
ಆಂಧ್ರಪ್ರದೇಶದ ರಾಮಸಮುದ್ರಂ ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ. ವೆಂಕಟಾಚಲ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ, ಶ್ರೀನಿವಾಸಪುರದ ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೆಂಕಟಾಚಲ ಮಾತನಾಡಿದರು.ಶ್ರೀನಿವಾಸಪುರ: ಜನರು ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ಭಾಗ್ಯಕಿಂತ ಆರೋಗ್ಯ ಭಾಗ್ಯ ದೊಡ್ಡದು ಎಂಬುದನ್ನು ಮರೆಯಬಾರದು ಎಂದು ಶ್ರೀನಿವಾಸಪುರದ ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ವೆಂಕಟಾಚಲ ಹೇಳಿದರು.ಸಮೀಪದ ಆಂಧ್ರಪ್ರದೇಶದ ರಾಮಸಮುದ್ರಂ ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ. ವೆಂಕಟಾಚಲ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ […]

ಕೋಲಾರ,ಮಾ.29: ಕೋಲಾರದವರು ಯಾವುದೇ ಸಂಘದಲ್ಲಿ ಇದ್ದರೂ ಅದು ಕ್ರಿಯಾಶೀಲವಾಗಿ ನಡೆಯುತ್ತದೆ. ಈಗ ಕೋಲಾರದ ಇಬ್ಬರಿಗೆ ಪ್ರಶಸ್ತಿ ಒಲಿದಿರುವುದು ಹೆಮ್ಮೆಯ ವಿಚಾರ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದರು.ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿರುವ ಕೋಲಾರಶಕ್ತಿ ದಿನಪತ್ರಿಕೆಯ ಸಂಪಾದಕಿ ಕೆ.ಗೋಪಿಕಾ ಮಲ್ಲೇಶ್ ಹಾಗೂ ಡಿ.ವಿ.ಜಿ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿರುವ ಕೆ.ಯು.ಡ.ಬ್ಲ್ಯೂ.ಜೆ ಮಾಜಿ ಅಧ್ಯಕ್ಷ ವಿ.ವೆಂಕಟೇಶ್ ಅವರನ್ನು ಶುಕ್ರವಾರ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ […]

ಕೋಲಾರ,ಮಾ.28: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಡ ಮಾಡುವ ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ದತ್ತಿನಿಧಿ ಪ್ರಶಸ್ತಿಗೆ ಕೋಲಾರಶಕ್ತಿ ದಿನಪತ್ರಿಕೆಯ ಸಂಪಾದಕರಾದ ಕೆ.ಗೋಪಿಕಾಮಲ್ಲೇಶ್ ಹಾಗೂ ಡಿ.ವಿ.ಜಿ ದತ್ತಿನಿಧಿ ಪ್ರಶಸ್ತಿಗೆ ಕೆ.ಯು.ಡ.ಬ್ಲ್ಯೂ.ಜೆ ಮಾಜಿ ಅಧ್ಯಕ್ಷರೂ ಆದ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದ ವಿ.ವೆಂಕಟೇಶ್ ಭಾಜನರಾಗಿದ್ದಾರೆ.ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಫಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ. ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಗಿರಿಜಮ್ಮ ರುದ್ರಪ್ಪ […]

ಶ್ರೀನಿವಾಸಪುರ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೋಮವಾರ ಸಂಜೆ ಸಿಐಎಸ್ಎಫ್ ಎಎಸ್ಐ ಪಿ.ಸಿ.ಬರ್ಮನ್ ನೇತೃತ್ವದಲ್ಲಿ ಸಿಐಎಸ್ಎಫ್ ನಂಬರ್ 931 ರ 40 ಸೈನ್ಯಕರಿಂದ ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು.ಪಟ್ಟಣದ ಎಂಜಿ ರಸ್ತೆ, ಚಿಂತಾಮಣಿ ರಸ್ತೆ ಹಾಗೂ ಇತರೆ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಿದ ಸಿಐಎಸ್ಎಫ್ ತುಕಡಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದರು.ಅಲ್ಪ ಸಂಖ್ಯಾತ ಯುವ ಕಲ್ಯಾಣ ತಾಲೂಕು ಅಧ್ಯಕ್ಷ ಸಾದಿಕ್ಅಹಮ್ಮದ್, ಮುಖಂಡ ಅಬ್ದುಲ್ಲಾ ರವರು ಸೈನ್ಯಕರಿಗೆ ತಂಪು ಪಾನೀಯವನ್ನು ನೀಡಿ ಸ್ವಾಗತಿಸಿದರು.ಈ ವೇಳೆ ಜಿಲ್ಲಾ ಹೆಚ್ಚುವರಿ […]

ಶ್ರೀನಿವಾಸಪುರ : ಸೋಮವಾರದಿಂದ ರಾಜ್ಯಾದ್ಯಾಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಸಕಲ ಸಿದ್ದತೆಯೊಂದಿಗೆ ಸರ್ಕಾರದ ಸುತ್ತೋಲೆಯಂತೆ ಪ್ರತಿ ಕೊಠಡಿಗಳಿಗೆ ಸಿಸಿ ಕ್ಯಾಮರಗಳನ್ನು ಆಳವಡಿಸಲಾಗಿದೆ. ಇದರ ಮುಖ್ಯ ಉದ್ದೇಶ ಯಾವುದೇ ಕಾರಣಕ್ಕೂ ನಕಲು ಆಗಬಾರದು ಎನ್ನುವ ಉದ್ದೇಶದಿಂದ ಪ್ರತಿ ಕೊಠಡಿಗಳಿಗೂ ಸಿಸಿ ಕ್ಯಾಮರಗಳನ್ನು ಆಳವಡಿಸಲಾಗಿದೆ ಎಂದು ಬಿಇಒ ಬಿ.ಸಿ.ಮುನಿಲಕ್ಷ್ಮಯ್ಯ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.ತಾಲೂಕಿನಾದ್ಯಾಂತ ಒಟ್ಟು 2580 ವಿದ್ಯಾರ್ಥಿಗಳು ಪರೀಕ್ಷೆ ಪ್ರವೇಶವನ್ನು ಪಡೆದಿದ್ದು, 10 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ. ವಿದ್ಯಾರ್ಥಿಗಳು ನಿರ್ಭೀತಿಯಿಂದ , ಬರೆಯಲು […]

ಶ್ರೀನಿವಾಸಪುರ : ಇಂದಿನ ನಾಗರೀಕರು ತಮ್ಮ ಜೀವನದ ಬಹುಪಾಲು ಸಮಯವನ್ನು ಉದ್ಯೋಗ , ವ್ಯವಹಾರ , ಮತ್ತು ಹಣ ಸಂಪಾದನೆಗಾಗಿ ವಿನಿಯೋಗಿಸುತ್ತಿದ್ದಾರೆ . ದಿನಕ್ಕೊಂದಿಷ್ಟು ಸಮಯವನ್ನು ದೇವರ ದ್ಯಾನ, ಭಜನೆಯತ್ತಾ ವಿಯೋಗಿಸಿದರೆ ಮನಸ್ಸು ಉಲ್ಲಾಸವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವರದಬಾಲಾಂಜನೇಯ ಸ್ವಾಮಿ ದೇವಾಲಯದಲ್ಲಿ ಸೋಮವಾರ ನಡೆದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶನಿವಾರ ಬ್ರಹ್ಮರಥೋತ್ಸವದ ಅಂಗವಾಗಿ ಅಂಕುರಾರ್ಪಣೆ, ದ್ವಜಾರೋಹಣ, ಶೇಷವಾಹನೋತ್ಸವ , ಕಲ್ಯಾಣೋತ್ಸವ , ಗರುಡೋತ್ಸವ, ಬ್ರಹ್ಮರಥೋತ್ಸವದ ಅಂಗವಾಗಿ ಹೆಸರು ಬೇಳೆ , ಪಾನಕವನ್ನ […]

ಕೋಲಾರ:- ಜಿಲ್ಲೆಯ 65 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, 171 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ನಗರದ ಚಿನ್ಮಯ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಹೂ ನೀಡಿ ಸ್ವಾಗತಿಸಿ, ಶುಭ ಕೋರಿದ ಅವರು, ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದರು.ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 19743 ವಿದ್ಯಾರ್ಥಿಗಳ ಪೈಕಿ 19572 ಮಂದಿ ಹಾಜರಾಗಿದ್ದು, 171 ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ […]

ಕೋಲಾರ,ಮಾ.23: ದಿ.ಕರ್ನಾಟಕ ಪ್ರಿಂಟರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಬೆಂಗಳೂರು ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಹಿರಿಯ ಸಹಕಾರಿ ಅಬ್ಬಣಿ ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಬೆಂಗಳೂರಿನ ಎಸ್.ಶಿವರಾಮ್ ಅವಿರೋಧವಾಗಿ ಆಯ್ಕೆಯಾದರು.ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಬ್ಬಣಿ ಶಂಕರ್ ಮತ್ತು ಶಿವರಾಮ್ ವಿರುದ್ಧ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಘೋಷಿಸಲಾಯಿತು.ಅಬ್ಬಣಿ ಶಂಕರ್ ರವರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದ್ದೋದ್ಧೇಶ ಸಹಕಾರ ಸಂಘದ ಉಪಾಧ್ಯಕ್ಷರಾಗಿ, […]

ಶ್ರೀನಿವಾಸಪುರ : ವಿದ್ಯೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ, ವಿದ್ಯೆಯನ್ನು ಯಾರು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯೆಯನ್ನು ಕಲಿಯುತ್ತಾರೊ ಅವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ ಪಟ್ಟಣದ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜಿಗೆ ಶನಿವಾರ ಬೇಟಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಮಾತನಾಡಿದರು.ವಿದ್ಯಾರ್ಥಿಗಳು ಕಾಲಹರಣ ಮಾಡದೆ ಓದಿನ ಕಡೆ ಲಕ್ಷ್ಯವಹಿಸಬೇಕು. ಪೋಷಕರ ಭರವಸೆ ನೆರವೇರಿಸಬೇಕು. ಹಿರಿಯರ ಅನುಕರಣೆ ಮಾಡಬೇಕು ಅವಕಾಶಗಳನ್ನು ಬಳಸಿಕೊಂಡು ಚೆನ್ನಾಗಿ ಓದಬೇಕು ಎಂದರು.ಇದೇ […]