ಶ್ರೀನಿವಾಸಪುರ : ಸರ್ಕಾರವು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಬಿಸಿಊಟ, ಸಮವಸ್ತ್ರ, ಉಚಿತ ಪುಸ್ತಕಗಳು ಹೀಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೂ ಸಹ ಸರ್ಕಾರಿ ಶಾಲೆಗಳನ್ನು ಉಳಿಸಲು ಅನೇಕ ರೂಪರೇಷಗಳನ್ನು ಹಮ್ಮಿಕೊಂಡಿದೆ. ಆದರೂ ಸರ್ಕಾರಿ ಶಾಲೆಗಳೆಂದರೆ ಮಕ್ಕಳ ಪೋಷಕರಲ್ಲಿ ಒಂದು ರೀತಿಯಲ್ಲಿ ನಿರುತ್ಸಾಹ.ಇಂತಹ ಸಂದರ್ಭದಲ್ಲಿ ತಾಲೂಕಿನ ಜೆ.ತಿಮ್ಮಸಂದ್ರ ಗ್ರಾ.ಪಂ.ವ್ಯಾಪ್ತಿಯ ಕಿರುವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡದ ಕಳಪೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ […]
ಶ್ರೀನಿವಾಸಪುರ : ದೇವಾಲಯಗಳು ಮನುಷ್ಯನ ಜೀವನಕ್ಕೆ ದಾರಿದೀಪವಾಗಿದ್ದು, ದೇವರ ಆರಾಧನೆಯಿಂದ ನೆಮ್ಮದಿಯ ಬದುಕು ಪ್ರಾಪ್ತಿಯಾಗುತ್ತದೆ ಎಂದು ಗ್ರಾಮದ ಮುಖಂಡ ತೂಪಲ್ಲಿ ಮಧುಸೂದನರೆಡ್ಡಿ ಹೇಳಿದರು. ಶ್ರೀನಿವಾಸಪುರ ತಾಲೂಕಿನ ನೆಲವಂಕಿ ಹೋಬಳಿ ತೂಪಲ್ಲಿ ಗ್ರಾಮದಲ್ಲಿ ನಡೆದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ವಾರ್ಷಿಕೋತ್ಸವ ಹಾಗು ಲೋಕಾಕಲ್ಯಾಣರ್ಥವಾಗಿ ಕಲ್ಯಾಣೋತ್ಸವ, ರಾಮಕೋಟಿ ಕಾರ್ಯಕ್ರಮಗಳ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮದ ಶ್ರೀಕೋದಂಡರಾಮಸ್ವಾಮಿ ದೇವಾಲಯವು ಪುರತಾನವಾಗಿದ್ದು , ಕಳೆದ ಎರಡು ವರ್ಷಗಳಿಂದ ಪುನಃಪ್ರತಿಷ್ಟಾಪಿಸಲಾಗಿದ್ದು, ದೇವಾಲಯಕ್ಕೆ ಉತ್ಸವ ಮೂರ್ತಿಗಳನ್ನು ತಂದು ಅವುಗಳಿಗೆ ವಿಶೇಷ ಪೂಜೆಗಳನ್ನು ಮಾಡಿ […]
ಬೆಂಗಳೂರು : ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಶೇ.12 ರಷ್ಟು ಜಾಹೀರಾತು ದರವನ್ನು ಶೀಘ್ರವೇ ಹೆಚ್ಚಳ ಮಾಡಲಾಗುವುದೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ಭರವಸೆ ನೀಡಿದರು. ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಆಯುಕ್ತರನ್ನು ಭೇಟಿ ಮಾಡಿ ಈ ಹಿಂದಿನ ಆಯುಕ್ತರೊಂದಿಗೆ ಸಂಘದ ಪದಾಧಿಕಾರಿಗಳು ಸಭೆ ನಡೆಸಿ ಸಲ್ಲಿಸಲಾದ ಮನವಿಯಲ್ಲಿನ ಬೇಡಿಕೆಗಳ ಕುರಿತು ಆಯುಕ್ತರ […]
ಕೋಲಾರ; ಮೇ.6: ರೈತರ ಹೈನೋದ್ಯಮದ ಕ್ಷೀರಭಾಗ್ಯ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿ ಬರದಿಂದ ತತ್ತರಿಸಿರುವ ರೈತರ ರಕ್ಷಣೆಗೆ ಸಹಕಾರ ಸಚಿವರು ನಿಲ್ಲಬೇಕೆಂದು ರೈತ ಸಂಘದಿಂದ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಗೋಪಾಲಮೂರ್ತಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೇಷ್ಮೆ, ಮಾವು, ಟೊಮೇಟೊ ಬೆಳೆಗಳಿಗೆ ಬಾದಿಸುತ್ತಿರುವ ರೋಗಗಳಿಂದ ತತ್ತರಿಸಿ ಹಾಕಿದ ಬಂಡವಾಳ ಕೈಗೆ ಸಿಗದೆ ಸಂಕಷ್ಟದಲ್ಲಿದ್ದ ರೈತರ ಕೈ ಹಿಡಿದ ಹೈನೋದ್ಯಮ ಇಂದು ದಿನೇ ದಿನೇ ನಷ್ಟದ ಸುಳಿಯಲ್ಲಿ ಸಿಲುಕುತ್ತಿದೆ. ಹೈನೋದ್ಯಮದ ರಕ್ಷಣೆಗೆ ನಿಲ್ಲಬೇಕಾದ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ರೈತ […]
ಶ್ರೀನಿವಾಸಪುರ : ತಾಲೂಕಿನ ದಳಸನೂರು ಗ್ರಾಮದಲ್ಲಿ ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಯಾವುದೇ ಸರ್ಕಾರಕ್ಕೂ ಸಿದ್ಧಾಂತಗಳಿಲ್ಲ, ಜನಪರ ಕೆಲಸಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ, ರೈತರ ನೆರವಿಗೆ ಬರುತ್ತಿಲ್ಲ, ಕೇವಲ ಅಧಿಕಾರ ದಾಹಕ್ಕಾಗಿ ಏನೆಲ್ಲಾ ಮಾಡಬೇಕು ಅದನ್ನು ಮಾಡುತ್ತಿರುವುದು ಬಿಟ್ಟರೆ ಯಾವುದೇ ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ […]
ಕೋಲಾರ/04 ಮೇ : ಕೋಲಾರ ನಗರದ ಗೌರಿಪೇಟೆಯ ಮೂರನೇ ಕ್ರಾಸ್ ಸಿ.ಎಂ.ಸಿ. ಕಾಂಪೌಂಡ್ನಲ್ಲಿ ಸುಮಾರು ಇಪ್ಪತ್ತು ಕುಟುಂಬಗಳು ವಾಸವಾಗಿದ್ದು, ಈ ಕುಟುಂಬಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಆರ್.ಮಂಜುನಾಥ್ ಮತ್ತು ಆರ್.ವೆಂಕಟಾಚಲಪತಿ ಎಂಬುವರು ದೌರ್ಜನ್ಯದಿಂದ ಅಕ್ರಮವಾಗಿ ರಸ್ತೆ ಒತ್ತುವರಿ ಮಾಡಿಕೊಂಡು ಆ ಸ್ಥಳದಲ್ಲಿ ಮನೆಗಳಿಗೆ ಹೋಗುವ ರಸ್ತೆಯನ್ನು ಮುಚ್ಚಿ ಗೋಡೆ ನಿರ್ಮಾಣ ಮಾಡಿ ಓಡಾಡಲು ತೊಂದರೆ ನೀಡಿದ್ದರು.ಈ ವಿಚಾರವಾಗಿ ಸಿ.ಎಂ.ಸಿ. ಕಾಂಪೌಂಡಿನ ವಾಸಿ ಕೆ.ಆರ್.ಶೋಭ ರವರು ಕೋಲಾರ ನಗರಸಭೆಯ ಪೌರಾಯುಕ್ತರಿಗೆ ದೂರು ಅರ್ಜಿ ನೀಡಿ ರಸ್ತೆ ಒತ್ತುವರಿ ಮಾಡಿಕೊಂಡಿರುವ […]
ಕೋಲಾರ, ಮೇ 04 ಜೂ.3ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಟ್ಟು 4142 ಮಂದಿ ಶಿಕ್ಷಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಇಂದು ಮನ್ನಣೆ ಪಡೆದ ರಾಜಕೀಯ ಪಕ್ಷಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಜೂ.3ರಂದು ಮತದಾನ ಹಾಗೂ ಜೂ.6ರಂದು ಮತಗಳ […]
ಕೋಲಾರ: ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರ ನೇತೃತ್ವದಲ್ಲಿ ಇಡೀ ಕರ್ನಾಟಕ ರಾಜ್ಯದಲ್ಲಿ 28ನೇ ಸ್ಥಾನದಲ್ಲಿದ್ದ ಕೋಲಾರ ಜಿಲ್ಲೆ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ಒದಗಿಸುವ ಮೂಲಕ ರಾಜ್ಯದಲ್ಲಿಯೇ ಸತತವಾಗಿ 2ನೇ ಬಾರಿಗೆ ಅಗ್ರಸ್ಥಾನಕ್ಕೇರಿದೆ. ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ ಅವರೊಂದಿಗೆ ಕಂದಾಯ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರು ಸಂಪೂರ್ಣವಾಗಿ ಸಹಕಾರ ಮತ್ತು ಬೆಂಬಲ ನೀಡುವ ಮೂಲಕ ಕೋಲಾರ ಜಿಲ್ಲೆಯನ್ನು ಕರ್ನಾಟಕ ರಾಜ್ಯದ ಭೂಪಟದಲ್ಲಿ ಮಿಂಚುವಂತೆ ಮಾಡಿದ್ದಾರೆ. 45 ವಿಧವಾದ […]
ಕೋಲಾರ:- ಕೆರೆಗಳ ಪುನರುಜ್ಜೀವನದ ಮೂಲಕ ಬರಪೀಡಿತ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ವೃದ್ದಿಗೆ ಕೊಡುಗೆ ನೀಡಲು ಮುಂದಾಗಿರುವ ಪುಣೆಯ ಭಾರತೀಯ ಜೈನ ಸಂಘಟನೆ `ಬರಮುಕ್ತ ಕರ್ನಾಟಕ ಅಭಿಯಾನ’ ದಡಿ ಪೆಮ್ಮಶೆಟ್ಟಿಹಳ್ಳಿ ಕೆರೆ ಹೂಳೆತ್ತುವ ಕಾರ್ಯದ ಮೂಲಕವೇ ಜಲಕ್ರಾಂತಿಗೆ ಮುನ್ನುಡಿ ಇಟ್ಟಿದೆ ಎಂದು ಸೂಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಧನ್ಯವಾದ ಸಲ್ಲಿಸಿದರು.ಪುಣೆಯ ಭಾರತೀಯ ಜೈನ ಸಂಘಟನೆವತಿಯಿಂದ ತಾಲ್ಲೂಕಿನ ಪೆಮ್ಮಶೆಟ್ಟಿಹಳ್ಳಿಯಲ್ಲಿ ಊರ ಮುಂದಿನ ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ಭಾರತೀಯ ಜೈನ ಸಂಘಟನೆ […]

