ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಬ್ಬೀರ್ ಅಹ್ಮದ್ ಪಾಷಾ ಸೇರಿ ಒಟ್ಟು 12 ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಯ ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಅದರಲ್ಲಿ 11 ಸ್ಥಾನಗಳು ಸಾಲಗಾರರ ಕ್ಷೇತ್ರಕ್ಕೆ ಹಾಗೂ 1 ಸ್ಥಾನ ಸಾಲಗಾರರಲ್ಲದ ಕ್ಷೇತ್ರಕ್ಕೆ ಮೀಸಲಾಗಿತ್ತು.ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಮಾರ್ಚ್ 11 ಕೊನೆಯ ದಿನವಾಗಿತ್ತು. ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. […]

Read More

ಶ್ರೀನಿವಾಸಪುರ: ಉಚ್ಚ ನ್ಯಾಯಾಲಯವು 2023ರ ಸೆಪ್ಟೆಂಬರ್ 11ರಂದು ನೀಡಿರುವ ಆದೇಶದ ಪ್ರಕಾರ ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಜಾಗಕ್ಕೆ ಪ್ರವೇಶಿಸಲು ಅವಕಾಶವಿಲ್ಲ. ಆದರೂ ಅರಣ್ಯ ಇಲಾಖೆ ಸಿಬ್ಬಂದಿಯೇ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ರೈತ ಮುಖಂಡ ಆರ್. ತಿಮ್ಮಸಂದ್ರ ಆರ್. ಶಿವರಾಮಶರ್ಮ ಆರೋಪಿಸಿದರು. ಶುಕ್ರವಾರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. 1999ರಲ್ಲಿ ಕೇತಗಾನಹಳ್ಳಿ ಗ್ರಾಮದ ಪ್ರತಿಯೊಬ್ಬ ರೈತರಿಗೆ 30 ಗುಂಟೆ ಪ್ರಮಾಣದಲ್ಲಿ ಸಾಗುವಳಿ ಚೀಟಿ ಮೂಲಕ ಜಮೀನು ಹಂಚಿಕೆ ಮಾಡಲಾಗಿದೆ. ಆ ಬಳಿಕ […]

Read More

ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 14 ವರ್ಷದ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳಿಗೆ ಗೌರವಪೂರ್ಣ ಸಮ್ಮಾನ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಭಾವಪೂರ್ಣ ಬೀಳ್ಕೊಡುಗೆ ಫೆಬ್ರವರಿ 17, 2026 ರಂದು ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭ ನಡೆಯಿತು. ಎರಡು ವರ್ಷದ ಪಿಯುಸಿ ಪಯಣಕ್ಕೆ ತೆರೆಯೆಳೆಯುವ ಸಂದರ್ಭದಲ್ಲಿ ಕಾರ್ಯಕ್ರಮವು ಆತ್ಮೀಯತೆಯಿಂದ ಮತ್ತು ಮುಂಬರುವ ದಿನಗಳಿಗೆ ಹೊಸ ಭರವಸೆ ಮೂಡಿಸುವ ರೀತಿಯಲ್ಲಿ ಜರುಗಿತು.ಉಪನ್ಯಾಸಕ ವೃಂದದವರ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಕಳೆದ ಎರಡು ವರ್ಷದ ಸ್ಮರಣೀಯ ಕ್ಷಣಗಳನ್ನು ಒಳಗೊಂಡ […]

Read More

ಶ್ರೀನಿವಾಸಪುರ : ದೇಶದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಬಡಕುಂಟುಂಬಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಡೆಸುತ್ತಿದೆ ಇದರ ಬಗ್ಗೆ ಪ್ರತಿ ಹಳ್ಳಿಗಳಲ್ಲಿ, ಪ್ರತಿಭೂತಿನ ಸಾರ್ವಜನಿಕರಿಗೆ ಹಾಗು ಮತದಾರರನ್ನ ಎಚ್ಚರಿಕೆಗೊಳಿಸಬೇಕಿದೆ ಎಂದು ಜಿಲ್ಲಾ ಉಪಾಧ್ಯಕ್ಷ ವಾಸುದೇವರೆಡ್ಡಿ. ಹೇಳಿದರು.ಗ್ರಾಮದ ಬಸ್‌ನಿಲ್ದಾಣದಲ್ಲಿ ಭಾನುವಾರ ಯುವಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದರು.ಈ ಹಿಂದೆ 2014 ರಲ್ಲಿ ನರೇಂದ್ರಮೋದಿರವರಿಗೆ ಅಮೇರಿಕಗೆ ಹೋಗಲು ವೀಸಾ ಸಿಕ್ಕಿಲ್ಲ. ಅಂದು ನರೆಂದ್ರಮೋದಿರುವರು ಗೋದ್ರ ಹತ್ಯಕಾಂಡದಲ್ಲಿ ಪಾಲ್ಗುಂಡಿರುವುದನ್ನ ಎಂಬ ಕಾರಣಕ್ಕೆ ವೀಸಾವನ್ನು ನೀಡಿಲ್ಲ.. ಇಂದು ದೇಶದ ರೈತರು , […]

Read More

ಶ್ರೀನಿವಾಸಪುರ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಶ್ರೀಮತಿ ಅನಿತಾ ಕೌಲ್ ಸ್ಮರಣಾರ್ಥವಾಗಿ ಬೆಂಗಳೂರು ನಗರದ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಐವರು ಶಿಕ್ಷಕರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ತಾಲ್ಲೂಕಿನ ಶಿವಪುರ ಶಾಲೆಯ ಸಹಶಿಕ್ಷಕ ಎನ್.ಎ. ಹನುಮಂತಪ್ಪ, ತಾಡಿಗೋಳ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ರಜನಿ ಜೆ.ಎಸ್., ಸೋಮಯಾಜನಹಳ್ಳಿ ಕೆಪಿಎಸ್ ಶಾಲೆಯ ಸಹಶಿಕ್ಷಕಿ ಅರುಣ ಕುಮಾರಿ ವಿ., ಆರಿಕುಂಟೆ ಪ್ರೌಢಶಾಲೆಯ ಸಹಶಿಕ್ಷಕಿ ರತ್ನಮ್ಮ […]

Read More

ಶ್ರೀನಿವಾಸಪುರ : ಸ್ವಾತಂತ್ರ್ಯ ಪೂರ್ವದಿಂದಲೂ ಕೆಲವು ಗ್ರಾಮಗಳಿಗೆ ಮೂಲಭೂತ ರಸ್ತೆ ಸೌಲಭ್ಯ ಇಲ್ಲದಿರುವುದು ನೋವು ತಂದಿದ್ದು, ಅಂತಹ ಗ್ರಾಮಗಳನ್ನು ಗುರುತಿಸಿ ಸಿಸಿ ರಸ್ತೆಗಳನ್ನು ನಿರ್ಮಿಸುವುದು ನನ್ನ ಕನಸಾಗಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲ್ಲೂಕಿನ ಕೂರಿಗೇಪಲ್ಲಿ ಗ್ರಾಮಪಂಚಾಯಿತಿ ಆವರಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಆಡಳಿತ ನಡೆ ಗ್ರಾಮದ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಪ್ರಸ್ತುತ 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಸಾರ್ವಜನಿಕರು ತಮ್ಮ ವಾಸಸ್ಥಳದ ಬಳಿ ರಸ್ತೆ […]

Read More

ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮಕ್ಕೆ ಚಾಲನೆ : ಅರ್ಹರಿಗೆ ಸವಲತ್ತು ತಲುಪಿಸುವುದು ನನ್ನ ಗುರಿ – ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ : ಬಡಬಗ್ಗರ ಪರ ಕಾಳಜಿ ಹೊಂದಿರುವ ನಾನು, ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳು ಅರ್ಹರಿಗೆ ತಲುಪುವಂತೆ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿನ ಅಡ್ಡಗಲ್ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ನಡೆದ ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐದು ಬಾರಿ ಶಾಸಕನನ್ನಾಗಿ ಮಾಡಿದ […]

Read More

ಕೋಲಾರ: ನಾವು ತಂತ್ರಜ್ಞಾನಕ್ಕೆ ಶರಣಾಗದೆ ಬದುಕಿನ ನೈತಿಕ ಪಾಠ ಕಲಿಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು.ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ, ನವೀಕೃತ ಪ್ರಯೋಗಾಲಯಗಳ ಹಾಗೂ ಕಾಲೇಜು ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನದಲ್ಲಿ ಮುಂದುವರೆದಿದ್ದರೂ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರ, ಬಡವ-ಶ್ರೀಮಂತ ಎಂಬ ಭೇದ ಭಾವ ಎಲ್ಲವೂ ಇದೆ. ಆದ್ದರಿಂದ ಬದುಕಿನಲ್ಲಿ ವೈಜ್ಞಾನಿಕತೆ, ಬಾಂಧವ್ಯ, ನೈತಿಕತೆ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದರು.ಪೋಷಕರು ೪ ಗೋಡೆಯಲ್ಲಿ ಮಕ್ಕಳನ್ನು ಕಟ್ಟಿಯಾಕದೆ, ಜೀವನವನ್ನು ಯಾವ […]

Read More

ಸ್ಮಾರ್ಟ್ ಕ್ಲಾಸ್ ಚಾಲನೆ, 2026–27ರಿಂದ ಉಚಿತ ಪಿಯುಸಿ ವಿಜ್ಞಾನ ಹಾಗೂ ಸ್ಪರ್ಧಾತ್ಮಕ ತರಗತಿಗಳ ಘೋಷಣೆ ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೈಲಾರಪ್ಪ ಅವರು ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಅವರು ಸಮಗ್ರವಾಗಿ ಅವಲೋಕಿಸಿದರು. ಈ ವೇಳೆ ಸರ್ಕಾರದಿಂದ ನೂತನವಾಗಿ ಮಂಜೂರಾದ ಸ್ಮಾರ್ಟ್ ಕ್ಲಾಸ್ […]

Read More
1 3 4 5 6 7 381