ಶ್ರೀನಿವಾಸಪುರ : ಪಟ್ಟಣದ ಎಸ್ಎಫ್ಎಸ್ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿದ ಫಾದರ್ ಸ್ಯಾಂಟಿ ಕುರೈನ್, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಫಾದರ್ ನೆಲ್ಸನ್, ಶಾಲಾ ಪ್ರಾಂಶುಲರು, ಶಿಕ್ಷಕರು, ವಿದ್ಯಾರ್ಥಿಗಳು, ಮತ್ತೀತರರು ಉಪಸ್ಥಿತರಿದ್ದರು
ಕೋಲಾರ : ಕೋಲಾರ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಇ-ಖಾತಾ ಹಾಗೂ ಮೂಟೇಷನ್ ಕುರಿತು ಸಮಸ್ಯೆಯಿದ್ದು, ಇನ್ನೂ ಮೂರು ತಿಂಗಳೊಳಗಾಗಿ ಏ ಹಾಗೂ ಬಿ-ಖಾತಾ ನೀಡಲು ಕ್ರಮಕೈಗೊಳ್ಳಲಾಗುವುದೆಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೋಲಾರದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಅಂಗಡಿ-ಮುಂಗಟ್ಟು ಹಾಗೂ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅವರಿಗೆ ರಸ್ತೆ, ವಿದ್ಯುತ್, ನೀರು, ಚರಂಡಿ ಮುಂತಾದ ಮೂಲಭೂತ ಸೌಕರ್ಯಗಳು ಬೇಕಾಗಿವೆ. ಆದರೆ […]
ಶ್ರೀನಿವಾಸಪುರ: ರೋಟರಿ ಸಂಸ್ಥೆಯು ಸೇವಾ ಮನೋಭಾವನೆಯನ್ನು ಹೊಂದಿದ್ದು, ಶಿಕ್ಷಣ ಮತ್ತುಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆಎಂದುರೋಟರಿ ಶ್ರೀನಿವಾಸಪುರ ಸೆಂಟ್ರಲ್ನ ಅಧ್ಯಕ್ಷರಾದ ಎಸ್.ಎನ್. ಮಂಜುನಾಥರೆಡ್ಡಿ ತಿಳಿಸಿದರು.ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಹಾಗೂ ಬೆಂಗಳೂರಿನ ರೋಟರಿ ಸೌತ್ಕ್ಲಬ್ನ ಸಹಭಾಗಿತ್ವದಲ್ಲಿತಾಲ್ಲೂಕಿನ ಯಲ್ದೂರಿನಲ್ಲಿರುವ ಶ್ರೀ ಶ್ರೀನಿವಾಸ ಪಬ್ಲಿಕ್ ಶಾಲೆಯಲ್ಲಿ1 ರಿಂದ 10ನೇ ತರಗತಿಯ ಸುಮಾರು 150 ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದಎಸ್.ಎನ್. ಮಂಜುನಾಥರೆಡ್ಡಿ, ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ಉಪಯೋಗಿಸಿಕೊಳ್ಳಬೇಕು, ಒಳ್ಳೆಯ ಶಿಕ್ಷಣವನ್ನು ಪಡೆದುಕೊಳ್ಳಬೇಕು, ಭವಿಷ್ಯದಲ್ಲಿಉತ್ತಮ ಪ್ರಜೆಗಳಾಗಿ ಬೆಳೆದು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ರೋಟರಿ […]
ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕಿಗೆ ಬರುತ್ತಿದ್ದ ಕೆಸಿ ವ್ಯಾಲಿ ನೀರನ್ನು ಒಂದು ವರ್ಷದಿಂದ ನಿಲ್ಲಿಸಿರುತ್ತಾರೆ ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿದ್ದು, ಕೂಡಲೇ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರನ್ನ ಹರಿಸಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ನಂಬಿಹಳ್ಳಿ ಎನ್.ಜಿ. ಶ್ರೀರಾಮರೆಡ್ಡಿ ಒತ್ತಾಯಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ರವರಿಗೆ […]
ಶ್ರೀನಿವಾಸಪುರ : ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ 27 ರಂದು ಕೆಂಪೇಗೌಡ ಆಚರಣೆಯನ್ನು ಎಲ್ಲಾ ಕಚೇರಿಗಳಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡಬೇಕು ನಂತರ ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗುಳ್ಳಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕೆಂಪೇಗೌಡ ಜಂಯಿತಿ ಆಚರಣೆಗಾಗಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.ಅಲ್ಲದೆ ಕೆಂಪೇಗೌಡರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಿಳುದುಕೊಳ್ಳುವ ನಿಟ್ಟಿನಲ್ಲಿ ಶಾಲಾಕಾಲೇಜುಗಳಲ್ಲಿ ಪ್ರಬಂದ ಸ್ಪರ್ದೆ ಮಾಡಿಸಿ ಪ್ರಬಂದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು […]
ಶ್ರೀನಿವಾಸಪುರ ವಿಶೇಷ ಚೇತನರೆಂದರೆ ಅಸಮರ್ಥರು ಎನ್ನುವ ತಪ್ಪು ಬ್ರೇಮೆ ಬೇಡ, ಅವರಲ್ಲಿಯೂ ವಿಶೇಷ ಸಾಮಥ್ರ್ಯ ಇರುತ್ತದೆ ಇದಕ್ಕೆ ಸಾಕ್ಷಿಯೇ ಪತ್ರ ಕರ್ತರಾದ ಸೋಮಶೇಖರ್ ಹಾಗೂ ನಿರಂತರ ಶ್ರಮವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು ಎಂದ ವಿಧಾನ ಪರಿಷತ್ ಮಾಜಿ ಸಚೇತಕ ಡಾ|| ವೈ.ಎ. ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಕರ್ನಾಟಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ 2023-24ನೇ ಸಾಲಿನ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಸ್ಥಳೀಯ ಪ್ರದೇಶ ಅಭಿವೃದ್ದಿ ನಿದಿಯಿಂದ ಶೇಕಡ 5 ಅನುದಾನದಲ್ಲಿ ತ್ರಿಚಕ್ರ ವಾಹನವನ್ನು ವಿತರಿಸಿ […]
ಶ್ರೀನಿವಾಸಪುರ : ದೇಶದಲ್ಲೆ ಎಲ್ಐಸಿಯು ದೊಡ್ಡ ಸಂಸ್ಥೆಯಾಗಿದ್ದು, ಎಲ್ಐಸಿ ಸಂಸ್ಥೆಯು ಖಾಸಗಿ ಸಂಸ್ಥೆಗಳಿಂತ ಹೆಚ್ಚು ಭದ್ರತೆಯನ್ನು ನೀಡಲಿದೆ. ದೇಶದ ಅತಿವೃಷ್ಟಿ , ಅನಾವೃಷ್ಟಿ ಸಮಯದಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದೆ ಎಂದು ಎಲ್ಐಸಿ ಕೇಂದ್ರ ಶಾಖೆಯ ಬೆಂಗಳೂರಿನ ವಿಭಾಗ-2ರ ಮಾರುಕಟ್ಟೆ ವ್ಯವಸ್ಥಾಪಕ ಕೆ.ಅರವಿಂದ್ ಹೇಳಿದರು.ಪಟ್ಟಣದ ಎಲ್ಐಸಿ ಉಪಶಾಖೆಯಲ್ಲಿ ಮಂಗಳವಾರ ಪಾಲಸಿ ಅಭಿಯಾನದ ಅಂಗವಾಗಿ ತಾಲೂಕಿನ ಎಲ್ಐಸಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.ಪ್ರತಿನಿಧಿಗಳು ಗ್ರಾಮಗಳಿಗೆ ಭೇಟಿ ನೀಡಿ ಎಲ್ಐಸಿ ಪ್ರಚಾರ ಮಾಡಬೇಕು. ಮುಖ್ಯವಾಗಿ ಮಹಿಳೆಯರಿಗೆ ಅರಿವು ಮೂಡಿಸಿದಲ್ಲಿ ಹೆಚ್ಚಿನ ಪ್ರಯೋಜನವಾಗುತ್ತದೆ. ಮಹಿಳಾ ಪಾಲಿಸಿದಾರರ […]
ಕೋಲಾರ:- ಜಿಲ್ಲೆಯ 17 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇಂದು ಪರೀಕ್ಷೆಗೆ ಜಿಲ್ಲೆಯ 385 ಪ್ರೌಢಶಾಲೆಗಳ 4293 ಮಂದಿ ನೋಂದಣಿ ಮಾಡಿದ್ದು, 534 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೇ ಪರೀಕ್ಷೆ ನಡೆದಿದೆ, ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ 4293 ಮಂದಿ ಪೈಕಿ 3759 ವಿದ್ಯಾರ್ಥಿಗಳ ಪೈಕಿ 3516 ಮಂದಿ ಹಾಜರಾಗಿದ್ದು, 534 ಮಂದಿ ಗೈರಾಗಿದ್ದರು ಎಂದು ತಿಳಿಸಿದರು. ತಾಲ್ಲೂಕುವಾರು ಕೇಂದ್ರಗಳ ವಿವರ […]
ಕೋಲಾರ:- ಹಿಂದಿ ಕಲಿಕೆಯಿಂದ ರಾಜ್ಯದ ವಿದ್ಯಾರ್ಥಿಗಳನ್ನು ವಂಚಿಸುವುದರಿಂದ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅನ್ಯಾಯವಾಗಲಿದೆ ಈ ಹಿನ್ನಲೆಯಲ್ಲಿ ತೃತೀಯ ಭಾಷೆ ಜತೆಜತೆಗೆ ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೂ ಎನ್ಎಸ್ಕ್ಯೂಎಫ್ ಅಡಿ ವೃತ್ತಿಕೌಶಲ ಯೋಜನೆ ಅನುಷ್ಟಾನಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಶಾಲಾ ಶಿಕ್ಷಣ ಉಪನಿರ್ದೇಶಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.ಜಿಲ್ಲೆಯ ವಿವಿಧ ಶಿಕ್ಷಕ ಸಂಘಟನೆಗಳ ನೇತೃತ್ವದಲ್ಲಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ವಿ.ವಿ.ರಾಮಕೃಷ್ಣಪ್ಪ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ […]

