
ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ.ಅ.27: ಮಾಹಿತಿ ಹಕ್ಕು ಅಧಿ ನಿಯಮದಡಿ ಕೇಳಲಾಗಿದ್ದ ಮಾಹಿತಿ ನೀಡಲು ವಿಫಲವಾದ ಹಿನ್ನೆಲೆಯಲ್ಲಿ, ತಾಲ್ಲೂಕು ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ಎಸ್. ಮಂಜುನಾಥ ಅವರ ವಿರುದ್ಧ ಪೆÇಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ತಾಲ್ಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಸಂಬಂಧಿಸಿದಂತೆ ಸ್ಟಾಂಪ್ ಡ್ಯೂಟಿ ಅಡಿಯಲ್ಲಿ ಬಿಡುಗಡೆಯಾಗಿರುವ ಹಣ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು ಅಗತ್ಯ ಮಾಹಿತಿ ನೀಡುವಂತೆ ಕೋರಿ ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಶಬ್ಬೀರ್ ಅಹಮ್ಮದ್ ಅವರು 2016ರಲ್ಲಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು.ತಾಲ್ಲೂಕು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆಸಿದೆ. ಹರೀಶ್ (9) ಮೃತ ಬಾಲಕ. ಮೃತನ ಅಣ್ಣ ಮಣಿಕಂಠ (13) ಹಾಗೂ ತಾಯಿ ಅನಂದಮ್ಮ (40) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭೇಟಿ: ಸಂಸದ ಎಸ್.ಮುನಿಶಾಮಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ರೂ.1ಲಕ್ಷದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಹಳೆಯ ಮನೆಗಳು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಜನಿಸಿದ ಪ್ರತಿ ನವಜಾತ ಶಿಶುವನ್ನು ಪೆÇೀಲಿಯೋ ವಿರುದ್ಧ ರಕ್ಷಣೆಗೊಳಪಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯ್ ಕುಮಾರ್ ಹೇಳಿದರು.ನಗರದ ಗಾಂಧಿವನದಲ್ಲಿ ಪಲ್ಸ್ ಪೋಲಿಯೊ ಅರಿವು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಅವರ ಆರೋಗ್ಯದ ಹಿತದೃಷ್ಟಿಯಿಂದ ಪೋಷಕರು ಮೊದಲ ಆದ್ಯತೆಯನ್ನು ನೀಡಬೇಕು ಎಂದರು.ಪೋಲಿಯೊ ರಹಿತವಾಗಿ ನಮ್ಮ ದೇಶವನ್ನು ಉಳಿಸಲು ವಿದೇಶಾಂಗ ಸಚಿವಾಲಯ ನಿಯಮಾವಳಿಗಳಿಗೆ ತಿದ್ದುಪಡಿ ತಂದಿದೆ. ಈ ನಿಟ್ಟಿನಲ್ಲಿ ಪೋಲಿಯೊ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ.ಅ.24: ನಾಡಿನ ಸಮಸ್ತ ಜನತೆಗೆ ಕೇಂದ್ರ ಸರ್ಕಾರದ ಮಾಜಿ ಮಂತ್ರಿಗಳಾದ ಶ್ರೀ.ಕೆ.ಹೆಚ್ ಮುನಿಯಪ್ಪ ರವರಿಂದ ಆಯುಧಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳು.ನಾಡ ದೇವತೆ ಚಾಮುಂಡೇಶ್ವರಿ ದೇವಿಯು ಕೊರೋನಾ ಮಹಾಮಾರಿ ಮತ್ತು ಅತಿವೃಷ್ಟಿಯಿಂದ ರಾಜ್ಯಕ್ಕೆ ಮುಕ್ತಿ ನೀಡಿ ಜನತೆಗೆ ಸುಖ, ಶಾಂತಿ, ನೆಮ್ಮದಿ ಮತ್ತು ಸಂಮೃದ್ಧಿ ಜೀವನ ಕರುಣಿಸಲಿ ಎಂದು ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸಿದ್ದಾರೆ.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.ಪಟ್ಟಣದ ವಿಐಪಿ ಸಂಸ್ಥೆಯ ಆವರಣದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಶುಕ್ರವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಅಭ್ಯರ್ತಿ ಚಿನಾದನಂದ ಎಂ ಗೌಡ, ಪದವೀಧರರ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ಜನಪರ ಕಾಳಜಿ ಹಾಗೂ ಬಿಜೆಪಿ ಸರ್ಕಾರದ ಸಾಧನೆ ಅವರಿಗೆ ಶ್ರೀರಕ್ಷೆಯಾಗಿದೆ ಎಂದು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಯಯ್ಯಪ್ಪಲ್ಲಿ ಗ್ರಾಮದಲ್ಲಿ ಶುಕ್ರವಾರ ಗ್ರಾಮ ದೇವತೆಗಳಾದ ಗಂಗಮ್ಮ ಹಾಗೂ ಪುಲೇಕಮ್ಮ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಿಲಾಗಿತ್ತು. ರಾಯಲ್ಪಾಡಿನ ವೆಲ್ಲಾಲ ಸತ್ಯನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ಪೂರೈಸಲಾಯಿತು. ಶಾಸಕ ಕೆ.ಆರ್.ರಮೇಶ್ ಕುಮಾರ್, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕಾರ್ಯಕ್ರದಲ್ಲಿ ಭಾಗವಹಿಸಿದ್ದರು. ಸೇವಾಕರ್ತರಾದ ಬಿ.ಎನ್.ನಾರಾಯಣಸ್ವಾಮಿ, ಡಿಷ್ ಚಂದ್ರಶೇಖರ ರೆಡ್ಡಿ, ಕೃಷ್ಣಾರೆಡ್ಡಿ, ಮುನಿರೆಡ್ಡಿ, ಜಯರಾಮರೆಡ್ಡಿ, ಪ್ರಕಾಶ್, ಬಿ.ಸಿ.ನಾಗೇಶ್, ವರದರೆಡ್ಡಿ, ಕಿರಣ್, ಮುರಳಿ, ಸೋಮಶೇಖರರೆಡ್ಡಿ, ಮಂಜುನಾಥರೆಡ್ಡಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿ, ಹೋಬಳಿ ಮಟ್ಟದಲ್ಲಿ ಅದಾಲತ್ ನಡೆಸಿ ಮಂಜೂರಾತಿ ಪತ್ರ ವಿತರಿಸುತ್ತಿರುವುದರಿಂದ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.ಕೊರೊನಾ ಬಗ್ಗೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆ ಕುರಿತು ಹಗುರವಾಗಿ ಮಾತನಾಡುವುದು ಸರಿಯಲ್ಲ. ಸಮಸ್ಯೆ ಗಂಭೀರವಾಗಿದೆ ಎಂಬುದನ್ನು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಬಡ್ಡಿ ರಹಿತಿ ಸಾಲದ ಮೊತ್ತವನ್ನು ರೂ.50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಸಾಲದ ಹಣದ ಚೆಕ್ ವಿತರಿಸಿ ಮಾತನಾಡಿ, ಜಾತಿ, ಮತ ಹಾಗೂ ಪಕ್ಷ ಭೇದವಿಲ್ಲದೆ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಈವರಿಗೆ 40 […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜಡಿ ಮಳೆಯಿಂದ ಟೊಮೆಟೊ ಬೆಳೆಗೆ ಬಾಧಿಸುತ್ತಿರುವ ಅಂಗಮಾರಿ, ಚುಕ್ಕೆ ರೋಗಕ್ಕೆ ಸೂಕ್ತ ಔಷಧಿ ನೀಡಿ, ಈಗಾಗಲೇ ನಷ್ಟವಾಗಿರುವ ಬೆಳೆಗೆ ಪ್ರತಿ ಎಕರೆಗೆ 1 ಲಕ್ಷರೂ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಂತ ಸಾವಿರಾರು ಹೆಕ್ಟೇರ್ನಲ್ಲಿ ಟೊಮೆಟೊ ಬೆಳೆಯನ್ನು ಉತ್ತಮವಾಗಿ ಬೆಳೆಯಲಾಗಿದೆ. ಆದರೆ ಇತ್ತೀಚೆಗೆ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ಅಂಗಮಾರಿ ಮತ್ತು ಚುಕ್ಕೆ ರೋಗಕ್ಕೆ […]