ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೋವಿಡ್ ಹರಡುವಿಕೆಯನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕೋವಿಡ್ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಖಾಸಗಿ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬರದ ಕುಟುಂಬಗಳಿಗೆ ಮಾಸಿಕತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಗ್ರಾಮೀಣ ಪ್ರದೇಶದಲ್ಲೂ ವ್ಯಾಪಕವಾರಿ ಹರಡುತ್ತಿದ್ದು, ಜನತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಸದಸ್ಯೆ ಎಸ್.ಎಂ.ರೂಪ ಕರೆ ನೀಡಿದರು.ಗ್ರಾಮದಲ್ಲಿ ನಿನ್ನೆ ಸಂಜೆ ಗ್ರಾಮದ ಎಲ್ಲಾ ಜನತೆಗೂ ಮಾಸ್ಕ್ ವಿತರಿಸಿ, ಕೋವಿಡ್ ಜಾಗೃತಿ ಮೂಡಿಸಿ ಅವರು ಮಾತನಾಡಿ, ಕೋವಿಡ್ ಮಾರಿಗೆ ಹಳ್ಳಿ,ನಗರವೆಂಬ ಬೇಧವಿಲ್ಲ, ಬಡವರು,ಶ್ರೀಮಂತರು ಎಂಬ ತಾರತಮ್ಯವೂ ಇಲ್ಲ, ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.ಕೋವಿಡ್ 2ನೇ ಅಲೆ ಕೋಲಾರ ಜಿಲ್ಲೆಯಲ್ಲಿ ವ್ಯಾಪಕವಾಗಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ 100 ಹಾಸಿಗೆ ಸಾಮಥ್ರ್ಯದ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು ಎಂದು ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗೆ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕಿತ್ಸಾ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೋಗಿಗಳಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಶನಿವಾರ ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿದರು. ನಿಗದಿತ ಸಮಯ ಮುಗಿದ ಬಳಿಕ ಪಟ್ಟಣದಲ್ಲಿಸಂಚರಿಸುತ್ತಿದ್ದ ಬೈಕ್ ಮತ್ತಿತರ ವಾಹನಗಳನ್ನು ತಡೆದು ಪ್ರಯಾಣದ ಕಾರಣ ಕೇಳಿ ಬಿಡುತ್ತಿದ್ದರು.ಕೆಲವು ವಾಹನ ಚಾಲಕರು ತಾವು ಹೊಂದಿದ್ದ ಪಾಸ್ ತೋರಿಸಿ ಹೊರಟರೆ, ಪಾಸ್ ಇಲ್ಲದವರು ಶಿಸ್ತು ಕ್ರಮವನ್ನು ಎದುರಿಸಬೇಕಾಯಿತು. ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ವಾಹನ ಸಂಚಾರ ವಿರಳವಾಗಿತ್ತು.ಗ್ರಾಮೀಣ ಪ್ರದೇಶದಿಂದ ಅಗತ್ಯ ವಸ್ತು ಖರೀದಿಸಲು ಬೆಳಿಗ್ಗೆಯೇ ಬಂದಿದ್ದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಮ ರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದು ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಗುರುವಾರ ಶ್ರೀರಾಮ ನವಮಿ ಪ್ರಯುಕ್ತ ಏರ್ಪಡಿಸಲಾಗಿದ್ದ, ರಾಮನ ಕುರಿತ ಉಪನ್ಯಾಸ ಮಾಲಿಕೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಷ್ಟರಿಗೆ, ಸಜ್ಜನರಿಗೆ ಮನೋಬಲ ನೀಡುವಲ್ಲಿ, ದುರ್ಮಾರ್ಗಿಗಳ ಮನಃಪರಿವರ್ತನೆಯಲ್ಲಿ, ಎಲ್ಲರಿಗೂ ಸನ್ಮಾರ್ಗ ತೋರುವಲ್ಲಿ ಶ್ರೀರಾಮನ ವ್ಯಕ್ತಿತ್ವ ಅತ್ಯಂತ ಪ್ರಸ್ತುತ. ಇಂತಹ ಅನನ್ಯ ಸಂದೇಶವನ್ನು ಭಕ್ತಿಪಂಥದ ಮೂಲಕ, […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ – ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ , ಕರೋನಾ ಸೋಂಕಿತರಿಗೆ ಧೈರ್ಯ ತುಂಬಿ ಸಾರ್ವಜನಿಕರಿಗೆ ಕರೋನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ ಎಂದು ಮೂಡಿಸಿ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗಣ ಸಭಾಂಗಣದಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕೊರೊನಾ ಭಯದ ನಡುವೆ ಶ್ರೀರಾಮ ನವಮಿಯನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಆಚರಣೆ ಪೂಜೆಗೆ ಸೀಮಿತವಾಗಿತ್ತು.ಪಟ್ಟಣದ ರಾಮ ಮಂದಿರದಲ್ಲಿ ಧರ್ಮದರ್ಶಿ ಕೆ.ಮೋಹನಾಚಾರಿ ರಾಮ ದೇವರ ಪಟಕ್ಕೆ ಪೂಜೆ ಸಲ್ಲಿಸಿ ಪಾನಕ ಪನಿಯಾರ ವಿತರಿಸಿದರು. ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಇದ್ದರು.ಪಟ್ಟಣದ ಹೊರ ವಲಯದಲ್ಲಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ರಾಮ ದೇವರ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಸರಳವಾಗಿ ಮೆರವಣಿಗೆ ಆಚರಿಸಿದರು.ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಬಳಿಕ ಪಾನಕ ಪನಿಯಾರ ವಿತರಿಸಲಾಯಿತು. […]
JANANUDI.COM NETWORK ಕುಂದಾಪುರ,ಎ.21; ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ವಿಶೇಷ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ16.04.2021 ರಂದು ಮಧ್ಯಾಹ್ನ 3.00ಕ್ಕೆ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ. ಪಿ.ವಿ.ಭಂಡಾರಿ, ವೈದ್ಯಕೀಯ ನಿರ್ದೇಶಕರು,ಡಾ ಎ.ವಿ ಬಾಳಿಗ ಆಸ್ಪತ್ರೆ ದೂಡ್ಡಣಗುಡ್ಡೆ ಇವರು ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಅಂಗವಿಕಲತೆ ಮತ್ತು ಅದರ ವಿಧಗಳು, ಬುದ್ಧಿಮಾಂಧ್ಯತೆ ಎಂದರೇನು ಮತ್ತು ಅದಕ್ಕೆ ಕಾರಣಗಳು ಹಾಗೂ ವಿಶೇಷ ಮಕ್ಕಳ ಪಾಲನೆ ಮಾಡುವಲ್ಲಿ ಪೋಷಕರಲ್ಲಿ ಇರಬೇಕಾದ ಕೌಶಲ್ಯಗಳೂಂದಿಗೆ ವಿಕಲತೆಯನ್ನು ಶೀಘ್ರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ 19 ತಡೆಯಲು ಸಹಕರಿಸಿ- ಮುಖ್ಯಾಧಿಕಾರಿ ಡಿ ಶೇಖರ್.ಶ್ರೀನಿವಾಸಪುರ : ಕಡ್ಡಾಯವಾಗಿ ಮಾಸ್ಕ್ ಧರಸಿ ಕೋವಿಡ್ -19 ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಡಿ. ಶೇಖರ್ ರೆಡ್ಡಿ ತಿಳಿಸಿದರು .ಪಟ್ಟಣದ ಸಂತೇ ಮೈದಾನದಲ್ಲಿ ಕೊವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾಸ್ಕ್ ಧರಸದೆ ಇರುವವರಿಗೆ ದಂಡವನ್ನು ವಿಧಿಸಿ ಮಾತನಾಡಿದ ಡಿ . ಶೇಖರ್ ಗ್ರಾಮೀಣ ಪ್ರದೇಶದ ಜನರು ವಿವಿದ ಕೆಲಸ […]

