ಬೆಂಗಳೂರು, ಜ.12: ಕಳೆದ ಕೆಲವು ದಿನಗಳ ಹಿಂದೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ […]
ಬೆಂಗಳೂರು : ಕೆಎಸ್ಆರ್ಟಿಸಿ ನಿಗಮದ ಸಿಬ್ಬಂದಿಗಳ ಮಕ್ಕಳು ಉನ್ನತ ವಿದ್ಯಾಭ್ಯಾಸದಲ್ಲಿ ಅಪೂರ್ವ ಸಾಧನೆ ಮಾಡಿ ಚಿನ್ನದ ಪದಕಗಳನ್ನು ಪಡೆದಿರುವುದು ತಿಳಿದ ತಕ್ಷಣ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನಿಗಮದ ಕೇಂದ್ರ ಕಚೇರಿಗೆ ಆಹ್ವಾನಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಈ ಮೂಲಕ ಮುಂದಿನ ಸಾಧನೆಗಳಿಗೆ ಆತ್ಮವಿಶ್ವಾಸ ಮತ್ತು ಹುರುಪು ತುಂಬಿದರು. ಇಂದು ನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿಗಮದ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಕ್ಕಳು ಉನ್ನತ […]
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸುಮಾರು 25ಕ್ಕೂ ಹೆಚ್ಚು ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ಕೆ.ಮನೋಹರ ಪೈ ( 81 ವರ್ಷ) ಅವರು ಜನವರಿ 9ರಂದು ದೈವಾಧೀನರಾದರು. ಕಾಲೇಜಿನ ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯವರು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಶೃಂದ್ಧಾಂಜಲಿ ಸಭೆ ನಡೆಸಿ ಪುಷ್ಪ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶೃದ್ಧಾಂಜಲಿ ಕೋರಿದರು.ಕಾಲೇಜಿನಲ್ಲಿ 1973ರಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 2003ರಲ್ಲಿ ನಿವೃತ್ತರಾದ ಡಾ.ಕೆ. ಮನೋಹರ ಪೈ ಅವರಿಗೆ ಸಸ್ಯಶಾಸ್ತ್ರ ಕೇವಲ […]
ಮಂಗಳೂರು, ಜನವರಿ 09, 2026 – ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಮೌಲ್ಯಾಧಾರಿತ ಸಮಾಜವನ್ನು ಪೋಷಿಸುವ ದೃಢವಾದ ಬದ್ಧತೆಯಿಂದ ಹುಟ್ಟಿಕೊಂಡ ಸಂಸ್ಥೆ. 1989ರಲ್ಲಿ ಸ್ಥಾಪಿಸಲಾದ ಈ ಸಂಸ್ಥೆಯು 1991 ರಲ್ಲಿ ದತ್ತಿಸಂಸ್ಥೆಯಾಗಿ ನೋಂದಾಯಿತವಾಗಿದೆ. ಕಲೆ, ಸಂಸ್ಕೃತಿ, ಶಿಕ್ಷಣ ಮತ್ತು ಜಾನಪದಕ್ಕೆ ಸಕ್ರಿಯ ಬೆಂಬಲ ನೀಡುವ ಹಾಗೂ ರಾಜ್ಯದ ಜನರಲ್ಲಿ ಸಾಮರಸ್ಯ ಮತ್ತು ರ್ವಾಂಗೀಣ ಗುಣಮಟ್ಟವನ್ನು ಉತ್ತೇಜಿಸುವ ಸೇವೆಗೆ ಬದ್ಧವಾಗಿದೆ. ಇದೀಗ ಬಹುನಿರೀಕ್ಷಿತ 2026 ರ ಸಂದೇಶ ಪ್ರಶಸ್ತಿಗಳನ್ನು ಕೊಡಮಾಡುವ ಕೈಂರ್ಯದಲ್ಲಿ ತೊಡಗಿದೆ.ಸಂಗೀತ, ನೃತ್ಯ, ಕಲೆ, ಚಿತ್ರಕಲೆ, […]
ಬಿಕರ್ನಕಟ್ಟೆ, ಜನೆವರಿ 8, 2026: ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ನಾಲ್ಕನೇ ದಿನವನ್ನು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಈ ದಿನದ ಮುಖ್ಯ ಚಿಂತನೆಯ ವಿಷಯ “ನಿಮ್ಮ ಕರೆಯನ್ನು ದೃಢಪಡಿಸಿಕೊಳ್ಳಲು ಸಕಲ ಪ್ರಯತ್ನ ಮಾಡಿ” ಎಂಬುದಾಗಿತ್ತು. ಸಂತ ಶಿಲುಬೆಯ ಯೋವಾನರ ಆಧ್ಯಾತ್ಮಿಕ ಬರಹಗಳ ಬೆಳಕಿನಲ್ಲಿ, ಕ್ರೈಸ್ತ ಕರೆಯ ಬಗ್ಗೆ ನಿಷ್ಠೆ, ಶಿಸ್ತು ಮತ್ತು ಬದ್ಧತೆಯನ್ನು ಉಳಿಸಿಕೊಳ್ಳುವ ಕುರಿತು ಈ ದಿನದಂದು ವಿಶೇಷ ಪ್ರಬೋಧನೆ ನೀಡಲಾಯಿತು.ಸಂತ ಶಿಲುಬೆಯ ಯೋವಾನರ ಪುಣ್ಯಪಟ್ಟದ 300ನೇ […]
ವರದಿ: ಫಾದರ್ ಅನಿಲ್ ಐವನ್ ಫರ್ನಾಂಡಿಸ್, ಚಿತ್ರಗಳು: ಸ್ಟ್ಯಾನಿ ಬಂಟ್ವಾಳ್ ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ, ಜನವರಿ 4, 2026 ರಂದು ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ನಡೆದ ಈ ಮೆರವಣಿಗೆಯು ಭಕ್ತಾದಿಗಳ ಆಧ್ಯಾತ್ಮಿಕ ಉತ್ಸಾಹ ಮತ್ತು ಪ್ರಾರ್ಥನಾ ಒಗ್ಗಟ್ಟನ್ನು ಪ್ರತಿಬಿಂಬಿಸಿತು. ಈ ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ […]
ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ, ಬಿಜೆಪಿ ಕಾರ್ಯಕರ್ತೆಯನ್ನು ಬಟ್ಟೆ ಬಿಚ್ಚಿ ಹಲ್ಲೆ ಮಾಡಿರುವ ಆರೋಪಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅರೆಸ್ಟ್ ಮಾಡುವ ವೇಳೆ ತಾನೆ ಬಟ್ಟೆ ಬಿಚ್ಚಿಕೊಂಡು ರಂಪಾಟ ಮಾಡಿದ್ದಾಳೆಂತೆ. ಹೌದು, ದೂರು ನೀಡಿದ ಅನ್ವಯದಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಯನ್ನುಬಂಧನ ಮಾಡುವ ವೇಳೆ ಹೈಡ್ರಾಮಾ ಸೃಷ್ಟಿ ಮಾಡಲು ಪ್ರಯತ್ನ ಮಾಡಿದ್ದಾಳಂತೆ.ತಾನೆ ಬಟ್ಟೆ ಬಿಚ್ಚಿಕೊಂಡು ತಾನು ಅಮಾಯಕ ಅಂತ ಬಿಂಬಿಸುವ ಪ್ರಯತ್ನ ಮಾಡಿದ್ದಾಳೆಂತೆ.ಅಷ್ಟೇ ಅಲ್ದೆ ಸುಜಾತಾ ಮೊಸ್ಟ್ ಕ್ರಿಮಿನಲ್ ಬ್ಯಾಗ್ರೌಂಡ್ 9 ಕೇಸ್ […]
ಬೆಂಗಳೂರು : ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುರಕ್ಷಿತ ಹಾಗೂ ಸುಲಭ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.) ತನ್ನ ಆಯ್ದ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡಾ 5ರಿಂದ 15ರವರೆಗೆ ರಿಯಾಯಿತಿ ಘೋಷಿಸಿದೆ ಎಂದು ನಿಗಮದ ವ್ಯವಸ್ಥಾಪಕರು ಅಕ್ರಂ ಪಾಷ ತಿಳಿಸಿದ್ದಾರೆ. ಬೆಂಗಳೂರು–ಮಂಗಳೂರು, ಬೆಂಗಳೂರು–ಕುಂದಾಪುರ, ಬೆಂಗಳೂರು–ಉಡುಪಿ, ಬೆಂಗಳೂರು–ಧರ್ಮಸ್ಥಳ, ಬೆಂಗಳೂರು–ಕುಕ್ಕೆ ಸುಬ್ರಮಣ್ಯ, ಬೆಂಗಳೂರು–ಪುತ್ತೂರು, ಬೆಂಗಳೂರು–ಮಡಿಕೇರಿ/ವಿರಾಜಪೇಟೆ, ಬೆಂಗಳೂರು–ದಾವಣಗೆರೆ, ಬೆಂಗಳೂರು–ಶಿವಮೊಗ್ಗ/ಸಾಗರ, ಬೆಂಗಳೂರು–ಚೆನ್ನೈ, ಬೆಂಗಳೂರು–ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು–ತಿರುಪತಿ, ಬೆಂಗಳೂರು–ಮಂತ್ರಾಲಯ, ಬೆಂಗಳೂರು–ಪುಣೆ/ಮುಂಬೈ, ಬೆಂಗಳೂರು–ವಿಜಯವಾಡ, ಬೆಂಗಳೂರು–ಎರ್ನಾಕುಲಂ, ಬೆಂಗಳೂರು–ಮದುರೈ, ಬೆಂಗಳೂರು–ಕೋಯಿಮತ್ತೂರು ಹಾಗೂ ಬೆಂಗಳೂರು–ತಿಶ್ರೂರು […]
ಚಿಕ್ಕಬಳ್ಳಾಪುರ: ಪ್ರಿಯಕರನ ಬ೦ಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದುಯುವತಿ ಪೋಷಕರ ಜತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಗ೦ಗನಮಿದ್ದೆ ಬಡಾವಣೆಯ ನಿವಾಸಿ, ಪೈಂಟ್ ಕೆಲಸಗಾರ ಸ೦ದೀಪ್ ಎನ್ನುವವ್ಯಕ್ತಿ ಚಿಕ್ಕಬಳ್ಳಾಪುರ ನಗರದ ಕ೦ದವಾರ ಬಡಾವಣೆಯ ಶ್ರೀಮ೦ತ ಕುಟು೦ಬದ 18 ವರ್ಷದ ಯುವತಿಗೆಗಾಳ ಹಾಕಿ ಅವಳ ಜೊತೆ ಪರಾರಿಯಾಗಲು ಯಶಸ್ವಿಯಾಗಿದ್ದ. ಆಕೆಯ ಜೊತೆ ಎರಡು ದಿನಗಳ ಹಿ೦ದೆ ಎಸ್ಕೇಪ್ ಆಗಿದ್ದ ಇವನು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿ೦ತಾಮಣಿಯ ದೇವಸ್ನಾನವೊ೦ದರಲ್ಲಿ ಆಕೆಗೆ ತಾಳಿಯನ್ನೂ ಕಟ್ಟಿದ್ದ. ಬಳಿಕ ಈ […]

