
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು – ರೈತ ಸಂಘ ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಪರವಾನಗಿ ಇಲ್ಲದ ನರ್ಸರಿಗಳು ವಿರುದ್ದ ಕ್ರಮ ಕೈಗೊಂಡು ಕಡ್ಡಾಯವಾಗಿ ರೈತರು ಕೊಂಡುಕೊಳ್ಳುವ ಸಸಿಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಸಭೆಯಲ್ಲಿ ಹಾಜರಿದ್ದ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು.ಅಧ್ಯಕ್ಷರಾಗಿ ಕೆ.ಎಸ್ ಗಣೇಶ್ (ಅಧಿನಾಯಕ) ಗೌರವಾಧ್ಯಕ್ಷರಾಗಿ ಸಂಚಿಕೆ ಸಂಪಾದಕರಾದ ಸಿ.ಎಂ.ಮುನಿಯಪ್ಪ (ಸಂಚಿಕೆ) ಉಪಾಧ್ಯಕ್ಷರುಗಳಾಗಿ ತೇ.ಸೀ ಬದರೀನಾಥ್ (ಕೋಲಾರಸೊಬಗು) ಎಂ.ಎಸ್.ನಾಗೇಂದ್ರಪ್ರಸಾದ್ (ಕೋಲಾರವಾಹಿನಿ), ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಎನ್ ಮುರಳೀಧರ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯರಾಗಿ ಕಾಂಗ್ರೆಸ್ನ ಶಂಕರಮ್ಮ ಹಾಗೂ ಉಪಾಧ್ಯರಾಗಿ ಮಂಜುನಾಥ ಆರಾಧ್ಯ ಚುನಾಯಿತರಾಗಿದ್ದಾರೆ. ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯರಾಗಿ ಕಾಂಗ್ರೆಸ್ನ ಶಂಕರಮ್ಮ ಹಾಗೂ ಉಪಾಧ್ಯರಾಗಿ ಮಂಜುನಾಥ ಆರಾಧ್ಯ ಚುನಾಯಿತರಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ನಾರಾಯಣಮ್ಮ ಹಾಗೂ ಉಪಾಧ್ಯಕ್ಷರಾಗಿದ್ದ ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಶಂಕರಮ್ಮ ಹಾಗೂ ಜೆಡಿಎಸ್ನ ಶಿವಮ್ಮ ಹಾಗೂ ಉಪಾಧ್ಯಕ್ಷ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ಯುವ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದುದಾಗಿ ವರದಿಯಾಗಿದೆ. ಅರಿಕೆರೆ ಗ್ರಾಮದ ರೈತ ರಾಜೇಶ್ (24) ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿರುವ ರೈತ. ರಾಜೇಶ್ ನಾಲ್ಕು ದಿನಗಳ ಹಿಂದೆ ತೋಟದ ಸಮೀಪ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಚಿಕಿತ್ಸೆಗಾಗಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ತನ್ನ ತಾಯಿ […]

JANANUDI NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಕಲಾಸ್ಪರ್ಧೆ ಮಂಗಳೂರು ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ಇವರ ಆಶ್ರಯದಲ್ಲಿ ಕುಂದಾಪುರ, ಜು.18: ‘ಮಂಗಳೂರು ವಿಶ್ವವಿದ್ಯಾಲಯ ಮತ್ತು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಮಂಗಳೂರು ಇವರ ಆಶ್ರಯದಲ್ಲಿ ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು ಸಾಯನ್ಸ್ ಕಾಲೇಜಿನಲ್ಲಿ ಅಗೋಸ್ತ್ 19 ರಿಂದ 20 ರ ತನಕ 2019 -20ನೇ ಸಾಲಿನ ಅಂತರ್ ಕಾಲೇಜು ರಂಗಭೂಮಿ ಕಲಾ ಸ್ಪರ್ಧೆ ನಡೆಯಲಿದೆ’ ಎಂದು ಭಂಡಾರ್ಕಾರ್ಸ್ ಆಟ್ರ್ಸ್ ಮತ್ತು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಹಿಳೆಯರು ವಿಶೇಷ ಪೂಜೆ ನೆರವೇರಿಸಿದರು. ಗುರು ಪೂರ್ಣಿಮೆ ಪ್ರಯುಕ್ತ ಬಾಬಾ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಾಬಾ ದೇಗುಲದಲ್ಲಿ ಗುರುಪೂರ್ಣಿಮೆ ಆಚರಣೆ ಶ್ರೀನಿವಾಸಪುರ: ಪಟ್ಟಣದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾಬಾ ವಿಗ್ರಹಕ್ಕೆ ಕ್ಷೀರಾಭಿಷೇಕ ಮಾಡಲಾಯಿತು. ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಬಾಬಾ ವಿಗ್ರಹಕ್ಕೆ ತೊಟ್ಟಿಲು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಔಷಧಿಗಳ ಸರಬರಾಜು ಆಗದೆ ಇರುವುದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿರುವ ಸ್ಪೀಕರ್ ರಮೇಶ್ ಕುಮಾರ್. ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವಲ್ಲಿ ಇಲಾಖೆಯವರು ನಿರ್ಲಕ್ಷ್ಯ ತೋರುತ್ತಿದ್ದೀರಿ. ಸರ್ಕಾರ ಬಿಕ್ಕಟ್ಟಿನಲ್ಲಿ ಇದೆ ಎಂದು ನೀವು ನಿರ್ಲಕ್ಷ್ಯ ಮಾಡುತ್ತಿದ್ದೀರಿ. ಸರ್ಕಾರ ಇರಲಿ ಅಥವಾ ಬೇರೆ ಸರ್ಕಾರ ಬರಲಿ ಔಷಧಿ ವಿತರಣೆ ಮಾಡದೆ ಖಾಸಗಿ ಆಸ್ಪತ್ರೆಗಳ ಹಾಗೂ ಔಷಧಿ ಕಂಪನಿಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವುದರಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜಲಶಕ್ತಿ ಅಭಿಯಾನವನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಲಿ-ಜೆ.ಮಂಜುನಾಥ್ ಕೋಲಾರ ; ಜಲಶಕ್ತಿ ಅಭಿಯಾನವು ಭಾರತ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೀರಿನ ಸಂರಕ್ಷಣೆ ಕುರಿತು ಆಯೋಜಿಸಲಾಗಿದ್ದ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಸಹ ಪ್ರಸಕ್ತ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಅವಿಭಜಿತ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಸಭೆ ಕೋಲಾರ,ಜು.15: ಭಾನುವಾರ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಅವಿಭಜಿತ ಜಿಲ್ಲೆಗಳಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಉದ್ಘಾಟಿಸಿದರು. ಹೆಣ್ಣೂರು ಶ್ರೀನಿವಾಸ್ ಮಾತನಾಡಿ, ದಲಿತ ಚಳುವಳಿ ಉಳಿದ ಎಲ್ಲಾ ಚಳುವಳಿಗಳಿಗೆ ತಾಯಿ ಇದ್ದಂತೆ. ಇದರಿಂದ […]