ಶ್ರೀನಿವಾಸಪುರ : ದೇಶದ ಪ್ರಮುಖ ಮಾವು ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿ ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಮತ್ತೆ ಮಾವಿನ ಸೀಸನ್ಗೆ ಸಜ್ಜಾಗಿದ್ದು, ಮೇ 15ರಿಂದ ಅಧಿಕೃತವಾಗಿ ಮಾವಿನ ಮಾರುಕಟ್ಟೆ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಹಬ್ಬದಂತ ವಾತಾವರಣ ನಿರ್ಮಾಣವಾಗಿದ್ದು, ರೈತರು, ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ಹೊಸ ನಿರೀಕ್ಷೆಗಳೊಂದಿಗೆ ಸೀಸನ್ಗೆ ಎದುರು ನೋಡುತ್ತಿದ್ದಾರೆ. ಸುಮಾರು 65 ಸಾವಿರ ಎಕರೆ ಪ್ರದೇಶದಲ್ಲಿ ಮಾವು ಬೆಳೆಯುವ ಶ್ರೀನಿವಾಸಪುರ, ‘ಮಾವಿನ ನಾಡು’ ಹಾಗೂ ‘ಮಾವಿನ ರಾಜಧಾನಿ’ ಎಂಬ ಹೆಸರನ್ನು ಸಂಪೂರ್ಣವಾಗಿ […]
ಕೋಲಾರ:- ಲಯನ್ಸ್ ಕ್ಲಬ್ ಕೋಲಾರ, ಶ್ರೀಸಾಯಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ಲಿ. ಆಶ್ರಯದಲ್ಲಿ ಬೇಸಿಗೆಯ ತಾಪಮಾನದಿಂದ ಕಂಗೆಟ್ಟ ಜನತೆಗೆ ಉಚಿತ ಮಜ್ಜಿಗೆ,ಪಾನಕ ವಿತರಣೆ ಕಾರ್ಯಕ್ರಮಕ್ಕೆ ನಗರದ ಅಂತರಗಂಗೆ ರಸ್ತೆಯ ಲಯನ್ಸ್ ಕ್ಲಬ್ ಮುಂಭಾಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಚಾಲನೆ ನೀಡಿದರು.ಮಜ್ಜಿಗೆ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಲಯನ್ಸ್ ಕ್ಲಬ್ ಹಾಗೂ ಅದರ ಸದಸ್ಯರು,ಪದಾಧಿಕಾರಿಗಳ ಸಾಮಾಜಿಕ ಕಾಳಜಿ ಮೆಚ್ಚುವಂತದ್ದು ಎಂದು ತಿಳಿಸಿ, ಬಿಸಿಲಿನ ಬೇಗೆಯಿಂದ ನೊಂದ ಪಾದಾಚಾರಿಗಳ ದಾಹ ತೀರಿಸುವ […]
ಎಂ ಐ ಟಿ ಕುಂದಾಪುರ ವಿಶ್ವ ಭೂ ದಿನದ (Earth Day) ಅಂಗವಾಗಿ ಆಯೋಜಿಸಲಾಗಿದ್ದ ‘ಭಾರತ ಎನ್ವಿರಾನ್ಮೆಂಟ್ ಪ್ರೋಗ್ರಾಂ – ಭಾರತ ಸಸ್ಟೇನಬಲ್ ಕ್ಯಾಂಪಸ್ ಮಿಷನ್ 2026’ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿತು.ರಿಸರ್ಚ್ ಹೈಟ್ಸ್ ಫೌಂಡೇಶನ್ ಆಶ್ರಯದಲ್ಲಿ ಹಾಗೂ ಎನ್ವಿರಾನ್ಮೆಂಟ್ ಪ್ರೊಟೆಕ್ಷನ್ ಟ್ರೈನಿಂಗ್ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಏಪ್ರಿಲ್ 22 ರಿಂದ 29 ರವರೆಗೆ ನಡೆದ ‘ಅರ್ಥ್ ವೀಕ್’ ಸಂಭ್ರಮಾಚರಣೆಯ ಭಾಗವಾಗಿ, ಕ್ಯಾಂಪಸ್ನಲ್ಲಿ ಸುಸ್ಥಿರ ಜೀವನಶೈಲಿ ಮತ್ತು ಪರಿಸರ ಜಾಗೃತಿಯನ್ನು ಉತ್ತೇಜಿಸುವುದು ಈ […]
ಉಡುಪಿ; ಉಡುಪಿಯ ಬಿಷಪ್ ಅತಿ ವಂ. ಡಾ. ಲೆಸ್ಲೀ ಕ್ಲಿಫರ್ಡ್ ಡಿ’ಸೋಜಾ ಅವರು ಉಡುಪಿ ಧರ್ಮಪ್ರಾಂತ್ಯದ ಹೊಸ ವಿಕಾರ್ ಜನರಲ್ ಆಗಿ ವಂ. ಫ್ರಾನ್ಸಿಸ್ ಕ್ಸೇವಿಯರ್ ಲೂಯಿಸ್ ಅವರನ್ನು ನೇಮಕ ಮಾಡಿದ್ದಾರೆ. ಅತಿ ವಂ. ಫ್ರಾನ್ಸಿಸ್ ಕ್ಸೇವಿಯರ್ ಲೂಯಿಸ್ ಪ್ರಸ್ತುತ ಕಳತ್ತೂರಿನ ಪ್ರೆಪ್ಯುತಲ್ ಸೆಕ್ಯೂರ್ ಚರ್ಚ್ನ ಧರ್ಮಗುರುಗಳಾಗಿದ್ದಾರೆ. ಮೇ 02, 2026 ರಂದು ಶನಿವಾರ ಬಿಷಪ್ ಹೌಸ್ನಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ, ಅತಿ ವಂ. ಫ್ರಾನ್ಸಿಸ್ ಕ್ಸೇವಿಯರ್ ಲೂಯಿಸ್ ಅವರು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಆಗಿ […]
ಶ್ರೀನಿವಾಸಪುರದ ಪುರಸಭಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಭೆಯಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿ.ನಾಗರಾಜ್ ಪೌರ ಕಾರ್ಮಿಕರಿಗೆ ಕಸ ವಿಂಗಣೆ ಕುರಿತು ತಿಳುವಳಿಕೆ ನೀಡಿದರು. ಮೂಲದಲ್ಲಿಯೇ ಕಸ ವಿಂಗಡಿಸಿ ಪರಿಸರ ಉಳಿಸಿ ಶ್ರೀನಿವಾಸಪುರ. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪುರಸಭೆಯ ಪೌರಕಾರ್ಮಿಕರಿಗೆ ಕಸ ವಿಂಗಣೆ ಕುರಿತು ತಿಳುವಳಿಕೆ ನೀಡಲಾಯಿತು. ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರ ಕಾರ್ಮಿಕರು ಮೂಲದಲ್ಲಿಯೇ ಹಸಿ ಕಸ, ಒಣ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಂಗಡಿಸಿಕೊಳ್ಳಬೇಕು. ಹಾಗೆ ಮಾಡುವುದರಿಂದ […]
ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಶುಭಾಷಯ ಕೋರಿದ ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಒಳಮೀಸಲಾತಿ ಸಮಸ್ಯೆ ಇತ್ಯರ್ಥದ ಕುರಿತು ಸಂತಸ ಹಂಚಿಕೊಂಡರು.
ಕುಂದಾಪುರ, ಮೇ.1; ಹೋಲಿ ರೋಜರಿ ಮಾತಾ ಇಗರ್ಜಿಯ ಅಧೀನದಲ್ಲಿರುವ ಪ್ರಸಿದ್ದ ವಿದ್ಯಾ ಸಮೂಹದ ವಿದ್ಯಾ ಸಂಸ್ಥೆಗಳಿಗೆ ನೂತನ ಪ್ರಾಂಶುಪಾಲರಾಗಿ ವಂ।ರೊಲ್ವಿನ್ ಫೆರ್ನಾಂಡಿಸ್ ಅವರು ಮೇ 1 ರಂದು ಆಗಮಿಸಿ ಅಧಿಕಾರ ಸ್ವೀಕರಿಸಿದರು. ಅವರನ್ನು ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ।ವಂ।ಪೌಲ್ ರೇಗೊ ಸ್ವಾಗತಿಸಿದರು. ಬಳಿಕ ಚರ್ಚಿನಲ್ಲಿ ಕ್ರತಜ್ಞತೆಯ ಪ್ರಾರ್ಥನೆಯನ್ನು ನಡೆಸಲಾಯಿತು. ಅ।ವಂ।ಪೌಲ್ ರೇಗೊ ಶುಭ ಕೋರಿದರು. ಸಂತ ಮೇರಿಸ್ ಪಿ.ಯು. ಕಾಲೇಜಿನ ಬಗ್ಗೆ ಈ ಹಿಂದಿನ ಪ್ರಾಂಶುಪಾಲರಾದ ರೇಶ್ಮಾ ಫೆರ್ನಾಂಡಿಸ್ ವಿವರ ನೀಡಿದರು. ಹೋಲಿ […]
ಉಡುಪಿ: ಯುನಾಯ್ಟೆಡ್ ಕ್ರಿಶ್ಚಿಯನ್ ಫೋರಮ್ ಉಡುಪಿ ಜಿಲ್ಲೆಯ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.ಭೇಟಿಯ ವೇಳೆ ವಿವಿಧ ಸಭೆಗಳ ಸಭಾಪಾಲಕರು ಮತ್ತು ಧರ್ಮಾಧ್ಯಕ್ಷರು ಪರಸ್ಪರ ಕ್ರೈಸ್ತ ಐಕ್ಯತೆಯ ಕುರಿತು ಚರ್ಚೆಗಳನ್ನು ನಡೆಸಿದರು.ನೂತನ ಧರ್ಮಾಧ್ಯಕ್ಷರು ಜಿಲ್ಲೆಯಲ್ಲಿ ಕೈಸ್ತ ಐಕ್ಯತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ತನ್ನ ಸಂಪೂರ್ಣವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.ಈ ವೇಳೆ ಯುನಾಯ್ಟೆಡ್ ಕ್ರಿಶ್ಚಿಯನ್ ಫೋರಮ್ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, […]
ಬೆಂಗಳೂರು : ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವುದು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಲಭ್ಯತೆ ಖಚಿತಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಪಿಡಿಒಗಳು ಪ್ರತಿದಿನ ನಿಗದಿತ ಸಮಯದಲ್ಲಿ ಕಚೇರಿಯಲ್ಲೇ ಸಾರ್ವಜನಿಕರ ಭೇಟಿ ನಡೆಸುವುದು ಕಡ್ಡಾಯವಾಗಿದ್ದು, ಬಯೋಮೆಟ್ರಿಕ್ ಹಾಜರಾತಿ ದಾಖಲಾತಿ, ವಾರವಾರದ ಪ್ರವಾಸ ವಿವರ ಪ್ರಕಟಣೆ ಸೇರಿದಂತೆ ಹಲವು ಹೊಸ ನಿಯಮಗಳನ್ನು ಜಾರಿಗೊಳಿಸಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ […]

