
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕೇಂದ್ರ ಅಧ್ಯಯನ ತಂಡ ಬುಧವಾರ ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಯೋಜನೆಗಳಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗರಿಗಳ ಪ್ರಗತಿ ಪರಿಶೀಲನೆ ನಡೆಸಿತು. ದೆಹಲಿಯಿಂದ ಆಗಮಿಸಿದ್ದ ಅಧ್ಯಯನ ತಂಡದ ನೇತೃತ್ವವನ್ನು ಮಹಾರಾಷ್ಟ್ರದ ಗಾಯಕ್ವಾಡ್ವಹಿಸಿದ್ದರು. ವಿನಾಯಕ ಘಾಡೆ ತಂಡದ ಉಪ ಮುಖ್ಯಸ್ಥರಾಗಿದ್ದರು. ತಂಡದ ಸದಸ್ಯರು ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ ಕೃಷಿ, ಸ್ವಚ್ಛ ಭಾರತ್ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ನ.04 : ನವೀಕರಿಸಬಹುದಾದ ಇಂಧನ ಮೂಲಗಳನ್ನು ಸಂರಕ್ಷಣೆ ಮಾಡಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ ರಾಯಚೂರು ಚಿತ್ರದುರ್ಗ ಜಿಲ್ಲೆ ಕಡೆ ಫ್ಯಾನ್ ಗಾಳಿಯ ಮೂಲಕ ವಿದ್ಯುತ್ ಉತ್ಪಾದಿಸುತ್ತಾರೆ. ಸೂರ್ಯನ ಬೆಳಕಿನಿಂದ ಸೋಲಾರ್ ವಿದ್ಯುತ್ ಶಕ್ತಿಯನ್ನು ಉತ್ಪಾದಿಸುತ್ತಿದ್ದು, ಸಾಧಾರಣ ಬಲ್ಬ್ಗಳ ಬಳಕೆ ಬೇಡ, ಪ್ರತಿಯೊಬ್ಬರು ಕಡಿಮೆ ಹಣದಿಂದ ಸೋಲಾರ್ ಹಾಕಿಸಿಕೊಳ್ಳಿ ಅಥವಾ ಎಲ್.ಇ.ಡಿ ಲೈಟ್ ಗಳನ್ನು ಹಾಕಿಸಿಕೊಂಡು ವಿದ್ಯುತ್ ಉಳಿತಾಯ ಮಾಡಿ ಇದರಿಂದ ಹಣವೂ ಉಳಿತಾಯವಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಎಸ್. ಎಚ್ .ಚೌಡಪ್ಪ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಾಲ್ಲೂಕು ನರೇಗಾ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕೋಲಾರ ಜಿಲ್ಲೆ, ರಾಜ್ಯದಲ್ಲಿ 15ನೇ ಸ್ಥಾನದಲ್ಲಿತ್ತು. ಆದರೆ ಈಗ 12ನೇ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಸಂಚಾರಿ ಆರೋಗ್ಯ ವಾಹನ ಸೇವೆ ಆರಂಭಿಸಿ, ಪ್ರತಿ ಪಂಚಾಯಿತಿಗೊಂದು ಫೀವರ್ ಕ್ಲಿನಿಕ್ ತೆರೆಯಬೇಕೆಂದು ಒತ್ತಾಯಿಸಿ ರೈತಸಂಘದಿಂದ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ ವೈರಸ್ ನೆಪದಲ್ಲಿ ಎಗ್ಗಿಲ್ಲದೆ ನಾಯಿಕೊಡೆಗಳಂತೆ ಸುಮಾರು 336 ನಕಲಿ ಕ್ಲಿನಿಕ್ಗಳು ಆರಂಭವಾಗಿದ್ದು, ಅವರನ್ನು ಕೇಳುವವರೇ ಇಲ್ಲದಾಗಿದೆ. ವಿಧಿ ಇಲ್ಲ ಎನ್ನುವಂತೆ ಆ ಭಾಗಗಳ ಗ್ರಾಮೀಣ ಜನರು ನಕಲಿ ಕ್ಲಿನಿಕ್ಗಳ ಮೊರೆ ಹೋಗಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ.ನ.3: ದಿನಾಂಕ : 6-11-2020 ರಿಂದ 8-11-2020 ರ ವರೆಗೂ 14 ವರ್ಷ 16,18,20 ವರ್ಷ ವಯೋ ಮಿತಿಯ ಕರ್ನಾಟಕ ರಾಜ್ಯದಿಂದ ಸೌತ್ ಜೋನ್ ಅಥ್ಲೆಟಿಕ್ ಕ್ರೀಡಾಕೂಟವನ್ನು ಆಯೋಜಿಸಲು ಕರ್ನಾಟಕ ಅಥ್ಲೆಟಿಕ್ ಅಸೋಷಿಯೇಷನ್ ರವರು ನಮ್ಮ ಜಿಲ್ಲೆಯಲ್ಲಿ ಆಯೋಜಿಸಲು ಅನುಮತಿಯನ್ನು ನೀಡಿದ್ದು, ಅದರಂತೆ ಮೇಲ್ಕಂಡ ದಿನಾಂಕದಲ್ಲಿ ಕ್ರೀಡಾಕೂಟವನ್ನು ನಡೆಸಬೇಕಾಗಿತ್ತು.ಆದರೆ ಕೋವಿಡ್ 19 ಪುದುಚೆರಿಯಲ್ಲಿ ಹೆಚ್ಚಾಗಿ ಇರುವ ಕಾರಣ ನ್ಯಾಷನಲ್ ಸೌತ್ ಜೋನ್ ಕ್ರೀಡಾಕೂಟವನ್ನು ಪುಧುಚೇರಿ ರಾಜ್ಯದ ಅಥ್ಲೆಟಿಕ್ ಅಸೋಷಿಯೇಷನ್ ರವರು ಈ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದ ಪಿಸಿ ಬಡಾವಣೆ ಆಟೋ ನಿಲ್ದಾಣದಲ್ಲಿ 65 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿ, ಆಟೋ ಚಾಲಕರು ತಮ್ಮ ವೈಯಕ್ತಿಕ ಹಾಗೂ ಪ್ರಯಾಣಿಕರ ಸುರಕ್ಷೆ ಕುರಿತಂತೆ ಜಾಗೃತಿವಹಿಸಬೇಕೆಂದು ಕಿವಿ ಮಾತು ಹೇಳಿದರು.ಸ್ಥಳೀಯ ಮುಖಂಡ ಕೋಲಾರ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು ಎಂದರು.ಆಟೋ ಚಾಲಕರ ಸಂಘದ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ತಿಂಗಳಿಗೊಂದು ಕನ್ನಡ ಪುಸ್ತಕ ಖರೀದಿಸಿ, ಕನ್ನಡ ಪುಸ್ತಕ, ಪತ್ರಿಕೆಗಳನ್ನು ನಿಯಮಿತವಾಗಿ ಓದುವ ಮೂಲಕ ಕನ್ನಡದ ಆಸ್ಮಿತೆಯನ್ನು ಕಾಪಾಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಭಾರತ ಸೇವಾದಳ ಜಿಲ್ಲಾ ಘಟಕವತಿಯಿಂದ ಆಯೋಜಿಸಲಾಗಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಕನ್ನಡ ಭಾಷೆ ಮತ್ತು ಸಂಸ್ಕøತಿ, ನೆಲ ಜಲದೊಂದಿಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಬೆಳೆಸಿಕೊಂಡಾಗ ಮಾತ್ರವೇ ಕನ್ನಡ ಸಂಸ್ಕøತಿ, ಅಸ್ಮಿತೆಯನ್ನು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ನಾಗರಿಕರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸುವುದರ ಮೂಲಕ, ಬಾಷಾ ಬೆಳವಣಿಗೆಗೆ ಸಹಕರಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಅಧ ಹಿರಿಮೆ ಇದೆ. ಹೆಚ್ಚಿನ ಸಂಖ್ಯೆಯ ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ‘ನಮ್ಮವ್ವ ಕನ್ನಡತಿ’ ಎಂಬ ಕನ್ನಡ ಗೀತೆಯನ್ನು ಡಾ ವೈ.ಎ.ವೆಂಕಟಾಚಲ ಬಿಡುಗಡೆ ಮಾಡಿದರು. ಉತ್ತಮ ಸಾಹಿತ್ಯದ ಸಾಂಗತ್ಯ ಅಗತ್ಯ ಶ್ರೀನಿವಾಸಪುರ: ಮನುಷ್ಯ ನೈತಿಕವಾಗಿ ಬೆಳೆಯಬೇಕಾದರೆ, ಉತ್ತಮ ಸಾಹಿತ್ಯದ ಸಾಂಗತ್ಯ ಅಗತ್ಯ. ಸುಶ್ರ್ಯಾವ್ಯವಾದ ಕನ್ನಡ ಗೀತೆಗಳು ನಾಡು ನುಡಿಯ ಹಿರಿಮೆಯನ್ನು ಮೆರೆಯುತ್ತವೆ. ಅಂಥ ಗೀತಕಾರರನ್ನು ಗೌರವಿಸುವುದು ಕನ್ನಡಿಗರಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕನ್ನಡ ಪರಿಚಾರಕ ಡಾ. ವೈ.ಎ.ವೆಂಕಟಾಚಲ ಹೇಳಿದರು. ಪಟ್ಟಣದ ವೆಂಕಟೇಶ್ವರ […]