
ಕರ್ನಾಟಕ ಸರ್ಕಾರವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಹಿರಿಯ ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣ, ಕೋಲಾರ-563101.ದೂರವಾಣಿ: 08152-222077E-Mail ID – vaarthailakhekolar@gmail.com ಪತ್ರಿಕಾ ಪ್ರಕಟಣೆಲೋಕಸಭಾ ಸಾರ್ವತ್ರಿಕ ಚುನಾವಣೆ-2024 : 25 ನಾಮಪತ್ರಗಳ ಸಲ್ಲಿಕೆಕೋಲಾರ, ಏಪ್ರಿಲ್ 04 (ಕರ್ನಾಟಕ ವಾರ್ತೆ): ನಂ.14-14ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ (04-04-2024) ಇಲ್ಲಿಯವರೆಗೆ 25 ಅಭ್ಯರ್ಥಿಗಳಿಂದ 33 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.28-ಕೋಲಾರ (ಪ.ಜಾ) ಲೋಕಸಭಾ […]

ಕೋಲಾರ: ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರುವಾರ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಬಳಿಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಗರದಲ್ಲಿ ರೋಡ್ ಶೋ ನಡೆಸಿದರು ಈ ಸಂದರ್ಭದಲ್ಲಿ ಅವರೊಂದಿಗೆ ಅಭ್ಯರ್ಥಿ, ಸಚಿವರು, ಶಾಸಕರು, ಮುಖಂಡರು ಜೊತೆ ಡಿ.ಕೆ.ಶಿವಕುಮಾರ್ ನಗರದ ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತೆರೆದ ವಾಹನದಲ್ಲಿ ಮುಖಂಡರು ಕೆ.ವಿ.ಗೌತಮ್ ಅವರಿಗೆ ಮತಯಾಚಿಸಿದರು. ಸಾವಿರಾರು ಕಾರ್ಯಕರ್ತರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಂಗಾರಪೇಟೆ ವೃತ್ತದಿಂದ ಎಸ್ಎನ್ಆರ್ ಜಿಲ್ಲಾಸ್ಪತ್ರೆ ಮಾರ್ಗವಾಗಿ ಗಾಂಧಿವನಕ್ಕೆ […]

ಶ್ರೀನಿವಾಸಪುರ : ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಜೀವನದ ಗುರಿಯನ್ನು ಮಟ್ಟುವಂತೆ ದಾನಿ ಎಜಿಎಂಎಸ್ಸಿ ಕಂಪನಿ ವ್ಯವಸ್ಥಾಪಕ ಲಿಂಗಾಪುರ ನಾಗರಾಜ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಚೆನ್ನಯ್ಯಗಾರಿಪಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಭಾನುವಾರ ಬೆಂಗಳೂರಿನ ಎಜಿಎಂಎಸ್ಸಿ ಕಂಪನಿವತಿಯಿಂದ ಉಚಿತವಾಗಿ ನಲಿಕಲಿ ಟೇಬಲ್ಗಳು, ಚೇರುಗಳು, ಶಾಲಾ ಬ್ಯಾಗ್ಗಳು, ಟ್ರ್ಯಾಕ್ ಶೊಟ್ ಹಾಗು ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.ನಾನು ಪ್ರಾಥಮಿಕ ವಿದ್ಯಾಬ್ಯಾಸವನ್ನು ಕೋಟಬಲ್ಲಪಲ್ಲಿ ಸರ್ಕಾರಿ ಶಾಲೆಯಲ್ಲಿಯೇ ಓದಿದ್ದು, ನಂತರ ಪ್ರೌಡಶಿಕ್ಷಣ , ಪಿಯುಸಿ, ಪದವಿ, ಉನ್ನತ […]

ಶ್ರೀನಿವಾಸಪುರ : ಹುಟ್ಟಿದ ಮೇಲೆ ಸಾವು ಖಚಿತ. ಆದರೆ ಆತುರದ ನಿರ್ಧಾರವನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು, ಆತುರದ ನಿರ್ಧಾರವನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ತಮ್ಮ ಕುಟುಂಬವನ್ನ ಬೀದಿಪಾಲು ಆಗುತ್ತದೆ. ಇದರೊಂದಿಗೆ ಮಾನಸಿಕವಾಗಿ ಹಿಂಸೆಗೆ ಒಳಗಾಗುತ್ತಾರೆ ಎಂದರು. ಆದ್ದರಿಂದ ಪ್ರತಿಯೊಬ್ಬರು ಸಹ ತಮ್ಮ ಜೀವನವನ್ನ ಜವ್ದಾರಿಯುತವಾಗಿ ನಡೆಸಿಕೊಂಡು ಹೋಗಬೇಕು ಎಂದು ಶ್ರೀನಿವಾಸಪುರ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ಹೇಳಿದರು.ತಾಲೂಕಿನ ಶೀಗೆನಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಕುಟುಂಬಕ್ಕೆ ಸೋಮವಾರ ರಾತ್ರಿ ಧನ ಸಹಾಯ ನೀಡಿ ಮಾತನಾಡಿದರು.ಮೃತರ ತಂದೆ ವೆಂಕಟೇಶಪ್ಪ ರವರಿಗೆ […]

(ಫೋಟೊ ಮೊದಲಿನದು, ಸಂಗ್ರಹದಿಂದ) ಶ್ರೀನಿವಾಸಪುರ : ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಗ್ರಾಮದ ನಾರಾಯಣಸ್ವಾಮಿಯವರ (40 ವರ್ಷ), ಇಬ್ಬರು ಮಕ್ಕಳಾದ ಪವನ್ (12 ವರ್ಷ), ನಿತಿನ್(10 ವರ್ಷ) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಕುಟುಂಬದವರು ಶ್ರೀನಿವಾಸಪುರ ಠಾಣೆಗೆ ದೂರು ಸಲ್ಲಿಸಿದ್ದು ಪೊಲೀಸರ ತನಿಖೆಯ ನಂತರ ಸತ್ಯಾಂಶ ಹೊರಬೀಳಲಿದೆ.

ಶ್ರೀನಿವಾಸಪುರ : ಏ.26 ರ ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಮತದಾನದೊಂದು ನಡೆಸಬಹುದಾದ ಎಲ್ಲಾ ನಮೂನೆಗಳ ಬಗ್ಗೆ ಮಾಹಿತಿ, ಬ್ಯಾಲೆಟ್ ಯೂನಿಟ್ , ಕಂಟ್ರೋಲ್ ಯೂನಿಟ್, ಹಾಗು ಮತಯಂತ್ರಗಳ ಬಗ್ಗೆ ಮಾಸ್ಟರ್ ಅಧಿಕಾರಿಗಳಿಂದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮೊದಲ ತರಬೇತಿ ನೀಡಲಾಗುತ್ತಿದೆ ಎಂದು ಎಆರ್ ಓ, ಎಂ.ಆರ್.ಸುಮಾ ತಿಳಿಸಿದರು.ಪಟ್ಟಣ ಹೊರವಲಯದ ಬೈರವೇಶ್ವರ ವಿದ್ಯಾನಿಕೇತನದಲ್ಲಿ ಸೋಮವಾರ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂದಿಸಿದಂತೆ ತಾಲೂಕಿನ ಪಿಆರ್ ಓ, ಎಪಿಆರ್ ಓಗಳಿಗೆ ಗಳಿಗೆ ಒಂದು ದಿನ […]

ಶ್ರೀನಿವಾಸಪುರ: ಮಕ್ಕಳಿಗೆ ಬರಿ ಶಿಕ್ಷಣ ಇದ್ದರೆ ಸಾಲದು. ದೈಹಿಕ ಮಾನಸಿಕ ಒತ್ತಡಗಳು ನಿಗ್ರಹಿಸಿ ಶಿಸ್ತು ಬದ್ದ ಪ್ರಜೆಗಳಾಗಿ ರೂಪುಗೊಳ್ಳಲು ಯೋಗ ವಿದ್ಯೆ ಪ್ರತಿಯೊಬ್ಬರು ಕಲಿತು ಜೀವನ ಸಾರ್ಥಕ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಶಿಕ್ಷಣ ಪ್ರಮುಖ ಕೆ.ಎಂ.ಚೌಡಪ್ಪ ಹೇಳಿದರು.ಪಟ್ಟಣದ ತ್ಯಾಗಜರಾಜ ಬಡಾವಣೆಯ ಯೋಗ ಮಂದಿರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಶ್ರೀನಿವಾಸಪುರ ಶಾಖೆಯಿಂದ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಯೋಗಾಭ್ಯಾಸ 30 ದಿನಗಳ ವಸಂತ ಶಿಭಿರ ಉದ್ಘಾಟಿಸಿ ಮಾತನಾಡಿದರು.ಪೋಷಕರು ಹೆಚ್ಚು ಹಣ ಕೊಟ್ಟು ಮಕ್ಕಳ ಆಡಂಬರ ಶಿಕ್ಷಣಕ್ಕೆ […]

ಶ್ರೀನಿವಾಸಪುರ : ಕಾಲು ಮತ್ತು ಬಾಯಿ ರೋಗ ಬಂದಾಗ ಚಿಕಿತ್ಸೆ ಬದಲಾಗಿ ಲಸಿಕೆಯೇ ಮುಖ್ಯವಾಗಿದೆ ಎಂಬುದನ್ನು ರೈತರು ಅರಿಯಬೇಕು ಎಂದರು. ಪಶು ವೈದ್ಯರು ಮನೆಮನೆಗೆ ಲಸಿಕಾಕರಣಕ್ಕೆ ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಮರೆಯದೇ ಲಸಿಕೆ ಕೊಡಿಸಬೇಕು ಎಂದು ಕೋಲಾರದ ಪಶು ಸಂಗೋಪನ ಇಲಾಖೆ ಉಪನಿದೇಶಕ ಡಾ|| ಸುಬಾನ್ ಮನವಿ ಮಾಡಿದರು.ತಾಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಹಾಲು ಉತ್ಪಾದಕರ ಸಂಘದ ಬಳಿ ಸೋಮವಾರ ಪಶು ಸಂಗೋಪನ ಇಲಾಖೆ ವತಿಯಿಂದ ಕಾಲು ಬಾಯಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ರೈತರಿಗೆ ಆರ್ಥಿಕ […]

ಕೋಲಾರ,ಏ.01: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಡ ಮಾಡುವ ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೋಲಾರಶಕ್ತಿ ದಿನಪತ್ರಿಕೆಯ ಸಂಪಾದಕರಾದ ಕೆ.ಗೋಪಿಕಾಮಲ್ಲೇಶ್ ಹಾಗೂ ಡಿ.ವಿ.ಜಿ ದತ್ತಿನಿಧಿ ಪ್ರಶಸ್ತಿಗೆ ಭಾಜನರಾದ ಕೆ.ಯು.ಡ.ಬ್ಲ್ಯೂ.ಜೆ ಮಾಜಿ ಅಧ್ಯಕ್ಷರೂ ಆದ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದ ವಿ.ವೆಂಕಟೇಶ್ ಅವರು ಇಂದು ಚಿತ್ರದುರ್ಗದ ಎಸ್.ಆರ್.ಎಸ್ ಕಾಲೇಜು ಆವರಣ ಡಾ.ಬಿ.ವಿ.ವೈಕುಂಠರಾಜು ವೇದಿಕೆಯಲ್ಲಿ ನಡೆದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ […]