ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಗೆ ಸೇರುವ ಕನಸು ಕಾಣುತ್ತಿರುವ ಯುವಕರಿಗೆ ಮಹತ್ವದ ಸುದ್ದಿ ಲಭ್ಯವಾಗಿದೆ. ಒಟ್ಟು 8,176 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು Karnataka Police ಮುಖ್ಯ ಕಚೇರಿಯಿಂದ ಮಾರ್ಚ್ 4, 2026ರಂದು ಅನುಮತಿ ಜಾರಿಗೊಂಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲು ದಾರಿ ತೆರೆಯಲಾಗಿದೆ.ಯಾವ ಹುದ್ದೆಗಳಿಗೆ ಅವಕಾಶ? ಈ ನೇಮಕಾತಿಯಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್, ಕೆಎಸ್‌ಆರ್‌ಪಿ ಕಾನ್ಸ್ಟೇಬಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್, ಕೆಎಸ್‌ಐಎಸ್‌ಎಫ್ ಕಾನ್ಸ್ಟೇಬಲ್ ಹಾಗೂ ಡಿಟೆಕ್ಟಿವ್ ಸಬ್‌ […]

Read More

ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯವು 2025ರಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಮೂರು ರ‍್ಯಾಂಕ್ ಗಳು ದೊರಕಿವೆ.ಬಿ.ಬಿ.ಎ ಪದವಿ ವಿಭಾಗದಲ್ಲಿ ಕೋಟೇಶ್ವರದ ಸೂರ್ಯನಾರಾಯಣ ಅಡಿಗ ಅವರ ಪುತ್ರಿ ಶ್ರಾವ್ಯ ಎಸ್.ಅಡಿಗ ಅವರಿಗೆ ಆರನೇ ರ‍್ಯಾಂಕ್ ದೊರೆತಿದೆ.ಬಿ.ಸಿ.ಎ. ವಿಭಾಗದಲ್ಲಿ ಮರವಂತೆಯ ಮೋಹನದಾಸ ಶೆಣೈ ಅವರ ಪುತ್ರಿ ಶ್ರಾವ್ಯ ಶೆಣೈ ಅವರಿಗೆ ಎಂಟನೇ ರ‍್ಯಾಂಕ್ ಮತ್ತು ತೆಕ್ಕಟ್ಟೆಯ ರಾಘು ಅವರು ಪುತ್ರಿ ರಕ್ಷಿತಾ ಅವರಿಗೆ ಒಂಬತ್ತನೇ ರ‍್ಯಾಂಕ್ ದೊರೆತಿದೆ.ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ವಿಶ್ವಸ್ಥ […]

Read More

FIRST RANK in B.Sc. (Food, Nutrition & Dietetics) to Student of P.A. First Grade College ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್‌ಗಳ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್‌ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್‌.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು […]

Read More

Catechism Day Celebrated at St. Francis Assisi Church, Tallur ತಲ್ಲೂರು; ದಿನಾಂಕ 1/3/2026 ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಕ್ರೈಸ್ತ ಶಿಕ್ಷಣ ಆಯೋಗದ ನೇತೃತ್ವದಲ್ಲಿ ದಿವ್ಯ ಬಲಿ ಪೂಜೆಯ ಮೂಲಕ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ ವೈಸಿಎಸ್ ನಿರ್ದೇಶಕರಾದ ವಂದನೀಯ ಫಾ. ರೋಷನ್ ಡಿಸೋಜಾ ಅವರು ಪ್ರಧಾನ ಯಾಜಕರಾಗಿ ಆಗಮಿಸಿ ದಿವ್ಯ ಬಲಿ ಪೂಜೆಯನ್ನು ನೆರವೇರಿಸಿದರು. ತಮ್ಮ ಪ್ರವಚನದಲ್ಲಿ ಅವರು, “ಕ್ರೈಸ್ತ ಶಿಕ್ಷಣವು ಯೇಸುಕ್ರಿಸ್ತರ ರೂಪಾಂತರದ ಅರ್ಥವನ್ನು ನಮಗೆ […]

Read More

Reported and photography by Ganesh Nayak ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಮತ್ತು ಪರಿಸರ ಕ್ಲಬ್, ಐಕ್ಯೂಎಸಿ ಸಹಯೋಗದೊಂದಿಗೆ, ಫೆಬ್ರವರಿ 28, 2026 ರಂದು ಕಾಲೇಜು ಆವರಣದ ಮಿಯಾವಾಕಿ ಅರಣ್ಯ ಪ್ರದೇಶದಲ್ಲಿ “ಸಾಲುಮರದ ತಿಮ್ಮಕ್ಕ ಗ್ರೀನ್ ಡ್ರೈವ್ – ಎ ಪ್ಲಾಂಟೇಶನ್ ಪ್ರೋಗ್ರಾಂ” ಅನ್ನು ಯಶಸ್ವಿಯಾಗಿ ಆಯೋಜಿಸಿದವು. ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ವಿದ್ಯಾರ್ಥಿಗಳು ಅರಣ್ಯೀಕರಣ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಮರಗಳನ್ನು ನೆಡುವುದು ಮತ್ತು […]

Read More

ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನೆ ಕೋಶವು, ಐಕ್ಯೂಎಸಿ ಸಹಯೋಗದೊಂದಿಗೆ, ಫೆಬ್ರವರಿ 26, 2026 ರಂದು ಮಧ್ಯಾಹ್ನ 2:30 ಕ್ಕೆ ಕಾಲೇಜಿನ ಆಡಿಯೋ-ವಿಶುವಲ್ ಹಾಲ್‌ನಲ್ಲಿ QAT 2026 – QUAD AI ವಿದ್ಯಾರ್ಥಿವೇತನ ಪರೀಕ್ಷೆಯನ್ನು ಯಶಸ್ವಿಯಾಗಿ ಆಯೋಜಿಸಿತು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ನಿರ್ಣಯಿಸಲು, ಅವರ ಶೈಕ್ಷಣಿಕ ಸಾಮರ್ಥ್ಯವನ್ನು ಅನ್ಲಾಕ್ ಮಾಡಲು ಮತ್ತು ರಚನಾತ್ಮಕ ಮತ್ತು ಸ್ಪರ್ಧಾತ್ಮಕ ಮೌಲ್ಯಮಾಪನ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿವೇತನ ಅವಕಾಶಗಳನ್ನು ಅನ್ವೇಷಿಸಲು ಒಂದು ಅಮೂಲ್ಯವಾದ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಈ […]

Read More

ಕುಂದಾಪುರ; ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ದಿನಾಂಕ 28.02.2026 ಶನಿವಾರ ಮಧ್ಯಾಹ್ನ 2:30ಕ್ಕೆ ಶಿಕ್ಷಣಕ್ಕೆ ಸಹಭಾಗಿಗಳು ಎಂಬ ಧ್ಯೇಯ ವಾಕ್ಯದೊಂದಿಗೆ ಶಿಕ್ಷಕರಕ್ಷಕ ಸಭೆ ನಡೆಯಿತು. ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ರವರು ಅಧ್ಯಕ್ಷತೆಯನ್ನು ವಹಿಸಿದರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಿ ಎಸ್ ಐ ಕೃಪಾ ಚರ್ಚ್ ನ ಧರ್ಮಗುರುಗಳಾದ ರೆವೆರೆಂಡ್ ಇಮಾನುಯಲ್ ಜಯಕರರವರು ನಿರ್ವಹಿಸಿದರು . ಇವರು ತಮ್ಮ ಭಾಷಣದಲ್ಲಿ ಮಕ್ಕಳಿಗೆ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಶಿಕ್ಷಕರು ಮತ್ತು ರಕ್ಷಕರ ಆದ್ಯ ಕರ್ತವ್ಯ ಎಂದು […]

Read More

ಶಿವಮೊಗ್ಗ, ಮಾ.1: ಕುಂದಾಪುರದಿಂದ ಶಿವಮೊಗ್ಗಕ್ಕೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ಸುಟ್ಟು ಕರಕಲಾದ ಭೀಕರ ಘಟನೆ ನಿನ್ನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ:ಕುಂದಾಪುರ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ‘ದುರ್ಗಾಂಬಾ’ ಸಂಸ್ಥೆಗೆ ಸೇರಿದ ಬಸ್, ಘಾಟ್ ರಸ್ತೆಯ ಅಪಾಯಕಾರಿ ತಿರುವುಗಳಿರುವ ಫಾಲ್ಸ್ ಸಮೀಪ ತಲುಪಿದಾಗ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದಂತೆಯೇ ಬಸ್ಸಿನ ಇಂಜಿನ್ ಭಾಗದಲ್ಲಿ ದಿಢೀರ್ ಹೊಗೆ […]

Read More

ಕುಂದಾಪುರ; ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು ಕುಂದಾಪುರ ಮಯೂರ ಮೆಡಿಕಲ್ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರಕ್ಕಿಂಗ್ ಹೋಗಿದ್ದರು ಎಂದು ಹೇಳಲಾಗುತ್ತದೆ. ಮೃತದೇಹವನ್ನು‌ ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ‌ಕಲೆಹಾಕಿದ್ದಾರೆ. ಶುಭಶ್ರೀ ಕಾರಂತ್ ಕುಂದಾಪುರ ಚಿಕ್ಕನಸಾಲ್ ರಸ್ತೆಯಲ್ಲಿರುವ ಶ್ರೀ ಮೈಲಾರೇಶ್ವರ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದು. ಬಹಳ ವರ್ಷದಿಂದ […]

Read More
1 28 29 30 31 32 293