ಕೋಲಾರ:- ಭಾರತ ಸೇವಾದಳ ಸ್ಥಾಪನೆಯ ಮೂಲಕ ದೇಶಪ್ರೇಮ ಸೇವಾ ಮನೋಭಾವವನ್ನು ಸಮಾಜದಲ್ಲಿ ಭಿತ್ತಿದ ನಾರಾಯಣ ಸುಬ್ಬರಾವ್ ಹರ್ಡೀಕರ್ ಅವರ ಆದರ್ಶವನ್ನು ವಿದ್ಯಾರ್ಥಿಗಳು ಪಾಲಿಸುವ ಮೂಲಕ ದೇಶದ ಆಸ್ತಿಯಾಗಿ ಉನ್ನತಿ ಸಾಧಿಸಬೇಕು ಎಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಕರೆ ನೀಡಿದರು.ನಗರದ ಹಳೇ ಮಾಧ್ಯಮಿಕ ಶಾಲೆ, ಉರ್ದು ಹಿರಿಯಪ್ರಾಥಮಿಕ ಶಾಲೆ, ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಸಮ್ಮುಖದಲ್ಲಿ ನಾ.ಸು.ಹರ್ಡೀಕರ್ ಅವರ 49ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಕರ್ನಾಟಕದಲ್ಲಿ ಜನಿಸಿ, ಚಿಕ್ಕಂದಿನಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡರೂ ಎದೆಗುಂದದೆ ಸೇವಾ […]
ಶ್ರೀನಿವಾಸಪುರ : ರೈತರು ಬೆಳೆದ ಅನ್ನ ತಿಂದು ರೈತರಿಗೆ ದ್ರೋಹ ಮಾಡುವ ಅಧಿಕಾರಿಗಳು, ಸಚಿವರು ಕಂಡಲ್ಲಿ ರಾಜ್ಯದಾದ್ಯಂತ ತರಕಾರಿಗಳಿಂದ ಹೊಡೆಯುವ.ಚಳುವಳಿ ಮಾಡುವ ಮೂಲಕ ರೈತರ ಆಕ್ರೋಶ ವ್ಯಕ್ತಪಡಿಸಬೇಕೆಂದು ರಾಜ್ಯ ಮುಖಂಡ ಬಂಗಾವದಿ ನಾಗರಾಜ ಸಲಹೆ ನೀಡಿದರು.ತಾಲೂಕಿನ ಬಳಗೆರೆ ರಂಗೇಗೌಡರ ಟಮೋಟೋ ತೋಟಕ್ಕೆ ಗುರುವಾರ ರೈತ ಸಂಘ ವತಿಯಿಂದ ತೋಟಕ್ಕೆ ಬೇಟಿ ನೀಡಿ ಪಸಲು ಪರಿಶೀಲಿಸಿ ಮಾತನಾಡಿದರು.ರೈತರಾದ ಬಳಗೆರೆ ರಂಗೇಗೌಡ ಮಾತನಾಡಿ ಲಕ್ಷಾಂತರ ರೂಪಾಯಿ ಖಾಸಗಿ ಸಾಲ ಮಾಡಿ ಸ್ಥಳೀಯ ವ್ಯಕ್ತಿಯಾದ ಅರಿಕೆರೆ ರಾಮನಾಥ್ ರವರ ಮಾತು ಕೇಳಿ […]
ಶ್ರೀನಿವಾಸಪುರ : ಪಟ್ಟಣದ ಸರೋಜನಿ ರಸ್ತೆಯಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ನಡೆದ ರಾಘವೇಂದ್ರ ಸ್ವಾಮಿಗಳ ಆರಾದನಾ ಮಹೋತ್ಸವದ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.ತಹಶೀಲ್ದಾರ್ ಜಿ.ಎನ್.ಸುದಿಂದ್ರ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನವೀನ್ ಚಂದ್ರ , ಆರೋಗ್ಯ ಅಧಿಕಾರಿ ಕೆ.ಜಿ.ರಮೇಶ್ , ಕಂದಾಯ ನಿರೀಕ್ಷಕ ಎನ್.ಶಂಕರ್, ಎಫ್ಡಿಎ ನಾಗೇಶ್, ಸುರೇಶ್, ಸಿಬ್ಬಂದಿ ಶಾರದ, ಭಾಗ್ಯಮ್ಮ, ಶ್ರೀನಾಥ್ ದೇವರ ದರ್ಶನ ಪಡೆದರು.
ಶ್ರೀನಿವಾಸಪುರ : ತಾಲೂಕಿನ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ 2023 – 24 ನೇ ಸಾಲಿನ 669 ನೇ ನಮ್ಮೂರು ನಮ್ಮ ಕೆರೆ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಊರಿನ ಗಣ್ಯರಾದ ಶಂಕರ್ ರೆಡ್ಡಿ ಅವರು ಉದ್ಘಾಟಿಸಿದರು.. ಕಾರ್ಯಕ್ರಮದ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಶ್ರೀನಿವಾಸಪುರ ತಾಲೂಕಿನ ಯೋಜನಾಧಿಕಾರಿಯವರಾದ ಪ್ರಕಾಶ್ ಕುಮಾರ್ ಮಾತನಾಡುತ್ತಾ ರಾಜ್ಯದಲ್ಲಿ 67% […]
ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೋಲಾರ ಜಿಲ್ಲಾ ಛಾಯಗ್ರಾಹಕ ಸಂಘದ ಸಂಯುಕ್ತಾಶ್ರಯದಲ್ಲಿ ಹಿರಿಯ ಪತ್ರಿಕಾ ಛಾಯಗ್ರಾಹಕರಾದ ದಿವಂಗತ ಜಿ.ಸೋಮಶೇಖರ್ (ಶೇಖರ್ ಸ್ಟುಡಿಯೋ) ರವರ ನೆನಪಿನಲ್ಲಿ ಆಯೋಜಿಸಲಾದ ಕೋಲಾರ ಜಿಲ್ಲಾ ಮಟ್ಟದ ಛಾಯಾಚಿತ್ರ ಸ್ವರ್ಧೆಯಲ್ಲಿ ಗ್ರಾಮೀಣ ಜನಜೀವನ ಮತ್ತು ಕುಲಕಸುಬು ಸಂಬಧಿಸಿದಂತೆ ಕುರಿ ಕಾಯುವ ಮಹಿಳೆಯೊಬ್ಬರು ಸಂಜೆ ಸಮಯದಲ್ಲಿ ಕುರಿಗಳನ್ನು ದೊಡ್ಡಿಗೆ ಕರೆದೊಯುವ ಅತ್ಯೂತ್ತಮ ಚಿತ್ರಕ್ಕೆ ಪತ್ರಿಕಾ ಛಾಯಗ್ರಾಹಕ ಕೆ.ಎನ್.ಚಂದ್ರಶೇಖರ್ (ಕೋಲಾರ್ ನ್ಯೂಸ್ ಚಂದ್ರು) ಪ್ರಥಮ ಬಹುಮಾನ ಪಡೆದು ಕೊಂಡರು ಜೊತೆಗೆ 5000 ನಗದು ಮತ್ತು […]
ಶ್ರೀನಿವಾಸಪುರ : ಸರ್ಕಾರವು ಈ ಘಟನೆಯ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ನೀಡಿ, ಮುಂದಿನ ದಿನಗಳಲ್ಲಿ ಮಹಿಳಾ ಎಲ್ಲಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಕೊಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷ ಡಾ|| ವೈ.ವಿ.ವೆಂಕಟಾಚಲ ಒತ್ತಾಯಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಶನಿವಾರ ಭಾರತೀಯ ವೈದ್ಯ ಸಂಘ. ಶ್ರೀನಿವಾಸಪುರ ಶಾಖೆಯು ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ ವೈದ್ಯರಿಗೆ ಹಾಗು ಸಿಬ್ಬಂದಿಗೆ ರಕ್ಷಣೆ ಕೋರಿ ಸರ್ಕಾರಕ್ಕೆ ರವಾನಿಸುವಂತೆ ತಹಶೀಲ್ದಾರ್ ಜಿ.ಎನ್.ಸುದಿಂದ್ರ ಮೂಲಕ ಮನವಿ […]
ಕೋಲಾರ,ಆ.16: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ದಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ ಏತುರಹಳ್ಳಿ, ಚುಕ್ಕನಹಳ್ಳಿ ರೈತರ ಮರಗಿಡಗಳ ಎರಡನೇ ಕಂತಿನ ಪರಿಹಾರ ವಿತರಣೆ ಮಾಡುವವರೆಗೂ ಕಾಮಗಾರಿ ಸ್ಥಗಿತಗೊಳಿಸುವಂತೆ ಬುಧವಾರ ನಡೆದ ರೈತರ ಸಭೆಯಲ್ಲಿ ಗುತ್ತಿಗೆದಾರರಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಆಕ್ರಂ ಪಾಷರವರು ಸೂಚನೆ ನೀಡಿದರು.ಮುಳಬಾಗಿಲು ಗಡಿಭಾಗದ ಏತುರಹಳ್ಳಿ ಚುಕ್ಕನಹಳ್ಳಿ ರೈತರಿಗೆ ಬರಬೇಕಾದ 2 ನೇ ಕಂತಿನ ಮರಗಿಡಗಳ ಪರಿಹಾರ ನೀಡಲು ಅಧಿಕಾರಿಗಳ ನಿರ್ಲಕ್ಷದ ಬಗ್ಗೆ ನೊಂದ ರೈತರಾದ ರಾಜಣ್ಣ, ನಟರಾಜ್ರವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಸಭೆ ಕರೆದು ಸಮಸ್ಯೆ ಬಗೆಹರಿಸುತ್ತೇವೆಂದು […]
ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಕ್ರಾಸ್ ಸಮೀಪದ ವಿಐಪಿ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಮಾತನಾಡಿ ದೇಶದ ಸ್ವಾತಂತ್ರ್ಯ ರಕ್ಷಣೆ ಎಲ್ಲರ ಹೊಣೆ’ ಎಂದರು. ಭಾರತ ಸ್ವಾತಂತ್ರ್ಯಾನಂತರ ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದೆ. ದೇಶದ ಬಹುದೊಡ್ಡ ಜನಸಂಖ್ಯೆಗೆ ಮೂಲ ಸೌಕರ್ಯ ಒದಗಿಸುವಲ್ಲಿ ಯಶಸ್ವಿಯಾಗಿದೆ. ನಾಗರಿಕರ ತಲಾದಾಯದಲ್ಲೂ ಹೆಚ್ಚಳವಾಗಿದೆ. ಈ ಪರಿಸ್ಥಿತಿಗೆ ಕಾರಣರಾದ ಸ್ಯಾತಂತ್ರ್ಯ ಹೋರಾಟಗಾರಿಗೆ ನಾವು ಕೃತಜ್ಞರಾಗಿರಬೇಕು ಎಂದು ವಿಐಪಿ ಶಾಲೆಯ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. […]
ಕೋಲಾರ:- ಪ್ರತಿಯೊಬ್ಬರೂ ಜಾತಿ ಮತ ಧರ್ಮಗಳನ್ನು ಮೀರಿ ಭಾರತೀಯರೆಂಬ ಭಾವನೆಯಲ್ಲಿ ದೇಶದ ಅಖಂಡತೆ ಮತ್ತು ಸಾರ್ವಭೌಮತ್ವತೆಯನ್ನು ಕಾಪಾಡಬೇಕೆಂದು ಭಾರತ ಸೇವಾದಳ ಗೌರವಾಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ, ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿ, ಹಳೇ ಮಾಧ್ಯಮಿಕ ಶಾಲೆ, ಉರ್ದು ಮಾಧ್ಯಮಿಕ ಶಾಲೆ ಹಾಗೂ ರೋಟರಿ ಸೆಂಟ್ರಲ್ವತಿಯಿಂದ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡು ನಿವೃತ್ತರಾಗಲಿರುವ ಬಿಇಒ ಕನ್ನಯ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸುಲೇಮಾನ್ ಖಾನ್ರನ್ನು […]

