
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು : ಶಾಸಕ ಕೆ.ಅರ್.ರಮೇಶ್ ಕುಮಾರ್ ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮದಲ್ಲಿ ರೂ.21 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಎನ್ಆರ್ಐಜಿಯಿಂದ ರೂ.18 ಲಕ್ಷ ಹಾಗೂ ಶಾಸಕರ ಅನುದಾನದಿಂದ ರೂ.7 ಲಕ್ಷ ನೀಡಲಾಗಿದೆ. ಮುಂದೆ ಸಭೆಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ವಿಶಾಲವಾದ ಸಭಾಂಗಣ ನಿರ್ಮಿಸಲಾಗುವುದು ಎಂದು ಹೇಳಿದರು. ಇಂದಿನ ಪರಿಸ್ಥಿತಿಯಲ್ಲಿ […]

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ, ಹೆಣ್ಣು ಮಕ್ಕಳು ಕಾನೂನು ರಕ್ಷಣೆ ಪಡೆಯಬೇಕು. ಸಮಾಜಕ್ಕೆ ಹೆದರಿ ದೌರ್ಜನ್ಯವನ್ನು ಸಹಿಸಬಾರದು : ಜಎಂಎಫ್ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಚ್.ಆರ್.ದೇವರಾಜು ಶ್ರೀನಿವಾಸಪುರ: ಹೆಣ್ಣು ಮಕ್ಕಳು ಕಾನೂನು ರಕ್ಷಣೆ ಪಡೆಯಬೇಕು. ಸಮಾಜಕ್ಕೆ ಹೆದರಿ ದೌರ್ಜನ್ಯವನ್ನು ಸಹಿಸಬಾರದು ಕಾನೂನು ರಕ್ಷಣೆ ಪಡೆಯಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಚ್.ಆರ್.ದೇವರಾಜು ಹೇಳಿದರು. ಪಟ್ಟಣದ ಸರ್ಕಾರಿ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ […]

ವರದಿ ಶಬ್ಬೀರ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಅಂತರ್ಜಲ ವೃದ್ಧಿಗೆ ಮೊದಲ ಆದ್ಯತೆ ನೀಡಬೇಕು ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಅಂತರ್ಜಲ ಕಚೇರಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಅಂತರ್ಜಲ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯ ಮುನಿಸು ಜೀವ ಸಂಕುಲಕ್ಕೆ ಶಾಪವಾಗಿ ಪರಿಣಸಿದೆ. ಮನುಷ್ಯನ ಸ್ವಾರ್ಥ ಸಮಸ್ಯೆಗಳನ್ನು ತಂದೊಡ್ಡಿದೆ. 1800 ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ ಎಂದು ಹೇಳಿದರು. […]

ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಇಂದಿರಾ ನಗರ ಬಡಾವಣೆ ನಿವಾಸಿಗಳು ಗುರುವವಾರ ಕುಡಿಯುವ ನೀರು ಪೂರೈಸುವಂತೆ ಪುರಸಭೆ ಅಧಿಕಾರಿಗಳನ್ನು ಆಗ್ರಹಿಸಿ ಪಂಪ್ ಹೌಸ್ ಎದುರು ಪ್ರತಿಭಟನೆ ನಡೆ ಬಡವಾಣೆಗೆ 8 ತಿಂಗಳಿಂದ ಅಗತ್ಯ ಪ್ರಮಾಣದ ನೀರು ಸರಬರಾಜಾಗುತ್ತಿಲ್ಲ. ಕೂಲಿ ಮಾಡುವ ಜನರು ದುಡಿದ ಅರ್ಧಷ್ಟು ಹಣವನ್ನು ನೀರು ಖರಿದಿಸಲು ಬಳಸಬೇಕಾಗಿದೆ. ನೀರು ಪೂರೈಸುವಂತೆ ಪುರಸಭೆ ಅಧಿಕಾರಿಗಳಲ್ಲಿ ಪದೇ ಪದೇ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಡವಣೆಯ ಮಹಿಳೆಯರು ದೂರಿದರು. […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನಯಲ್ದೂರಿನ ಶ್ರೀ ಶ್ರೀನಿವಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ವರ್ಷದ ವಿದ್ಯಾರ್ಥಿಗಳಿಗೆ ಎ.ಪಿ.ಜೆ. ಅಬ್ದುಲ್ ಕಲಾಂ ರಸಪ್ರಶ್ನೆಕಾರ್ಯಕ್ರಮ ಶ್ರೀನಿವಾಸಪುರ, ತಾಲ್ಲೂಕಿನಯಲ್ದೂರಿನಲ್ಲಿರುವ ಶ್ರೀ ಶ್ರೀನಿವಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ವರ್ಷದ ಎ.ಪಿ.ಜೆ. ಅಬ್ದುಲ್ ಕಲಾಂ ರಸಪ್ರಶ್ನೆಕಾರ್ಯಕ್ರಮವನ್ನುಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿತಾಲ್ಲೂಕಿನ ವಿವಿಧ 11 ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರುರಸಪ್ರಶ್ನೆಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿತಾಲ್ಲೂಕಿನ ವಿವಿಧ 11 ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರುರಸಪ್ರಶ್ನೆಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾಗವಹಿಸಿದ ಶಾಲೆಗಳ ಪೈಕಿ ಶ್ರೀ ಮಾರುತಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಫಲಾನುಭವಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು : ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ವಿ.ಶ್ರೀನಿವಾಸ್. ಪಟ್ಟಣದ ಸಣ್ಣ ಕೈಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ ನಿಧಿಯಿಂದ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿ, ಮುಖ್ಯವಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪೂರಕವಾದ ತರಬೇತಿ ಪಡೆದುಕೊಳ್ಳಬೇಕು. ಅದಕ್ಕೆ ಅಗತ್ಯವಾದ ಉಪಕರಣಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು. ಸಮಾರಂಭದಲ್ಲಿ ಮಹಿಳೆಯರಿಗೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ರಾಜಕಾರಣಿಗಳ ನಿರ್ಲಕ್ಷ್ಯದಿಂದಾಗಿ ಸಮಗ್ರ ನೀರಾವರಿ ಯೋಜನೆ ನೆನೆಗುದಿಗೆ ಬಿದ್ದಿದೆ :ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಆಪಾದಿಸಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲೆಗೆ ಸಮಗ್ರ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಮಂಗಳವಾರ ಏರ್ಪಡಿಸಿದ್ದ ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 1800 ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಮಳೆಯ ಪ್ರಮಾಣ ಕುಸಿದಿದೆ. ಇದರಿಂದ ಕೃಷಿ ಅಳಿವಿನ ಹಾದಿ ಹಿಡಿದಿದೆ. ಶುದ್ಧ ಕುಡಿಯುವ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಆಕರ್ಷಿಸಿದ ಕೋಲಾರದ ತರಕಾರಿಗಳು ಕೋಲಾರ : ಬೆಂಗಳೂರಿನ ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ವತಿಯಿಂದ ಫ್ರೆ 5 ರಿಂದ 8 ರವರೆಗೂ ರಾಷ್ಟ್ರೀಯ ತೋಟಗಾರಿಕೆ ಮೇಳ-2020 ವನ್ನು ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಕೋಲಾರದ ತರಕಾರಿಗಳು, ಹಣ್ಣು ಮತ್ತು ಹೂವುಗಳನ್ನು ಪ್ರದರ್ಶಿಸಲಾಯಿತು. ಇವು ಸಾರ್ವಜನಿಕರನ್ನು ಹೆಚ್ಚು ಆಕರ್ಷಿಸಿದವು. ಮೇಳದಲ್ಲಿ ಕೋಲಾರದ ಕೃಷಿ ವಿಜ್ಞಾನ ಕೇಂದ್ರದ ಸ್ಟಾಲ್ನಲ್ಲಿ ಪಾಲಿಹೌಸ್ ತಾಂತ್ರಿಕತೆಯಲ್ಲಿ ಬೆಳೆದ ಕ್ಯಾಪಿಕ್ಸಂ ತಳಿಗಳಾದ ಇನ್ಸ್ಪಿರೇಶನ್, ಬಚಟ ಮತ್ತು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಜಂತುಹುಳು ನಿವಾರಣೆಗಾಗಿ ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ – ಸಿ.ಎಸ್ ವೆಂಕಟೇಶ್ ಕೋಲಾರ:ಜಂತುಹುಳು ನಿವಾರಣೆಗಾಗಿ ವೈಯಕ್ತಿಕ ಸ್ವಚ್ಚತೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂದು ಜಿಲ್ಲಾ ಪಂಚಾಯತ್ನ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಇವರ ವತಿಯಿಂದ ಸರ್ಕಾರಿ ಮಹಿಳಾ ಕಾಲೇಜು ಕೋಲಾರ ಇಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ -10 ಫೆಬ್ರವರಿ 2020 ರ ಕಾರ್ಯಕ್ರಮವನ್ನು […]