
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ನೂತನ ಸರ್ಕಾರಿ ಪ್ರೌಢಶಾಲೆಯ 1995ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ನಗರದ ಮುಸ್ಸಂಜೆ ವೃದ್ದಾಶ್ರಮಕ್ಕೆ ಮಂಚಗಳು,ಕುರ್ಚಿಗಳು ಮತ್ತು ಅಲ್ಲೇರಾ ಮತ್ತಿತರ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ವಿತರಿಸಿದರು.ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ವೃಂದದ ಸಂಯೋಜಕ ಜಿ.ಮಹೇಶ್, ತಾವು ಮತ್ತು ತಮ್ಮ ಸಹಪಾಠಿಗಳು ವಿದ್ಯಾರ್ಥಿ ದೆಸೆಯಿಂದಲೂ ಪ್ರತಿ ವರ್ಷ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ ಎಂದರು.ಈ ಬಾರಿ ಮುಸ್ಸಂಜೆ ಮನೆ ಸೇವಾಶ್ರಮದಲ್ಲಿ ಅಗತ್ಯವಿರುವ ವಸ್ತುಗಳನ್ನು ವಿತರಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ಹಿರಿಯರಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ವಕೀಲ ತಾರಹಳ್ಳಿ ವೆಂಕಟೇಶ್ ಅವರ ಕೊಲೆಗೆ ಸಂಬಂಧಿಸಿದಂತೆ, ಪೊಲೀಸರು ಎಲ್ಲ ಆರೋಪಿಗಳನ್ನೂ ಬಂಧಿಸಬೇಕು ಎಂದು ಸ್ಥಳೀಯ ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಆಗ್ರಹಿಸಿದರು.ಪಟ್ಟಣದ ನ್ಯಾಯಾಲಯದ ವಕೀಲರ ಕೊಠಡಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೊಲೆಯಾದ ವಕೀಲರ ಕುಟುಂಬಕ್ಕೆ ಸರ್ಕಾರ ರೂ.25 ಲಕ್ಷ ಪರಿಹಾರ ನೀಡಬೇಕು. ವಕೀಲರ ಪರಿಷತ್ತಿನಿಂದಲೂ ಮೃತ ವಕೀಲರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸೌಲಭ್ಯಗಳನ್ನು ಪರಿಚಯಿಸಿ, ಅನುಕೂಲಮಾಡಿಕೊಡುವುದೇ ವಾರ್ಡ್ ಸಭೆ ಮತ್ತು ಗ್ರಾಮಸಭೆಯ ಉದ್ದೇಶ ಎಂದು ಅಧ್ಯಕ್ಷ ಆರ್.ವಿಶ್ವನಾಥರೆಡ್ಡಿ ಹೇಳೀದರು.ಕೂರಿಗೇಪಲ್ಲಿ ಗ್ರಾಮಪಂಚಾಯಿತಿ ವತಿಯಿಂದ ಗುರುವಾರ ನಡೆದ ವಾರ್ಡ್ ಸಭೆ ಮತ್ತು ಗ್ರಾಮ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಪಂಚಾಯಿತಿವತಿಯಿಂದ ಪಂಚಾಯಿತಿಗೆ ಸಂಬಂದಿಸಿದ ಪ್ರತಿ ಗ್ರಾಮದಲ್ಲಿಯೂ ಕುಡಿಯುವ ನೀರು,ಬೀದಿದೀಪಗಳು,ಚರಂಡಿಗಳ ಸ್ವಚ್ಚತೆ,ಗ್ರಾಮನೈರ್ಲಮ್ಯ, ಸ್ವಚ್ಚತೆಯ ಬಗ್ಗೆ ಹೆಚ್ಚಿನ ಆಧ್ಯತೆ ನೀಡಲಾಗುದು. ನರೇಗಾ ಯೋಜನೆಗಳ ಮೂಲಕ ಸಿಮೆಂಟ್ರಸ್ತೆ, ಚರಂಡಿಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಪೆ. 01: ಜಿಲ್ಲಾದ್ಯಂತ ಪಿಎಲ್ಡಿ ಬ್ಯಾಂಕ್ನಿಂದ ಪಡೆದಿರುವ ಕೃಷಿ, ಕೋಳಿ ಮತ್ತಿತರ ಸಾಲ ವಸೂಲಾತಿಗಾಗಿ ರೈತರಿಗೆ ನೀಡಿರುವ ನೋಟೀಸ್ ಆದೇಶವನ್ನು ವಾಪಸ್ ಪಡೆದು ಕನಿಷ್ಟಪಕ್ಷ ಒಂದು ವರ್ಷ ಸಾಲ ಮರುಪಾವತಿಸಲು ಕಾಲಾವಕಾಶ ನೀಡಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಿ ರೈತ ಸಂಘ, ಸಾಲ ಪಡೆದಿರುವ ರೈತರು, ಪ್ರಾಂತ ರೈತ ಸಂಘದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ನೋಟಿಸ್ಗಳನ್ನು ಸುಡುವ ಮೂಲಕ ಹೋರಾಟ ಮಾಡಿ ಸರ್ಕಾರವನ್ನು ಒತ್ತಾಯಿಸಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನಪದ ಕಲೆ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ಕನ್ನಡ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮೂಲಕ, ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಹೇಳಿದರು.ಸೋಮಯಾಜಲಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಗುಮ್ಮರೆಡ್ಡಿಪುರ ಗ್ರಾಮದ ಗಾಯಿತ್ರಿ ಮಹಿಳಾ ಸೇವಾ ಸಂಸ್ಥೆಯ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಜನಪದ ಝೇಂಕಾರ ಹಾಗೂ ಸುಗಮ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜನಪದ ಕಲೆ ಹಾಗೂ ಸಾಹಿತ್ಯದ ತಾಯಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ವಯಸ್ಸಾದ ಜಾನುವಾರು ಹಾಗೂ ಸೀಮೆ ಹಸುವಿನ ಗಂಡು ಕರುಗಳ ಪಾಲನೆ ರೈತರಿಗೆ ಹೊರೆಯಾಗಿ ಪರಿಣಮಿಸುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕ ಉದ್ಘಾಟಿಸಿ ಮಾತನಾಡಿ, ರೈತರು ಕ್ಷೀರೋತ್ಪಾದನೆಯಲ್ಲಿ ವೈಜ್ಞಾನಿಕ ಕ್ರಮ ಅನುಸರಿಸಬೇಕು ಎಂದು ಹೇಳಿದರು.ಹಾಲು ಕರೆಯುವುದು ಸುಲಭದ ಮಾತಲ್ಲ. ಕೈಯಿಂದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಸೊಸೈಟಿಗಳ ಗಣಕೀಕರಣ, ಸಾಮಾನ್ಯ ಜನರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಮೈಕ್ರೋಎಟಿಎಂ, ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಸಹಕಾರ ನೀಡಿದ ಬ್ಯಾಂಕಿನ ಸಿಇಒ ರವಿ ಅವರ ಸೇವೆ ಇತರೆ ಸಿಬ್ಬಂದಿಗೆ ಆದರ್ಶವಾಗಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದು, ಇದೀಗ ಮೈಸೂರು ಜಿಲ್ಲಾ ಲೆಕ್ಕಪರಿಶೋಧನಾ ಇಲಾಖೆ ಜಂಟಿ ನಿದೇಶಕರಾಗಿ ವರ್ಗಾವಣೆಗೊಂಡಿರುವ ರವಿ ಅವರನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಫೆ. 27 : ಜಗತ್ತು ನಿರಂತರ ಬದಲಾವಣೆಯಿಂದ ಕೂಡಿದೆ. ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅದರಲ್ಲೂ ಮಾಹಿತಿ ತಂತ್ರಜ್ಞಾನ ನಂತರ ಬದಲಾವಣೆ ಹೆಚ್ಚು ಕೂಡಿದ್ದು ಇದರಿಂದ ಬದಲಾದ ಕಾಲಕ್ಕೆ ಅಗತ್ಯವಾದ ಶಿಕ್ಷಣ ನೀಡಬೇಕಾದುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ. ಆರ್. ಅಶೋಕ್ ಅಭಿಪ್ರಾಯಪಟ್ಟರುಬಂಗಾರಪೇಟೆ ತಾಲ್ಲೂಕಿನ ಹುದುಕುಳ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಕರ್ನಾಟಕ ಜ್ಞಾನ ವಿಜ್ಞಾನ ಜಿಲ್ಲಾ ಸಮಿತಿ ಏರ್ಪಡಿಸಿದ್ದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಾಂಘಿಟಿತ ಪ್ರಯತ್ನ ನಡೆಸಬೇಕು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ್ದ ಅವರು, ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೋಲಾರ ಜಿಲ್ಲೆ ನೀರಿನ ಕೊರತೆ ಎದುರಿಸುತ್ತಿದೆ. ಸಮಸ್ಯೆ ನಿವಾರಣೆಗೆ ಕೆ.ಸಿ.ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸಲಾಗುತ್ತಿದೆ. ಆದರೆ ಆ ನೀರನ್ನು 3ನೇ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ಶ್ರೀನಿವಾಸಪುರ ತಾಲ್ಲೂಕು ಮಾವಿನ […]