ಶ್ರೀನಿವಾಸಪುರ: ಸರ್ಕಾರದ ನಿರ್ದೇಶನದಂತೆ ತಾಲ್ಲೂಕಿನ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿವೃದ್ಧಿ ಅಧಿಕಾರಿ ಕೆ.ಪಿ. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುರುವಾದ ಸ್ವಚ್ಛತಾ ಅಭಿಯಾನವನ್ನು ಪರಿಶೀಲಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯಿದೆ. ಇದರಿಂದಾಗಿ ಇನ್ನೂ ಹೆಚ್ಚಿನ ಸ್ಥಳಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ […]
ಕೋಲಾರ : ಶಾಲಾ-ಕಾಲೇಜುಗಳ ವಾಹನಗಳ ತಪಾಸಣಾ ಆಂದೋಲನದಲ್ಲಿ 177 ಕೇಸ್ ದಾಖಲಿಸಿ 9.60 ಲಕ್ಷ ರೂ ದಂಡ ಹಾಗೂ ತೆರಿಗೆಯನ್ನು ವಸೂಲಿ ಮಾಡಲಾಗಿದೆ. ಏಪ್ರಿಲ್ 2025 ರಿಂದ ಸೆಪ್ಟೆಂಬರ್ 18ರವರೆಗೆ ಶೈಕ್ಷಣಿಕ ಸಂಸ್ಥೆಗಳ ಬಸ್ಗಳನ್ನು ತಪಾಸಣೆ ನಡೆಸಿ 18 ಸೀಸ್ ಮಾಡಲಾಗಿದ್ದು 4 ವಾಹನಗಳ ಆರ್ಸಿ ರದ್ದುಗೊಳಿಸಿ ಸ್ಮಾಪ್ ಮಾಡಲಾಗಿದೆ. ಕೋಲಾರದ ಅರ್ಕ ಶಾಲೆ 4 ಬಸ್ಗಳ ಮೇಲೆ ಮೊಕದ್ದಮೆ ಹೂಡಲಾಗಿದ್ದು ನರಸಾಪುರ ವಿದ್ಯಾನಿಕೇತನ ಶಾಲೆ ವಿರುದ್ಧ 5, ಶ್ರೀನಿವಾಸಪುರ ವೇಣು ಶಾಲೆ ವಿರುದ್ಧ 2, ರೋಣೂರು […]
ಕೋಲಾರ : ಜಿಲ್ಲಾ ಔಷಧಿ ನಿಯಂತ್ರಕರಿಗೆ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಡ್ರಗ್ಸ್ ಮಾರಾಟ ಬಗ್ಗೆ ವರದಿ ಮಾಡುವಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಿ ಯೋಜನೆಗಳನ್ನು ನೀಡಲು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಕಾರ್ಯಕ್ರಮ ಹಾಗೂ ತೀವ್ರತರ ಅತೀಸಾರ ಭೇದಿ ತಡೆಗಟ್ಟುವ ಅಭಿಯಾನ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಕಾರ್ಯಪಡೆ ಸಮಿತಿಯ ಸಭೆಯನ್ನು ಉದ್ದೇಶಿಸಿ […]
ಕೋಲಾರ: ಸ್ವಯಂ ಉದ್ಯೋಗಕ್ಕೆ ಆಸಕ್ತಿ ಇರುವ ಯುವಕರು ಹಾಗೂ ಮಹಿಳೆಯರಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊನ್ನೇನಹಳ್ಳಿ, ಕೋಲಾರದಲ್ಲಿ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ. 1992ರಲ್ಲಿ ಆರಂಭವಾದ ಈ ಸಂಸ್ಥೆ ಈಗಾಗಲೇ 33 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 37 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಿದೆ.ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕೆನರಾ ಬ್ಯಾಂಕ್ ಶತಮಾನೋತ್ಸವ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಅಣಬೆ […]
ಶ್ರೀನಿವಾಸಪುರ : ಪಂಚೇಂದ್ರಯಗಳಲ್ಲಿ ಯಾವುದೇ ಅಂಗವು ಸ್ವಾದೀನ ಕಳೆದುಕೊಂಡರು ಸಹ ಸಮಾಜವು ಅವರನ್ನ ಬೇರೆ ರೀತಿಯಲ್ಲಿಯೇ ಕಾಣುತ್ತದೆ . ಅದನ್ನ ತಪ್ಪಿಸುವ ಸಲುವಾಗಿ ಇಲಾಖೆ ಸಹಯೋಗದಲ್ಲಿ ಉಚಿತವಾಗಿ ಶ್ರವಣ ಸಾಧನಾ ಸಲಕರಣೆಗಳ ವಿತರಿಸಲಾಗುತ್ತಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ತಿಳಿಸಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಉಚಿತವಾಗಿ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಈ ಹಿಂದೆ ವಿವಿಧ 21 ಶ್ರವಣ ನ್ಯೂನ್ಯತೆವುಳ್ಳ ವಿಧ್ಯಾರ್ಥಿಗಳಿಗೆ ಬೆಂಗಳೂರಿನ ಅಲಿಮಾಕೊ […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯ ಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ […]
ಶ್ರೀನಿವಾಸಪುರ : ತಾಲೂಕಿನ ದಳಸನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದ ನಿವೇಶನ ರಹಿತರು ಸರಕಾರಿ ಜಾಗದಲ್ಲಿ ತಾವೇ ನಿರ್ಮಿಸಿಕೊಂಡಿರುವ ಮನೆಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಒತ್ತಾಯಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಾ.ಪಂ ವ್ಯವಸ್ಥಾಪಕ ಮಂಜುನಾಥ್ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು 2016 ರಲ್ಲಿ ಗ್ರಾಮದ ಎಲ್ಲಾ ಜನ ವಿಭಾಗದವರು ಸೇರಿ ನಿರ್ಗತಿಕರಿಗೆ ನಿವೇಶನಗಳನ್ನು […]
ಕೋಲಾರ : ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಗುರಿ ಸಾಧನೆಯ ಹಿತದೃಷ್ಟಿಯಿಂದ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಕೋಲಾರ ಜಿಲ್ಲಾ ಘಟಕದ ಸಾಮಾನ್ಯ ಸಭೆ ಭಾನುವಾರ ನಗರದ ಅಲ್ಲಮೀನ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆ ಹಾಗೂ ನಿಗಮ/ನಿಯಮಿತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮುಸ್ಲಿಂ ಸಮುದಾಯದ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸಿದ್ದರು. ಸಮುದಾಯದ ಶಿಕ್ಷಣ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸಬಲಿಕರಣಕ್ಕಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಿ, ಈ […]
ರಾಯಚೂರು : ರಾಯಚೂರಿನ ಸಹಾರ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಣ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ, ರಾಯಚೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ಶಿಕ್ಷಣ ಸ್ಥಾಪಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದು ಅಭಿಪ್ರಾಯಪಟ್ಟರು. ಅವರು ಮುಂದುವರೆದು, ಮುಸ್ಲಿಮರು ತಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು. ದೇಶದ ಮೊದಲ […]

