
ಕೋಲಾರ,ಜೂ.07: ನೀರಾವರಿ ಯೋಜನೆ, ಯುಕವರಿಗೆ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಮೊದಲ ಆಧ್ಯತೆಯನ್ನು ನೀಡುವುದಾಗಿ ಸಂಸದ ಮಲ್ಲೇಶ್ಬಾಬು ಹೇಳಿದರು.ಮೊದಲ ಬಾರಿಗೆ ಸಂಸತ್ ಪ್ರವೇಶಿಸಿ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೋಲಾರ ಜನತೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ 5 ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದರೆ ಸೂಕ್ತ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ, ಅವರ ಜೊತೆ ಇದ್ದು ಹೇಗೆ ಕೆಲಸ […]

ಶ್ರೀನಿವಾಸಪುರ : ಗುರುವಾರ ಮದ್ಯಾಹ್ನ ಒಂದುವರೆ ಗಂಟೆಗೂ ಹೆಚ್ಚು ಸಮಯ ಬಿದ್ದ ಮಳೆ ಯಿಂದಾಗಿ ಪಟ್ಟಣದ ಚರಂಡಿ ನೀರು, ಹಾಗು ಮಳೆಯ ನೀರು ತಗ್ಗು ಪ್ರದೇಶಗಳ ರಸ್ತೆಗಳು ಮನೆಗಳು ಕೊಳಚೆ ನೀರಿನಿಂದ ತುಂಬಿತಳುಕುತ್ತಿತ್ತು. ಈ ವಸ್ತು ಸ್ಥತಿಯನ್ನು ಕಂಡ ಸಾರ್ವಜನಿಕರು ಜನಪ್ರತಿನಿದಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದ ಪ್ರಸಂಗಗಳು ನಡೆಯುತ್ತಿತ್ತು.ಅಲ್ಲದೆ ಮಳೆ ನೀರು ಹಾಗೂ ಚರಂಡಿ ನೀರು ರಸ್ತೆ ಉದ್ದಗಲಕ್ಕೂ ಹರಿಯುವ ನೀರು ದ್ವಿಚಕ್ರ ವಾಹನ ಸವಾರರಿಗೂ, ಓಡಾಡುವ ಸಾರ್ವಜನಿಕರಿಗೂ ರಸ್ತೆ ಯಾವುದೂ, ಗುಂಡಿ ಯಾವುದು, ಚರಂಡಿ […]

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಸಮಯದಲ್ಲಿ ಪುರಸಭೆ ಮುಖ್ಯಾಧಿಕಾರಿ ಗೋಪಾಲ್ನಾಯಕ್ ಮಾತನಾಡಿ ಪರಿಶುದ್ದ ಗಾಳಿ ಮಾನವನ ಆರೋಗ್ಯಕ್ಕೆ ಮೂಲಭೂತ ಅಗತ್ಯಗಳಲ್ಲಿ ಒಂದಾಗಿದೆ ಎಂದು ಹೇಳುತ್ತಾ, ಸಸಿಗಳನ್ನು ರಕ್ಷಿಸಿಸುವುದರಿಂದ ಪರಿಸರ ರಕ್ಷಣೆಯಾಗಿ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದರು. ಇಂದು ಪರಿಸರಮಾಲಿನ್ಯದಿಂದ ಅನೇಕ ರೋಗರುಜಿನುಗಳು ಹರಡುತ್ತಿದೆ ಎಂದರು . ಪರಿಸರ ಮಾಲಿನ್ಯದಿಂದ ಸಂಭವಿಸುವ ಅನೇಕ ಕಾಯಿಲೆಗಳನ್ನು ತಪ್ಪಿಸಲು ಸೂಕ್ತ ರೀತಿಯಲ್ಲಿ ಪರಿಸರ ನಿರ್ವಹಣೆ ಮಾಡಬೇಕಿದೆ. ಆದ್ದರಿಂದ ಉತ್ತಮ […]

ಕೋಲಾರ: ಜುಲೈ 1ರ ಪತ್ರಿಕಾ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಯನಿರತ ಪತ್ರಕರ್ತರು ಹಾಗೂ ಕುಟುಂಬ ಸದಸ್ಯರಿಗೆ ಒಂದು ದಿನದ ಕ್ರೀಡಾ ಹಬ್ಬವನ್ನು ಆಯೋಜಿಸಲಾಗಿದೆ. ಪುರುಷ ಪತ್ರಕರ್ತರಿಗೆ ಕ್ರಿಕೆಟ್, ಕಬಡ್ಡಿ ಹಾಗೂ ಹಗ್ಗಜಗ್ಗಾಟ ಹಾಗೂ ಪತ್ರಕರ್ತರ ಕುಟುಂಬದ ಸದಸ್ಯರಿಗೆ ಹಾಗೂ ಮಕ್ಕಳಿಗೆ ಮ್ಯೂಸಿಕಲ್ ಚೇರ್, ಮಡಕೆ ಒಡೆಯುವ ಸ್ಪರ್ಧೆ, ಮಡಕೆಯಲ್ಲಿ ಚೆಂಡು ಹಾಕುವ ಸ್ಪರ್ಧೆ ಮತ್ತು ಬಾಯಿಯಲ್ಲಿ ಚಮಚ ಇಟ್ಟುಕೊಂಡು ಅದರಲ್ಲಿ ನಿಂಬೆಹಣ್ಣು ಇಟ್ಟು ನಡೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವ […]

ಕೋಲಾರ.ಜೂ,05: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿ ವರ್ಷದಂತೆ ಈ ಬಾರಿಯೂ ಜುಲೈ 1 ರಂದು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಪತ್ರಕರ್ತರ ಮಕ್ಕಳು 2023 -2024 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಹಾಗೂ ಯಾವುದೇ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜೂನ್ 10 ರೊಳಗಾಗಿ […]

ಕೋಲಾರ:- ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಂಕಲ್ಪವಾದರೆ ಮಾತ್ರವೇ ಸಮಾಜದಲ್ಲಿ ಉತ್ತಮ ಆರೋಗ್ಯ, ಮಾಲಿನ್ಯ ಮುಕ್ತ ವಾತಾವರಣ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಜಗದೀಶ್ ತಿಳಿಸಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಪ್ರತಿಯೊಬ್ಬರೂ ಕನಿಷ್ಟ ಒಂದೊಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡೋಣ ಇದರಿಂದ ಪಕ್ಷಿಗಳ ಕಲರವ ಕೇಳಬಹುದು, ನೀಲಗಿರಿ ನಾಶಪಡಿಸುವ ಮೂಲಕ ಅಂತರ್ಜಲ […]

ಶ್ರೀನಿವಾಸಪುರ : ಕಳೆದ 40 ದಿನಗಳ ಹಿಂದೆ ಲೋಕಸಭಾ ಚುನವಾಣೆಯ ಮತದಾನ ನಡೆದಿದ್ದು, ಮಂಗಳವಾರ ನಡೆದ ಮತ ಎಣಿಕೆಯ ವೀಕ್ಷಣೆ ಗಾಗಿ ನಾಗರೀಕರು ತಮ್ಮ ತಮ್ಮ ಮನೆಗಳಲ್ಲಿನ ಟಿವಿ ಪರದೆಯ ಮುಂದೆ ಕುಳಿತು ಕೇಂದ್ರದಲ್ಲಿ ಎನ್ಡಿಎ ಮೈತ್ರಿಕೂಟ ಆಡಳಿತ ನಡೆಸುತ್ತದಯೇ ಅಥವಾ ಇಂಡಿ ಮೈತ್ರಿಕೂಟ ಆಡಳಿತ ನಡೆಸುತ್ತದಯೇ ಎಂಬುದನ್ನ ಕುಟುಂಬದ ಸದಸ್ಯರೊಂದಿಗೆ ಚರ್ಚೆ ಮಾಡಿಕೊಳ್ಳುತ್ತಿದ್ದು ಕೇಳಿಬಂತು.ಲೋಕಸಭಾ ಚುನವಾಣೆ ಹಾಗು ನೆರೆಯ ಆಂದ್ರದ ವಿಧಾನ ಸಭಾ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸಿಸುವ ಸಲುವಾಗಿ ಸಾರ್ವಜನಿಕರು ಟಿವಿ ಮುಂದೆ ಇನ್ನು ಕೆಲವರು […]

ಕೋಲಾರ ಲೋಕಸಭಾ ಚುನಾವಣೆ-2024 ಲೋಕಸಭಾ ಚುನಾವಣೆ: ಮತ ಎಣಿಕೆ ಸುಸೂತ್ರ: ಗೆದ್ದ ಅಭ್ಯರ್ಥಿಗೆ ಜೈಕಾರ ಎಣಿಕೆ ಕೇಂದ್ರದ ಸುತ್ತಮುತ್ತ ಜನಜಂಗುಳಿಕೋಲಾರ : ನಗರದ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಮಂಗಳವಾರ ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಕಾಲೇಜಿನ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ 21 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು.ಬೆಳಿಗ್ಗೆ 7 ಗಂಟೆ ಸುಮಾರಿಗೆ ಕೇಂದ್ರದ ಬಳಿ ಬೆರಳೆಣಿಕೆ ಜನರಿದ್ದರು. ಸಮಯ ಕಳೆದಂತೆ ಜನಜಂಗುಳಿ […]

ಶ್ರೀನಿವಾಸಪುರ : ಪಟ್ಟಣದಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಮತದಾನವು ಶಾಂತಿಯುತವಾಗಿ ನಡೆಯಿತು. ಶೇಕಡ 96.44 % ರಷ್ಟು ನಡೆಯಿತು.ಈ ಸಮಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ|| ವೇಣುಗೋಪಾಲ್ ಮಾತನಾಡಿ ವೈ.ಎ.ಎನ್ ರವರು ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂತಹ ವ್ಯಕ್ತಿಯನ್ನು ಚುನಾವಣೆಯಲ್ಲಿ ಎಲ್ಲಾ ಶಿಕ್ಷಕರ ಸಹ ಗೆಲ್ಲಿಸುವ ನಿರ್ಧಾರ ಮಾಡಿರುವುದು ಹೆಮ್ಮೆಯ ವಿಚಾರ . ತಾಲೂಕಿನಲ್ಲಿ ಒಟ್ಟು 731 ಮತಗಳಿದ್ದು, ಎಲ್ಲಾ ಶಿಕ್ಷಕರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ […]