
JANANUDI.COM NETWORK ಬಸ್ರೂರು ಉದು೯ ಶಾಲೆಯಲ್ಲಿ ಗುರುನಮನ ಕಾಯ೯ಕ್ರಮ ಬಸ್ರೂರು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆ (ಉದು೯) ಇಲ್ಲಿ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಕಾಯ೯ಕ್ರಮ ನಡೆಯಿತು. … ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಅಧ್ಯಾಪಕ ಶ್ರೀ ವೀರಣ್ಣ ಶೆಟ್ಟಿಯವರು, ಡಾ|| ಎಸ್. ರಾಧಾಕೃಷ್ಣನ್ ಅವನ ಕುರಿತು ಮಾತನಾಡಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರನ್ನು ಸಿಬ್ಬಂದಿಗಳನ್ನು ಸನ್ಮಾನಿಸಿದರು… ಅನಂತರ ಮಾತನಾಡಿದ ಅವರು ವಿದ್ಯಾದನ ಎನ್ನುವುದು ಶ್ರೇಷ್ಠದಾನ. ಶೈಕ್ಷಣಿಕವಾಗಿ ಹಿಂದುಳಿದರೂ ಈಗೀಗ ಮುಸ್ಲಿಂ ಬಾಂಧವರು ತಮ್ಮ ಮಕ್ಕಳಿಗೆ ಒಳ್ಳೆಯ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದಲ್ಲಿ ನೀರಿಗೆ ಅಭಾವ ಇದ್ದರೂ, ಸರ್ಕಾರದಿಂದ ಬರುವ ಅನುದಾನದಲ್ಲಿ ಕೊರತೆ ಇಲ್ಲ – ಎ.ಸಿ.ಬಿ ಪುರುಷೋತ್ತಮ್ ಕೋಲಾರ: ಕೋಲಾರದಲ್ಲಿ ನೀರಿಗೆ ಅಭಾವ ಇದ್ದರೂ, ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗುತ್ತಿರುವ ಅನುದಾನದಲ್ಲಿ ಕೊರತೆ ಇಲ್ಲ, ಆದರೂ ಹಣದ ಸಮರ್ಪಕ ಬಳಕೆ ಆಗುತ್ತಿಲ್ಲ ಎಂದು ಎ.ಸಿ.ಬಿ ಪುರುಷೋತ್ತಮ್ ಅವರು ತಿಳಿಸಿದರು. ಇಂದು ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹದಳ ಕೋಲಾರ ಇವರ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಕುಂದು ಕೊರತೆ ಸಭೆ ಮತ್ತು ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಹಲಸು, ಮಾವು, ಸೀಬೆ ಲಾಭದಾಯಕ ಔಷಧೀಯ ಗುಣ ಹೊಂದಿವೆ –ಡಾ.ಕೆ.ಎನ್ ಇಂದಿರೇಶ್ ಕೋಲಾರ : ಹಲಸು, ಮಾವು, ಸೀಬೆ, ನೇರಳೆ ಹಣ್ಣು ಮರಗಳು ಅತ್ಯಂತ ಲಾಭದಾಯಕ ಹಾಗೂ ಔಷಧೀಯ ಗುಣಗಳನ್ನು ಹೊಂದಿವೆ. ಈ ಗಿಡಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಎನ್ ಇಂದಿರೇಶ್ ಅವರು ತಿಳಿಸಿದರು. ಇಂದು ತೋಟಗಾರಿಕಾ ಮಹಾ ವಿದ್ಯಾಲಯ ಸಭಾಂಗಣದಲ್ಲಿ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಐಸಿಎಆರ್ –ಕೃಷಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿತರಿಸುವ ಸಾಧನ ಸಲಕರಣೆಗಳನ್ನು ಸದುಪಯೋಗಪಡಿಸಿಕೊಳ್ಳಿ – ಎಸ್ ಮುನಿಸ್ವಾಮಿ ಕೋಲಾರ : ಹಿರಿಯ ನಾಗರೀಕರ ಸಬಲೀಕರಣಕ್ಕಾಗಿ ಭಾರತ ಸರ್ಕಾರವು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಉಚಿತವಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು ಇದನ್ನು ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ನಗರದ ಹೊರವಲಯದ ಅಂತರಗಂಗೆ ರಸ್ತೆಯಲ್ಲಿರುವ ವಿಶೇಷ ಚೇತನರ ಶಾಲೆಯ ಆವರಣದಲ್ಲಿ ಭಾರತ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿದರು. ಶ್ರೀನಿವಾಸಪುರ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕು. ಅಂಥ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಂ.ನರೇಶ್ ಮಾತನಾಡಿದರು. ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯು ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಂ.ನರೇಶ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಆರೋಗ್ಯ ಇಲಾಖೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಹೈನುಗಾರಿಕೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳ ಜಾರಿ -ಎಸ್.ಮುನಿಸ್ವಾಮಿ ಕೋಲಾರ : ದೇಶದಲ್ಲಿ ರೈತರು ಹೈನುಗಾರಿಕೆಯಿಂದ ತಮ್ಮ ಜೀವನ ರೂಪಿಸಿಕೊಳ್ಳುತ್ತಿದ್ದು ಈ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿರುವ ಯೋಜನೆಗಳನ್ನು ಸೂಕ್ತವಾಗಿ ಅನುಷ್ಠಾನ ಮಾಡಬೇಕು ಎಂದು ಸಂಸದರಾದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು ತಾಲ್ಲೂಕಿನ ಟಮಕ ಬಳಿ ಇರುವ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ಸರ್ಕಾರದ ನೂತನ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಗ್ರಾಮೀಣ ಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಕಲಾ ಜಾಥಾ ಕಾರ್ಯಕ್ರಮ -ಗೀತಮ್ಮ ಆನಂದರೆಡ್ಡಿ ಕೋಲಾರ : ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ, ನೈರ್ಮಲ್ಯ ಹಾಗೂ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ 50 ಆಯ್ದ ಪಂಚಾಯಿತಿಗಳಲ್ಲಿ ಕಲಾ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಮ್ಮ ಆನಂದರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಚ್ಛ ಮೇವ ಜಯತೆ ಕಲಾ ಜಾಥಾ ರಥಕ್ಕೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಗ್ರಾಮಾಂತರ ಠಾಣಾ ಸರಹದ್ದಿನಲ್ಲಿ ಕುಖ್ಯಾತ ಬೈಕ್ ಕಳ್ಳನ ಬಂಧನ ಕೋಲಾರ : ಕೋಲಾರ ಗ್ರಾಮಾಂತರ ಠಾಣಾ ಸರಹದ್ದಿನಲ್ಲಿ ಕಳವು ಪ್ರಕರಣಗಳು ತಡೆಗಟ್ಟುವ ಹಾಗೂ ಪತ್ತೆ ಮಾಡುವ ಸಲುವಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದು, ಸೆಪ್ಟೆಂಬರ್ 10 ರಂದು ಅಪರಾಧ ಸಿಬ್ಬಂದಿಯವರು ಗಸ್ತಿನಲ್ಲಿದ್ದಾಗ ಕೋಲಾರ ಗ್ರಾಮಾಂತರ ಠಾಣಾ ಸರಹದ್ದಿನ ಅಮ್ಮೇರಹಳ್ಳಿ ಬಳಿ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ಅರೋಪಿಯಾದ ವೆಂಕಿತ್ ಕುಮಾರ್@ವ ವೆಂಕಿ (21) ಬಿನ್ ನಾರಾಯಣಸ್ವಾಮಿ, ಈತನು ಬಟ್ಟೆ ಅಂಗಡಿಯಲ್ಲಿ ಕೆಲಸ […]