
JANANUDI.COM NETWORK ಕುಂದಾಪುರ : ಜನವರಿ 9 2021 ಹೋಟೆಲ್ ಶರೋನ್ ಬಳಿ ಇರುವ ಆಯುಷ್ ಧಾಮ ಆರ್ಥೋ ನ್ಯೂರೋ ಆಸ್ಪತ್ರೆ, ಹಿರಿಯ ನಾಗರಿಕರ ವೇದಿಕೆ ಮತ್ತು ನಿವೃತ್ತ ಸರಕಾರಿ ನೌಕರರ ಸಂಘ ಕುಂದಾಪುರ, ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದ್ದು, ಕುಂದಾಪುರ ಸಹಾಯಕ ಆಯುಕ್ತ ಶ್ರೀ ಕೆ. ರಾಜು ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಕೋವಿಡ್ 19 ಇದರ ನಿರ್ವಹಣೆಯಲ್ಲಿ ಆಯುಷ್ ಚಿಕಿತ್ಸಾ ಪದ್ಧತಿ ಪರಿಣಾಮಕಾರಿಯಾಗಿದ್ದು ಈಗೀಗ ಹೆಚ್ಛೆಚ್ಚು ಜನರು ಅದರ ಸದುಪಯೋಗ ಮನಗಂಡಿದ್ದಾರೆ. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸಹಕಾರ ತತ್ವದಡಿ ನಂಬಿಕೆಯಿಟ್ಟು ಕೆಲಸ ಮಾಡೋಣ ಸಂಘದಲ್ಲಿ ಭ್ರಷ್ಟತೆ ಇಣುಕಿ ನೋಡದಂತೆ ಎಚ್ಚರವಹಿಸುವ ಮೂಲಕ ಸದೃಢಗೊಳಿಸೋಣ ಎಂದು ಗೋಲ್ಡ್ಪೀಲ್ಡ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ಅಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ತಿಳಿಸಿದರು.ಸೊಸೈಟಿಯಲ್ಲಿ ನಡೆದ ಆಡಳಿತ ಮಂಡಳಿಯ ಮಾಸಿಕ ಸಭೆಯಲ್ಲಿ ಸಂಘದ ನಿರ್ದೇಶಕರೂ ಆಗಿದ್ದು, ಇದೀಗ ಅರಾಭಿಕೊತ್ತನೂರು ಗ್ರಾ.ಪಂ ಸದಸ್ಯರಾಗಿ ಆಯ್ಕೆಯಾಗಿರುವ ಎ.ಎಸ್.ನಂಜುಂಡಗೌಡರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.ನಮ್ಮ ಸಹಕಾರ ಸಂಘ ಇನ್ನೂ ಬೆಳೆಯುತ್ತಿರುವ ಕೂಸು, ಅದನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಂಕಲ್ಪದೊಂದಿಗೆ ಎಲ್ಲರೂ ಕೆಲಸ ಮಾಡುತ್ತಿದ್ದೇವೆ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಎಸ್ಪಿ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು.ಪಟ್ಟಣದ ಬಿಎಸ್ಪಿ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲ್ಲುವುದು ಹಾಗೂ ರಾಜ್ಯದಲ್ಲಿ ಅಧಿಕಾರ ಸ್ಥಾನಕ್ಕೆ ಏರುವುದು ಪಕ್ಷದ ಉದ್ದೇಶವಾಗಿದೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.ಸ್ವಾತಂತ್ರ್ಯ ಬಂದಾಗಿನಿಂದ ಅಧಿಕಾರ ನಡೆಸಿದ ಬೇರೆ ಬೇರೆ ಪಕ್ಷಗಳು ಬಡತನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯಾವುದೇ ಅಭಿವೃದ್ಧಿ ಕಾರ್ಯವನ್ನು ಅಡ್ಡಿಪಡಿಸಿಲ್ಲ್ಲ. ಅಡ್ಡಿಪಡಿಸಿರುವುದಾಗಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಡಿರುವ ಆಪಾನೆಯಲಿಸತ್ಯಾಂಶವಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಮತಗಳು ಬಂದಿರುವುದನ್ನು ಸಹಿಸಲಾಗದೆ, ಅಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವೊಂದರಲ್ಲಿ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಿದರು.ಮತದಾರರಲ್ಲಿ ಮೌಲ್ಯ ಕುಸಿದಿದೆ ಎಂದು ಹೇಳುವುದರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ವಿರುದ್ಧ ಲಸಿಕೆ ನೀಡಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದರು.ಪಟ್ಟuದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಕೊರೊನಾ ವಿರುದ್ಧ ಲಸಿಕೆ ನೀಡಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿ, ಕೊರೊನಾ ವಿರುದ್ಧ ಲಸಿಕೆ ನೀಡುವುದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಂಬಂಧಪಟ್ಟ ಸಿಬ್ಬಂದಿ ಸೇವಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಪ್ರಕಟಿಸಲಾಗಿರುವ ಯೋಜನೆಯಂತೆ ಮೊದಲ ಹಂತದಲ್ಲಿ ನಿಗದಿತ ಅವಧಿಯಲ್ಲಿ ಎರಡು ಲಸಿಕೆ ನೀಡಲಾಗುವುದು. ಆಶಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ದೇಶದ ಅಭಿವೃದ್ದಿಯ ದೃಷ್ಟಿಯಿಂದ ಮತದಾನ ಕರ್ತವ್ಯವೆಂದು ಭಾವಿಸಿ ಉತ್ತಮ ನಾಯಕನ ಆಯ್ಕೆಗೆ ನಿಮ್ಮ ಪ್ರತಿಯೊಂದು ಮತವೂ ಮೌಲ್ಯವುಳ್ಳದ್ದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.ತಾಲ್ಲೂಕಿನ ಅರಹಳ್ಳಿ ಒಂದೇ ಗ್ರಾಮದ ಮತಗಟ್ಟೆಯಲ್ಲಿ ಪ್ರಸಕ್ತ ಸಾಲಿನಲ್ಲಿ 37 ಮಂದಿ ಹೊಸ ಮತದಾರರು ನೋಂದಣಿಯಾಗಿರುವ ಕುರಿತು ಪರಿಶೀಲನೆ ನಡೆಸಲು ಭೇಟಿ ನೀಡಿದ್ದ ಅವರು ಯುವ ಮತದಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.ಡಿಸಿಯವರು ಬರುತ್ತಾರೆಂಬ ಹಿನ್ನಲೆಯಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಶಿಕ್ಷಕ ಎಂ.ವೆಂಕಟೇಶ್ 37 ಮಂದಿ ಹೊಸ ಮತದಾರರನ್ನು ಮತಗಟ್ಟೆಯೂ ಆಗಿರುವ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ವೆಂಕಟೇಶ್ವರ ಬಡಾವಣೆಯಲ್ಲಿ ಪುರಸಭೆ ವತಿಯಿಂದ ಹೊಸದಾಗಿ ನಿರ್ಮಿಸಲಾಗಿರುವ ಕೊಳವೆ ಬಾವಿಯನ್ನು ಸ್ಥಳೀಯ ಮುಖಂಡರಾದ ಶ್ರೀನಿವಾಸರೆಡ್ಡಿ, ಈರುಳ್ಳಿ ರಂಗಪ್ಪ, ಸುರೇಂದ್ರ, ಶ್ರೀನಾಥ್, ಬಾಬು ಪರಿಶೀಲಿಸಿದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯುವುದರ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಕೊಚ್ಚಿನ್ನ ಗೇರು ಮತ್ತು ಕೊಕೊ ನಿರ್ದೇಶನಾಲಯದ ನಿರ್ದೇಶಕ ಡಾ. ಎನ್.ವೆಂಕಟೇಶ್ ಹುಬ್ಬಳ್ಳಿ ಸಲಹೆ ಮಾಡಿದರು.ತಾಲ್ಲೂಕಿನ ಹೊಗಳಗೆರೆ ತೋಟಗಾರಿಕಾ ಕ್ಷೇತ್ರದಲ್ಲಿ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಚ್ಚಿನ್ನ ಗೇರು ಮತ್ತು ಕೊಕೊ ನಿರ್ದೇಶನಾಲಯ ಹಾಗೂ ಸ್ಥಳೀಯ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗೇರು ಬೆಳೆಯ ವಿಚಾರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಶಿಕ್ಷಕರಾಗಿ ಬಡ್ತಿ ನೀಡಿಕೆ ವಿಳಂಬವಾಗಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ನೀಡಿದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಆಯುಕ್ತ ಅನೂಪ್ ಕುಮಾರ್ ಪ್ರಕ್ರಿಯೆ ಆರಂಭಕ್ಕೆ ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.ಬುಧವಾರ ಆಯುಕ್ತರನ್ನು ಭೇಟಿಯಾದ ವೈಎಎನ್, ಕೋಲಾರ ಜಿಲ್ಲೆಯಲ್ಲಿ ಬಡ್ತಿ ಪ್ರಕ್ರಿಯೆ ವಿಳಂಬವಾಗಿದೆ, ಆದರೆ ಹಲವಾರು ಜಿಲ್ಲೆಗಳಲ್ಲಿ ಈಗಾಗಲೇ ಬಡ್ತಿ ಪ್ರಕ್ರಿಯೆ ಮುಗಿಸಲಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.ಜಿಲ್ಲೆಯಲ್ಲೂ ಬಡ್ತಿ […]