ಶ್ರೀನಿವಾಸಪುರ ಮೇ 13: ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಈ ಕಾಮಗಾರಿಯ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿರಲಿಲ್ಲ. ದೇವರ ಪ್ರೇರಣೆಯಿಂದ ನನ್ನಿಂದ ಈ ಕಾರ್ಯ ನಡೆಯುತ್ತಿದ್ದು, ಈ ಅವಕಾಶ ನೀಡಿದ ದೇವರಿಗೆ ನಾನು ಧನ್ಯನಾಗಿದ್ದೇನೆ ಎಂದು ಹೇಳಿದರು. ರಾಜಗೋಪುರ ನಿರ್ಮಾಣಕ್ಕಾಗಿ ಶಾಸಕ ನಿಧಿಯಿಂದ ₹1 ಕೋಟಿ ಹಾಗೂ ಮುಜರಾಯಿ ಇಲಾಖೆಯಿಂದ ₹50 […]
ಶ್ರೀನಿವಾಸಪುರ, ಮೇ 12: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಕೋಶದ ಘನ ತ್ಯಾಜ್ಯ ನಿರ್ವಹಣೆ ಜಿಲ್ಲಾ ನೋಡಲ್ ಅಧಿಕಾರಿ ನವೀನ್ ಚಂದ್ರ ಹಾಗೂ ಎಸ್ಡಬ್ಲ್ಯೂಎಂ ತಜ್ಞ ಹರ್ಷ ಅವರು ಘನ ತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ಮನೆಮನೆಗಳಲ್ಲಿ ತ್ಯಾಜ್ಯವನ್ನು ಮೂಲದಲ್ಲೇ ಹಸಿ, ಒಣ, ಸ್ಯಾನಿಟರಿ ಹಾಗೂ ಅಪಾಯಕಾರಿ ತ್ಯಾಜ್ಯವಾಗಿ ವಿಂಗಡಣೆ ಮಾಡುವುದು, ಸಂಗ್ರಹಣೆ, ಸಾಕಾಣಿಕೆ ಹಾಗೂ ವೈಜ್ಞಾನಿಕ ವಿಲೇವಾರಿ ಮಾಡುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಸ್ವಚ್ಛ […]
ಮಂಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಪುಸ್ತಕಕ್ಕೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ ಸಾಹಿತ್ಯಕ್ಕಾಗಿ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಪ್ರತೀ ವರ್ಷ 22 ಅನುಸೂಚಿತ ಭಾಷೆಗಳ ಜೊತೆಗೆ ಇಂಗ್ಲಿಷ್ ಮತ್ತು ರಾಜಸ್ಥಾನಿ ಹೀಗೆ 24 ಭಾಷೆಗಳ […]
ಪಾರದರ್ಶಕ ಆಡಳಿತ, ಜನಸಹಭಾಗಿತ್ವ ಮತ್ತು ಅಭಿವೃದ್ಧಿ ಕಾರ್ಯಗಳ ಸಮರ್ಪಕ ಜಾರಿಗೆ ಸಾರ್ವಜನಿಕರ ಒತ್ತು ಶ್ರೀನಿವಾಸಪುರ : ಗ್ರಾಮ ಪಂಚಾಯಿತಿಗಳು ಗ್ರಾಮೀಣ ಭಾರತದ ಆಡಳಿತ ವ್ಯವಸ್ಥೆಯ ಮೂಲ ಆಧಾರವಾಗಿದ್ದು, ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪ್ರಮುಖ ಶಕ್ತಿಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.ಸರ್ಕಾರದ ಜನಪರ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಜನರಿಗೆ ತಲುಪಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ವಹಿಸುವ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ವೃದ್ಧಿ, ಜನಸಾಮಾನ್ಯರ ಸಮಸ್ಯೆಗಳ ತ್ವರಿತ ಪರಿಹಾರ ಮತ್ತು ಪಾರದರ್ಶಕ ಆಡಳಿತ ವ್ಯವಸ್ಥೆ ನಿರ್ಮಾಣದಲ್ಲಿ […]
ಕೋಲಾರ, ಮೇ.೯: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವೇ ಕಾರ್ಯಕರ್ತರು. ಗ್ರಾಮ ಮಟ್ಟದಲ್ಲಿ ಸಂಘಟನೆ ಗಟ್ಟಿಗೊಂಡರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸು ದೊರೆಯಲಿದೆ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಹೇಳಿದರು. ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಹಾಗೂ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಬೂತ್ ಮಟ್ಟದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್ಐಆರ್ ಜಾಗೃತಿ ಕಾರ್ಯಕ್ರಮ ಹಾಗೂ ಪಕ್ಷದ ವತಿಯಿಂದ ಬೂತ್ ಮಟ್ಟದ ಏಜೆಂಟ್ಗಳ ನೇಮಕಾತಿ ಕುರಿತು […]
ಬೆಂಗಳೂರು : ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಆಸ್ಪತ್ರೆ ಚಿಕಿತ್ಸೆಗೆ ₹4 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಹನುಮಂತಪ್ಪ ಹಳ್ಳಿಕೇರಿ ಅವರು ಚಿಕಿತ್ಸೆಗಾಗಿ ಹೆಚ್ಚಿನ ವೆಚ್ಚ ಎದುರಿಸುತ್ತಿದ್ದು, ಆರ್ಥಿಕ ನೆರವಿನ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಗಮನಕ್ಕೆ ವಿಷಯವನ್ನು ತಂದಿದ್ದು, ತಕ್ಷಣ ನೆರವು […]
ಶ್ರೀನಿವಾಸಪುರ : ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸುವ ಮೂಲಕ ಮಹಿಳೆಯರನ್ನ ಅರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯನ್ನ ಸದ್ಭಳಿಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ಬಿಸಿಎಂ ಕಾರ್ಪರೇಷನ್ ಇಲಾಖೆ ವತಿಯಿಂದ ಉಚಿತವಾಗಿ ಅರ್ಹ ಫಲಾನುಭಿವಿಗಳಿಗೆ 14 ಹೊಲಿಗೆ ಯಂತ್ರ ವಿತರಸಿ ಮಾತನಾಡಿದರು. ಪಶ್ಚಿಮ ಬಂಗಳಾದಲ್ಲಿ […]
ಶ್ರೀನಿವಾಸಪುರ : ಆರೋಗ್ಯವು ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ಸಂಪತ್ತು ಹಾಗು ಭಾಗ್ಯ. . ಅಂದರೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯವೇ ಮನಷ್ಯನ ನಿಜವಾದ ಸಂಪತ್ತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆ ನೀಡಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮಂಗಳವಾರ 15 ನೇ ಹಣಕಾಸು ಯೋಜನೆಯಡಿಯಲ್ಲಿ 60 ಲಕ್ಷ ಮೌಲ್ಯದಲ್ಲಿ ನಿರ್ಮಿಸಲಾದ ಲ್ಯಾಬ್ನ ನೂತನ ಕಟ್ಟಡವನ್ನು ಉದ್ಗಾಟಿಸಿ ಮಾತನಾಡಿದರು. ಹಣ ಅಂತಸ್ತು ಇದ್ದರೂ ಆರೋಗ್ಯವಿಲ್ಲದಿದ್ದರೆ ಜೀವನ ನರಕವಾಗುತ್ತದೆ. ಇಂದು ಆರೋಗ್ಯವಂತ ವ್ಯಕ್ತಿ ಮಾತ್ರ ಜೀವನದ ಸುಖ, ಸಂತೋಷಗಳನ್ನು ಅನುಭವಿಸಲು ಸಾಧ್ಯ. ಉತ್ತಮ […]
ಕೋಲಾರ:- ಪತ್ರಕರ್ತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಜಮೀನು ಮಂಜೂರು ಮಾಡುವ ಸಾಧ್ಯತೆಗಳ ಪರಿಶೀಲಿಸುವುದರ ಜೊತೆಗೆ ಕೆಯುಡಿಎ ಸೇರಿದಂತೆ ಪರ್ಯಾಯ ಮಾರ್ಗದಿಂದಲೂ ನಿವೇಶನ ಒದಗಿಸಲು ಪರಿಶೀಲಿಸಿ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಭರವಸೆ ನೀಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಕೋಲಾರ ಸುತ್ತ ಮುತ್ತ ಪತ್ರಕರ್ತರಿಗೆ ಸೂರು ಕಟ್ಟಿಕೊಳ್ಳಲು ಅಗತ್ಯವಾದ 5 ಎಕರೆ ಜಮೀನು ಮಂಜೂರಾತಿ ಕೋರಿ ಮಾಡಿದ ಮನವಿಗೆ ಸ್ಪಂದಿಸಿ ಅವರು ಮಾತನಾಡುತ್ತಿದ್ದರು.ಸರ್ಕಾರದಿಂದ ಜಮೀನು ಪಡೆಯುವ ಪ್ರಯತ್ನದ ಜೊತೆಗೆ ಪರ್ಯಾಯವಾಗಿಯೂ ನಿವೇಶನ ಪಡೆದುಕೊಳ್ಳಲು ಪ್ರಯತ್ನಿಸಿ […]

