
ಶ್ರೀನಿವಾಸಪುರ 1 : ರೈತರು ತಂತ್ರಜ್ಞಾನ ಬಳಸಿ ಕೃಷಿ ಮಾಡಿದರೆ ನಷ್ಟವಾಗುವುದನ್ನ ತಪ್ಪಸಿ ಲಾಭಾದಾಯಕ ಕೃಷಿ ಮಾಡಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ರೈತರಿಗೆ ಸಲಹೆ ನೀಡಿದರು.ತಾಲೂಕಿನ ದೊಡ್ಡಬಂದಾರ್ಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಹಾಗು ಕೃಷಿ ಇಲಾಖೆ ಸಹಯೋಗದಲ್ಲಿ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಡಿಯಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿಶೇಷವಾಗಿ ರೈತರು ನೈಸರ್ಗಿಕ ಸಂಪನ್ಮೂಲಗಳನ್ನು ಬಳಕೆ ಮಾಡಿದರೆ ಕೃಷಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸಬಹುದು ಇದರೊಂದಿಗೆ ಮುಂದಿನ ಪೀಳಿಗೆಗೆ ಕೃಷಿ ವರ್ಗಾಯಿಸಬೇಕಾದರೆ […]

ಶ್ರೀನಿವಾಸಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಒಂದು ಶಿಸ್ತುಬದ್ಧ ಸೇವಾ ಸಂಸ್ಥೆಯಾಗಿದೆ. ಅಗತ್ಯ ಸಂದರ್ಭಗಳಲ್ಲಿ ಗಣನೀಯ ಸೇವೆ ಮಾಡುವುದರ ಮೂಲಕ ಸಮಾಜದ ಗೌರವಕ್ಕೆ ಪಾತ್ರವಾಗಿದೆ ಎಂದು ಪ್ರಾಂಶುಪಾಲೆ ಆರ್.ಮಾಧವಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಭಗತ್ಸಿಂಗ್ ರೋವರ್ಸ್ ಕ್ರೂ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಈ ಸೇವಾ ಸಂಸ್ಥೆಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವಲ್ಲಿ ಉಪನ್ಯಾಸಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.ಶಿಕ್ಷಕ ಟಿ.ಎಂ.ರಾಮಕೃಷ್ಣೇಗೌಡ ಮಾತನಾಡಿ, ಈ […]

ಶ್ರೀನಿವಾಸಪುರ: ತಾಲ್ಲೂಕಿನ ಪಾತೂರು ಗ್ರಾಮದ ಮಹಿಳೆಯರು ಜೀವ ವಿಮೆ ಮಾಡಿಸಲು, ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಗೆ ಹಣ ನೀಡಿ ಮೋಸಹೋಗಿರುವ ಘಟನೆ ನಡೆದಿದೆ.ಅ.11 ರಂದು ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ತಾನು ತಮಿಳುನಾಡಿನ ಶಿವಗುಣ, ಚಿಂತಾಮಣಿಯಲ್ಲಿ ಟಿಎಂಎಫ್ ಫೈನಾನ್ಸ್ ಎಂಬ ಸಂಸ್ಥೆ ನಡೆಸುತ್ತಿದ್ದೇನೆ. ಟಿಎಂಎಫ್ ಮೂಲಕ ಜೀವ ವಿಮೆ ಮಾಡಿಸುತ್ತೇನೆ. 10 ಮಂದಿ ಮಹಿಳೆಯರು ಗುಂಪಾಗಿ ರೂ.1 ಲಕ್ಷ ಜೀವ ವಿಮೆ ಪಡೆಯಲು ತಲಾ ರೂ.2600 ಹಾಗೂ ರೂ.50 ಸಾವಿರ ಜೀವ ವಿಮೆ ಪಡೆಯಲು ರೂ.1300 ಕಟ್ಟಬೇಕು […]

ಶ್ರೀನಿವಾಸಪುರ: ಪ್ಲಾಸ್ಟಿಕ್ನಿಂದ ತೊಂದರೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ಪುರಸಭೆ ಹಾಗೂ ನೇತಾಜಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಪ್ಲಾಸ್ಟಿಕ್ ಮುಕ್ತ ಜಾಗೃತಿ ಅಭಿಯಾನ ಕಾರ್ಯಾಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ಲಾಸ್ಟಿಕ್ ಪಟ್ಟಣದ ಸ್ವಚ್ಛ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ನಾಗರಿಕರು ಎಸೆಯುವ ಪ್ಲಾಸ್ಟಿಕ್ ಕವರ್ ಮತ್ತಿತರ ವಸ್ತುಗಳು ಚರಂಡಿ ಸೇರಿ ನೀರು ಸರಾಗವಾಗಿ ಹರಿಯುವುದನ್ನು ತಡೆಯುತ್ತದೆ. ಕೆಲವು ಸಲ ಪ್ಲಾಸ್ಟಿಕ್ ವಸ್ತುಗಳು ಜಾನುವಾರು ಹೊಟ್ಟೆ ಸೇರಿ ಪ್ರಾಣಾಂತಿಕವಾಗುತ್ತದೆ. […]

ಶ್ರೀನಿವಾಸಪುರ: ಫಲವತ್ತಾದ ಮಣ್ಣು ಭೂ ಸವಕಳಿ ಮೂಲಕ ಹಾಳಾಗದಂತೆ ಎಚ್ಚರವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಶಿವಕುಮಾರಿ ಹೇಳಿದರು.ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಮತ್ತು ಸ್ಥಳೀಯ ಪುರಸಭೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ನನ್ನ ಮಣ್ಣು ನನ್ನ ದೇಶ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಣ್ಣು ಅತ್ಯಂತ ಅಮೂಲ್ಯವಾದ ಸಂಪನ್ಮೂಲ. ಅರಣ್ಯ ನಾಶ, ಅವೈಜ್ಞಾನಿಕ ಉಳುಮೆ ಕಾರಣಗಳಿಂದ ಮಣ್ಣಿನ ಸವಕಳಿ ಹೆಚ್ಚಿದ. […]

ಶ್ರೀನಿವಾಸಪುರ : ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು ಸ್ಥಳೀಯ ಸಹಕಾರದಿಂದ ಅಧಿಕಾರಿಗಳು ಮಾಡಬೇಕಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಪುರಸಭೆಯಲ್ಲಿ ಗುರುವಾರ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು. ಕುಂದುಕೊರತೆ ಸಭೆಯಲ್ಲಿ ಸಾರ್ವಜಿನಕರೊಂದಿಗೆ ಮಾತನಾಡುತ್ತಾ ಯಾವುದೇ ಕಛೇರಿಯಲ್ಲಿ ತಮ್ಮ ಕೆಲಸ ಕಾರ್ಯಗಳು ನಡೆಯದೆ ಇದ್ದರೆ ಅಥವಾ ನಿಮ್ಮ ಕೆಲಸಗಳನ್ನು ಸಂಬಧಿಸಿದ ಅಧಿಕಾರಿ ಮಾಡಿಕೊಡದೆ ಇದ್ದ ಪಕ್ಷದಲ್ಲಿ ನನಗೆ ಮಾಹಿತಿ ನೀಡಿದರೆ ಆ ಅಧಿಕಾರಿಯೊಂದಿಗೆ ನಿಮ್ಮ ಸಮಸ್ಯೆಯ ಬಗ್ಗೆ ಚರ್ಚೆ ಮಾಡಿ […]

ಕೋಲಾರ, ಆ.11: ಅರಣ್ಯ ಭೂಮಿ ಎರಡನೇ ಒತ್ತುವರಿ ಕಾರ್ಯಚಾರಣೆ ಮುಂದುವರೆಸಿ ಬಲಾಡ್ಯ ಶ್ರೀಮಂತರಿಗೂ ಬಡವರಿಗೂ ಕಾನೂನು ಒಂದೇ ಎಂದು ಸಾಭೀತುಪಡಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲುರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಆಕ್ರಮ ದರಕಾಸ್ತ್ ಕಮಿಟಿ ಮೂಲಕ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ 30 -40 ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಮಂಜೂರಾತಿ ನೆಪದಲ್ಲಿ 3200 ಎಕರೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮಾತ್ರ ಒತ್ತುವರಿ ಕಾರ್ಯಚಾರಣೆ ಮಾಡುವ ಮುಖಾಂತರ ಉಪ್ಪು ತಿಂದವರು ನೀರು ಕುಡಿಯಲೇಬೇಕೆಂಬ ಗಾದೆಯಂತೆ ಮೊದಲನೇ ಹಂತದಲ್ಲಿ 1550 […]

ಶ್ರೀನಿವಾಸಪುರ : ಮಾನಸಿಕ ಅಸ್ವಸ್ಥ ದಿನಾಚರಣೆಯು ಒಂದು ರೀತಿಯಲ್ಲಿ ಮಾನಸಿಕವಾಗಿ ಅಸ್ವಸ್ಥಾದವರ ಬಗ್ಗೆ ಜಾಗೃತಿ ಹಾಗು ಸಹಾನುಭೂತಿ ಮತ್ತು ರೂಪಾಂತರವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸಪುರ ಪ್ರಧಾನ ಸಿವಿಲ್ ನ್ಯಾಯಾದೀಶರಾದ ಬಿ.ಕೆ.ಮನು ಹೇಳಿದರು.ತಾಲೂಕಿನ ಪಿಲ್ಲಕುಂಟೆ ಗ್ರಾಮದ ದಿವ್ಯಜ್ಯೋತಿ ವೃದ್ಧಾಶ್ರಮದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ ಮಂಗಳವಾರ ಮಾನಸಿಕ ಅಸ್ವಸ್ಥ ದಿನ ಮತ್ತು ಹಿರಿಯ ನಾಗರೀಕರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮಾನಸಿಕ ಆರೋಗ್ಯ ಪರಿಸ್ಥಿತಿಗಳ ಪ್ರಭುತ್ವ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸುವ ಸಾಮೂಹಿಕ ಪ್ರಯತ್ನಗಳು ಇದಾಗಿವೆ. […]

ಶ್ರೀನಿವಾಸಪುರ: ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಬೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಹೇಳಿದರು.ಪಟ್ಟಣದ ಕರ್ನಾಟಕ ಸರ್ಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾ ಜಾಗೃತಿ ವೇದಿಕೆ, ಬಳ್ತಂಗಡಿ ಅಖಿಲ ಜನಜಾಗೃತಿ ವೇದಿಕೆ, ಡಿಜಿ ಯೋಜನೆ ಹಾಗೂ ಸ್ಥಳೀಯ ಉನ್ನತೀಕೃತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ದುಶ್ಚಟಗಳು ಮನುಷ್ಯನ ಆತ್ಮಬಲ ಕುಗ್ಗಿಸುತ್ತವೆ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಕೆಡಲು ಕಾರಣವಾಗುತ್ತವೆ. […]