ಕುಂದಾಪುರ ; ಸಿಟಿ ವತಿಯಿಂದ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ (8-7-2025)ಜ್ಯೂನಿಯರ್ ಜೆ.ಸಿ.ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ‌ ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ‘ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ’ ದ ಅಂಗವಾಗಿ ಆರ್. ಎನ್. ಎಸ್. ಸಂಯುಕ್ತ ಪ.ಪೂ ಕಾಲೇಜಿನ ಪ್ರಾಂಶುಪಾಲರಾದಪ್ರೊ.ನವೀನ ಕುಮಾರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಓರಿಯಂಟೇಶನ್ ಮತ್ತು ಯುತ್ ಎಫೇರ್ಸ್ನ ರಾಷ್ಟ್ರೀಯ ನಿರ್ದೇಶಕರಾದ SNR. PPF. ಹುಸೇನ್ ಹೈಕಾಡಿಯವರು ಸನ್ಮಾನಿತರಾದ ನವೀನ ಕುಮಾರ್ ಶೆಟ್ಟಿಯವರ ಸಾಮಾಜಿಕ ಕೊಡುಗೆಗಳ ಬಗ್ಗೆ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ತಿಳಿಸಿದರು. ಸೀನಿಯರ್ ಛೇಂಬರ್ಸ್ ಇಂಟರ್ ನ್ಯಾಶನಲ್ ನ ರಾಷ್ಟ್ರೀಯ ಅಧ್ಯಕ್ಷ SNR PPF ಎಮ್. ಆರ್. ಜಯೇಶ್, SCI ನ ಏರಿಯಾ-G ಇದರ ರಾಷ್ಟ್ರೀಯ ಉಪಾಧ್ಯಕ್ಷ SNR,PPF ಸಿದ್ಧಗಂಗಯ್ಯ, ಕೋಟಾ ಲೀಜನ್ ನ ಅಧ್ಯಕ್ಷ SNR ಕೇಶವ ಆಚಾರ್, ಜೆಜೆಸಿ ಸುಮೇಧಾ  ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ‘ ಸೇವ್ ವಾಟರ್’ ಥೀಮ್ ನ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕಾಲೇಜಿನ ವಿಜ್ಞಾನ ವಿಬಾಗದ ವಿದ್ಯಾರ್ಥಿನಿ ಶರಧಿ ಪ್ರಾರ್ಥಿಸಿದರು. JCI ಕುಂದಾಪುರ ಸಿಟಿ ಜೆ.ಸಿ ಯ ಅಧ್ಯಕ್ಷ JC ಸಲೀಮ್ ರವರು ಧನ್ಯವಾದ ಸಲ್ಲಿಸಿದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು. 

Read More

ಉಡುಪಿ : ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2025- )26 ನೇ ಸಾಲಿನ ಪದಪ್ರಧಾನ ಸಮಾರಂಭವು ಉಡುಪಿಯ ಟೌನ್ ಹಾಲ್ ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲಯನ್ ಜೆರಾಲ್ಡ್ ಪಿರೇರಾ ಮತ್ತು ಅವರ ತಂಡ ಅಧಿಕಾರ ಸ್ವೀಕರಿಸಿತು. ಜಿಲ್ಲಾ ದ್ವಿತೀಯ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ, ನೂತನ ತಂಡಕ್ಕೆ ಪದ ಪ್ರಧಾನ ಭೋಧಿಸಿ, ಶುಭ ಹಾರೈಸಿದರು. ರಾಜ್ಯ ಸರ್ಕಾರದ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಮಾತನಾಡಿ, ಸಮಾಜದಲ್ಲಿ ವಿವಿಧ ಸಾಮಾಜಿಕ […]

Read More

ಕಥೋಲಿಕ್ ವಿಜಯಡ್ಕ ಘಟಕದಿಂದ ಜುಲಾಯ್ 6 ರಂದು ಭಾಬುವಾರ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಡ್ಕ ಚರ್ಚ್‌ ಧರ್ಮಗುರುಗಳಾದ ವಂದನೀಯ ಫಾದರ್‌ ನವೀನ್‌ ಪ್ರಕಾಶ್‌ ಡಿಸೋಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಸಂತ ಜೋಸೆಫ್‌ ವಾಸ್‌ ವಲಯದ ಅಧ್ಯಕ್ಷ ಡೊಲ್ಫಿ ಡಿಸೋಜ ಆಗಮಿಸಿದ್ದರು. ಕಾರ್ಯದರ್ಶಿ ಟ್ರೆಸ್ಸಿ ರೊಡ್ರಿಗಸ್‌, ಕಥೊಲಿಕ್‌ ಸಭಾ ವಿಜಯಡ್ಕ ಘಟಕದ ಅಧ್ಯಕ್ಷ ರಾಜೇಂದ್ರ ಡಿಸೋಜ, ಕಾರ್ಯದರ್ಶಿ ವೀರಾ ಡಿಸೋಜ, ಸಂಚಾಲಕ ಜೋನ್‌ ಡಿಸೋಜ, ವಿಜಯಡ್ಕ ಚರ್ಚ್‌ ಪಾಲನಾ […]

Read More

ಮೂಡುಬಿದಿರೆ; ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌(ರಿ)ಇದರ ನೇತೃತ್ವದಲ್ಲಿ ಕಥೊಲಿಕ್‌ ಸಭಾ ಮೂಡಬಿದ್ರೆ ವಲಯ ಹಾಗೂ ಎಲ್ಲಾ ಘಟಕಗಳು ಹಾಗೂ ಅರಣ್ಯ ಇಲಾಖೆ, ಮೂಡಬಿದ್ರೆ. ಇದರ ಸಹಭಾಗಿತ್ವದಲ್ಲಿ “ಪರಿಸರ ದಿನಾಚರಣೆ’ಯನ್ನು ದಿನಾಂಕ 6/1/2025 ರಂದು ಮೂಡಬಿದಿರೆ ಆಲಂಗಾರು ಮೌಂಟ್‌ ರೋಜರಿ ಸಂಸ್ಥೆಯಲ್ಲಿ ಬೆಳಗ್ಗೆ 8 ಗಂಟೆಗೆ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಆರಂಭಿಸಲಾಯಿತು.ಸಭಾ ಕಾರ್ಯಕ್ರಮವನ್ನು ಪರಿಸರ ಗೀತೆಯೊಂದಿಗೆ ಆರಂಭಿಸಿ ಕೊರ್ಪುಸ್‌ ಕ್ರಿಸ್ತೀ ದೇವಾಲಯ, ಮೂಡಬಿದ್ರೆ, ಹಾಗೂ ವಲಯ ಧರ್ಮಗುರುಗಳಾದ ಅತೀ ವಂದನೀಯ ಫಾದರ್‌ ಓನಿಲ್‌ ಡಿಸೋಜಾ, ಇವರು ಅಶೀರ್ವಚನಗೈದರು. ಕರ್ನಾಟಕ […]

Read More

ಕುಂದಾಪುರ; ಪಿಯುಸ್ ನಗರ್ ಚರ್ಚಿನ ಕಥೋಲಿಕ್ ಸಭಾ ಘಟಕದಿಂದ ತ್ರಾಸಿ ವೃದಾಶ್ರಮದಲ್ಲಿ ಶ್ರೀಸಾಮನ್ಯರ ದಿನಾಚರಣೆ ಜು. 6 ರಂದು ಆಚರಿಸಲಾಯಿತು.85 ವರ್ಷ ಪ್ರಾಯದ್ (ನಿವೃತ್ತ) ಸಿಸ್ಟರ್ ಸುಪೀರಿಯರ್ ಮೇರಿ ಜೋನ್ ಇವರ್ ಜನ್ಮ ದಿನವನು ಕೇಕ್ ಕತರಿಸುವ ಮೂಲಕ ಆಚರಿಸಿ, ಅಲ್ಲಿನ ಎಲ್ಲಾ ವಯೋವ್ರದರೊಂದಿಗೆ ಆಟ ಆಡುವ, ಹಾಡು ಹೇಳಿ ಹಾಗೂ ಅವರೊಂದಿಗೆ ನ್ರತ್ಯ ಮಾಡಿ ಅವರನ್ನು ನಕ್ಕು ನಲಿಸುವ ಮೂಲಕ, ನಾವು ನಿಮ್ಮವರೇ, ಎನ್ನುವ ಸಂದೇಶ್ ನೀಡಿ, ನೀವೇ ಜೀವನದಲ್ಲಿ ನಿಜವಾದ ಲಾಯಿಕರು ಎನ್ನುವ ಭಾವನೆ […]

Read More

ಕುಂದಾಪ್ರ : ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ, ಕುಂದಾಪುರ ಭಂಡಾರ್‍ಕಾರ್ಸ್ ಕಾಲೇಜು ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಕುಂದಾಪ್ರ ಕನ್ನಡ ಸ್ಪರ್ಧೆ ದಿನಾಂಕ 19-07-2025 ರಂದು ಮಧ್ಯಾಹ್ನ 2:30ಕ್ಕೆ ಏರ್ಪಡಿಸಲಾಗಿದೆ.ಕುಂದ ಕನ್ನಡ ಗಾದೆಗಳನ್ನು ಎರಡು ನಿಮಿಷದಲ್ಲಿ ಸ್ಪಷ್ಟವಾಗಿ ಅತಿ ಹೆಚ್ಚು ಬಾರಿ ಹೇಳುವುದು ಹಾಗೂ 15 ನಿಮಿಷದಲ್ಲಿ ಕುಂದ ಕನ್ನಡ ಶಬ್ದಗಳನ್ನು ಅತಿ ಹೆಚ್ಚು ಬರೆಯುವುದು. ಈ ಎರಡು ಸ್ಪರ್ಧೆಗಳು ನಡೆಯುತ್ತವೆ.ಭಾಗವಹಿಸುವವರು ಜ್ಯೋತಿ ಸಾಲಿಗ್ರಾಮ, ರೇಡಿಯೋ ಕುಂದಾಪ್ರ 89.6 ಈಒ ಭಂಡಾರ್‍ಕಾರ್ಸ್ ಕಾಲೇಜು, ಕುಂದಾಪುರ ಈ ವಿಳಾಸಕ್ಕೆ […]

Read More

ಮಂಗಳೂರು; ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2025ರ ಮೇ ತಿಂಗಳಲ್ಲಿ ಏರ್ಪಡಿಸಿದ ಸಿ. ಎ. ಅಂತಿಮ ಪರೀಕ್ಷೆಯಲ್ಲಿ, ಮಂಗಳೂರಿನ ‘ಕಾಮತ್ ಎಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್ಸ್’ ಸಂಸ್ಥೆಯಲ್ಲಿ ಆರ್ಟಿಕಲ್‍ಶಿಫ್ ನಡೆಸಿದ ಅಂತಿಮ ಪರೀಕ್ಷೆಯಲ್ಲಿ ಅರವಿಂದ ಶೆಣೈ ತೇರ್ಗಡೆ ಹೊಂದಿರುತ್ತಾರೆ.ಇವರು ಕೆನರಾ ಬ್ಯಾಂಕ್ ಉದ್ಯೋಗಿ ಅಶೋಕ ಶೆಣೈ ಮತ್ತು ದಿ| ಅನಿತಾ ಶೆಣೈ ದಂಪತಿಯ ಪುತ್ರರಾಗಿದ್ದು, ಈಗ ಮಂಗಳೂರಲ್ಲಿ ನೆಲೆಸಿರುತ್ತಾರೆ.

Read More

ಕೋಟೇಶ್ವರ; ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ. ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ CA ಎನ್. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತ ಅವರು ಉತ್ತೀರ್ಣರಾಗಿರುತ್ತಾರೆ. ಇವರು ಕೋಟೇಶ್ವರದ ಹಳೆಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿಯಾಗಿರುತ್ತಾಳೆ.

Read More