ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಕಾರ್ಯಕ್ರಮವನ್ನು ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಹೆಚ್.ಆರ್.ಸಚಿನ್ ರವರು, ತಹಶೀಲ್ದಾರ್ ಶ್ರೀ ಜಿ.ಎನ್.ಸುಧೀದ್ರರವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶಿವಕುಮಾರಿ, ಪುರಸಭಾ ಮುಖ್ಯಾಧಿಕಾರಿ […]
ಶ್ರೀನಿವಾಸಪುರ ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ವರಸಿದ್ಧ ವಿನಾಯಕ, ಆದಿನಾಗ ಸಮೇತ ಏಕಾದಶ ನಾಗರಾಜ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಲಾಗಿತ್ತು.ನಾಗರಾಜ ಪ್ರತಿಷ್ಠಾಪನಾ ಮಹೋತ್ಸವಶ್ರೀನಿವಾಸಪುರ: ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ವರಸಿದ್ಧ ವಿನಾಯಕ, ಆದಿನಾಗ ಸಮೇತ ಏಕಾದಶ ನಾಗರಾಜ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಲಾಗಿತ್ತು.ಮಹೋತ್ಸವದ ಅಂಗವಾಗಿ ಗಣಪತಿ ಹೋಮ, ಕಳಶಾರಾಧನೆ, ಹಣಹೋಮ, ಮೂರ್ತಿಹೋಮ, ರುದ್ರಹೋಮ, ನಾಗಹೋಮ, ಕಳಸ್ಯಾಸಹೋಮ, ನೇತ್ರೋನ್ಮಿಲನ, ಪ್ರಾಣಪ್ರತಿಷ್ಠೆ, ಕುಂಭಾಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ, ಮಹಾಶೀರ್ವಚನ ಹಾಗೂ ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ದೇವಾಲಯದ ಧರ್ಮದರ್ಶಿ ಎಂ.ಗೋಪಾಲಕೃಷ್ಣ ಮಾತನಾಡಿ, ಹಿಂದೆ […]
ಶ್ರೀನಿವಾಸಪುರ : ಸೋಮವಾರ ರೈತ ಮುಖಂಡ ನಾರಾಯಣಗೌಡ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಮುಂಭಾಗ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿದಂತೆ ಬಲಾಢ್ಯರು ಸಾವಿರಾರು ಎಕರೆ ಅರಣ್ಯ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಜಮೀನುಗಳಿಗೆ ಸಂಬಂಧಿಸಿತಂತೆ ಜಂಟಿ ಸರ್ವೆ ನಡೆಸಬೇಕು ಎಂದು ಆಗ್ರಹಿಸಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಲು ಕುಳತ್ತಿದ್ದರು.ಪ್ರತಿಭಟನೆ ವೇಳೆ ಅಂಬೇಡ್ಕರ್, ಮಹಾತ್ಮ ಗಾಂದಿ ಹಾಗು ರಮೇಶ್ ಕುಮಾರ ರವರ ಭಾವಚಿತ್ರವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದರು. ಇದನ್ನು ಗೌನಿಪಲ್ಲಿ ಗ್ರಾ.ಪಂ.ಮಾಜಿ ಸದ್ಯಸ ರಮೇಶ್ ಬಾಬು ರಮೇಶ್ ಕುಮಾರ್ ಪೋಟೋ […]
ಶ್ರೀನಿವಾಸಪುರ : ತಾಲೂಕಿನಲ್ಲಿ ಅರಣ್ಯ ಇಲಾಖೆವತಿಯಿಂದ ಒತ್ತುವರಿ ತೆರವು ಕಾರ್ಯಚರಣೆ ಸಮಯದಲ್ಲಿ ಹಾಗು ಬೆಳೆಗಳು ನಷ್ಟವಾದಾಗ ಆ ತೋಟಗಳಿಗೆ ಬೇಟಿ ನೀಡಿದ್ದೆವು ಆಲ್ಲದೆ ರೈತರಿಗೆ ಭೂಮಿಯನ್ನು ಉಳಿಸುವ ಉದ್ದೇಶದಿಂದಲೂ ಸಹ ನಾವು ಅರಣ್ಯ ಇಲಾಖೆ ಹಾಗು ಸರ್ಕಾರದ ವಿರುದ್ಧ ಹೋರಾಟಗಳನ್ನು ಮಾಡಿದ್ದೀವಿ. ಅಲ್ಲದೆ ಅರಣ್ಯ ಇಲಾಖೆ ಡಿಎಫ್ಓ ಏಡಿಕೊಂಡಲು ನಮ್ಮ ದೂರು ದಾಖಲಿಸಿದ್ದರು. ಅದರೂ ಸಹ ನಾವು ಅದೆನ್ನೆಲ್ಲಾ ಲೆಕ್ಕಿಸಿದೆ ರೈತ ಭೂಮಿಯನ್ನು ಉಳಿಸಲು ಹೋರಾಟ ಮಾಡಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು […]
ಭಾರತೀಯ ಪರಂಪರೆಯಲ್ಲಿ ಸಂತೆ ಇಂದಿಗೂ ಪ್ರಸ್ತುತ ಶ್ರೀನಿವಾಸಪುರ: ಭಾರತೀಯ ಸಾಂಸ್ಕøತಿಕ ಪರಂಪರೆಯಲ್ಲಿ ಸಂತೆ ಹಾಸುಹೊಕ್ಕಾಗಿದೆ. ವಾರದ ಸಂತೆಯಲ್ಲಿ ಗ್ರಾಮೀಣ ಹುಟ್ಟುವಳಿಗಳನ್ನು ಮಾರಾಟ ಮಾಡುವ ಪ್ರಾಚೀನ ಆರ್ಥಿಕ ವ್ಯವಸ್ಥೆ ಇಂದಿಗೂ ಮುಂದುವರಿದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಾಹಿತಿ ಆರ್.ಚೌಡರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ವಾಣಿಜ್ಯ ಉತ್ಸವ ಹಾಗೂ ಕಾಲೇಜು ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಜಾನಪದ ಹಾಗೂ ಸಾಹಿತ್ಯ ಚರಿತ್ರೆಯಲ್ಲಿ ಸಂತೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಸಂತೆಗೆ ಸಂಬಂಧಿಸಿದ ಜಾನಪದ […]
ಶ್ರೀನಿವಾಸಪುರ : ಕಂದಾಯ ಅಧಿಕಾರಿ ಎನ್.ಶಂಕರ್ ಮಾತನಾಡಿ ಪಟ್ಟಣ ಹಳೆ ಸಾರ್ವಜನಿಕ ಆಸ್ಪತ್ರೆಯ ಆವಣರದಲ್ಲಿನ 93 ವಾಣಿಜ್ಯ ಪುರಸಭೆ ಮಳಿಗೆಗಗಳು ಇದ್ದು, ಆ ಮಳಿಗೆಗೆಗಳನ್ನು ಕೆಯುಐಡಿಎಫ್ಸಿ ಬ್ಯಾಂಕ್ ನಿಂದ ಸಾಲ ಮಾಡಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಹರಾಜು ಮೂಲಕ ಅಂಗಡಿಗಳನ್ನು ಹರಾಜು ದಾರರಿಗೆ ನೀಡಲಾಗಿದೆ. ಯಾವ ಅಂಗಡಿಯೂ ಖಾಲಿ ಇಲ್ಲ. ಆ ಮಳಿಗೆಗಳಲ್ಲಿನ ಕೆಲ ಅಂಗಡಿಗಳು ಲಕ್ಷಾಂತಾರ ರೂಗಳು ಬಾಡಿಗೆ ಬಾಕಿ ಇದ್ದು, ಗುರುವಾರ ದಾಳಿ ನಡೆಸಿ 10 ಮಳಿಗೆಗೆಗಳಿಗೆ ಬೀಗಮುದ್ರೆ ಹಾಕಲಾಯಿತು ಎಂದರು. ಪುರಸಭೆ ಅಧ್ಯಕ್ಷ […]
ಕೋಲಾರ : ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ ತೋರಿಸಬೇಕು. ನಿಗಧಿತ ಅವಧಿಯಲ್ಲಿ ಕೊಟ್ಟಿರುವ ಗುರಿ ಸಾಧಿಸಬೇಕು. ಸಾರ್ವಜನಿಕರ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫೂಟ್ಟ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು. ಇಂದು ಜಿಲ್ಲಾಳಿತ […]
ಷ್ರೀನಿವಾಸಪುರ : 06-12-2024 ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ರವರ 68 ನೇ ಪುಣ್ಯ ತಿಥಿ ಸಂಬಂಧ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುಲಾಗುವುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಬುಧವಾರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.6-12-2024 ರಂದು ಬೆಳಗ್ಗೆ 9.00 ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|ಬಿ.ಆರ್.ಅಂಬೇಡ್ಕರ್ ರವರ 68 ನೇ ಪುಣ್ಯ ತಿಥಿ ಸಂಬಂಧತಾಲ್ಲೂಕು ಕಛೇರಿಯ ಆವರಣದಲ್ಲಿರುವ ಡಾ|ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮಕ್ಕೆ ಶ್ರೀನಿವಾಸಪುರ ತಾಲ್ಲೂಕಿನ […]
ಶ್ರೀನಿವಾಸಪುರ : ಮಹತ್ವಾಕಾಂಕ್ಷಿ ಮಹಿಳೆಯರಿಗೆ ವಿಶೇಷವಾದ ಅವಕಾಶ ಇದಾಗಿದ್ದು, ಮಹಿಳೆಯರು ಪೂರ್ಣ ಸಮಯ ಅಥವಾ ಅರೆಕಾಲಿಕ ಏಜೆಂಟರಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಬೆಂಗಳೂರು-೨ ವಿಭಾಗದ ಕಾನೂನು ವ್ಯವಸ್ಥಾಪಕ ನರೇಂದ್ರಬಾಬು ತಿಳಿಸಿದರು.ಪಟ್ಟಣದ ಎಲ್ಐಸಿ ಉಪಶಾಖೆಯಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಯೋಜನೆಯಾದ ಬಿಮಾ ಸಖಿ-ಮಹಿಳಾ ಕೆರಿಯರ್ ಏಜೆಂಟ್ ಬಗ್ಗೆ ಮಾಹಿತಿ ನೀಡಿ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಹತೆಯ ಕನಿಷ್ಟ ಪಕ್ಷ ೧೦ ನೇ ತರಗತಿ ತೇರ್ಗಡೆಯಾಗುಬೇಕಾಗಿದ್ದು, ಮಹಿಳೆಯರು ನಿಮ್ಮ ಮನೆಯಲ್ಲಿಯೇ ಇದ್ದುಕೊಂಡು ಕೆಲಸ ಮಾಡುತ್ತಾ ಅನಿಯಮಿತ ಆದಾಯ ಹೊಂದುವ ಸುವರ್ಣಾವಕಾಶ. ಈ ಯೋಜನೆಗೆ […]

