ಉಡುಪಿ: ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥವಾಗಿ ಕ್ರಿಸ್ತ ಜಯಂತಿ ಜುಬಿಲಿ 2025 ಸಂಭ್ರಮಾಚರಣೆಯ ಪೂರ್ವ ಸಿದ್ದತೆಗಳಿಗೆ ಚಾಲನೆ ನಡೆಯುತ್ತಿದ್ದು ಉಡುಪಿ ಕಥೊಲಿಕ ಧರ್ಮಕ್ಷೇತ್ರದಲ್ಲಿಯೂ ಎರಡು ವರ್ಷಗಳ ಪೂರ್ವ ತಯಾರಿಗಳಿಗಾಗಿ ಭಾನುವಾರ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಭರವಸೆಯ ಯಾತ್ರಿಕರು ಎಂಬ ಧ್ಯೇಯ ವಾಕ್ಯವನ್ನು ಒಳಗೊಂಡ ಲಾಂಛನ ಅನಾವರಣದೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು ಜಗದ್ಗುರು ಪೋಪ್ ಫ್ರಾನ್ಸಿಸ್ ರವರು ಕಲಿಕಾ ವರ್ಷದಲ್ಲಿ ಎರಡನೇ ವ್ಯಾಟಿಕನ್ […]

Read More

ಶ್ರೀನಿವಾಸಪುರ: ಬ್ರಾಹ್ಮಣ ಸಮುದಾಯ ಶಿಕ್ಷಣದ ಮೂಲಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ರಾಜ್ಯ ಯಾಜ್ಞವಲ್ಕ್ಯ ಸೇವಾ ದತ್ತಿ ಉಪಾಧ್ಯಕ್ಷ ವೈ.ವಿ.ಗೋಪಾಲಕೃಷ್ಣ ಹೇಳಿದರು.ಪಟ್ಟಣದ ಜಗದ್ಗುರು ಶ್ರೀ ಭಾರತಿ ತೀರ್ಥ ಸಭಾ ಭವನದಲ್ಲಿ ತಾಲ್ಲೂಕು ಯಾಜ್ಞವಲ್ಕ್ಯ ಸೇವಾ ದತ್ತಿಯಿಂದ ಭಾನುವಾರ ಏರ್ಪಡಿಸಿದ್ದ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.ಬ್ರಾಹ್ಮಣ ಸಮುದಾಯ ತಮ್ಮೊಳಗೆ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಹ ಬದಿಗೊತ್ತಿ ಒಗ್ಗೂಡಬೇಕು. ಸಮಾಜದ ಎಲ್ಲ ರಂಗಗಳಲ್ಲೂ ಮುಂದೆ ಬರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಸಾಂಸ್ಕøತಿಕ ಪರಂಪರೆಗೆ ಬೆಲೆ ನೀಡಬೇಕು. […]

Read More

ನಂದಳಿಕೆ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶತಮಾನೋತ್ಸವ ಪೂರೈಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಬೋರ್ಡ್ ಶಾಲೆ ) ನಂದಳಿಕೆಯಲ್ಲಿ ಹಳೆ ವಿದ್ಯಾರ್ಥಿ ಮಿತ್ರರ ಸಹಕಾರದಲ್ಲಿ ಶಾಲೆಯ ಮಕ್ಕಳಿಗೆ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಶಾಲೆಯ ಅಮೃತ ಮಹೋತ್ಸವದ ಸಭಾಂಗಣದಲ್ಲಿ ನಡೆಯಿತು.ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮವನ್ನು ನಂದಳಿಕೆ ಸರಳ ಎಸ್ ಹೆಗ್ಡೆ ನೆರವೇರಿಸಿ ಮಾತನಾಡುತ್ತಾ ಹಳೆ ವಿದ್ಯಾರ್ಥಿ ಮಿತ್ರರಿಂದ ಸಹಕಾರದಿಂದ ಇಂಥ ಹತ್ತು ಹಲವು ಕಾರ್ಯಕ್ರಮ ನೆರವೇರಿದೆ.ಯಕ್ಷಗಾನ ಕಲಿಯುವುದರಿಂದ ನಮ್ಮ ಆರೋಗ್ಯ ಲವಲವಿಕೆ ಯಿಂದ […]

Read More

ಕುಂದಾಪುರ:ಶಿಕ್ಷಣ ಎನ್ನುವುದು ನಮ್ಮ ಕೈಯಲ್ಲಿರುವ ಶಕ್ತಿಯುತವಾದ ಅಸ್ತ್ರ. ವಿದ್ಯಾರ್ಥಿಗಳು ತಮ್ಮ ಗುರಿಯೆಡೆಗೆ ಉತ್ಸಾಹಕರಾಗಿದ್ರೆ ಅವಕಾಶಗಳು ಸಿಕ್ಕೇ ಸಿಗುತ್ತದೆ. ಅರ್ಧಂಬರ್ಧ ಕೆಲಸ, ಅರ್ಧಂಬರ್ಧ ಕಲಿಕೆ ಯಾವತ್ತು ಮಾಡಬಾರದು, ಮಾಡಿದ ಒಂದೇ ಕೆಲಸವಾದ್ರೂ ಕೂಡ ಅದು ಅಚ್ಚುಕಟ್ಟಾಗಿರಬೇಕು, ಏನೇ ಕೆಲಸ ಮಾಡಿದರು ಪ್ರೀತಿಯಿಂದ ಮಾಡಿ ಮತ್ತು ಎಷ್ಟೇ ಕಷ್ಟ ಬಂದರು ಸಾಧಿಸುವ ಛಲ ನಿಮ್ಮಲ್ಲಿರಬೇಕು ಎಂದು ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ. ಪಿಯವರು ಇಲ್ಲಿನ ಪ್ರತಿಷ್ಠಿತ ಭಂಡಾರಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಕುಂದಾಪುರಕ್ಕೆ ತಮ್ಮ “ಅರ್ಧಂಬರ್ಧ ಪ್ರೇಮಕಥೆ” […]

Read More

ಕುಂದಾಪುರ: ನವೆಂಬರ್ 23 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ಪಿಕ್ ಮೆಕೆ (ಸೊಸೈಟಿ ಫಾರ್ ದ ಪ್ರಮೋಶನ್ ಆಫ್ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್ ಅಂಡ್ ಕಲ್ಚರ್ ಅಮಾಂಗಸ್ಟ್ ಯೂಥ್) ಆಶ್ರಯದಲ್ಲಿ ಖ್ಯಾತ ಶಾಸ್ತ್ರೀಯ ಹಿಂದುಸ್ತಾನಿ ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿ ಅವರಿಂದ ಕೊಳಲು ವಾದನ ಕಾರ್ಯಕ್ರಮ ಅದ್ಭುತವಾಗಿ ಮೂಡಿಬಂದಿದೆ.ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿ ಅವರು ತಮ್ಮ ಕೊಳಲು ವಾದನ ಕಾರ್ಯಕ್ರಮ ನೆರೆದ ವಿದ್ಯಾರ್ಥಿಗಳನ್ನು ಮತ್ತು ಸಭಿಕರ ಮನಸೋರೆಗೊಳಿಸುವಲ್ಲಿ ಯಶಸ್ವಿಯಾಯಿತು. ಅಂತಹ ಅಭೂತಪೂರ್ವ ಶಕ್ತಿ ಅವರು ಕೊಳಲು ವಾದನದಲ್ಲಿತ್ತು. […]

Read More

ಕುಂದಾಪುರ,ನ. 24; ಸ್ಥಳೀಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ. 24 ರಂದು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.       ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಮತ್ತು ಹೋಲಿ ರೋಜರಿ ಶಾಲೆಯ ಜೊತೆ ಕಾರ್ಯದರ್ಶಿಯಾಗಿರುವ ಅತೀ ವಂದನೀಯ ಧರ್ಮಗುರು ಸ್ಟ್ಯಾನಿ ತಾವ್ರೊ “ಎಲ್ಲಾ ವಿದ್ಯಾರ್ಥಿಗಳು ವಿಜೇತರಾಗಲು ಮತ್ತು ಎಲ್ಲರಿಗೂ ಬಹುಮಾನ ಸಾಧ್ಯವಿಲ್ಲ ಆದರೆ ಕಠಿಣ ಪರಿಶ್ರಮ, ಸಮಯ ಪಾಲನೆ, ದೃಡ ಸಂಕಲ್ಪ, ಗುರಿ […]

Read More

ಕುಂದಾಪುರ:ಇಲ್ಲಿನ ಕೊರವಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡಕ್ಕೆ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ ಉಪಾಧ್ಯಕ್ಷ ಗೌತಮ್ ಶೆಟ್ಟಿ ಕುಂದಾಪುರ 12 ಜೊತೆ ಶೂ ವಿತರಿಸಿದರು. ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯು ಕಬಡ್ಡಿ ಜಿಲ್ಲಾ ಮಟ್ಟದಲ್ಲಿ ಜಯಗಳಿಸಿ ನವೆಂಬರ್ ಮಂಡ್ಯದಲ್ಲಿ ಮೈಸೂರು ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದೆ. ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಲು ತಂಡದ ಆಟಗಾರರಿಗೆ ಪ್ರಾಯೋಜಿತ 12 ಜೊತೆ ಕಬಡ್ಡಿ […]

Read More

ಕುಂದಾಪುರ: ” ಕ್ರೀಡೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳೂ ಕೂಡ ನಮ್ಮ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾಗಿರುತ್ತವೆ. ಒಂದು ವೇಳೆ‌ ಸ್ಪರ್ಧೆಯಲ್ಲಿ ಸೋತರೂ, ಅದನ್ನು‌ ಕ್ರೀಡಾಸ್ಪೂರ್ತಿಯಿಂದ ಸ್ವೀಕರಿಸುವುದು ನಮಗೆ ಜೀವನಪಾಠವನ್ನು ಕಲಿಸುತ್ತದೆ. ಕ್ರೀಡೆಯನ್ನು ಮರೆತರೆ ಮುಂದೊಂದು ದಿನ ಆರೋಗ್ಯವಂತ ಯುವಕ- ಯುವತಿಯರನ್ನು ಹುಡುಕಬೇಕಾದೀತು” ಎಂದು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿದ ಶ್ರೀ ಚಂದ್ರಶೇಖರ ಶೆಟ್ಟಿ, ಉಪ ಪ್ರಾಂಶುಪಾಲರು, ಕೆ.ಪಿ.ಎಸ್, ಕೋಟೇಶ್ವರ- ಇವರು ತಮ್ಮ‌ಉದ್ಘಾಟನಾ ನುಡಿಯಲ್ಲಿ ತಿಳಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕುಸುಮಾಕರ ಶೆಟ್ಟಿ, ತಾಲೂಕು ಕ್ರೀಡಾ ಮತ್ತು ಯುವಜನ […]

Read More