ಕೋಲಾರ:- ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕøತಿ, ಸಂಸ್ಕಾರ ಕಲಿಸಿದರೆ ಮಾತ್ರ ಅವರ ಬದುಕು ಉಜ್ವಲವಾಗುತ್ತದೆ, ಧ್ಯಾನದಿಂದ ಏಕಾಗ್ರತೆ ವೃದ್ದಿಯಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ ಎಸ್.ಹೊಸಮನಿ ಅಭಿಪ್ರಾಯಪಟ್ಟರು.ತಾಲ್ಲೂಕಿನ ಹೋಳೂರಿನ ಶ್ರೀಶೈಲೇಂದ್ರ ವಿದ್ಯಾಮಂದಿರದ 44ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಆಧುನಿಕ ಯುಗದಲ್ಲಿ ಆಧುನಿಕ ಪಿಡುಗುಗಳು ಯುವಕರನ್ನು ದಾರಿ ತಪ್ಪಿಸುತ್ತಿವೆ, ಮಾದಕ ವಸ್ತುಗಳ ಚಟದ ಜತೆಗೆ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಮಕ್ಕಳ ಜೀವನಕ್ಕೆ […]
ಕೋಲಾರ: ಸರಕಾರಿ ಶಾಲೆ ಮಕ್ಕಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಾಧಕರಾಗಿ ಹೊರ ಹೊಮ್ಮಬೇಕೆಂದು ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಟಮಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಫುಲೆ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕಿಯರನ್ನು ಸನ್ಮಾನಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳು ಸಿಗುತ್ತಿವೆ, ಸಾವಿತ್ರಿ ಬಾಪುಲೆ ರೀತಿಯಲ್ಲಿಯೇ ಜ್ಞಾನವಂತ ಶಿಕ್ಷಕ ವರ್ಗ ಮಕ್ಕಳಿಗೆ ಬೋಧನೆ ಮಾಡುತ್ತಿದ್ದಾರೆ ಎಂದು ವಿವರಿಸಿದರು.ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಬದುಕಿನ […]
ಶ್ರೀನಿವಾಸಪುರ : ಮಕ್ಕಳಿಗೆ ವ್ಯವಹಾರ ಜ್ಞಾನ ಬೆಳೆಯಲು ಈ ಕಾರ್ಯಕ್ರಮವು ಅನುಕೂಲವಾಗಲಿದ್ದು ಪೋಷಕರು ತಮ್ಮ ಮಕ್ಕಳನ್ನ ಸಹಕರಿಸುವಂತೆ ಎಪಿಜಿ ಅಬ್ದಲ್ ಕಲಾಂ ಟ್ರಸ್ಟ್ನ ಉಪಾಧ್ಯಕ್ಷ ಇಲಿಯಾಸ್ ಪಾಷ ಕರೆ ನೀಡಿದರು.ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾ ಸರ್ಕಾರಿ ಉರ್ದು , ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶನಿವಾರ ಮೆಟ್ರಿಕ್ ಮೇಳವನ್ನು ಶಾಲಾವತಿಯಿಂದ ಆಯೋಜನೆ ಮಾಡಲಾಗಿತ್ತು.ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್ ಮಾತನಾಡಿ ಈ ಶಾಲೆಯ ಮಕ್ಕಳಿಗೆ ಎಪಿಜಿ ಅಬ್ದಲ್ ಕಲಾಂ ಟ್ರಸ್ಟ್ನವರು ಶೈಕ್ಷಣಿಕವಾಗಿ ಸಹಕಾರ ನೀಡುತ್ತಿದ್ದು, ವಿದ್ಯಾರ್ಥಿಗಳು ದಾನಿಗಳು […]
ಶ್ರೀನಿವಾಸಪುರ : ತಾಲೂಕಿನ ತಾಡಿಗೋಳ್ ಗ್ರಾಮಪಂಚಾಯಿತಿಯ ಅಧ್ಯಕ್ಷೆ ಶ್ರೀಮತಿ, ಉಪಾಧ್ಯಕ್ಷೆ ಕೆ.ಬಿ.ಪಲ್ಲವಿರವರ ಬಗ್ಗೆ ಶನಿವಾರ ಅವಿಶ್ವಾಸ ನಿರ್ಣಯದಲ್ಲಿ ಸಭೆಯಲ್ಲಿ ಒಟ್ಟು 19 ಸದಸ್ಯರ ಪೈಕಿ 13 ಸದಸ್ಯರು ಹಾಜರಾಗಿ, 6 ಜನ ಗೈರುಹಾಜರಾಗಿದ್ದರು. ಅಧ್ಯಕ್ಷೆ ಶ್ರೀಮತಿ, ಉಪಾಧ್ಯಕ್ಷೆ ಕೆ.ಬಿ.ಪಲ್ಲವಿ ರವರ ಕೈ ಎತ್ತುವದರ ಮೂಲಕ ಅವಿಶ್ವಾವನ್ನು ತೋರಿಸಿದ್ದು, ಈ ಮೂಲಕ ತಾಡಿಗೋಳ್ ಗ್ರಾಮಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ತೆರವು ಗೊಂಡಿದೆ ಎಂದು ಉಪ ವಿಭಾಗಧಿಕಾರಿ ಮೈತ್ರಿ ಘೋಷಣೆ ಮಾಡಲಾಗಿದೆ ಎಂದರು .ಜಿಲ್ಲಾ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಲಾಗುವುದು. ಅವರ […]
ಶ್ರೀನಿವಾಸಪುರ: ಕುವೆಂಪು ತಮ್ಮ ಸಾಹಿತ್ಯದ ಮೂಲಕ ಸಮಾನತೆ, ಸಹಬಾಳ್ವೆ, ಜೀವನ ಪ್ರೀತಿಯ ಸಂದೇಶ ನೀಡಿ ವಿಶ್ವಮಾನವರಾದರು. ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶ್ರೀನಿವಾಸಪುರ ಇಲ್ಲಿ, ಕನ್ನಡ ಸಾಹಿತ್ಯ ಪರಿಷತ್ತ, ಕರ್ನಾಟಕ ಜ್ಞಾನ ವಿಜ್ಞಾನ ಪರಿಷತ್ತು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಈ ಮೂರರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ಕುವೆಂಪು ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಹಾಗೂ ಸರ್ಕಾರಿ ನೌಕರರ ಸಂಘದ ತಾಲೂಕಿನ ಅಧ್ಯಕ್ಷರೂ ಆದ ಎಂ. ಬೈರೇಗೌಡ ಅವರು […]
ಶ್ರೀನಿವಾಸಪುರ : ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಬೇಕು, ತೀಡಬೇಕು, ವಿದ್ಯಾರ್ಥಿಗಳ ಚಿಂತನೆಗಳನ್ನ ಚರ್ಚಿಸಿ, ಅವುಗಳನ್ನು ಪ್ರೋತ್ಸಾಹಿಸಿ ಅವರನ್ನ ವಜ್ರದ ರೀತಿಯಲ್ಲಿ ತಯಾರಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿಶೇಷವಾಗಿ ವಿದ್ಯಾರ್ಥಿಗಳ ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳ ಗುರಿಯನ್ನು ಮಟ್ಟುವಂತೆ ಪ್ರೋತ್ಸಾಹಿಸಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಎನ್.ಸಿ.ಮುನಿಯಪ್ಪ ಎಂದರು.ತಾಲೂಕಿನ ರೋಣೂರು ಕ್ರಾಸ್ ಬಳಿಯ ವಿಐಪಿ ಶಾಲೆಯ ಆವರಣದಲ್ಲಿ ಶುಕ್ರವಾರ ನಡೆದ ಶಾಲಾಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಮಾಜಕ್ಕೆ ಪ್ರತಿಷ್ಟ ವ್ಯಕ್ತಿಗಳನ್ನು ರೂಪಿಸುವ ಶಿಕ್ಷಣ ಸಂಸ್ಥೆಯಾಗಿದ್ದು, ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ […]
ಶ್ರೀನಿವಾಸಪುರ : ಗೌನಿಪಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಸ್ಥಾನಕ್ಕೆ ಜನವರಿ 2 ಗುರುವಾರ ರಂದು ಚುನಾವಣೆ ನಡೆದಿದ್ದು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅಕ್ಕಯ್ಯಮ್ಮನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ನಾಗರತ್ನಮ್ಮ ರಾಮ್ ಮೋಹನ್ ರವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವಾಗಿದ್ದಂತಹ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದ್ದು ಅಧ್ಯಕ್ಷರ ಸ್ಥಾನಕ್ಕೆ ಅಕ್ಕಯ್ಯಮ್ಮ ನವರು ಒಂದೇ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದ ಕಾರಣ ಚುನಾವಣಾ ಅಧಿಕಾರಿ ರವಿಚಂದನ್ ರವರು ನಾಮಪತ್ರ ಸಲ್ಲಿಕೆ ಸಮಯ ಮುಕ್ತಾಯವಾಗುತ್ತಿದ್ದಂತೆ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ […]
ಕೋಲಾರ,ಜ.03: ಪತ್ರಕರ್ತರಿಗೆ ವೃತ್ತಿ ಬದ್ಧತೆ ಇದ್ದರೆ ಪ್ರಶಸ್ತಿಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ. ಇಂಥ ಸಂದರ್ಭದಲ್ಲಿ ಯಾವುದೇ ಲಾಬಿ ಅಗತ್ಯ ಇರುವುದಿಲ್ಲ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್ ಹಾಗೂ ಪ್ರಜಾವಾಣಿ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರಿಗೆ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ […]
ಶ್ರೀನಿವಾಸಪುರ,ಜ.2-ಮಾವಿನ ತೋಟಗಳಲ್ಲಿ ಹಳಸಿದ ಕಾಯಿಗಳು ಕ್ಲೀನಿಂಗ್ ಮಾಡಿ ತೋಟಗಳು ಸುರಕ್ಷತವಾಗಿ ಇಟ್ಟುಕೊಂಡರೆ ಬರುವ ಹೂವು ಕಾಯಿಗೆ ಕೀಟ ಬಾದೆ ಕಡಿಮೆಯಾಗುತ್ತದೆ. ತೋಟದಲ್ಲಿ ಉದುರಿರುವ ಕಾಯಿಗಳನ್ನು ತೆಗೆದು ಹಾಕಿ ತೋಟಗಳು ನಿರ್ವಹಣೆ ಮಾಡಿ ಅಗತ್ಯ ಪ್ರಮನದಲ್ಲಿ ಮಾತ್ರ ಕ್ರೀಮಿನಾಶಕ ಸಿಂಪಡಿಸಿದರೆ ಉತ್ತಮವಾಗಿ ಪಸಲು ಸಿಗುತ್ತದೆ ಎಂದು ಸಂಶೋದಕಿ ಡಾ.ಅಶ್ವಥನಾರಾಯಣರೆಡ್ಡಿ ಸಲಹೆ ಮಾಡಿದರು.ಇಲ್ಲಿನ ಮಾರುತಿ ಸಭಾ ಭವನದಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಮತ್ತು ಮಾವು ಅಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾ ಮಾವು ಬೆಳೆಗಾರ ಸಂಯುಕ್ತ ಹೋರಾಟ ಸಮಿತಿಯ ಸಂಯುಕ್ತಾಶ್ರಯದಲ್ಲಿ […]

