ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ವಯಸ್ಸಾದ ಜಾನುವಾರು ಹಾಗೂ ಸೀಮೆ ಹಸುವಿನ ಗಂಡು ಕರುಗಳ ಪಾಲನೆ ರೈತರಿಗೆ ಹೊರೆಯಾಗಿ ಪರಿಣಮಿಸುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕ ಉದ್ಘಾಟಿಸಿ ಮಾತನಾಡಿ, ರೈತರು ಕ್ಷೀರೋತ್ಪಾದನೆಯಲ್ಲಿ ವೈಜ್ಞಾನಿಕ ಕ್ರಮ ಅನುಸರಿಸಬೇಕು ಎಂದು ಹೇಳಿದರು.ಹಾಲು ಕರೆಯುವುದು ಸುಲಭದ ಮಾತಲ್ಲ. ಕೈಯಿಂದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಸೊಸೈಟಿಗಳ ಗಣಕೀಕರಣ, ಸಾಮಾನ್ಯ ಜನರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸುವ ಮೈಕ್ರೋಎಟಿಎಂ, ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಸಹಕಾರ ನೀಡಿದ ಬ್ಯಾಂಕಿನ ಸಿಇಒ ರವಿ ಅವರ ಸೇವೆ ಇತರೆ ಸಿಬ್ಬಂದಿಗೆ ಆದರ್ಶವಾಗಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದು, ಇದೀಗ ಮೈಸೂರು ಜಿಲ್ಲಾ ಲೆಕ್ಕಪರಿಶೋಧನಾ ಇಲಾಖೆ ಜಂಟಿ ನಿದೇಶಕರಾಗಿ ವರ್ಗಾವಣೆಗೊಂಡಿರುವ ರವಿ ಅವರನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಫೆ. 27 : ಜಗತ್ತು ನಿರಂತರ ಬದಲಾವಣೆಯಿಂದ ಕೂಡಿದೆ. ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅದರಲ್ಲೂ ಮಾಹಿತಿ ತಂತ್ರಜ್ಞಾನ ನಂತರ ಬದಲಾವಣೆ ಹೆಚ್ಚು ಕೂಡಿದ್ದು ಇದರಿಂದ ಬದಲಾದ ಕಾಲಕ್ಕೆ ಅಗತ್ಯವಾದ ಶಿಕ್ಷಣ ನೀಡಬೇಕಾದುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ. ಆರ್. ಅಶೋಕ್ ಅಭಿಪ್ರಾಯಪಟ್ಟರುಬಂಗಾರಪೇಟೆ ತಾಲ್ಲೂಕಿನ ಹುದುಕುಳ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಕರ್ನಾಟಕ ಜ್ಞಾನ ವಿಜ್ಞಾನ ಜಿಲ್ಲಾ ಸಮಿತಿ ಏರ್ಪಡಿಸಿದ್ದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಾಂಘಿಟಿತ ಪ್ರಯತ್ನ ನಡೆಸಬೇಕು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ್ದ ಅವರು, ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೋಲಾರ ಜಿಲ್ಲೆ ನೀರಿನ ಕೊರತೆ ಎದುರಿಸುತ್ತಿದೆ. ಸಮಸ್ಯೆ ನಿವಾರಣೆಗೆ ಕೆ.ಸಿ.ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸಲಾಗುತ್ತಿದೆ. ಆದರೆ ಆ ನೀರನ್ನು 3ನೇ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ಶ್ರೀನಿವಾಸಪುರ ತಾಲ್ಲೂಕು ಮಾವಿನ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಸ ವಿಲೇವಾರಿಗೆ ಸೂಕ್ತವಾದ ಸ್ಥಳ ಗುರುತಿಸಿ, ಕಸ ವಿಲೇವಾರಿ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸಬೇಕು. ಸ್ಮಶಾನ ಒತ್ತುವರಿಯನ್ನು ತೆರವುಗೊಳಿಸಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವಿನ ಹೂ ರಕ್ಷಣೆಗೆ ಮಾವು ಬೆಳೆಗಾರರು ವಿಶೇಷ ಕಾಳಜಿ ವಹಿಸಬೇಕು ಎಂದು ಹೊಗಳಗೆರೆ ತೋಟಗಾರಿಕಾ ಅಭಿವೃದ್ಧಿ ಹಾಗೂ ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್.ಕೆ.ರಾಮಚಂದ್ರ ಹೇಳಿದರು.ದಳಸನೂರು ಗ್ರಾಮದ ಸಮೀಪ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ ಅವರ ಮಾವಿನ ತೊಟದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿ, ನೈಸರ್ಗಿಕ ವಿಕೋಪ ಸಂಭವಿಸಿದಾಗ, ಇರುವ ಫಸಲನ್ನು ಜೋಪಾನವಾಗಿ ನೋಡಿಕೊಂಡಲ್ಲಿ ನಷ್ಟದ ಪ್ರಮಾಣ ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.ಮಾವಿನ ಹೀಚು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿರುವ ಪ್ರತಿಯೊಬ್ಬರು ಗ್ರಾಮಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಬೇಕೆಂದು ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ತಿಳಿಸಿದರು.ತಾಲ್ಲೂಕಿನ ನೆಲವಂಕಿ ಗ್ರಾಮ ಪಂಚಾಯಿತಿಯ ನವೀಕೃತ ಕಟ್ಟಡದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿಂಬಾಲ ಅಶೋಕ್, ಚುನಾವಣೆಗಳಲ್ಲಿ ಗೆಲ್ಲುವ ಮುಂಚೆ ನಾನು ಆ ಪಕ್ಷ, ಈ ಪಕ್ಷ ಎಂದು ಇರಬೇಕು, ಚುನಾವಣೆಯಲ್ಲಿ ಗೆದ್ದ ನಂತರ ಎಲ್ಲಾ ಪಕ್ಷದ ಎಲ್ಲಾ ಸದಸ್ಯರು ಒಗ್ಗಾಟ್ಟಾಗಿ ಗ್ರಾಮಗಳ ಅಭಿವೃದ್ದಿಗೆ ಹೆಚ್ಚು ಆಧ್ಯತೆ ನೀಡಿ ಗ್ರಾಮಗಳ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೇಸಿಗೆ ಸಮೀಪಿಸುತ್ತಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು ಸ್ವಚ್ಚತೆ, ಬೀದಿ ದೀಪ, ನರೇಗಾ ಕಾಮಗಾರಿಗಳು, ಪಂಚಾಯಿತಿ ಎಲ್ಲಾ ಹಳ್ಳಿಗಳಿಗೆ ಪಕ್ಷ ಬೆದವನ್ನು ಮರೆತುಮೂಲಭೂತ ಸೌಲಭ್ಯಗಳಿಗೆ ಅಧ್ಯತೆ ನೀಡೋಣ ಎಂದು ನೆಲವಂಕಿ ಗ್ರಾಮ ಪಂಚಾಯಿತಿ ಅಧ್ಯಕ್ಷಿಣಿ ಗೌತಮಿ ಮುನಿರಾಜು ತಿಳಿಸಿದರು.ತಾಲ್ಲೂಕಿನ ನೆಲವೆಂಕಿ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಅಧ್ಯಕ್ಷಣಿ ಗೌತಮಿ ಮುನಿರಾಜ್ ಅಧ್ಯಕ್ಷತೆಯಲ್ಲಿ ಮೊದಲ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮಗಳಲ್ಲಿ ಕುಡಿಯುವ ನೀರು ತೊಂದರೆಯಾಗದಂತೆ ಎಲ್ಲಾ ಗ್ರಾಮಗಳಿಗೂ ಒದಗಿಸೋಣ. ಸ್ವಚ್ಚತೆ, ಹಾಗೂ ಪಂಚಾಯಿತಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಆಶಾ ಕಾರ್ಯಕರ್ತೆಯರು ಕಿವಿ ಆರೋಗ್ಯ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಕಿವಿ, ಮೂಗು ಹಾಗೂ ಗಂಟಲು ತಜ್ಞೆ ಡಾ. ಪುಷ್ಪಲತಾ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನಾ ಯೋಜನೆಯಡಿ ಬುಧವಾರ ಆಶಾ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಿವಿ ಮಾನವನ ಒಂದು ಪ್ರಮುಖ ಅಂಗ. ಶ್ರವಣ ದೋಷ ಇದ್ದಲ್ಲಿ ಹಲವು ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಹೇಳಿದರು.ಗ್ರಾಮೀಣ ಪ್ರದೇಶದಲ್ಲಿ […]

