ಶಂಕರನಾರಾಯಣದ ಮದರ್ ತೆರೇಸಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ನಡೆದ 2025–26ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹೈಸ್ಕೂಲ್ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಮದರ್ ತೆರೇಸಾ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ತೊಂಬಟ್ಟು-ಮಚ್ಚೆಟ್ಟು ಗ್ರಾಮದ ನಿವಾಸಿಗಳಾದ ಗಣಪತಿ ಪೂಜಾರಿ ಹಾಗೂ ನಾಗರತ್ನ ದಂಪತಿಯ ಪುತ್ರ ಪ್ರೀತಮ್ ಜಿ. ಪೂಜಾರಿ ಮತ್ತು ಉಳ್ಳೂರು-74 ಗ್ರಾಮದ ನಿವಾಸಿಗಳಾದ ಸುಭಾಷ್ ಚಂದ್ರ ಶೆಟ್ಟಿ ಹಾಗೂ ಶ್ರೀಲತಾ ಎಸ್. ಶೆಟ್ಟಿ ದಂಪತಿಯ ಪುತ್ರ ರಿಷಿ ಶೆಟ್ಟಿ […]
ಬೈಂದೂರು; ಫೆಬ್ರವರಿ 12 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಬೈಂದೂರು ತಾಲೂಕು ಕಟ್ಟಡ ನಿರ್ಮಾಣ ಕಾರ್ಮಿಕರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಬೃಹತ್ ಮೆರವಣಿಗೆಯಲ್ಲಿ ಘೋಷಣೆಯೊಂದಿಗೆ ಸಾಗಿ ರಸ್ತೆತಡೆ ಮಾಡಿ, ಆಡಳಿತ ಸೌಧ ಎದುರು ಪ್ರತಿಭಟಿಸಿದರು.ಕೇಂದ್ರ ಸರ್ಕಾರವು 2019-20 ರಲ್ಲಿ ಕಾರ್ಮಿಕ ಕಾನೂನುಗಳನ್ನು ವೇತನ ಸಂಹಿತೆ, ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತಾ ಸಂಹಿತೆ ಹಾಗೂ ವೃತ್ತಿ ಸುರಕ್ಷತಾ ಮತ್ತು ಕೆಲಸದ ಪರಿಸ್ಥಿತಿ ಹೆಸರಿನಲ್ಲಿ ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿ ಸಂಸತ್ತಿನಲ್ಲಿ […]
Entrepreneurship Development Programme (EDP) ಮಂಗಳೂರು, ಫೆಬ್ರವರಿ 10: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಬೆಳಿಗ್ಗೆ 9:00 ರಿಂದ ಸಂಜೆ 4:15 ರವರೆಗೆ ನಡೆದ ಈ ದಿನಪೂರ್ತಿ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮ ಮುಖಂಡರು, ಅಧ್ಯಾಪಕರು ಹಾಗೂ ಉದ್ಯಮಿಯಾಗಬಯಸುವ […]
ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತೀಯ ಜೂನಿಯರ್ ರೆಡ್ ಕ್ರಾಸ್ ವಿಂಗ್ ( JRCW) ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಶಾಲಾ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸೇವಾ ಮನೋಭಾವ ಮತ್ತು ಆರೋಗ್ಯ ಜಾಗೃತಿಯನ್ನು ಬೆಳೆಸುವ ದೃಷ್ಟಿಯಿಂದ ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಅಧ್ಯಕ್ಷರಾದ ಶ್ರೀ ಎಸ್ .ಜಯಕರ ಶೆಟ್ಟಿಯವರು ರೆಡ್ ಕ್ರಾಸ್ ನ ಪರದೆಯನ್ನು ಅನಾವರಣಗೊಳಿಸುವ ಮೂಲಕ JRCW […]
ಕೋಲಾರ : ಸರ್ಕಾರದ ಸೌಲಭ್ಯಗಳು ವಿಳಂಬವಿಲ್ಲದೆ ಜನರಿಗೆ ತಲುಪಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಇಂದು ಕೆಜಿಎಫ್ ನಗರಸಭೆ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ […]
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಯತ್ನ ಪ್ರಕರಣ ದೊಡ್ಡದಾಗಿ ಸೌಂಡ್ ಮಾಡಿತ್ತು. ಆದರೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ ತನ್ನ ಅಪಹರಣದ ಪ್ರಯತ್ನ, ಹುಡುಗಿಯೆ ಕಟ್ಟಿರುವ ಕಟ್ಟುಕಥೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಕಾಶಿಬೆಟ್ಟು ಸರಕಾರಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಸ್ಕೂಟರ್ ತಡೆದು ಕಾರಿನಲ್ಲಿ ಬಂದ ಮೂವರು ಮೂವರು […]
Bank of Baroda Reduces Car Loan Interest Rates by 30 bps to 7.60% P.A. ಮಂಗಳೂರು, 10 ಫೆಬ್ರವರಿ 2026: ಭಾರತದ ಅಂತರರಾಷ್ಟ್ರೀಯ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಬರೋಡಾ, ಕಾರ್ ಲೋನ್ ಬಡ್ಡಿದರವನ್ನು ತಕ್ಷಣದಿಂದಲೇ 30 ಬೇಸಿಸ್ ಪಾಯಿಂಟ್ಗಳಿಂದ ಕಡಿಮೆ ಮಾಡಿರುವುದಾಗಿ ಇಂದು ಪ್ರಕಟಿಸಿದೆ. ಬ್ಯಾಂಕ್ನ ಫ್ಲೋಟಿಂಗ್ ಬಡ್ಡಿದರ ಈಗ 7.60%* ವಾರ್ಷಿಕದಿಂದ ಆರಂಭವಾಗುತ್ತದೆ (ಹಿಂದೆ 7.90% ವಾರ್ಷಿಕ). ಬ್ಯಾಂಕ್ ಆಫ್ ಬರೋಡಾ ಕಾರ್ ಲೋನ್ಗಳಿಗೆ 8.50%* ವಾರ್ಷಿಕದಿಂದ ಆರಂಭವಾಗುವ ಆಕರ್ಷಕ […]
Mega Joshal D’Souza Music Night in Aid of ‘Goretti Hospital’ at Santekate on Easter ಕಲ್ಯಾಣಪುರ; ಓಪನ್ ಏರ್ ಸ್ಟೇಜ್, ಮೌಂಟ್ ರೋಸರಿ ಚರ್ಚ್ ಮೈದಾನ, ಸಂತೆಕಟ್ಟೆ-ಕಲ್ಯಾಣಪುರ ಕಥೊಲಿಕ್ ಸಭಾ ಉಡುಪಿ ಪ್ರದೇಶ (ನೋಂದಣಿ) ‘ಗೊರೆಟ್ಟಿ ಆಸ್ಪತ್ರೆಯ ಸಹಾಯಾರ್ಥ ಮೇಗಾ ಜೋಶಲ್ ಡಿಸೋಜ ಸಂಗೀತ ರಾತ್ರಿ’ ಈಸ್ಟರ್ ಭಾನುವಾರ 5ನೇ ಏಪ್ರಿಲ್ 2026 ರಂದು ಸಂಜೆ 5.00 ಕ್ಕೆ ನಡೆಯಲಿದೆ. ನಮ್ಮ ಪ್ರದೇಶದ ಪ್ರತಿಯೊಬ್ಬ ಹೃದಯಕ್ಕೂ ಹತ್ತಿರವಾದ ಉದಾತ್ತ ಧ್ಯೇಯದೊಂದಿಗೆ ಆಯೋಜಿಸಲಾದ ‘ಮೆಗಾ […]
ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗಾರ್ಗಿದೇವಿ ಭರತನಾಟ್ಯದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಭರತನಾಟ್ಯ ಪ್ರವೀಣೆ ವಿದ್ಯಾರ್ಥಿನಿ ಗಾರ್ಗಿದೇವಿಯ ಈ ಅಮೋಘ ಸಾಧನೆಯನ್ನು ಶ್ಲಾಘಿಸಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಂ. ಸುಕುಮಾರ್ ಶೆಟ್ಟಿಯವರು, ಕಾರ್ಯದರ್ಶಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

