Our lady of Miracles church Milagres celebrated the new year and the feast of the Mother of God ಮಂಗಳೂರು; ಮಿಲಾಗ್ರಿಸ್ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್ ಹೊಸ ವರ್ಷ ಮತ್ತು ದೇವರ ತಾಯಿಯ ಹಬ್ಬವನ್ನು ಹುರುಪಿನಿಂದ ಮತ್ತು ಉತ್ಸಾಹದಿಂದ ಆಚರಿಸಿತು. ಚರ್ಚ್ ನ ಪ್ರದಾನ ಫಾದರ್ ಬೊನಾವೆಂಚರ್ ನಜರೆತ್ ಇಂಗ್ಲಿಷ್ನಲ್ಲಿ ಆರಾಧನೆಯನ್ನು ನಡೆಸಿದರು ಮತ್ತು ಫಾದರ್ ಆಲ್ವಿನ್ ಸೆರಾವೊ ಇಂಗ್ಲಿಷ್ನಲ್ಲಿ ಬಲಿಪೂಜೆಯನ್ನು ನಡೆಸಿದರು. ಬಿಷಪ್ ಕಾರ್ಯದರ್ಶಿ ಫಾದರ್ ಐವಾನ್ […]
ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು:ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿರುವರು. ಅದೇ ದಿನ ಬೆಳಿಗ್ಗೆ 10.00 ಘಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು […]
ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು. ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ […]
ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು – ಶಿಕ್ಷಕರ ಸಭೆ ಕಡ್ಡಾಯ : ಶಿಕ್ಷಣ ಇಲಾಖೆ ಕ್ರಮಕ್ಕೆ ಸ್ವಾಗತ – ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು–ಶಿಕ್ಷಕರ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮ ಸಮಿತಿಯ ಸದಸ್ಯ ಶಬ್ಬೀರ್ ಅಹ್ಮದ್ ಸ್ವಾಗತಿಸಿದ್ದಾರೆ. ಈ ಕ್ರಮದಿಂದ ಶಾಲೆ, ಶಿಕ್ಷಕರು ಹಾಗೂ ಪೋಷಕರ ನಡುವೆ ಸಮನ್ವಯ ಮತ್ತಷ್ಟು ಬಲಪಡಲಿದ್ದು, ವಿದ್ಯಾರ್ಥಿಗಳ […]
ಕೋಲಾರ : ಕರ್ನಾಟಕ ಫಿಟ್ನೆಸ್ ಫಸ್ಟ್ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್, ಕೋಲಾರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಹಾಗೂ ಫಿಟ್ನೆಸ್ ಸ್ಪರ್ಧೆಯನ್ನು ಜೂನಿಯರ್ ಕಾಲೇಜು ಕಾಂಪೌಂಡ್ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಬಾಡಿ ಬಿಲ್ಡಿಂಗ್, ಪುರುಷರ ಫಿಸಿಕ್, ಕ್ಲಾಸಿಕ್ ಫಿಸಿಕ್, ಮಾಸ್ಟರ್ಸ್ ಹಾಗೂ ಫಿಟ್ನೆಸ್ ವಿಭಾಗಗಳಲ್ಲಿ ಪೈಪೋಟಿ ನಡೆಯಿತು. ಸಣ್ಣ, ಮಧ್ಯಮ, ಎತ್ತರ ಹಾಗೂ ಸೂಪರ್ ಎತ್ತರ ವಿಭಾಗಗಳಾಗಿ ವಿಭಜಿಸಲಾದ ಈ ಚಾಂಪಿಯನ್ಶಿಪ್ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಅನೇಕ ಕ್ರೀಡಾಪಟುಗಳು ಭಾಗವಹಿಸಿ ತಮ್ಮ […]
ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ IX ನೇ ತರಗತಿಯ ವಿದ್ಯಾರ್ಥಿನಿ ಜೆಸ್ನಿಯಾ ಕೊರಿಯಾ, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ನಡೆಸಿದ 69 ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ 17 ವರ್ಷದೊಳಗಿನವರ ವಿಭಾಗದಲ್ಲಿ 1000 ಮೀಟರ್ ರಿಂಕ್ ರೇಸ್ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸಂಸ್ಥೆಗೆ ಅಪಾರ ಹೆಮ್ಮೆ ಮತ್ತು ಗೌರವವನ್ನು ತಂದಿದ್ದಾರೆ. ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಚಾಂಪಿಯನ್ಶಿಪ್ 2025 ರ ಡಿಸೆಂಬರ್ 26 ರಿಂದ 29 ರವರೆಗೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆಯಿತು ಮತ್ತು […]
ಬಿಕರ್ನಕಟ್ಟೆ; ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಮಕ್ಕಳ ಆಶೀರ್ವಾದದೊಂದಿಗೆ ‘ಹೋಲಿ ಇನ್ನೋಸೆಂಟ್ಸ್’ ಹಬ್ಬದ ಆಚರಣೆಮಂಗಳೂರಿನ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ನಲ್ಲಿರುವ ಬಾಲ ಯೇಸುವಿನ ಪುಣ್ಯಕ್ಷೇತ್ರವು, ಕ್ರಿಸ್ಮಸ್ ಹಬ್ಬದ ಮೂರನೇ ದಿನದಂದು ಆಚರಿಸಲಾಗುವ ‘ಹೋಲಿ ಇನ್ನೋಸೆಂಟ್ಸ್’ (ಪವಿತ್ರ ಮುಗ್ಧರ ಹಬ್ಬ) ದಿನದಂದು ಮಕ್ಕಳ ಮೇಲೆ, ವಿಶೇಷವಾಗಿ ಶಿಶುಗಳ ಮೇಲೆ ದೇವರ ಆಶೀರ್ವಾದವನ್ನು ಕೋರುವ ತನ್ನ ಸುದೀರ್ಘ ಸಂಪ್ರದಾಯವನ್ನು ಆಚರಿಸಿತು. ಯಹೂದಿಗಳ ರಾಜನಾಗಿ ಜನಿಸಿದ ಯೇಸುವಿನ ಬಗ್ಗೆ ಭಯಗೊಂಡ ರಾಜ ಹೆರೋದನಿಂದ ಹತ್ಯೆಗೀಡಾದ ಮುಗ್ಧ ಶಿಶು ಹುತಾತ್ಮರ ಸ್ಮರಣಾರ್ಥವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. […]
ಗದಗ -23 ಮಕಾನದಾರ ಸಾಹಿತ್ಯ ಪ್ರತಿಷ್ಟಾನ ಗಜೇಂದ್ರಗಡ, ಗದಗಿನ ನಿರಂತರ ಪ್ರಕಾಶನದ ವತಿಯಿಂದ 2025ನೇ ಸಾಲಿನ ‘ನಿರಂತರ ಸಾಹಿತ್ಯ ಪುರಸ್ಕಾರ”ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಶಿಕ್ಷಕಿ, ಅನುವಾದಕಿ ಕವಯತ್ರಿ ಫ್ಲಾವಿಯಾ ಅಲ್ಬು ಕರ್ಕ್ ಆಯ್ಕೆ ಆಗಿದ್ದರೆಂದು ಪ್ರಕಾಶಕ, ಹಿರಿಯ ಕವಿ ಎ ಎಸ್. ಮಕಾನದಾರ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ನಾಡಿನ ಹಿರಿ ಕಿರಿಯ ಅನೇಕ ಕವಿಗಳ ಕವಿತೆ ಮತ್ತು ಗದ್ಯ ಸಾಹಿತ್ಯವನ್ನು ಕನ್ನಡ ಭಾಷೆಯಿಂದ ಕೊಂಕಣಿ ಭಾಷೆಗೆ ಅನುವಾದಗೊಳಿಸುವದರ ಜೊತೆಗೆ ಕೊಂಕಣಿಯ ತ್ರಿಲಿಪಿಗಳಿಗೆ ಅನುವಾದಮಾಡಿ […]
ಬೈಂದೂರು : ಶಿರೂರಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 15 ನೇ ಶಾಲಾ ವಾರ್ಷಿಕೋತ್ಸವ ಜ್ಞಾನದಾ ಕಲಾ ವೈಭವ -2025 ಅದ್ದೂರಿಯಾಗಿ ಆಚರಿಸಲಾಯಿತುಮುಖ್ಯ ಅತಿಥಿಗಳಾದ ಕೋಟ ಪಡುಕರೆ ಬಂಗೇರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿವಿಧ ಸಾಮಾಜಿಕ ಹಿನ್ನೆಲೆಯಲ್ಲಿ ಬರುವ ಮಗುವಿಗೆ ಉತ್ತಮ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಶಿಕ್ಷಣದ ಮೂಲಕ ಸಂಸ್ಕಾರವನ್ನು ಪಡೆದು ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಮಕ್ಕಳು ಬದುಕಿನ ಆರಂಭದ ಹೆಜ್ಜೆಯನ್ನು […]

