ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ಪಟ್ಟಣದ ವೆಂಟೇಶಗೌಡ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ಪದಗ್ರಹಣ ಸಮಾರಂಭದಲ್ಲಿ ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇರುವುದಿಲ್ಲ. ಅಗತ್ಯ ಇರುವ ವ್ಯಕ್ತಿಗಳಿಗೆ ಸಹಾಯ ಹಸ್ತ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ತೊಗರಿಯು ರಾಜ್ಯದ ಪ್ರಮುಖವಾದ ದ್ವಿದಳ ಧಾನ್ಯವಾಗಿದ್ದು, 2018-19ರ ಪ್ರಕಾರ ಕೋಲಾರ ಜಿಲ್ಲೆಯಲ್ಲಿ ತೊಗರಿಯು 2053 ಹೇಕ್ಟೆರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು 876 ಟನ್ ಉತ್ಪಾದನೆಯಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಬಿತ್ತನೆಯಾಗಿರುವ ತೊಗರಿ ಬೆಳೆಯಲ್ಲಿ ಕೆಲವು ಭಾಗಗಳಲ್ಲಿ ಸೊರಗು ರೋಗವು ಕಾಣಿಸಿಕೊಳ್ಳುತ್ತಿದ್ದು ಅದು ಮಣ್ಣಿನಲ್ಲಿರುವ ಶೀಲಿಂದ್ರದಿಂದ ಬರುತ್ತದೆ. ಇದಕ್ಕೆ ಕಾರಣ ತುಂಬಾ ಮಳೆಯಾಗಿದ್ದು ತದನಂತರ ವಾತಾವರಣದಲ್ಲಿ ಉಷ್ಣಾಂಶ ಏರಿಕೆಯಾಗಿರುವುದರಿಂದ ಈ ರೋಗವು ಕಾಣಿಸುತ್ತಿದೆ. ರೋಗದ ಪ್ರಮುಖ ಲಕ್ಷಣಗಳು- ಗಿಡಗಳು ಬಾಡುವುದು, ಒಣಗುವುದು, ಸಸಿ ಹಂತದಲ್ಲಿ ಕಂಡುಬಂದರೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ಗ್ರಾಮೀಣ ಭಾಗದಲ್ಲಿನ ಗ್ರಾಮಸ್ಥರಿಗೆ ಉಚಿತವಾಗಿ ಕಸದ ಬುಟ್ಟಿಗಳನ್ನು ಮನೆ ಮನೆಗೂ ವಿತರಣೆ ಮಾಡಲು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಮನೆಗೂ ಕಸದ ಬುಟ್ಟಿಗಳನ್ನು ವಿತರಿಸಲಾಗುತ್ತಿದ್ದು ಗ್ರಾಮಸ್ಥರು ಇದರ ಸದ್ಬಳಿಕೆ ಮಾಡಿಕೊಂಡು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಗ್ರಾಮಗಳಿಗೆ ಆಗಮಿಸುವ ಸ್ವಚ್ಛ ವಾಹಿನಿ ವಾಹನಕ್ಕೆ ನೀಡುವಂತೆ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ವೈ ವಿ ವಿಧ್ಯಾರಾಣಿ ತಿಳಿಸಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಕೆಜಿಎಫ್ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ ಮಂಜೂರಾಗಿರುವ ಕಾಮಗಾರಿಗಳನ್ನು ತ್ವರಿಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕಿ ರೂಪ ಶಶಿಧರ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಜಿಎಫ್ ಕ್ಷೇತ್ರದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಕೆಜಿಎಫ್ ತಾಲ್ಲೂಕಾಗಿ ಘೋಷಣೆಯಾಗಿದೆ.ಮಿನಿ ವಿಧಾನ ಸೌಧದ ಕಾಮಗಾರಿ ಪ್ರಗತಿಯಲ್ಲಿದೆ. ಎಪಿಎಂಸಿ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾದಿಂದ ಅನುಮೋದನೆ ದೊರೆತ್ತಿದ್ದು, ಕೂಡಲೇ ಜಾಗ ಗುರುತಿಸಿಕೊಡಬೇಕು ಎಂದು ಮನವಿ ಮಾಡಿದರು.ತಾಲ್ಲೂಕು ಕೇಂದ್ರವಾಗಿದ್ದರೂ ಸಹಾ ಯಾವುದೇ ಭೂದಾಖಲೆಗಳು ಮಾತ್ರವಲ್ಲದೇ ಇತರೆಲ್ಲಾ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಜು-28, ಹೈಕೋರ್ಟ್ ಆದೇಶದಂತೆ ತಾಲ್ಲೂಕಿನಾದ್ಯಂತ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ, ಗುಂಡುತೋಪು, ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಿ ಸಾಗುವಳಿ ಚೀಟಿ ಅಕ್ರಮವನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ಸಾಮೂಹಿಕ ನಾಯಕತ್ವ ರೈತ ಸಂಘದಿಂದ ತಹಸೀಲ್ದಾರ್ ಕಛೇರಿ ಮುಂದೆ ಹೋರಾಟ ಮಾಡಿ ತಹಸೀಲ್ದಾರ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಸಾಮೂಹಿಕ ನಾಯಕತ್ವ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಸರ್ಕಾರಿ ಗುಂಡುತೋಪು, ಸ.ನಂ. 149/2 ರ ಪೆಟ್ರೋಲ್ಬಂಕ್ ಮಾಲೀಕರು ನ್ಯಾಯಾಲಯದಿಂದ ತಂದಿರುವ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಂಗಡಿ ನಡೆಸುವ ವ್ಯಾಪಾರಿಗಳು ಕಡ್ಡಾಯವಾಗಿ ಅಗತ್ಯ ಶುಲ್ಕ ಪಾವತಿಸಿ ಪರವಾನಗಿ ಪಡೆದುಕೊಳ್ಳಬೇಕು ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಹೇಳಿದರು.ಪಟ್ಟಣದಲ್ಲಿ ಮಂಗಳವಾರ ಅಂಗಡಿ ಮಾಲೀಕರು ವ್ಯಾಪಾರ ನಡೆಸಲು ಪರವಾನಗಿ ಹೊಂದಿರುವ ಬಗ್ಗೆ ತಪಾಸಣೆ ನಡೆಸಿದ ಬಳಿಕ ಮಾತನಾಡಿ, ಪುರಸಭೆಯಿಂದ ಪರವಾನಗಿ ಪಡೆಯದೆ ವ್ಯಾಪಾರ ವಹಿವಾಟು ನಡೆಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಅಂಗಡಿ ಪರವಾನಗಿ ಪಡೆಯದ ಅಂಗಡಿಗಳಿಂದ ಪೌರ ಕಾರ್ಮಿಕರು ಕಸ ಪಡೆಯುವುದಿಲ್ಲ. ಪುರಸಭೆ ಒದಗಿಸುವ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ 26 : ಕಾರ್ಗಿಲ್ ವಿಜಯದ ದಿವಸಕ್ಕೆ 22 ವರ್ಷಗಳ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿ ಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಾಡಿದ ಹುತಾತ್ಮ ಯೋಧರನ್ನು ನೆನಪಿಸುವ ದಿನವೆಂದು ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಜೆ.ಜಿ ನಾಗರಾಜ ಅಭಿಪ್ರಾಯ ಪಟ್ಟರು.ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯಲ್ಲಿ ಯೋಧರಾದ ಅಶೋಕ್ ಅವರನ್ನು ಸನ್ಮಾನಿಸಿ ಮಾತಾನಾಡುತ್ತಿದ್ದರುಪಾಕಿಸ್ತಾನ ಸೇನೆ 1999 […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಬಲಗೊಳ್ಳಲು ಆಗ್ನೇಯಶಿಕ್ಷಕರ ಕ್ಷೇತ್ರದಿಂದ 3 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಬೆಂಗಳೂರು ನಗರದ ಹೆಬ್ಬಾಳದಿಂದ ಒಮ್ಮೆ ಶಾಸಕರಾಗಿ ಆಯ್ಕೆಯಾಗಿರುವ ಡಾ.ವೈ.ಎ.ನಾರಾಯನಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲೆಯ ಹಲವಾರು ಬಿಜೆಪಿ ಮುಖಂಡರು ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲೆಯಿಂದ ಓರ್ವ ಬಿಜೆಪಿ ಶಾಸಕರೂ ಆಯ್ಕೆಯಾಗಿಲ್ಲ, ಜತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ವರ್ಷಗಟ್ಟಲೇ ಉಸ್ತುವಾರಿ ಸಚಿವರೇ ಇರಲಿಲ್ಲ, ಕೋವಿಡ್ ಒತ್ತಡದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ 4 ಎಕರೆ 10 ಗುಂಟೆ ಪಂಚಾಯಿತಿಗೆ ಸೇರಿದ ಜಮೀನಿನಲ್ಲಿ ಕೆಲವರು ಅನಧಿಕೃತವಾಗಿ ಅಕ್ರಮಿಸಿಕೊಂಡಿದ್ದರು, ಇದನ್ನು ತೆರವುಗೊಳಿಸಿ ಗ್ರಾಮಕ್ಕೆ ಬೇಕಾದ ಅಂಗನವಾಡಿ ಕೇಂದ್ರ, ಸಮುದಾಯಭವನ, ಡೈರಿ, ಈ ಸೌಲಭ್ಯಗಳನ್ನು ಒದಗಿಸಲು ಜಾಗವನ್ನು ಗುರುತಿಸಿ ಸಾರ್ವನುಮತದಿಂದ ತೀರ್ಮಾನಿಸಲಾಯಿತು.ತಾಲ್ಲೂಕಿನ ನೆಲವಂಕಿ ಗ್ರಾಮ ಪಂಚಾಯಿತಿಯ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷಣಿ ಗೌತಮಿಮುನಿರಾಜು ಈ ಗ್ರಾಮಕ್ಕೆ ಸರ್ಕಾರದಿಂದ ಈಗಾಗಲೇ ಅಂಗನವಾಡಿ ಕೇಂದ್ರ ಸಮುದಾಯಭವನ ಮಂಜೂರಾಗಿದ್ದು […]

