ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಮತಿ‌ ವೇಸ್ಟ್ ಮ್ಯಾನೇಜ್ ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ‘ E- ವೇಸ್ಟ್ ಮ್ಯಾನೇಜ್ ಮೆಂಟ್ ‘ ವಿಷಯದ ಬಗ್ಗೆ  ಯೋಜನಾಧಿಕಾರಿ  ಶ್ರೀ ಧೀರಜ್  ಶೆಣೈಯವರು ವಿದ್ಯಾರ್ಥಿಗಳಿಗೆ ಇಲೆಕ್ಟ್ರಾನಿಕ್ ತ್ಯಾಜ್ಯಗಳ ಸರಿಯಾದ ನಿರ್ವಹಣೆ ಮತ್ತು ವಿಲೇವಾರಿ ಬಗ್ಗೆ ಸ್ಲೈಡ್ ಮೂಲಕ ಮಾಹಿತಿ ಮತ್ತು ಅರಿವು ನೀಡಿದರು.‌ಮುಂದಿನ ವಾರ ಸೂಚಿಸಿದ ಮೂರು ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿರುವ ಇಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ತಂದು ಕೊಟ್ಟರೆ ಅದರ ಸಮರ್ಪಕ ವಿಲೇವಾರಿ ಮಾಡಲಾಗುವುದು ಎಂದು […]

Read More

ಕುಂದಾಪುರ (ಜೂ 03) : ಮಕ್ಕಳ ಪೋಷಣೆಗೆ ಸಂಬಂಧಿಸಿದಂತೆ ಸರಿ ತಪ್ಪುಗಳ ವಿಚಾರಗಳನ್ನು ಪೋಷಕರು ಅರಿತಿರಬೇಕು. ಮಗು ಸಮಾಜಮುಖಿಯಾಗಿ ಬೆಳೆಯಬೇಕು. ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತಿ ಮುಖ್ಯ ಎಂದು ಎನ್.ಆರ್.ಆಚಾರ್ಯ ಸ್ಮಾರಕ ಆಸ್ಪತ್ರೆ ಕೋಟೇಶ್ವರದ ಮನೋವೈದ್ಯೆ ಡಾ| ಮಹಿಮಾ ಆಚಾರ್ಯ ಪೋಷಕರನ್ನು ಉದ್ದೇಶಿಸಿ ಹೇಳಿದರು.ಅವರು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು ಆಯೋಜಿಸಿದ ಶೈಕ್ಷಣಿಕ ವರ್ಷದ 2025-26ನೇ ಸಾಲಿನ ನರ್ಸರಿಯಿಂದ ನಾಲ್ಕನೇ ತರಗತಿಯವರೆಗಿನ ಮೊದಲ ಶಿಕ್ಷಕ – ರಕ್ಷಕ ಸಭೆಯಲ್ಲಿ […]

Read More

“ಸಾಮಾಜಿಕ‌ ಜಾಲತಾಣದ ಜನಪ್ರಿಯ ಪೋರ್ಟಲ್ ಗಳಲ್ಲೆಲ್ಲ ಬಳಕೆದಾರ ಸ್ನೇಹಿ ತಂತ್ರಾಂಶ‌ ಭಾಷೆ ಪೈತಾನ್ ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಗಳನ್ನೇ ಹೆಚ್ಚಾಗಿ ಬಳಸುತ್ತಾರೆ.ಕಂಪ್ಯೂಟರ್ ಮತ್ತು ಕೃತಕ ಬುದ್ಧಿಮತ್ತೆ( Artificial Intelligence) ಕ್ಷೇತ್ರದಲ್ಲಾಗುತ್ತಿರುವ ಕಲ್ಪನಾತೀತ ಬೆಳವಣಿಗೆ ಆವಿಷ್ಕಾರಗಳು ತಕ್ಷಣದಲ್ಲಿ ಉದ್ಯೋಗಾವಕಾಶಕ್ಕೆ ಧಕ್ಕೆ ಎನಿಸಿದರೂ, ಕಾಲಾಂತರದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವುದೂ ಖಚಿತ. ಪ್ರತಿಭೆ ಮತ್ತು ಶ್ರಮದಿಂದ ಕೆಲಸ ಮಾಡಿದರೆ ಬೇರೆ ಕ್ಷೇತ್ರಗಳಿಗಿಂತ ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ಷಿಪ್ರವಾಗಿ‌ ಉನ್ನತ ಸ್ಥಾನ‌ ತಲುಪಬಹುದು ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ‌‌ ಕಂಪ್ಯೂಟರ್ ವಿಭಾಗ ಆಯೋಜಿಸಿದ ‘ ಪೈತಾನ್ ಓರಿಯಂಟೇಶನ್ ‘ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ‌ ಡೀನ್ ಎಕಾಡೆಮಿಕ್ಸ್ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಗಿರಿರಾಜ್ ಭಟ್ ರವರು ತಿಳಿಸಿದರು. ಕುಂದಾಪುರದ MICE ಕಂಪ್ಯೂಟರ್ ಸಂಸ್ಥೆಯ ಪ್ರಾಂಶುಪಾಲರಾದ ವಾಲ್ಟರ್ ಫೆರ್ನಾಂಡೀಸ್ ರವರು ಕಂಪ್ಯೂಟರ್ ತರಬೇತಿ ನೀಡುವ ತಮ್ಮ ಸುದೀರ್ಘ ಅನುಭವದಲ್ಲಿ‌ ಕಂಪ್ಯೂಟರ್ ಕ್ಷೇತ್ರ ಹಂತ ಹಂತವಾಗಿ ಸಾಧಿಸಿದ ಅಗಾಧ ಪ್ರಗತಿಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಣವ್ ಆರ್ ತಾವು ಅಭಿವೃದ್ಧಿ ಪಡಿಸಿದ ಕೆಲವು ತಂತ್ರಾಂಶ ಭಾಷೆಯ ಬಗ್ಗೆ ಸ್ಲೈಡ್ಸ್ ಮೂಲಕ ವಿವರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕಂಪ್ಯೂಟರ್ ವಿಷಯವನ್ನು  ಉತ್ತಮ ಧ್ಯೇಯದೊಂದಿಗೆ ಕಲಿಯಬೇಕೆಂದು ಕರೆ ನೀಡಿದರು.ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸಂದೀಪ್ ಪೂಜಾರಿಯವರು ಅತಿಥಿಗಳನ್ನು ಸ್ವಾಗತಿಸಿದರು.ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಸೂರ್ಯ ಇವರು‌ ಧನ್ಯವಾದ ಸಲ್ಲಿಸಿದರು.ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಅಭಿಜಿತ್ ರವರು ಕಾರ್ಯಕ್ರಮ ನಿರೂಪಿಸಿದರು.   

Read More

Mangalore Christian Sports Association® organizes chess tournament for members of the Christian community ಮಂಗಳೂರು ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್®, ಕ್ರೈಸ್ತ ಸಮುದಾಯದ ಸದಸ್ಯರಿಗಾಗಿ ಆಗಸ್ಟ್ 03, 2025 ರದು ಮಂಗಳೂರಿನ ಸೇಂಟ್ ಅಲೋಶಿಯಸ್ (ಡೀಮ್ಡ್ ಎಂದು ಪರಿಗಣಿಸಲಾದ ವಿಶ್ವವಿದ್ಯಾಲಯ) ನಲ್ಲಿರುವ ಸಹೋದಯ ಹಾಲ್‌ನಲ್ಲಿ ಚೆಸ್ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. 13 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ, 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ ಮತ್ತು ಪುರುಷರು ಮತ್ತು ಮಹಿಳೆಯರಿಗೆ ಮುಕ್ತ ಮತ್ತು 50 ವರ್ಷಕ್ಕಿಂತ […]

Read More

ಶಿರೂರು : ವೈದ್ಯೋ ನಾರಾಯಣೋ ಹರಿ : ಎಂಬ ಉಕ್ತಿಯಂತೆ ವೈದ್ಯರಾದವರು ದೇವರಿಗೆ ಸಮಾನರಾದವರು ಅವರು ರೋಗಿಯ ರೋಗವನ್ನು ಪರಿಹರಿಸುವವರು, ವೈದ್ಯ ಕೇವಲ ರೋಗ ಪರಿಹಾರಕರಾಗಿರದೇ ರೋಗಿಯ ಸಹ ಚಿಂತಕರೂ ಆಗಿರುತ್ತಾರೆ ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ ಅವರಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ನಾಗರೀಕರ ಕರ್ತವ್ಯವಾಗಿದೆ ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ […]

Read More

ಕುಂದಾಪುರ; ಶ್ರೀ ನಾರಾಯಣಗುರು ಯುವಕ ಮಂಡಲ (ರಿ.) ಕುಂದಾಪುರ ದಿವಂಗತ ಸುರೇಶ್ .ಎಸ್ ಪೂಜಾರಿ ಪಡುಕೋಣೆಯವರ ಸ್ಮರಣಾರ್ಥ ಸಂತ ಜೋಸೆಫರ ಅನಾಥಾಲಯದ ಮಕ್ಕಳಿಗೆಆಹಾರ ವಿತರಣೆ.ಈ ಸಂದರ್ಭದಲ್ಲಿ ಅನಾಥಾಲಯದ ಮೇಲ್ವಿಚಾರಕರಾದ ಸಿಸ್ಟರ್ ನಂದಿಕಾ ನಾರಾಯಣಗುರು ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಸ್ವಾಗತಿಸಿ ಅವರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಸಿಸ್ಟರ್ ಸುಪ್ರಿಯಾ ಮಾತನಾಡಿ ‘ ನಾವು ಮಕ್ಕಳನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ಮಾಡಲು ಅವರಿಗೆ ಉತ್ತಮ ಶಿಕ್ಷಣದ ಜೊತೆ ಸಕಲ ಸೌಲಭ್ಯಗಳನ್ನು ನೀಡುತ್ತಿದ್ದೇವೆ.ಅನೇಕ ಸಂಘ […]

Read More

ಕುಂದಾಪುರ; ಐಎಂಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ತರಬೇತಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ ಶ್ರೀ ಸ್ವರಾಜ್ ಶೆಟ್ಟಿ (ರೇಡಿಯೋ ಟೆಕ್ನಾಲಜಿಸ್ಟ್ ಮತ್ತು ಉದ್ಯಮಿ) ಅವರು ದೀಪ ಬಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಡೀನ್,ಡಾ. ಪದ್ಮಚಾರಣ ಸ್ವೈನ್,   ಐಎಂಜೆ ಇನ್ಸ್ಟಿಟ್ಯೂಟ್‌ಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರು ಡಾ. ರಾಮಕೃಷ್ಣ ಹೆಗ್ಡೆ, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ […]

Read More

ಶಿರೂರು : 2025 – 26ನೇ ಸಾಲಿನ ಶಾಲಾ ಸಂಸತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ದಿನಾಂಕ 30/06/2025 ರಂದು ನಡೆಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಾಗರತ್ನ ಶಾಲಾ ಸಂಸತ್ತು ಮತ್ತು ನೂತನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ವಿದ್ಯೆಯನ್ನು ಕಲಿಯುವುದರ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸ್ವಚ್ಛತೆಯತ್ತ ಹೆಚ್ಚು ಗಮನವಹಿಸಿ, ಸಂಸ್ಕಾರವಂತರಾಗಿ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಮಂತ್ರಿಮಂಡಲ ಕಾರ್ಯಕಲಾಪದ ಬಗ್ಗೆ ಮಾಹಿತಿ ನೀಡಿದರು […]

Read More

“Father’s Day Celebration” in Bajjodi The role of a father is the backbone, it is invisible but supports the entire body – Fr. Dominic Vas ಮಂಗಳೂರು; ಜೂನ್ 29 ರ ಭಾನುವಾರ ಸಂಜೆ ಬಜ್ಜೋಡಿಯ ಇನ್ಫೆಂಟ್ ಮೇರಿ ಚರ್ಚ್‌ನಲ್ಲಿ “ತಂದೆಯರ ದಿನ” ವನ್ನು ಅದ್ಧೂರಿಯಾಗಿ ಆಚರಿಸಲಾಯಿತು. 10 ಪ್ಯಾರಿಷ್ ವಾರ್ಡ್‌ಗಳಿಂದ ಸುಮಾರು 60 ಅಪ್ಪಂದಿರು ಮತ್ತು 40 ಇತರರು ಭಾಗವಹಿಸಿದ್ದರು.ಸಂಜೆ 5 ಗಂಟೆಗೆ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ […]

Read More