
ಶ್ರೀನಿವಾಸಪುರ : ಎಲ್ಐಸಿ ಕಂಪನಿಯು ಸಾರ್ವಜನಿಕರ ರಕ್ಷಣೆಗೆ ನಿಂತಿದೆ. ಖಾಸಗಿ ಕಂಪನಿಗಳಿಂದ ಸಾರ್ವಜನಿಕರು ಮೋಸ ಹೋಗುತ್ತಿದ್ದು ಅದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಶ್ರೀನಿವಾಸಪುರ ಶಾಖೆ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.ಪಟ್ಟಣದ ಶ್ರೀನಿವಾಸಪುರ ಎಲ್ಐಸಿ ಉಪಶಾಖೆಯಲ್ಲಿ ಶುಕ್ರವಾರ ತಾಲೂಕಿನ ಪ್ರತಿನಿದಿಗಳ ಸಭೆಗೆ ಚಾಲನೆ ನೀಡಿ ಮಾತನಾಡಿದರು.ದೇಶದಲ್ಲಿ ಅತಿ ದೊಡ್ಡ ಇನ್ಸೋರೆನ್ಸ್ ಕಂಪನಿ ಇದಾಗಿದ್ದು, ಮಾರುಕಟ್ಟೆಯಲ್ಲಿ ಹತ್ತು ಹಲವಾರು ಕಂಪನಿಗಳು ಇದ್ದು ಅದರಲ್ಲಿ ಎಲ್ಐಸಿ ಕಂಪನಿಯ 64.02% ಕೋಟಿ ಹೂಡಿಕೆ ಇದೆ. ಉಳಿದವು ಬೇರೆ ಕಂಪನಿಗಳಿದ್ದು, ಈ ಒಂದು […]

ಶ್ರೀನಿವಾಸಪುರ : ಮಾನಸಿಕ ಹಾಗು ದೈಹಿಕವಾಗಿ ಸದೃಡವಾಗಲು ಸಾದ್ಯ ಇದಲ್ಲದೆ ಪ್ರತಿ ದಿನ ಭಜನೆ, ದೇವರಸ್ಮರಣೆ, ದ್ಯಾನ, ಮಾಡುವುದರಿಂದ ಆರೋಗ್ಯ ಜೀವನವನ್ನು ನಡೆಸಬಹುದಾಗಿದೆ ಎಂದು ಕೈವಾರ ಕ್ಷೇತ್ರ ಮಠದ ಧರ್ಮಾಧಿಕಾರಿ ಡಾ|| ಎಂ.ಎರ್. ಜಯರಾಮ್ ನುಡಿದರು.ಪಟ್ಟಣದ ಕಟ್ಟೆಕೆಳಗಿನ ಪಾಳ್ಯದಲ್ಲಿ ಶ್ರೀ ನೀಳಾ ಮತ್ತು ಭೂನೀಳಾ ಸಮೇತ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಯ ನೂತನ ಶಿಲಾ ಬಿಂಬ ಮತ್ತು ಅಭಯಾಂಜನೇಯಸ್ವಾಮಿ ಮತ್ತು ಮಹಾಗಣಪತಿ ಮತ್ತು ಗರುಡ , ಜಯವಿಜಯ ದ್ವಾರಪಾಲಕ ನೂತನ ಶಿಲಾ ಬಿಂಬಗಳ ಪ್ರತಿಷ್ಠಾಪನೆ ಮತ್ತು […]

ಶ್ರೀನಿವಾಸಪುರ : ತಾಲ್ಲೂಕಿನ ತೆರ್ನಹಳ್ಳಿ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ಟಿ.ಎ.ನಾರಾಯಣಸ್ವಾಮಿ , ಯಶೋದಮ್ಮ ದಂಪತಿಯ ಪುತ್ರನಾದ ಟಿ.ಎನ್.ಜಯಶಂಕರ್ ರವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜನೀಯರಿಂಗ್ ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಾಕ ಡಾ.ಪಿ.ಎಸ್.ನಾಗರಾಜ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ ಎಕ್ಸಪರಿಮೆಂಟಲ್ ಇನ್ವೆಸ್ಟಿಗೇಷನ್ಸ್ ಆನ್ ಫ್ಯಬರ್ ರೀಇನ್ಫೋಸ್ರ್ಟ್ ಜಿಯೋ ಪಾಲಿಮಾರ್ ಕಾಂಕ್ರಿಟ್ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ಪ್ರಧಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀನಿವಾಸಪುರ : ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳ ಬಗ್ಗೆ ಇತ್ತೀಚಿಗೆ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ 57 ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆ ಹಚ್ಚಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದ್ವಿಚಕ್ರ ವಾಹನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಬಿ.ನಿಖಿಲ್ ಮಾಹಿತಿ ನೀಡಿದರು.ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ , ಸುದ್ದಿಗಾರರೊಂದಿಗೆ ಮಾತನಾಡಿದ ಅವರುಪಬ್ಲಿಕ್ ಸೇಫ್ಟಿ ಆಕ್ಟ್ ಪ್ರಕಾರ 50 ಜನರಿಕ್ಕಿಂತ ಹೆಚ್ಚು ಸೇರುವ ಅಂಗಡಿಗಳಲ್ಲಿ ಮಾಲೀಕರು ಸಿಸಿ ಕ್ಯಾಮಾರ ಖಂಡಿತ ಅಳವಡಿಸಬೇಕಾಗಿದೆ. […]

ಕೋಲಾರ,ಆ.07: ನಗರದಲ್ಲಿ ಮಂಗಳವಾರ ಸಂಜೆ ಸುರಿದ ಬಾರಿ ಮಳೆಗೆ ಕೋಲಾರ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಅರಹಳ್ಳಿ ಗೇಟ್ ರೈಲ್ವೆ ಬ್ರಿಡ್ಜ್ ಬಳಿ ಮಳೆಯ ನೀರು ಹೊರಗಡೆ ಹೋಗದೇ ನಿಂತಿದ್ದರಿಂದಾಗಿ ಅ ಭಾಗದಲ್ಲಿ ಸಂಚರಿಸುವ ಸಾರ್ವಜನಿಕವರಿಗೆ ತೀವ್ರ ತೊಂದರೆ ಅನುಭವಿಸಬೇಕಾಯಿತು.ಕೂಡಲೇ ಶಾಸಕ ಕೊತ್ತೂರು ಮಂಜುನಾಥ್ ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿ ರೈಲ್ವೆ ಬ್ರಿಡ್ಜ್ ಬಳಿಯ ಮಳೆ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು ಬುಧವಾರ ಬೆಳಗ್ಗೆ ಅಧಿಕಾರಿಗಳು ಪೈಪ್ ಗಳಿಗೆ ಅಡ್ಡಲಾಗಿದ್ದ ಕಸಕಡ್ಡಿ, ಪ್ಲಾಸ್ಟಿಕ್ […]

ಕೋಲಾರ,ಆ.07: ಡಾ.ಬೀರೆಗೌಡ ವೈ.ಸಿ. ಅವರ ಅಭಿಪ್ರಾಯದ ಪ್ರಕಾರ, ತಾಯಂದಿರಿಂದ ಹಸುಗೈಯುವಿಕೆ (ಬ್ರೀಸ್ಟ್ಫೀಡಿಂಗ್) ಹಾಗೂ ಎಲ್ಲಾ ಜನರು ಸಾತ್ತ್ವಿಕ ಆಹಾರ ಪದ್ಧತಿಯನ್ನು ಅನುಸರಿಸುವುದು ಭವಿಷ್ಯದ ರಾಮರಾಜ್ಯ (ಆದರ್ಶ ರಾಜ್ಯ)ವನ್ನು ಇಡೀ ವಿಶ್ವದಲ್ಲಿ ಸೃಷ್ಟಿಸಲು ಸಹಾಯಕವಾಗಬಹುದು. ದೇಶ ನಿರ್ಮಾಣದ ಮೂಲ ಅಡಿಗಲ್ಲು ಶಿಶು ಹುಟ್ಟಿದ ಕ್ಷಣದಿಂದಲೇ ಆರಂಭವಾಗುತ್ತದೆ ಎಂಬುದನ್ನು ಎಲ್ಲ ನೀತಿನಿರ್ಮಾತಿಗಳು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಪ್ರತಿಯೊಂದು ತಾಯಿಯು ತಮ್ಮ ಮಗುವಿಗೆ ಹಸುಗೈಯುವಿಕೆಯನ್ನು (ಬ್ರೀಸ್ಟ್ಫೀಡಿಂಗ್) ಉತ್ತೇಜಿಸಲು ಮತ್ತು ಬೆಂಬಲಿಸಲು ಪ್ರೋತ್ಸಾಹಿಸಬೇಕು ಎಂಬುದು ಅತ್ಯಂತ ಅಗತ್ಯವಾಗಿದೆ. ಇದು ನಡೆದಿದೆ ಎಂದರೆ, ಪ್ರಸ್ತುತ […]

ಶ್ರೀನಿವಾಸಪುರ : ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಬುಧವಾರ ತ್ಯಾಗರಾಜ ಬಡವಾಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೈರೇಗೌಡರವರ ವರ್ಗಾವಣೆ ರದ್ದುಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಿ ಮಾತನಾಡಿದರು.ಪ್ರಸ್ತುತ ಈ ಶಾಲೆಯಲ್ಲಿ ಎಲ್ ಕೆ ಜಿ ಯಿಂದ 8 ನೇತರಗತಿಯವರಿಗೂ 520 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಈ ಶಾಲೆಗೆ ಮುಖ್ಯ ಶಿಕ್ಷಕ ಎಂ.ಬೈರೇಗೌಡರು ಹಗಲಿರಳು ಶ್ರಮವಹಿಸಿ ಮಾದರಿ ಶಾಲೆಯನ್ನಾಗಿ ರೂಪಿಸಿದ್ದಾರೆ. ಈ ಶಾಲೆಗೆ ರಾಜ್ಯ ಮಟ್ಟದ ಸ್ವಾಭಿಮಾನಿ ಸಾರ್ವಜನಿಕ ಶಾಲಾ ಪ್ರಶಸ್ತಿ ಹಾಗೂ ಸ್ವಚ್ಛ […]

ಶ್ರೀನಿವಾಸಪುರ : ಸರ್ಕಾರಿ ಸೇವೆ ಸೇರಿದಾಗ ವರ್ಗಾವಣೆ ಹಾಗು ನಿವೃತ್ತಿ ಎಂಬ ಈ ಎರೆಡು ವಿಷಯಗಳು ಗ್ಯಾರಂಟಿ . ಆದರೆ ಇವೆರಡರ ನಡುವಿನ ಅವಧಿಯಲ್ಲೆ ಹೇಗೆ ಕಾರ್ಯನಿರ್ವಹಿಸಿದ್ದೇವೆ ಎನ್ನುವುದು ಬಹಳ ಮುಖ್ಯವಾಗಿರುತ್ತದೆ ಎಂದು ಸನ್ಮಾನವನ್ನು ಸ್ವೀಕರಿಸಿ ಪ್ರಧಾನ ನ್ಯಾಯಾಯದೀಶ ಬಿ.ಕೆ.ಮನು ಅಭಿಪ್ರಾಯಪಟ್ಟರು.ಪಟ್ಟಣದ ನ್ಯಾಯಾಯಲದ ಆವರಣಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ಮಂಗಳವಾರ ನಡೆದ ಬೀಳ್ಕೊಡಿಗೆ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಕೆಲವೊಮ್ಮೆ ನ್ಯಾಯಾಧೀಶರು ವಕೀಲರ ಮೇಲೆ ಹೆಚ್ಚಿನ ಒತ್ತಡ ಹಾಕುತ್ತಿರುತ್ತೇವೆ. ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ […]