ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ಶಿಲ್ಪಿಗಳು – ಕೆ. ಶ್ರೀನಿವಾಸಗೌಡಕೋಲಾರ ಅ.5 : ಶಿಕ್ಷಕರು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಜ್ಞಾನದ ಶಿಲ್ಪಿಗಳಂತೆ ಆದ್ದರಿಂದ ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಂದು ಶಾಸಕ ಕೆ ಶ್ರೀನಿವಾಸಗೌಡ ತಿಳಿಸಿದರು .ಕೋಲಾರ ತಾಲ್ಲೂಕು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ‘ವಿಶ್ವ ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು .ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮತ್ತು ಶಿಸ್ತಿನ ಜೊತೆಜತೆಗೆ ಆರೋಗ್ಯಕರ ಸಮಾಜದ ಸೃಷ್ಟಿಗಾಗಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಹಸಿರು ಶಾಲು ಹಾಗೂ ರೈತ ಮುಖಂಡರ ಬಗ್ಗೆ. ಹಗುರವಾಗಿ ಮಾತನಾಡಿರುವ ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಾಲ್ಲೂಕು ಕಛೇರಿಯ ಗೇಟ್ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ವೀರಭದ್ರಸ್ವಾಮಿ ಇತ್ತೀಚಿಗೆ ಶಾಗೂತ್ತೂರು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಹಸಿರು ಟವಾಲ್ ಬಗ್ಗೆ ಸಂಸದರಾದ ಎಸ್. ಮುನಿಸ್ವಾಮಿ ಆರೋಪ ಮಾಡಿರುವುದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬಡವರು,ರೈತರು,ತಾಯಂದಿರ ಹೃದಯ, ನಾಲಿಗೆಯಲ್ಲಿ ಡಿಸಿಸಿ ಬ್ಯಾಂಕ್ ಹೆಸರು ಹರಿದಾಡುತ್ತಿದೆ, ಇಂತಹ ಸಂಸ್ಥೆಯನ್ನು ಹಾಳು ಮಾಡುವ ಪ್ರಯತ್ನ ನಡೆಸಿದರೆ ಸಮಾಜ ಎಂದಿಗೂ ಕ್ಷಮಿಸದು ಎಂಬುದನ್ನು ಅರಿತು ಕೆಲಸ ಮಾಡಿ ಎಂದು ಸಿಬ್ಬಂದಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು ಮಾಡಿದರು.ಭಾನುವರ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಪಾರದರ್ಶಕ ಆಡಳಿತಕ್ಕಾಗಿ ಮತ್ತು ಭ್ರಷ್ಟತೆ ಇಣುಕಿ ನೋಡದಂತೆ ತಡೆಯಲು ಇಡೀ ಪ್ಯಾಕ್ಸ್ ವ್ಯವಸ್ಥೆಯನ್ನೇ ಗಣಕೀಕರಣ ಮಾಡುವ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭೆ ವತಿಯಿಂದ ಶನಿವಾರ ಗಾಂಧಿ ಜಯಂತಿ ಆಚರಿಸಲಾಯಿತು. ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯರಾದ ಬಿ.ವೆಂಕಟರೆಡ್ಡಿ, ನಾಗರಾಜ್, ರಾಜು, ಶ್ರೀನಿವಾಸ್, ಸರ್ದಾರ್, ಶಬ್ಬೀರ್ ಖಾನ್, ಅಮರ್, ಅಧಿಕಾರಿಗಳಾದ ಡಿ.ಶೇಖರ್ರೆಡ್ಡಿ, ನಾಗರಾಜ್, ಶಂಕರ್ ಇದ್ದರು
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಎಸ್ವಿ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಶನಿವಾರ ಏರ್ಪಡಿಸಿದ್ದ ಶ್ರಮದಾನ ಶಿಬಿರವನ್ನು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಉದ್ಘಾಟಿಸಿದರು. ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಸದಸ್ಯರಾದ ಬಿ.ವೆಂಕಟರೆಡ್ಡಿ, ಸರ್ದಾರ್, ಶಬ್ಬೀರ್ ಇದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಯಲ್ಪಾಡ್ ಸಮೀಪ ಶುಕ್ರವಾರ ರಾತ್ರಿ ಕಾರ್ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ರಾಯಲ್ಪಾಡ್ ಗ್ರಾಮದಿಂದ ಮುದಿಮಡಗು ಗ್ರಾಮಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರನ್ನು ತಡೆದು 103.680 ಲೀಟರ್ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.ಅಬಕಾರಿ ನಿರೀಕ್ಷಕ ಬಿ.ಎಸ್.ರೋಹಿತ್, ಅಬಕಾರಿ ಉಪ ನಿರೀಕ್ಷಕ ಕೆ.ಎಂ.ಕೃಷ್ಣಪ್ಪ, ಸಿಬ್ಬಂದಿ ಕೆ.ಆರ್.ಮಂಜುನಾಥ್, ರಾಘವೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಹಾತ್ಮಾ ಗಾಂಧೀಜಿ ಬದುಕು ಮಾದರಿಯಾಗಿದೆ. ಅವರ ಜೀವನ ದರ್ಶನ ಸರ್ವಕಾಲಿಕ ಮೌಲ್ಯ ಪಡೆದಿದೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಸಮಾರಂಭದಲ್ಲಿ ಗಾಂಧೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಇಂದಿನ ಪರಿಸ್ಥಿತಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತ ಪಾಲನೆ ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜಿಲ್ಲಾ ಭಾರತ ಸೇವಾದಳ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತ. ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್. ಗಣೇಶ್, ಕಾಂಗ್ರೆಸ್ ಮುಖಂಡ ಕೆ.ಜಯದೇವ್, ಆರ್. ಶ್ರೀನಿವಾಸನ್, ಬಹಾದ್ದೂರ್ ಸಾಬ್ , ಜಿಲ್ಲಾ ಸಂಘಟಕ ದಾನೇಶ್ ಹಾಗೂ ಬಿಇಓ ಕಚೇರಿ ಸಿಬ್ಬಂದಿ ಹಾಜರಿದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಹಸಿರು ಶಾಲು ಹಾಗೂ ರೈತ ಮುಖಂಡರ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಸದ ಎಸ್.ಮುನಿಸ್ವಾಮಿ ಕೂಡಲೇ ಕ್ಷೇಮಯಾಚಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಎನ್. ಜಿ. ಶ್ರೀರಾಮರೆಡ್ಡಿ ಅಗ್ರಹಿಸಿದರು.ಪಟ್ಟಣದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕಛೇರಿಯಲ್ಲಿ ಸುದ್ದಿಗೊಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಶ್ರೀರಾಮರೆಡ್ಡಿ ಇತ್ತೀಚಿಗೆ ಶಾಗೂತ್ತೂರು ಗ್ರಾಮದಲ್ಲಿ ನಡೆದ ಸಭೆಯಲ್ಲಿ ರೈತ ಸಂಘಟನೆಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಇವರಿಗೆ ಶೋಬೆ ತರವುದಿಲ್ಲ. ಹಸಿರು ಸಾಲು […]

