದಾಗ ಮಾತ್ರ ಸಂಘದ ಅಭಿವೃದ್ಧಿ ಸಾಧ್ಯ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಅಭಿಪ್ರಾಯಪಟ್ಟರು.ಕೆ.ಜಿ.ಎಫ್ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ 25×110 ಅಡಿಗಳ ಸಭಾಭವನ ನಿರ್ಮಾಣ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆ.ಜಿ.ಎಫ್ ಕಾರ್ಯನಿರತ ಪತ್ರಕರ್ತರ ಸಂಘವು ಈಗಾಗಲೇ ಉತ್ತಮ ಕಚೇರಿಯನ್ನು ಕಟ್ಟಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ ಶಾಸಕಿ ರೂಪಕಲಾ ಶಶಿಧರ್ ಬಿಡುಗಡೆಗೊಳಿಸಿರುವ 15 ಲಕ್ಷ ರೂ. ಅನುದಾನದಲ್ಲಿ ಸಾಧ್ಯವಾದಷ್ಟು […]
ಶ್ರೀನಿವಾಸಪುರ, ಸೆಪ್ಟೆಂಬರ್ 10 : ಪಟ್ಟಣದ ಪುರಸಭೆ ಸಂಕೀರ್ಣದಲ್ಲಿರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ನಿರಂತರ ತಾಂತ್ರಿಕ ತೊಂದರೆ ಉಂಟಾಗುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿ ವೇತನ (ಸ್ಕಾಲರ್ಶಿಪ್) ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವ ವೇಳೆ ಅಡಚಣೆಗಳು ಎದುರಾಗುತ್ತಿದ್ದು, ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯವೇ ಅಸ್ಪಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಹಿತಿ ಕೇಂದ್ರದಲ್ಲಿ ಇಂಟರ್ನೆಟ್ ಸೇವೆ ಸರಿಯಾಗಿ ಕಾರ್ಯನಿರ್ವಹಿಸದಿರುವುದು ಹಾಗೂ ಸುಮಾರು ಎಂಟು ವರ್ಷ ಹಳೆಯದಾದ ವಿಂಡೋಸ್–7 ಆಧಾರಿತ ಹಳೆಯ […]
ಬೆಂಗಳೂರು : ಕರ್ನಾಟಕ ಸರ್ಕಾರವು ಮಂಗಳವಾರ (ಸೆಪ್ಟೆಂಬರ್ 9) ಆಡಳಿತಾತ್ಮಕ ಬದಲಾವಣೆಗಳನ್ನು ಜಾರಿಗೊಳಿಸಿದ್ದು, ಹಿರಿಯ ಐಎಎಸ್ ಅಧಿಕಾರಿ ಶ್ರೀ ಮೊಹಮ್ಮದ್ ಮೊಹ್ಸಿನ್ (ಕೆಎನ್:1996) ಅವರಿಗೆ ಹೊಸ ಹೆಚ್ಚುವರಿ ಜವಾಬ್ದಾರಿ ನೀಡಿದೆ.ಪ್ರಸ್ತುತ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಅವರಿಗೆ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಕೂಡ ಸರ್ಕಾರ ಹಂಚಿಕೆ ಮಾಡಿದೆ.ಈ ಬದಲಾವಣೆ ತಕ್ಷಣದಿಂದಲೇ ಜಾರಿಗೆ ಬರುವುದಾಗಿ ಮತ್ತು ಮುಂದಿನ ಆದೇಶ ಹೊರಬರುವವರೆಗೆ […]
ಬೆಂಗಳೂರು : ಕರ್ನಾಟಕ ಸರ್ಕಾರವು ಮಂಗಳವಾರ (ಸೆಪ್ಟೆಂಬರ್ 9) ಆಡಳಿತಾತ್ಮಕ ಬದಲಾವಣೆಗಳನ್ನು ಜಾರಿಗೊಳಿಸಿದ್ದು, ಹಿರಿಯ ಐಎಎಸ್ ಅಧಿಕಾರಿ ಶ್ರೀ ಮೊಹಮ್ಮದ್ ಮೊಹ್ಸಿನ್ (ಕೆಎನ್:1996) ಅವರಿಗೆ ಹೊಸ ಹೆಚ್ಚುವರಿ ಜವಾಬ್ದಾರಿ ನೀಡಿದೆ.ಪ್ರಸ್ತುತ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಅವರಿಗೆ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಕೂಡ ಸರ್ಕಾರ ಹಂಚಿಕೆ ಮಾಡಿದೆ.ಈ ಬದಲಾವಣೆ ತಕ್ಷಣದಿಂದಲೇ ಜಾರಿಗೆ ಬರುವುದಾಗಿ ಮತ್ತು ಮುಂದಿನ ಆದೇಶ ಹೊರಬರುವವರೆಗೆ […]
ಕೋಲಾರ:- ತಾಲ್ಲೂಕಿನಾದ್ಯಂತ ರಸ್ತೆಬದಿಗಳಲ್ಲಿ ಅಕ್ರಮವಾಗಿ ಆಯುರ್ವೇದಿಕ್ ಚಿಕಿತ್ಸಾಲಯಗಳ ಹೆಸರಿನಲ್ಲಿ ಟೆಂಟ್ಗಳನ್ನು ಹಾಕಿಕೊಂಡು ಗಿಡಮೂಲಿಕೆ ಔಷಧಿ ನೀಡುವುದಾಗಿ ಜನರನ್ನು ವಂಚಿಸುತ್ತಿದ್ದ ನಾಲ್ಕು ಕ್ಯಾಂಪ್ಗಳ ಮೇಲೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎ.ವಿ.ನಾರಾಯಣಸ್ವಾಮಿ ನೇತೃತ್ವದ ತಂಡ ಏಕಕಾಲದಲ್ಲಿ ದಾಳಿ ನಡೆಸಿ ತೆರವುಗೊಳಿಸಿತು.ತಾಲ್ಲೂಕಿನ ಚಿಕ್ಕಹಸಾಳ ಗೇಟ್, ನಗರದ ಪವನ್ ಕಾಲೇಜು ಸಮೀಪ, ನರಸಾಪುರ ಕೈಗಾರಿಕಾ ವಲಯದ ಖಾಜಿಕಲ್ಲಹಳ್ಳಿ ಗೇಟ್, ತಾಲ್ಲೂಕಿನ ಕೆಂದಟ್ಟಿ ಸಮೀಪ ಟೆಂಟ್ಗಳನ್ನು ಹಾಕಿಕೊಂಡು ವಿವಿಧ ಕಾಯಿಲೆಗಳಿಗೆ ಗಿಡಮೂಲಿಕೆ, ಆಯುರ್ವೇದಿಕ್ ಔಷಧಿ ನೀಡುವುದಾಗಿ ಜನರನ್ನು ಯಾಮಾರಿಸಿ, ಸಾವಿರಾರು ರೂ ಹಣ ಪಡೆಯುತ್ತಿದ್ದ ಹಿನ್ನಲೆಯಲ್ಲಿ […]

