ಮಂಗಳೂರು; ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಯನಿರ್ವಾಹಕ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಸುರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಪ್ರಯಾಗ್ ದೀಪಚಂದ್ರ ಭಾರ್ತಿಯಾ ಮತ್ತು ಕೇರಳದ ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ ವಿಷಾನಿಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. […]
ಕುಂದಾಪುರ; ದಿನಾಂಕ12/07/2025 ಶನಿವಾರದಂದು ಎಲ್.ಕೆ.ಜಿ ಮತ್ತು ಯು.ಕೆ.ಜಿ ಪುಟಾಣಿ ಮಕ್ಕಳಿಗೆ ಕೆಂಪು ಬಣ್ಣದ ದಿನಾಚರಣೆಯನ್ನು ಆಚರಿಸಲಾಯಿತು. ಪುಟ್ಟ ಮಕ್ಕಳಲೆಲ್ಲರೂ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿ ಬಂದಿದ್ದರು. ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅನಿತಾ ಡಿ ಸೋಜಾರವರು ಮಕ್ಕಳಿಗೆ ಕೆಲವು ಆಟಗಳನ್ನು ಆಡಿಸಿ ಮಕ್ಕಳಿಗೆ ಖುಷಿ ನೀಡಿದರು. ‘ಕೆಂಪು ಉಡುಗೆಯಲ್ಲಿ ತುಂಬಾ ಮುದ್ದಾಗಿ ಕಾಣುತ್ತಿದ್ದಿರಿ, ಕೆಂಪು ಬಣ್ಣ ಪ್ರೀತಿ, ಉತ್ಸಾಹದ ಸಂಕೇತವಾಗಿದೆ’ ಎಂದು ಪುಟಾಣಿ ಮಕ್ಕಳಿಗೆ ಹೇಳಿದರು. ಪುಟಾಣಿ ಮಕ್ಕಳು ಕೆಂಪು ಬಣ್ಣಗಳ ಹಾಡನ್ನು ಹಾಡಿದರು.ಮತ್ತು ಯು.ಕೆ.ಜಿ […]
ಮಂಗಳೂರು; ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಸಾರ್ವಜನಿಕ ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ‘ಸ್ವಚ್ಛ ಬಸ್ಸು ನಿಲ್ದಾಣ, ಸ್ವಸ್ಥ ಜೀವನ’ ಎಂಬ ಶೀರ್ಷಿಕೆಯ ಬೀದಿ ನಾಟಕವನ್ನು ಬಿಜೈಯ ಕೆಎಸ್ಆರ್.ಟಿ.ಸಿ ಬಸ್ ತಂಗುದಾಣದಲ್ಲಿ ಜುಲೈ 12ರಂದು ಪ್ರದರ್ಶಿಸಿದರು. ಈ ಬೀದಿನಾಟಕದ ಮೂಲಕ ಸಾರ್ವಜನಿಕವಾಗಿ ಉಗುಳುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಮುಂತಾದ ವಿಷಯಗಳ ಮೇಲೆ ಈ ಬೀದಿ ನಾಟಕ ಬೆಳಕು ಚೆಲ್ಲಿದೆ.ಸಾರ್ವಜನಿಕರು ಜವಾಬ್ದಾರಿಯುತ […]
ಹೇರಾಡಿ-ಬಾರ್ಕೂರಿನ ಶಾಂತ ಕರಾವಳಿ ಹಳ್ಳಿಯಲ್ಲಿ, SRSMNHPS ಜುಲೈ 10, 2025 ರಂದು ಎರಡು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ತನ್ನ ಪ್ರಯಾಣದ ನಿರ್ಣಾಯಕ ಕ್ಷಣವನ್ನು ಆಚರಿಸಿತು: 1925 ರಲ್ಲಿ ಮಸ್ಕಿಬೈಲ್ ರಾಮಚಂದ್ರಯ್ಯ ಅವರು ಸ್ಥಾಪಿಸಿದರು, ಅವರು 35 ವರ್ಷಗಳ ಕಾಲ ಅದರ ಸ್ಥಾಪಕ-ವರದಿಗಾರರಾಗಿ ಮುನ್ನಡೆಸಿದರು, ಈ ಶಾಲೆಯು ಪ್ರತಿಷ್ಠಿತ ಕನ್ನಡ ಮಾಧ್ಯಮ ಸಂಸ್ಥೆಯಾಗಿ ಬೆಳೆಯಿತು. 1988 ರಲ್ಲಿ ಹಳೆಯ ವಿದ್ಯಾರ್ಥಿಗಳಾದ ಮಸ್ಕಿಬೈಲ್ ಆನಂದ್ ಶೆಟ್ಟಿ ಮತ್ತು ಸಹೋದರರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಕ್ಯಾಂಪಸ್ ಅನ್ನು ಪುನರ್ನಿರ್ಮಿಸಿದಾಗ ಪುನರುಜ್ಜೀವನ ಉಂಟಾಯಿತು, ಅದರ […]
ಉಡುಪಿ,ಜು.11; ಇಂದು ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ದೋಣಿ ಮಗುಚಿ ಮೃತಪಟ್ಟ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ. ತಿಂಗಳಾಯ ರವರ ಮನೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿಯವರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕೆ ಇಲಾಖೆ ಸಚಿವರಾದ ಶ್ರೀ ಮಾಂಕಾಳ ವೈದ್ಯ ರವರಿಗೆ ಘಟನೆಯ ಮಾಹಿತಿ ನೀಡಿ, ತಕ್ಷಣ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ₹10 ಲಕ್ಷ ಪರಿಹಾರವನ್ನು ಒದಗಿಸುವಂತೆ ಮನವಿ […]
Investiture Ceremony of IT Associations of St Joseph’s University, Bengaluru 2025-26 ಬೆಂಗಳೂರು ; ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಬೆಳಗ್ಗೆ 9:00 ರಿಂದ 10:00 ಗಂಟೆಯವರೆಗೆ ನಡೆಯಿತು.ಸಮಾರಂಭದಲ್ಲಿ ವಂ। ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, […]
ಶಂಕರನಾರಾಯಣ; ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣದಲ್ಲಿ ಗುರು ಪೂರ್ಣಿಮೆ ದಿನದ ಸಂಭ್ರಮಾಚರಣೆ ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಶಕ್ತಿ. ಗುರು ಶಿಷ್ಯರ ನಡುವೆ ಇರುವ ಪವಿತ್ರ ಬಾಂಧವ್ಯದ ಪ್ರತೀಕವಾದ ಗುರುಪೂರ್ಣಿಮೆ ದಿನವನ್ನು ಮದರ್ ತೆರೆಸಾ ಮೆಮೋರಿಯಲ್ ಶಾಲಾ ವಿಭಾಗದಲ್ಲಿ ದಿನಾಂಕ 10 /7 2025 ರಂದು ಭಾವಪೂರ್ವಕವಾಗಿ ಆಚರಿಸಲಾಯಿತು . ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುರುವಿನ ಮೇಲೆ ಇರುವ ಭಕ್ತಿ ಹಾಗೂ ಗುರು ಶಿಷ್ಯರ ನಡುವಿನ ಬಾಂಧವ್ಯವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಪ್ರಹಸನ ,ಭಾಷಣ ನೃತ್ಯ […]
ಮಂಗಳೂರು; ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ (FMCI) ಒಂದು ಅಂಗವಾದ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು (FMHMC), ತನ್ನ 40 ವರ್ಷಗಳ ಆರೋಗ್ಯ ಸೇವೆಯ ರೂಬಿ ಮಹೋತ್ಸವ (Ruby Jubilee) ಆಚರಣೆಯನ್ನು ಜುಲೈ 14, 2025 ರಂದು ಸೋಮವಾರ ಸಂಜೆ 5 ರಿಂದ ರಾತ್ರಿ 10 ರವರೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ, FMCI ನಿರ್ದೇಶಕರಾದ ರೆ.ಫಾ ಫೌಸ್ಟಿನ್ ಲ್ಯೂಕಾಸ್ ಲೋಬೊ ಮತ್ತು FMHMC&H ಆಡಳಿತಾಧಿಕಾರಿ ರೆ.ಫಾ ಡೊನಾಲ್ಡ್ ನಿಲೇಶ್ ಕ್ರಾಸ್ತಾ ಅವರ ಸಮರ್ಥ […]

